Homeಅಂಕಣಗಳುಅಂದು ನಾದಿರ್ ಶಾ ಇಂದು ಅಮಿತ್ ಶಾ

ಅಂದು ನಾದಿರ್ ಶಾ ಇಂದು ಅಮಿತ್ ಶಾ

- Advertisement -
- Advertisement -

ಕಳೆದ ಮಾರ್ಚ್ ಎಂಟಕ್ಕೆ ಲಂಕೇಶರ ಹುಟ್ಟುಹಬ್ಬ ಸಂಭವಿಸಿತು. ಆ ಕುರಿತು ಧ್ಯಾನಿಸಿದಾಗ, ಅವರು ಕಳೆದ ಇಪ್ಪತ್ತೈದು ವರ್ಷದ ಹಿಂದೆ ಬರೆದ ಗುಣಮುಖ ನಾಟಕದ ದೃಶ್ಯ ಮುತ್ತಿಕೊಂಡು ಕಾಡಿಸಿತಲ್ಲಾ. ಪರ್ಶಿಯಾದಿಂದ ದಂಡೆತ್ತಿ ಬಂದ ನಾದಿರ್ ಶಾ ಭಾರತದ ಜಾತೀಯತೆ, ಅಸ್ಪೃಶ್ಯತೆ, ಆತ್ಮವಂಚನೆ ಮತ್ತು ಸುಳ್ಳುಗಳಿಂದ ರೋಸಿ ಹೋಗಿದ್ದಲ್ಲದೆ, ಮಾನಸಿಕ ರೋಗಕ್ಕೆ ತುತ್ತಾಗಿದ್ದಾನೆ. ಸ್ಥಳೀಯ ಮುಸ್ಲಿಂ ದೊರೆ, ಹುಡುಗಿಯರೊಂದಿಗೆ ಶಾಯಿರಿ ಬರೆದು ಹೇಳುತ್ತ, ಮದ್ಯ ಮಾಂಸದಲ್ಲಿ ಮುಳುಗಿದ್ದಾನೆ. ನಾದಿರ್ ಶಾಗೆ ಚಿಕಿತ್ಸೆ ಕೊಡಿಸುತ್ತಿಲ್ಲ. ಮಾನಸಿಕ ರೋಗಿಯಾದ ನಾದಿರ್ ಶಾನ ಸೈನ್ಯ ದೆಹಲಿಯನ್ನು ತೆರೆದಿಡುತ್ತದೆ. ಕಡೆಗೆ ಬಂದ ವೈದ್ಯ ಹಕೀಮ ನಾದಿರ್‍ಶಾನ ಹಿಂಸೆಯ ವ್ಯಸನವನ್ನು ತಹಬಂದಿಗೆ ತಂದು ಗುಣಮುಖನನ್ನಾಗಿಸಿ ಭಾರತ ಬಿಟ್ಟು ಹೋಗುವಂತೆ ಮಾಡುತ್ತಾನೆ. ಇದು ಇತಿಹಾಸ. ಇಂತಹ ರಕ್ತಸಿಕ್ತ ಇತಿಹಾಸ ಮರುಕಳಿಸಿದೆ. ನಾದಿರ್ ಶಾನ ಜಾಗದಲ್ಲಿ ಅಮಿತ್ ಶಾ ಇದ್ದಾನೆ. ಅವನ ಪಡೆ ದೆಹಲಿಯಲ್ಲಿ ಪಿಸ್ತೂಲು ಹಿಡಿದು ಜನರನ್ನ ಕೊಲ್ಲುತ್ತಿದೆ. ಹಕೀಮನ ಜಾಗದಲ್ಲಿ ಕೇಜ್ರಿವಾಲನಿದ್ದಾನೆ. ಕೇಜ್ರಿವಾಲನ ಕೆಲಸಗಳು ಅಮಿತ್ ಶಾನ ಕಣ್ಣು ತೆರೆಸಿದರೆ ದೆಹಲಿ ಏಳಿಗೆಯಾಗಬಲ್ಲದು ಇಲ್ಲವಾದರೆ, ಸರ್ವನಾಶ. ಆ ಮುಖಾಂತರ ಭಾರತವೂ ನಾಶದ ಅಂಚಿಗೆ ಬಂದು ನಿಲ್ಲುವುದರಲ್ಲಿ ಯಾವ ಅನುಮಾನವೂ ಇಲ್ಲವಂತಲ್ಲ ಥೂತ್ತೇರಿ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರನ್ನು ನೋಡಿ ಬೊಗಳಿದ ಯತ್ನಾಳ್ ಎಂಬ ಯಬಡನನ್ನು ಕುರಿತು ಬಿಜೆಪಿಯ ಯಾರೂ ಗದರಲಿಲ್ಲವಂತಲ್ಲಾ. ಇದಲ್ಲದೆ, ಪರವಾಗಿಲ್ಲ ಅವನ ಜೊತೆ ಮಾತಾಡಬಹುದು ಎಂಬಂತಿದ್ದ ಸುರೇಶ್ ಕುಮಾರ್ ಎಂಬ ಸಧಾರಿತ ಚೆಡ್ಡಿಯ ಬಗ್ಗೆ ಶಾನೆ ಬೇಜಾರು ಮಾಡಿಕೊಂಡಿರುವ ದೊರೆಸ್ವಾಮಿ ಸಂಬಂಧಿಯಾದ ದೇವನೂರು ಮಹಾದೇವ ಕೊಳೆತ ಹಣ್ಣಿನ ಜೊತೆಯಿರುವ ಒಳ್ಳೆ ಹಣ್ಣು ಎಂದು ಭಾವಿಸಿ ಮೋಸ ಹೋಗಿದ್ದಾರಲ್ಲಾ. ಯಾರು ಸ್ವಾಮಿ ಇದು ಶ್ರೇಷ್ಠ ಹಣ್ಣು ಎಂದು ತಮಗೆ ಹೇಳಿದ್ದು. ಸಿ.ಟಿ.ರವಿ, ರೇಣುಕಾಚಾರಿ ಯತ್ನಾಳ್ ಹೇಳುವ ಮಾತನ್ನೇ ಶಿಷ್ಟಭಾಷೆಯಲ್ಲಿ ಹೇಳುವ ಸುರೇಶ್‍ಕುಮಾರ್ ಯಡ್ಡಿ ಕಾಲದಲ್ಲಿ ಬೆಂಗಳೂರಲ್ಲಿ ಮಾಡಿಕೊಂಡ ಸೈಟಿನ ಬಗ್ಗೆ ತಲೆದೂಗುವ ಭಾಷೆಯಲ್ಲಿ ಸಮರ್ಥಿಸಿಕೊಂಡಿದ್ದರು. ಇದೆಲ್ಲಕ್ಕಿಂತ ಮುಖ್ಯವಾಗಿ ಯತ್ನಾಳ ದನಿ ಇಡೀ ಬಿಜೆಪಿಗಳ ದನಿ. ಅದಕ್ಕೆ ಆತನ ಪರ ನಿಂತರು. ಅದಾಳು ಬಿದ್ದೋಗಲಿ ಕುಮಾರಸ್ವಾಮಿ ಮಗನ ಮದುವೆ ವಿಷಯದಲ್ಲಿ ತಲೆ ಕೆಡಿಸಿಕೊಂಡಿರುವ ವಿಶ್ವನಾಥ್ ಎಂಬ ಕಾಂಗ್ರೆಸ್ ಪ್ರವಾದಿ ಬಾಯಿಗೆ ಅದಾವ ಗೂಟ ಬಡಿದುಕೊಂಡಿದ್ದರೆಂದು ಹಾಲಿ ಕಾಂಗ್ರೆಸ್‍ಗಳು ಗುಸುಗುಟ್ಟುತ್ತಿವೆಯಂತಲ್ಲಾ ಥೂತ್ತೇರಿ.

