Homeಅಂಕಣಗಳುಅಂದು ನಾದಿರ್ ಶಾ ಇಂದು ಅಮಿತ್ ಶಾ

ಅಂದು ನಾದಿರ್ ಶಾ ಇಂದು ಅಮಿತ್ ಶಾ

- Advertisement -
- Advertisement -

ಕಳೆದ ಮಾರ್ಚ್ ಎಂಟಕ್ಕೆ ಲಂಕೇಶರ ಹುಟ್ಟುಹಬ್ಬ ಸಂಭವಿಸಿತು. ಆ ಕುರಿತು ಧ್ಯಾನಿಸಿದಾಗ, ಅವರು ಕಳೆದ ಇಪ್ಪತ್ತೈದು ವರ್ಷದ ಹಿಂದೆ ಬರೆದ ಗುಣಮುಖ ನಾಟಕದ ದೃಶ್ಯ ಮುತ್ತಿಕೊಂಡು ಕಾಡಿಸಿತಲ್ಲಾ. ಪರ್ಶಿಯಾದಿಂದ ದಂಡೆತ್ತಿ ಬಂದ ನಾದಿರ್ ಶಾ ಭಾರತದ ಜಾತೀಯತೆ, ಅಸ್ಪೃಶ್ಯತೆ, ಆತ್ಮವಂಚನೆ ಮತ್ತು ಸುಳ್ಳುಗಳಿಂದ ರೋಸಿ ಹೋಗಿದ್ದಲ್ಲದೆ, ಮಾನಸಿಕ ರೋಗಕ್ಕೆ ತುತ್ತಾಗಿದ್ದಾನೆ. ಸ್ಥಳೀಯ ಮುಸ್ಲಿಂ ದೊರೆ, ಹುಡುಗಿಯರೊಂದಿಗೆ ಶಾಯಿರಿ ಬರೆದು ಹೇಳುತ್ತ, ಮದ್ಯ ಮಾಂಸದಲ್ಲಿ ಮುಳುಗಿದ್ದಾನೆ. ನಾದಿರ್ ಶಾಗೆ ಚಿಕಿತ್ಸೆ ಕೊಡಿಸುತ್ತಿಲ್ಲ. ಮಾನಸಿಕ ರೋಗಿಯಾದ ನಾದಿರ್ ಶಾನ ಸೈನ್ಯ ದೆಹಲಿಯನ್ನು ತೆರೆದಿಡುತ್ತದೆ. ಕಡೆಗೆ ಬಂದ ವೈದ್ಯ ಹಕೀಮ ನಾದಿರ್‍ಶಾನ ಹಿಂಸೆಯ ವ್ಯಸನವನ್ನು ತಹಬಂದಿಗೆ ತಂದು ಗುಣಮುಖನನ್ನಾಗಿಸಿ ಭಾರತ ಬಿಟ್ಟು ಹೋಗುವಂತೆ ಮಾಡುತ್ತಾನೆ. ಇದು ಇತಿಹಾಸ. ಇಂತಹ ರಕ್ತಸಿಕ್ತ ಇತಿಹಾಸ ಮರುಕಳಿಸಿದೆ. ನಾದಿರ್ ಶಾನ ಜಾಗದಲ್ಲಿ ಅಮಿತ್ ಶಾ ಇದ್ದಾನೆ. ಅವನ ಪಡೆ ದೆಹಲಿಯಲ್ಲಿ ಪಿಸ್ತೂಲು ಹಿಡಿದು ಜನರನ್ನ ಕೊಲ್ಲುತ್ತಿದೆ. ಹಕೀಮನ ಜಾಗದಲ್ಲಿ ಕೇಜ್ರಿವಾಲನಿದ್ದಾನೆ. ಕೇಜ್ರಿವಾಲನ ಕೆಲಸಗಳು ಅಮಿತ್ ಶಾನ ಕಣ್ಣು ತೆರೆಸಿದರೆ ದೆಹಲಿ ಏಳಿಗೆಯಾಗಬಲ್ಲದು ಇಲ್ಲವಾದರೆ, ಸರ್ವನಾಶ. ಆ ಮುಖಾಂತರ ಭಾರತವೂ ನಾಶದ ಅಂಚಿಗೆ ಬಂದು ನಿಲ್ಲುವುದರಲ್ಲಿ ಯಾವ ಅನುಮಾನವೂ ಇಲ್ಲವಂತಲ್ಲ ಥೂತ್ತೇರಿ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರನ್ನು ನೋಡಿ ಬೊಗಳಿದ ಯತ್ನಾಳ್ ಎಂಬ ಯಬಡನನ್ನು ಕುರಿತು ಬಿಜೆಪಿಯ ಯಾರೂ ಗದರಲಿಲ್ಲವಂತಲ್ಲಾ. ಇದಲ್ಲದೆ, ಪರವಾಗಿಲ್ಲ ಅವನ ಜೊತೆ ಮಾತಾಡಬಹುದು ಎಂಬಂತಿದ್ದ ಸುರೇಶ್ ಕುಮಾರ್ ಎಂಬ ಸಧಾರಿತ ಚೆಡ್ಡಿಯ ಬಗ್ಗೆ ಶಾನೆ ಬೇಜಾರು ಮಾಡಿಕೊಂಡಿರುವ ದೊರೆಸ್ವಾಮಿ ಸಂಬಂಧಿಯಾದ ದೇವನೂರು ಮಹಾದೇವ ಕೊಳೆತ ಹಣ್ಣಿನ ಜೊತೆಯಿರುವ ಒಳ್ಳೆ ಹಣ್ಣು ಎಂದು ಭಾವಿಸಿ ಮೋಸ ಹೋಗಿದ್ದಾರಲ್ಲಾ. ಯಾರು ಸ್ವಾಮಿ ಇದು ಶ್ರೇಷ್ಠ ಹಣ್ಣು ಎಂದು ತಮಗೆ ಹೇಳಿದ್ದು. ಸಿ.ಟಿ.ರವಿ, ರೇಣುಕಾಚಾರಿ ಯತ್ನಾಳ್ ಹೇಳುವ ಮಾತನ್ನೇ ಶಿಷ್ಟಭಾಷೆಯಲ್ಲಿ ಹೇಳುವ ಸುರೇಶ್‍ಕುಮಾರ್ ಯಡ್ಡಿ ಕಾಲದಲ್ಲಿ ಬೆಂಗಳೂರಲ್ಲಿ ಮಾಡಿಕೊಂಡ ಸೈಟಿನ ಬಗ್ಗೆ ತಲೆದೂಗುವ ಭಾಷೆಯಲ್ಲಿ ಸಮರ್ಥಿಸಿಕೊಂಡಿದ್ದರು. ಇದೆಲ್ಲಕ್ಕಿಂತ ಮುಖ್ಯವಾಗಿ ಯತ್ನಾಳ ದನಿ ಇಡೀ ಬಿಜೆಪಿಗಳ ದನಿ. ಅದಕ್ಕೆ ಆತನ ಪರ ನಿಂತರು. ಅದಾಳು ಬಿದ್ದೋಗಲಿ ಕುಮಾರಸ್ವಾಮಿ ಮಗನ ಮದುವೆ ವಿಷಯದಲ್ಲಿ ತಲೆ ಕೆಡಿಸಿಕೊಂಡಿರುವ ವಿಶ್ವನಾಥ್ ಎಂಬ ಕಾಂಗ್ರೆಸ್ ಪ್ರವಾದಿ ಬಾಯಿಗೆ ಅದಾವ ಗೂಟ ಬಡಿದುಕೊಂಡಿದ್ದರೆಂದು ಹಾಲಿ ಕಾಂಗ್ರೆಸ್‍ಗಳು ಗುಸುಗುಟ್ಟುತ್ತಿವೆಯಂತಲ್ಲಾ ಥೂತ್ತೇರಿ.

