Homeಅಂಕಣಗಳುಅಂದು ನಾದಿರ್ ಶಾ ಇಂದು ಅಮಿತ್ ಶಾ

ಅಂದು ನಾದಿರ್ ಶಾ ಇಂದು ಅಮಿತ್ ಶಾ

- Advertisement -
- Advertisement -

ಕಳೆದ ಮಾರ್ಚ್ ಎಂಟಕ್ಕೆ ಲಂಕೇಶರ ಹುಟ್ಟುಹಬ್ಬ ಸಂಭವಿಸಿತು. ಆ ಕುರಿತು ಧ್ಯಾನಿಸಿದಾಗ, ಅವರು ಕಳೆದ ಇಪ್ಪತ್ತೈದು ವರ್ಷದ ಹಿಂದೆ ಬರೆದ ಗುಣಮುಖ ನಾಟಕದ ದೃಶ್ಯ ಮುತ್ತಿಕೊಂಡು ಕಾಡಿಸಿತಲ್ಲಾ. ಪರ್ಶಿಯಾದಿಂದ ದಂಡೆತ್ತಿ ಬಂದ ನಾದಿರ್ ಶಾ ಭಾರತದ ಜಾತೀಯತೆ, ಅಸ್ಪೃಶ್ಯತೆ, ಆತ್ಮವಂಚನೆ ಮತ್ತು ಸುಳ್ಳುಗಳಿಂದ ರೋಸಿ ಹೋಗಿದ್ದಲ್ಲದೆ, ಮಾನಸಿಕ ರೋಗಕ್ಕೆ ತುತ್ತಾಗಿದ್ದಾನೆ. ಸ್ಥಳೀಯ ಮುಸ್ಲಿಂ ದೊರೆ, ಹುಡುಗಿಯರೊಂದಿಗೆ ಶಾಯಿರಿ ಬರೆದು ಹೇಳುತ್ತ, ಮದ್ಯ ಮಾಂಸದಲ್ಲಿ ಮುಳುಗಿದ್ದಾನೆ. ನಾದಿರ್ ಶಾಗೆ ಚಿಕಿತ್ಸೆ ಕೊಡಿಸುತ್ತಿಲ್ಲ. ಮಾನಸಿಕ ರೋಗಿಯಾದ ನಾದಿರ್ ಶಾನ ಸೈನ್ಯ ದೆಹಲಿಯನ್ನು ತೆರೆದಿಡುತ್ತದೆ. ಕಡೆಗೆ ಬಂದ ವೈದ್ಯ ಹಕೀಮ ನಾದಿರ್‍ಶಾನ ಹಿಂಸೆಯ ವ್ಯಸನವನ್ನು ತಹಬಂದಿಗೆ ತಂದು ಗುಣಮುಖನನ್ನಾಗಿಸಿ ಭಾರತ ಬಿಟ್ಟು ಹೋಗುವಂತೆ ಮಾಡುತ್ತಾನೆ. ಇದು ಇತಿಹಾಸ. ಇಂತಹ ರಕ್ತಸಿಕ್ತ ಇತಿಹಾಸ ಮರುಕಳಿಸಿದೆ. ನಾದಿರ್ ಶಾನ ಜಾಗದಲ್ಲಿ ಅಮಿತ್ ಶಾ ಇದ್ದಾನೆ. ಅವನ ಪಡೆ ದೆಹಲಿಯಲ್ಲಿ ಪಿಸ್ತೂಲು ಹಿಡಿದು ಜನರನ್ನ ಕೊಲ್ಲುತ್ತಿದೆ. ಹಕೀಮನ ಜಾಗದಲ್ಲಿ ಕೇಜ್ರಿವಾಲನಿದ್ದಾನೆ. ಕೇಜ್ರಿವಾಲನ ಕೆಲಸಗಳು ಅಮಿತ್ ಶಾನ ಕಣ್ಣು ತೆರೆಸಿದರೆ ದೆಹಲಿ ಏಳಿಗೆಯಾಗಬಲ್ಲದು ಇಲ್ಲವಾದರೆ, ಸರ್ವನಾಶ. ಆ ಮುಖಾಂತರ ಭಾರತವೂ ನಾಶದ ಅಂಚಿಗೆ ಬಂದು ನಿಲ್ಲುವುದರಲ್ಲಿ ಯಾವ ಅನುಮಾನವೂ ಇಲ್ಲವಂತಲ್ಲ ಥೂತ್ತೇರಿ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರನ್ನು ನೋಡಿ ಬೊಗಳಿದ ಯತ್ನಾಳ್ ಎಂಬ ಯಬಡನನ್ನು ಕುರಿತು ಬಿಜೆಪಿಯ ಯಾರೂ ಗದರಲಿಲ್ಲವಂತಲ್ಲಾ. ಇದಲ್ಲದೆ, ಪರವಾಗಿಲ್ಲ ಅವನ ಜೊತೆ ಮಾತಾಡಬಹುದು ಎಂಬಂತಿದ್ದ ಸುರೇಶ್ ಕುಮಾರ್ ಎಂಬ ಸಧಾರಿತ ಚೆಡ್ಡಿಯ ಬಗ್ಗೆ ಶಾನೆ ಬೇಜಾರು ಮಾಡಿಕೊಂಡಿರುವ ದೊರೆಸ್ವಾಮಿ ಸಂಬಂಧಿಯಾದ ದೇವನೂರು ಮಹಾದೇವ ಕೊಳೆತ ಹಣ್ಣಿನ ಜೊತೆಯಿರುವ ಒಳ್ಳೆ ಹಣ್ಣು ಎಂದು ಭಾವಿಸಿ ಮೋಸ ಹೋಗಿದ್ದಾರಲ್ಲಾ. ಯಾರು ಸ್ವಾಮಿ ಇದು ಶ್ರೇಷ್ಠ ಹಣ್ಣು ಎಂದು ತಮಗೆ ಹೇಳಿದ್ದು. ಸಿ.ಟಿ.ರವಿ, ರೇಣುಕಾಚಾರಿ ಯತ್ನಾಳ್ ಹೇಳುವ ಮಾತನ್ನೇ ಶಿಷ್ಟಭಾಷೆಯಲ್ಲಿ ಹೇಳುವ ಸುರೇಶ್‍ಕುಮಾರ್ ಯಡ್ಡಿ ಕಾಲದಲ್ಲಿ ಬೆಂಗಳೂರಲ್ಲಿ ಮಾಡಿಕೊಂಡ ಸೈಟಿನ ಬಗ್ಗೆ ತಲೆದೂಗುವ ಭಾಷೆಯಲ್ಲಿ ಸಮರ್ಥಿಸಿಕೊಂಡಿದ್ದರು. ಇದೆಲ್ಲಕ್ಕಿಂತ ಮುಖ್ಯವಾಗಿ ಯತ್ನಾಳ ದನಿ ಇಡೀ ಬಿಜೆಪಿಗಳ ದನಿ. ಅದಕ್ಕೆ ಆತನ ಪರ ನಿಂತರು. ಅದಾಳು ಬಿದ್ದೋಗಲಿ ಕುಮಾರಸ್ವಾಮಿ ಮಗನ ಮದುವೆ ವಿಷಯದಲ್ಲಿ ತಲೆ ಕೆಡಿಸಿಕೊಂಡಿರುವ ವಿಶ್ವನಾಥ್ ಎಂಬ ಕಾಂಗ್ರೆಸ್ ಪ್ರವಾದಿ ಬಾಯಿಗೆ ಅದಾವ ಗೂಟ ಬಡಿದುಕೊಂಡಿದ್ದರೆಂದು ಹಾಲಿ ಕಾಂಗ್ರೆಸ್‍ಗಳು ಗುಸುಗುಟ್ಟುತ್ತಿವೆಯಂತಲ್ಲಾ ಥೂತ್ತೇರಿ.

