Homeಕಥೆಕಠೋಪನಿಷತ್ತು - ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

ಕಠೋಪನಿಷತ್ತು – ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

- Advertisement -
- Advertisement -

ಆಚರಣೆಯು ಅನುಷ್ಠಾನದಿಂದ ಹೊರತಾಗಿರುವುದರ ವಿರುದ್ಧವಾಗಿ ಬಂಡಾಯವೇಳುವ ನಚಿಕೇತನೆಂಬ ಹುಡುಗನ ಕತೆ ಈ ಕಠೋಪನಿಷತ್ತು.

ಉದ್ದಾಲಕ ನಚಿಕೇತನ ತಂದೆ. ಅವನು ಸರ್ವವೇದಸ್ ಎಂಬ ಯಜ್ಞವನ್ನು ಮಾಡಿದ. ಅದರ ಪ್ರಕಾರ ತನ್ನಲ್ಲಿರುವ ಎಲ್ಲವನ್ನೂ ಕೂಡಾ ಯಜ್ಞಕರ್ತೃವು ಕೊಡಬೇಕು. ಹಸುಗಳೇ ಅವರ ಸಂಪತ್ತು. ಉದ್ದಾಲಕನು ತನ್ನಲ್ಲಿರುವ ಎಲ್ಲಾ ಹಸುಗಳನ್ನು ದಾನ ಮಾಡುವ ಬದಲು ಉತ್ತಮವಾದ ಹಸುಗಳನ್ನು ಇಟ್ಟುಕೊಂಡು ಗೊಡ್ಡು ಹಸುಗಳನ್ನು ಬಂದವರಿಗೆ ದಾನವಾಗಿ ನೀಡುತ್ತಿದ್ದ.

ಇದನ್ನು ನಚಿಕೇತ ಗಮನಿಸಿದ. ತನ್ನಲ್ಲಿರುವ ಸರ್ವಸ್ವವನ್ನೂ ಕೊಟ್ಟು ಲೌಕಿಕ ಭಾರದಿಂದ ಮುಕ್ತನಾಗಬೇಕಿದ್ದ ತಂದೆ ಆಚರಣೆಯಲ್ಲಿ ಹಾಗೆ ತೋರುತ್ತಿದ್ದಾನೆ ಆದರೆ ವಾಸ್ತವದಲ್ಲಿ ಲೋಭಿಯೇ ಆಗಿದ್ದಾನೆ. ನಡೆನುಡಿ ಹೊಂದದ, ಆಚರಣೆ ಅನುಷ್ಠಾನಗಳಿಗೆ ತಾಳೆಯಾಗದ ಈ ಯಜ್ಞವನ್ನು ಅವನು ಪ್ರತಿಭಟಿಸುವ ರೀತಿ ವಿಶಿಷ್ಟವಾಗಿದೆ.

ನಚಿಕೇತ ಅವರ ಮನೆಯಲ್ಲಿ ಜಾಣನಾಗಿ ಗುರುತಿಸಿಕೊಂಡಿರುವವನಲ್ಲ. ಒಂದು ರೀತಿಯಲ್ಲಿ ಕೆಲಸಕ್ಕೆ ಬಾರದವನು. ಏನೂ ಕೆಲಸಕ್ಕೆ ಬಾರದ ಹಸುಗಳನ್ನು ದಕ್ಷಿಣೆಯಾಗಿ ಕೊಡುತ್ತಿದ್ದ ತಂದೆಯ ಗಮನ ಸೆಳೆದು ಇದೇ ಕೆಲಸಕ್ಕೆ ಬಾರದ ಮಗ ಕೇಳಿದ “ನನ್ನನ್ನು ಯಾರಿಗೆ ಕೊಡುತ್ತೀರಿ?” ಎಂದು.

ಈ ಪ್ರಶ್ನೆಯೇ ಅವನ ಪ್ರತಿಭಟನೆ. ಈ ಪ್ರಶ್ನೆಯಲ್ಲಿ ತಂದೆಯ ಡಾಂಭಿಕತನವನ್ನು ಪ್ರಶ್ನಿಸುತ್ತಾನೆ. ಶುಷ್ಕ ಆಚರಣೆಗಳನ್ನು, ಆಧ್ಯಾತ್ಮ ಮೌಲ್ಯಗಳನ್ನು ಗ್ರಹಿಸದ ವಿಧಿಗಳನ್ನು, ತನ್ನ ಸಂಪತ್ತನ್ನು ದಾನ ತೆಗೆದುಕೊಳ್ಳಿ ಎಂದು ಪೊಳ್ಳನ್ನು ಕೊಡುವ ಮೋಸವನ್ನು ಪ್ರಶ್ನಿಸುತ್ತಾನೆ. ಕೆಲಸಕ್ಕೆ ಬಾರದ ಮಗನನ್ನು ಏನು ಮಾಡುತ್ತೀಯಾ ಎಂದು ಕೆಲಸಕ್ಕೆ ಬಾರದವೆಂದು ಹಸುಗಳನ್ನು ದಾನದ ಹೆಸರಲ್ಲಿ ಕೈ ತೊಳೆದುಕೊಳ್ಳುವ ಮನುಷ್ಯನ ವ್ಯಾಮೋಹವನ್ನು ಪ್ರಶ್ನಿಸುತ್ತಾನೆ.