ಕುಮಾರಸ್ವಾಮಿ ಮಗನ ಮದುವೆ ವಿಷಯದಲ್ಲಿ ಮೂಗು ತೂರಿಸಿ ಕುಮಾರಣ್ಣನಿಂದಲೇ ಸರಿಯಾಗಿ ಇಕ್ಕಿಸಿಕೊಂಡಿದ್ದಾರಲ್ಲಾ ಈ ವಿಶ್ವನಾಥ. ನನ್ನ ಮಗನ ಖರ್ಚಿನ ವಿಷಯದಲ್ಲಿ ಮಾತನಾಡುವ ಈ ವಿಶ್ವನಾಥ ಇದ್ದಕ್ಕಿದ್ದಂತೆ ರಾಜಿನಾಮೆ ನೀಡಿ ಹತ್ತಾರು ಕೋಟಿ ಖರ್ಚಿನಿಂದ ಮತ್ತೆ ಚುನಾವಣೆ ಎದುರಿಸಿದರಲ್ಲಾ ಅದು ಯಾರ ದುಡ್ಡು ಎಂದಿದ್ದಾರಲ್ಲಾ. ಇಬ್ಬರ ಅಭಿಪ್ರಾಯಗಳು ಅರ್ಥವತ್ತಾಗಿವೆ. ಹೇಗೆಂದರೆ, ಚುನಾವಣೆಗೆ ನಿಂತು ಖರ್ಚು ಮಾಡಿಕೊಂಡು ಸಾಲ ಮಾಡಿದ್ದ ವಿಶ್ವನಾಥ್ ಅದನ್ನ ತೀರಿಸಲು ಬಿಜೆಪಿ ಸೇರಿ ಚುನಾವಣೆಗೆ ಹಣ ಖರ್ಚು ಮಾಡಿದರು. ಇತ್ತ ಕುಮಾರಣ್ಣ ಮಂಡ್ಯ ಲೋಕಸಭಾ ಚುನಾವಣೆಗೆ ಮಗನನ್ನು ನಿಲ್ಲಿಸಿ ನೂರು ಕೋಟಿ ಸುರಿದರು. ಈಗ ಅಷ್ಟೇ ದುಡ್ಡಿನಿಂದ ಮಗನ ಮದುವೆ ಮಾಡುತ್ತಿದ್ದಾರೆ. ಇವರಿಬ್ಬರೂ ಖರ್ಚು ಮಾಡಿದ ಹಣ ಸ್ವಂತ ದುಡಿಮೆಯಿಂದ ಸಂಗ್ರಹಿಸಿದ್ದಲ್ಲ. ಅಷ್ಟಕ್ಕೂ ಸಾರ್ವಜನಿಕ ಹಣ ಇಟ್ಟುಕೊಂಡು ಏನು ಮಾಡುವುದು. ಅವರಿಗೇ ಖರ್ಚು ಮಾಡಬೇಕು. ಅದಕ್ಕಾಗಿ ಕುಮಾರಣ್ಣ ಮಗನ ಮದುವೆ ನೆಪದಲ್ಲಿ ಕಾರ್ಯಕರ್ತರಿಗೆ ಊಟ ಉಡುಗೊರೆ ಕೊಟ್ಟು ಪಾರ್ಟಿ ಬಲಪಸುತ್ತಿದ್ದಾರಂತೆ. ಇದನ್ನ ನೋಡಿದ ಜೆಡಿಎಸ್ ವಕ್ತಾರ ರಮೇಶ್ ಬಾಬು, ಜೆಡಿಎಸ್ ಜನಸಮೂಹ ಪ್ರತಿನಿಧಿಸುವ ಪಾರ್ಟಿ ಅಲ್ಲ ಎಂದು ಕಾಲ್ಕೀಳುತ್ತಿದ್ದಾರೆ. ಎಷ್ಟು ತಡವಾಗಿ ಜ್ಞಾನೋದಯವಾಯಿತ್ತಲ್ಲ ಥೂತ್ತೇರಿ.