ಕುಮಾರಸ್ವಾಮಿ ಮಗನ ಮದುವೆ ವಿಷಯದಲ್ಲಿ ಮೂಗು ತೂರಿಸಿ ಕುಮಾರಣ್ಣನಿಂದಲೇ ಸರಿಯಾಗಿ ಇಕ್ಕಿಸಿಕೊಂಡಿದ್ದಾರಲ್ಲಾ ಈ ವಿಶ್ವನಾಥ. ನನ್ನ ಮಗನ ಖರ್ಚಿನ ವಿಷಯದಲ್ಲಿ ಮಾತನಾಡುವ ಈ ವಿಶ್ವನಾಥ ಇದ್ದಕ್ಕಿದ್ದಂತೆ ರಾಜಿನಾಮೆ ನೀಡಿ ಹತ್ತಾರು ಕೋಟಿ ಖರ್ಚಿನಿಂದ ಮತ್ತೆ ಚುನಾವಣೆ ಎದುರಿಸಿದರಲ್ಲಾ ಅದು ಯಾರ ದುಡ್ಡು ಎಂದಿದ್ದಾರಲ್ಲಾ. ಇಬ್ಬರ ಅಭಿಪ್ರಾಯಗಳು ಅರ್ಥವತ್ತಾಗಿವೆ. ಹೇಗೆಂದರೆ, ಚುನಾವಣೆಗೆ ನಿಂತು ಖರ್ಚು ಮಾಡಿಕೊಂಡು ಸಾಲ ಮಾಡಿದ್ದ ವಿಶ್ವನಾಥ್ ಅದನ್ನ ತೀರಿಸಲು ಬಿಜೆಪಿ ಸೇರಿ ಚುನಾವಣೆಗೆ ಹಣ ಖರ್ಚು ಮಾಡಿದರು. ಇತ್ತ ಕುಮಾರಣ್ಣ ಮಂಡ್ಯ ಲೋಕಸಭಾ ಚುನಾವಣೆಗೆ ಮಗನನ್ನು ನಿಲ್ಲಿಸಿ ನೂರು ಕೋಟಿ ಸುರಿದರು. ಈಗ ಅಷ್ಟೇ ದುಡ್ಡಿನಿಂದ ಮಗನ ಮದುವೆ ಮಾಡುತ್ತಿದ್ದಾರೆ. ಇವರಿಬ್ಬರೂ ಖರ್ಚು ಮಾಡಿದ ಹಣ ಸ್ವಂತ ದುಡಿಮೆಯಿಂದ ಸಂಗ್ರಹಿಸಿದ್ದಲ್ಲ. ಅಷ್ಟಕ್ಕೂ ಸಾರ್ವಜನಿಕ ಹಣ ಇಟ್ಟುಕೊಂಡು ಏನು ಮಾಡುವುದು. ಅವರಿಗೇ ಖರ್ಚು ಮಾಡಬೇಕು. ಅದಕ್ಕಾಗಿ ಕುಮಾರಣ್ಣ ಮಗನ ಮದುವೆ ನೆಪದಲ್ಲಿ ಕಾರ್ಯಕರ್ತರಿಗೆ ಊಟ ಉಡುಗೊರೆ ಕೊಟ್ಟು ಪಾರ್ಟಿ ಬಲಪಸುತ್ತಿದ್ದಾರಂತೆ. ಇದನ್ನ ನೋಡಿದ ಜೆಡಿಎಸ್ ವಕ್ತಾರ ರಮೇಶ್ ಬಾಬು, ಜೆಡಿಎಸ್ ಜನಸಮೂಹ ಪ್ರತಿನಿಧಿಸುವ ಪಾರ್ಟಿ ಅಲ್ಲ ಎಂದು ಕಾಲ್ಕೀಳುತ್ತಿದ್ದಾರೆ. ಎಷ್ಟು ತಡವಾಗಿ ಜ್ಞಾನೋದಯವಾಯಿತ್ತಲ್ಲ ಥೂತ್ತೇರಿ.