ಕುಮಾರಸ್ವಾಮಿ ಮಗನ ಮದುವೆ ವಿಷಯದಲ್ಲಿ ಮೂಗು ತೂರಿಸಿ ಕುಮಾರಣ್ಣನಿಂದಲೇ ಸರಿಯಾಗಿ ಇಕ್ಕಿಸಿಕೊಂಡಿದ್ದಾರಲ್ಲಾ ಈ ವಿಶ್ವನಾಥ. ನನ್ನ ಮಗನ ಖರ್ಚಿನ ವಿಷಯದಲ್ಲಿ ಮಾತನಾಡುವ ಈ ವಿಶ್ವನಾಥ ಇದ್ದಕ್ಕಿದ್ದಂತೆ ರಾಜಿನಾಮೆ ನೀಡಿ ಹತ್ತಾರು ಕೋಟಿ ಖರ್ಚಿನಿಂದ ಮತ್ತೆ ಚುನಾವಣೆ ಎದುರಿಸಿದರಲ್ಲಾ ಅದು ಯಾರ ದುಡ್ಡು ಎಂದಿದ್ದಾರಲ್ಲಾ. ಇಬ್ಬರ ಅಭಿಪ್ರಾಯಗಳು ಅರ್ಥವತ್ತಾಗಿವೆ. ಹೇಗೆಂದರೆ, ಚುನಾವಣೆಗೆ ನಿಂತು ಖರ್ಚು ಮಾಡಿಕೊಂಡು ಸಾಲ ಮಾಡಿದ್ದ ವಿಶ್ವನಾಥ್ ಅದನ್ನ ತೀರಿಸಲು ಬಿಜೆಪಿ ಸೇರಿ ಚುನಾವಣೆಗೆ ಹಣ ಖರ್ಚು ಮಾಡಿದರು. ಇತ್ತ ಕುಮಾರಣ್ಣ ಮಂಡ್ಯ ಲೋಕಸಭಾ ಚುನಾವಣೆಗೆ ಮಗನನ್ನು ನಿಲ್ಲಿಸಿ ನೂರು ಕೋಟಿ ಸುರಿದರು. ಈಗ ಅಷ್ಟೇ ದುಡ್ಡಿನಿಂದ ಮಗನ ಮದುವೆ ಮಾಡುತ್ತಿದ್ದಾರೆ. ಇವರಿಬ್ಬರೂ ಖರ್ಚು ಮಾಡಿದ ಹಣ ಸ್ವಂತ ದುಡಿಮೆಯಿಂದ ಸಂಗ್ರಹಿಸಿದ್ದಲ್ಲ. ಅಷ್ಟಕ್ಕೂ ಸಾರ್ವಜನಿಕ ಹಣ ಇಟ್ಟುಕೊಂಡು ಏನು ಮಾಡುವುದು. ಅವರಿಗೇ ಖರ್ಚು ಮಾಡಬೇಕು. ಅದಕ್ಕಾಗಿ ಕುಮಾರಣ್ಣ ಮಗನ ಮದುವೆ ನೆಪದಲ್ಲಿ ಕಾರ್ಯಕರ್ತರಿಗೆ ಊಟ ಉಡುಗೊರೆ ಕೊಟ್ಟು ಪಾರ್ಟಿ ಬಲಪಸುತ್ತಿದ್ದಾರಂತೆ. ಇದನ್ನ ನೋಡಿದ ಜೆಡಿಎಸ್ ವಕ್ತಾರ ರಮೇಶ್ ಬಾಬು, ಜೆಡಿಎಸ್ ಜನಸಮೂಹ ಪ್ರತಿನಿಧಿಸುವ ಪಾರ್ಟಿ ಅಲ್ಲ ಎಂದು ಕಾಲ್ಕೀಳುತ್ತಿದ್ದಾರೆ. ಎಷ್ಟು ತಡವಾಗಿ ಜ್ಞಾನೋದಯವಾಯಿತ್ತಲ್ಲ ಥೂತ್ತೇರಿ.