ಮುಖ್ಯಮಂತ್ರಿಯಾಗಿದ್ದಾಗ ಅದ್ದೂರಿ ಮದುವೆಗೆ ಕಡಿವಾಣ ಹಾಕಲು ಹೊರಟಿದ್ದ ಸಿದ್ದರಾಮಯ್ಯ ಅದ್ದೂರಿ ಮದುವೆ ಹುಡುಕಿಕೊಂಡು ತಿರುಗುತ್ತಿದ್ದಾರಲ್ಲಾ. ರಾಮುಲು ಮಗಳ ಮದುವೆಗೆ ಹೋಗಿ ಮುಖತೋರಿದ ಸಿದ್ದುವನ್ನ ಎದುರುಗೊಂಡ ಜನಾರ್ಧನರೆಡ್ಡಿ ಎಂಬ ಗಣಿಕಳ್ಳ ಮದುವೆ ಉಸ್ತುವಾರಿ ಹೊತ್ತವನಂತೆ ಓಡಿಬಂದು ಕೈಕುಲುಕಿ, ಹಲ್ಲು ಬಿಟ್ಟಿದ್ದನ್ನು ಹಾದರಕ್ಕೆ ಹುಟ್ಟಿದಂತಿರುವ ಕೆಲವು ಟಿವಿಯ ತಿರುಬೋಕಿಗಳು ಇಡೀ ದಿನ ತೋರಿ ಅದರಲ್ಲೇ ಉಂಡುತಿಂದು ತೇಗಿದವಂತಲ್ಲಾ. ಇದೇ ಜನ ಸಿದ್ದು ಅದ್ದೂರಿ ಮದುವೆಗೆ ಕಡಿವಾಣ ಹಾಕಲು ಹೊರಟಾಗ ವಿರೋಧವಾಗಿ ಮಾತನಾಡುವವರನ್ನ ತಂದು ಕೂರಿಸಿಕೊಂಡು ಸರಳ ಮದುವೆ ಸಾಧ್ಯವೇಯಿಲ್ಲ ನಾವು ಹೊಡೆದು ಮಡಗಿರುವ ಕಳ್ಳಧನವನ್ನ ಖರ್ಚು ಮಾಡುವುದೇಗೆ ಎಂಬಂತೆ ಊಳಿಡಲು ಅವಕಾಶಮಡಿಕೊಟ್ಟಿದ್ದರು. ಸದ್ಯದ ಆತಂಕ ಯಾವುದೆಂದರೆ, ಕೋಟ್ಯಾನುಕೋಟಿ ಖರ್ಚು ಮಾಡಿ ಮಾಡುವ ಮದುವೆಗಳು ಮುಂದೆ ಮುರಿದುಬಿದ್ದರೆ ಕತೆಯೇನು ಎಂಬುದು ಅದ್ದೂರಿ ಮದುವೆ ಕಂಡರಾಗದವರ ವ್ಯಾಖ್ಯಾನವಾಗಿದೆಯಂತಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...