ನಚಿಕೇತ ಎಲ್ಲೋ ಮೂಲೆಯಲ್ಲಿ ಕೇಳಲಿಲ್ಲ. ಯಜ್ಞ ನಡೆಯುವಲ್ಲಿ ಎಲ್ಲರ ಮುಂದೆ ಕೇಳಿದ. ಮುಜುಗರಗೊಂಡ ತಂದೆ ಉತ್ತರಿಸದೇ ತಪ್ಪಿಸಿಕೊಳ್ಳುತ್ತಾನೆ. ಆದರೆ ಇವನು ಬಿಡದೇ ಮೂರು ಬಾರಿ ಕೇಳುತ್ತಾನೆ. ಕೆರಳಿದ ತಂದೆ ನಿನ್ನ ಸಾವಿಗೆ ಕೊಡುತ್ತೇನೆ ಎನ್ನುತ್ತಾನೆ.

ಮಾತು ಮತ್ತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿಯುವ ನಚಿಕೇತನ ಪ್ರತಿಭಟನೆ ಮುಂದುವರಿಯುತ್ತದೆ. ನಾನು ಸಾವಿಗೆ ಹೋಗುತ್ತೇನೆ ಎಂದು ಹೋಗುತ್ತಾನೆ ನಚಿಕೇತ.
ಮುಂದಿನ ಭಾಗ ರೂಪಕ. ಏಕೆಂದರೆ ಮೃತ್ಯುವಿನ ದೇವತೆಯಾದ ಯಮನಿಗಾಗಿ ಮೂರು ದಿನಗಳ ಕಾಲ ಕಾದು ನಂತರ ಅವನನ್ನು ಸಂಧಿಸಿ ಮರಣದಾಚೆಯ ಬದುಕಿನ ಬಗ್ಗೆ ತಿಳಿದುಕೊಳ್ಳುತ್ತಾನೆ.

ವೈದಿಕರ ಯಾವ ಯಜ್ಞವನ್ನು ವಿರೋಧಿಸಿ ಮಾತು ಕೃತಿಗಳ ಮೌಲ್ಯವನ್ನು ಎತ್ತಿ ಹಿಡಿದನೋ ಆ ನಚಿಕೇತನೇ ಮುಂದೆ ಯಮನಿಂದ ಯಜ್ಞ ಮಾಡುವುದನ್ನು ಕಲಿತುಕೊಳ್ಳುವುದನ್ನು ಸೂಚಿಸುತ್ತದೆ. ಆದರೆ ಅದು ಸಮಿತ್ತುಗಳನ್ನಿಟ್ಟು ಅಗ್ನಿಕಾರ್ಯದಿಂದ ಮಾಡುವ ಯಜ್ಞವಾಗಿರದೇ ಆಂತರಿಕ ಯಜ್ಞವಾಗಿ ಅನಾವರಣಗೊಳ್ಳುತ್ತದೆ.

ಅದೇನೇ ಇರಲಿ, ಒಬ್ಬ ಪ್ರತಿಭಟನಾಕಾರನಿಗೆ ಇರಬೇಕಾದ ಆತ್ಮವಿಶ್ವಾಸವನ್ನು ನಚಿಕೇತ ಅಲ್ಲಿ ತೋರುತ್ತಾನೆ. “ನಿನ್ನನ್ನು ಮೃತ್ಯುವಿಗೆ ಕೊಡುತ್ತೇನೆ” ಎಂದು ತಂದೆ ಹೇಳಿದಾಗ, “ಬಹುಜನರಲ್ಲಿ ಪ್ರಥಮನಾಗಿ, ಬಹುಜನರಲ್ಲಿ ಮಧ್ಯಮನಾಗಿರುವ ನನ್ನಿಂದ ಯಾವ ಕೆಲಸ ಮೃತ್ಯುವಿಗೆ ಆಗುತ್ತದೆ?” ಎಂದು ಯೋಚಿಸುತ್ತಾನೆ. ತಾನು ಅಧಮನಲ್ಲ ಎಂಬ ಆತ್ಮವಿಶ್ವಾಸವಿದೆ ಅವನಲ್ಲಿ. ಅಷ್ಟೇಅಲ್ಲದೇ ತಾನು ಪ್ರತಿಭಟಿಸಿದ ತಂದೆಗೆ ನಿದ್ರೆಗಳಿಂದ ಕೂಡಿರುವ ರಾತ್ರಿಯಿರಲಿ ಎಂದು ಒತ್ತಡರಹಿತವಾದ ಮನಸ್ಥಿತಿ ಬಯಸುತ್ತಾನೆ. ಪ್ರತಿಭಟನೆ ಮತ್ತು ಪ್ರೀತಿ ತೋರುವ ಆತ್ಮೀಯ ಭಾವ ನಚಿಕೇತದಲ್ಲಿ.

ಕಠೋಪನಿಷತ್ತಿನಲ್ಲಿ ಮೂಲಕತೆಯೊಂದಿಗೆ ನುಸುಳುವಿಕೆಗಳಿವೆ ಎಂದು ತೋರುತ್ತದೆ. ಆದರೆ, ನಚಿಕೇತನೆಂಬ ಸಾತ್ವಿಕ ಬಂಡಾಯಗಾರನ ಪ್ರತಿಮೆ ಮಾತ್ರ ಅತ್ಯಂತ ಆಪ್ತ. ಇದನ್ನೇ ಆಧರಿಸಿ ತ ರಾ ಸು “ಬೆಳಕು ತಂದ ಬಾಲಕ” ಎಂಬ ಕಾದಂಬರಿ ರಚಿಸಿದ್ದಾರೆ. ಇದೂ ಕೂಡಾ ನಚಿಕೇತನ ವ್ಯಕ್ತಿತ್ವದ ದರ್ಶನ ಮಾಡಿಸುವಂತದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...