ಮುಖ್ಯಮಂತ್ರಿಯಾಗಿದ್ದಾಗ ಅದ್ದೂರಿ ಮದುವೆಗೆ ಕಡಿವಾಣ ಹಾಕಲು ಹೊರಟಿದ್ದ ಸಿದ್ದರಾಮಯ್ಯ ಅದ್ದೂರಿ ಮದುವೆ ಹುಡುಕಿಕೊಂಡು ತಿರುಗುತ್ತಿದ್ದಾರಲ್ಲಾ. ರಾಮುಲು ಮಗಳ ಮದುವೆಗೆ ಹೋಗಿ ಮುಖತೋರಿದ ಸಿದ್ದುವನ್ನ ಎದುರುಗೊಂಡ ಜನಾರ್ಧನರೆಡ್ಡಿ ಎಂಬ ಗಣಿಕಳ್ಳ ಮದುವೆ ಉಸ್ತುವಾರಿ ಹೊತ್ತವನಂತೆ ಓಡಿಬಂದು ಕೈಕುಲುಕಿ, ಹಲ್ಲು ಬಿಟ್ಟಿದ್ದನ್ನು ಹಾದರಕ್ಕೆ ಹುಟ್ಟಿದಂತಿರುವ ಕೆಲವು ಟಿವಿಯ ತಿರುಬೋಕಿಗಳು ಇಡೀ ದಿನ ತೋರಿ ಅದರಲ್ಲೇ ಉಂಡುತಿಂದು ತೇಗಿದವಂತಲ್ಲಾ. ಇದೇ ಜನ ಸಿದ್ದು ಅದ್ದೂರಿ ಮದುವೆಗೆ ಕಡಿವಾಣ ಹಾಕಲು ಹೊರಟಾಗ ವಿರೋಧವಾಗಿ ಮಾತನಾಡುವವರನ್ನ ತಂದು ಕೂರಿಸಿಕೊಂಡು ಸರಳ ಮದುವೆ ಸಾಧ್ಯವೇಯಿಲ್ಲ ನಾವು ಹೊಡೆದು ಮಡಗಿರುವ ಕಳ್ಳಧನವನ್ನ ಖರ್ಚು ಮಾಡುವುದೇಗೆ ಎಂಬಂತೆ ಊಳಿಡಲು ಅವಕಾಶಮಡಿಕೊಟ್ಟಿದ್ದರು. ಸದ್ಯದ ಆತಂಕ ಯಾವುದೆಂದರೆ, ಕೋಟ್ಯಾನುಕೋಟಿ ಖರ್ಚು ಮಾಡಿ ಮಾಡುವ ಮದುವೆಗಳು ಮುಂದೆ ಮುರಿದುಬಿದ್ದರೆ ಕತೆಯೇನು ಎಂಬುದು ಅದ್ದೂರಿ ಮದುವೆ ಕಂಡರಾಗದವರ ವ್ಯಾಖ್ಯಾನವಾಗಿದೆಯಂತಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...