ಮುಖ್ಯಮಂತ್ರಿಯಾಗಿದ್ದಾಗ ಅದ್ದೂರಿ ಮದುವೆಗೆ ಕಡಿವಾಣ ಹಾಕಲು ಹೊರಟಿದ್ದ ಸಿದ್ದರಾಮಯ್ಯ ಅದ್ದೂರಿ ಮದುವೆ ಹುಡುಕಿಕೊಂಡು ತಿರುಗುತ್ತಿದ್ದಾರಲ್ಲಾ. ರಾಮುಲು ಮಗಳ ಮದುವೆಗೆ ಹೋಗಿ ಮುಖತೋರಿದ ಸಿದ್ದುವನ್ನ ಎದುರುಗೊಂಡ ಜನಾರ್ಧನರೆಡ್ಡಿ ಎಂಬ ಗಣಿಕಳ್ಳ ಮದುವೆ ಉಸ್ತುವಾರಿ ಹೊತ್ತವನಂತೆ ಓಡಿಬಂದು ಕೈಕುಲುಕಿ, ಹಲ್ಲು ಬಿಟ್ಟಿದ್ದನ್ನು ಹಾದರಕ್ಕೆ ಹುಟ್ಟಿದಂತಿರುವ ಕೆಲವು ಟಿವಿಯ ತಿರುಬೋಕಿಗಳು ಇಡೀ ದಿನ ತೋರಿ ಅದರಲ್ಲೇ ಉಂಡುತಿಂದು ತೇಗಿದವಂತಲ್ಲಾ. ಇದೇ ಜನ ಸಿದ್ದು ಅದ್ದೂರಿ ಮದುವೆಗೆ ಕಡಿವಾಣ ಹಾಕಲು ಹೊರಟಾಗ ವಿರೋಧವಾಗಿ ಮಾತನಾಡುವವರನ್ನ ತಂದು ಕೂರಿಸಿಕೊಂಡು ಸರಳ ಮದುವೆ ಸಾಧ್ಯವೇಯಿಲ್ಲ ನಾವು ಹೊಡೆದು ಮಡಗಿರುವ ಕಳ್ಳಧನವನ್ನ ಖರ್ಚು ಮಾಡುವುದೇಗೆ ಎಂಬಂತೆ ಊಳಿಡಲು ಅವಕಾಶಮಡಿಕೊಟ್ಟಿದ್ದರು. ಸದ್ಯದ ಆತಂಕ ಯಾವುದೆಂದರೆ, ಕೋಟ್ಯಾನುಕೋಟಿ ಖರ್ಚು ಮಾಡಿ ಮಾಡುವ ಮದುವೆಗಳು ಮುಂದೆ ಮುರಿದುಬಿದ್ದರೆ ಕತೆಯೇನು ಎಂಬುದು ಅದ್ದೂರಿ ಮದುವೆ ಕಂಡರಾಗದವರ ವ್ಯಾಖ್ಯಾನವಾಗಿದೆಯಂತಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...