Homeಅಂಕಣಗಳುಅಂದು ನಾದಿರ್ ಶಾ ಇಂದು ಅಮಿತ್ ಶಾ

ಅಂದು ನಾದಿರ್ ಶಾ ಇಂದು ಅಮಿತ್ ಶಾ

- Advertisement -
- Advertisement -

ಕಳೆದ ಮಾರ್ಚ್ ಎಂಟಕ್ಕೆ ಲಂಕೇಶರ ಹುಟ್ಟುಹಬ್ಬ ಸಂಭವಿಸಿತು. ಆ ಕುರಿತು ಧ್ಯಾನಿಸಿದಾಗ, ಅವರು ಕಳೆದ ಇಪ್ಪತ್ತೈದು ವರ್ಷದ ಹಿಂದೆ ಬರೆದ ಗುಣಮುಖ ನಾಟಕದ ದೃಶ್ಯ ಮುತ್ತಿಕೊಂಡು ಕಾಡಿಸಿತಲ್ಲಾ. ಪರ್ಶಿಯಾದಿಂದ ದಂಡೆತ್ತಿ ಬಂದ ನಾದಿರ್ ಶಾ ಭಾರತದ ಜಾತೀಯತೆ, ಅಸ್ಪೃಶ್ಯತೆ, ಆತ್ಮವಂಚನೆ ಮತ್ತು ಸುಳ್ಳುಗಳಿಂದ ರೋಸಿ ಹೋಗಿದ್ದಲ್ಲದೆ, ಮಾನಸಿಕ ರೋಗಕ್ಕೆ ತುತ್ತಾಗಿದ್ದಾನೆ. ಸ್ಥಳೀಯ ಮುಸ್ಲಿಂ ದೊರೆ, ಹುಡುಗಿಯರೊಂದಿಗೆ ಶಾಯಿರಿ ಬರೆದು ಹೇಳುತ್ತ, ಮದ್ಯ ಮಾಂಸದಲ್ಲಿ ಮುಳುಗಿದ್ದಾನೆ. ನಾದಿರ್ ಶಾಗೆ ಚಿಕಿತ್ಸೆ ಕೊಡಿಸುತ್ತಿಲ್ಲ. ಮಾನಸಿಕ ರೋಗಿಯಾದ ನಾದಿರ್ ಶಾನ ಸೈನ್ಯ ದೆಹಲಿಯನ್ನು ತೆರೆದಿಡುತ್ತದೆ. ಕಡೆಗೆ ಬಂದ ವೈದ್ಯ ಹಕೀಮ ನಾದಿರ್‍ಶಾನ ಹಿಂಸೆಯ ವ್ಯಸನವನ್ನು ತಹಬಂದಿಗೆ ತಂದು ಗುಣಮುಖನನ್ನಾಗಿಸಿ ಭಾರತ ಬಿಟ್ಟು ಹೋಗುವಂತೆ ಮಾಡುತ್ತಾನೆ. ಇದು ಇತಿಹಾಸ. ಇಂತಹ ರಕ್ತಸಿಕ್ತ ಇತಿಹಾಸ ಮರುಕಳಿಸಿದೆ. ನಾದಿರ್ ಶಾನ ಜಾಗದಲ್ಲಿ ಅಮಿತ್ ಶಾ ಇದ್ದಾನೆ. ಅವನ ಪಡೆ ದೆಹಲಿಯಲ್ಲಿ ಪಿಸ್ತೂಲು ಹಿಡಿದು ಜನರನ್ನ ಕೊಲ್ಲುತ್ತಿದೆ. ಹಕೀಮನ ಜಾಗದಲ್ಲಿ ಕೇಜ್ರಿವಾಲನಿದ್ದಾನೆ. ಕೇಜ್ರಿವಾಲನ ಕೆಲಸಗಳು ಅಮಿತ್ ಶಾನ ಕಣ್ಣು ತೆರೆಸಿದರೆ ದೆಹಲಿ ಏಳಿಗೆಯಾಗಬಲ್ಲದು ಇಲ್ಲವಾದರೆ, ಸರ್ವನಾಶ. ಆ ಮುಖಾಂತರ ಭಾರತವೂ ನಾಶದ ಅಂಚಿಗೆ ಬಂದು ನಿಲ್ಲುವುದರಲ್ಲಿ ಯಾವ ಅನುಮಾನವೂ ಇಲ್ಲವಂತಲ್ಲ ಥೂತ್ತೇರಿ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರನ್ನು ನೋಡಿ ಬೊಗಳಿದ ಯತ್ನಾಳ್ ಎಂಬ ಯಬಡನನ್ನು ಕುರಿತು ಬಿಜೆಪಿಯ ಯಾರೂ ಗದರಲಿಲ್ಲವಂತಲ್ಲಾ. ಇದಲ್ಲದೆ, ಪರವಾಗಿಲ್ಲ ಅವನ ಜೊತೆ ಮಾತಾಡಬಹುದು ಎಂಬಂತಿದ್ದ ಸುರೇಶ್ ಕುಮಾರ್ ಎಂಬ ಸಧಾರಿತ ಚೆಡ್ಡಿಯ ಬಗ್ಗೆ ಶಾನೆ ಬೇಜಾರು ಮಾಡಿಕೊಂಡಿರುವ ದೊರೆಸ್ವಾಮಿ ಸಂಬಂಧಿಯಾದ ದೇವನೂರು ಮಹಾದೇವ ಕೊಳೆತ ಹಣ್ಣಿನ ಜೊತೆಯಿರುವ ಒಳ್ಳೆ ಹಣ್ಣು ಎಂದು ಭಾವಿಸಿ ಮೋಸ ಹೋಗಿದ್ದಾರಲ್ಲಾ. ಯಾರು ಸ್ವಾಮಿ ಇದು ಶ್ರೇಷ್ಠ ಹಣ್ಣು ಎಂದು ತಮಗೆ ಹೇಳಿದ್ದು. ಸಿ.ಟಿ.ರವಿ, ರೇಣುಕಾಚಾರಿ ಯತ್ನಾಳ್ ಹೇಳುವ ಮಾತನ್ನೇ ಶಿಷ್ಟಭಾಷೆಯಲ್ಲಿ ಹೇಳುವ ಸುರೇಶ್‍ಕುಮಾರ್ ಯಡ್ಡಿ ಕಾಲದಲ್ಲಿ ಬೆಂಗಳೂರಲ್ಲಿ ಮಾಡಿಕೊಂಡ ಸೈಟಿನ ಬಗ್ಗೆ ತಲೆದೂಗುವ ಭಾಷೆಯಲ್ಲಿ ಸಮರ್ಥಿಸಿಕೊಂಡಿದ್ದರು. ಇದೆಲ್ಲಕ್ಕಿಂತ ಮುಖ್ಯವಾಗಿ ಯತ್ನಾಳ ದನಿ ಇಡೀ ಬಿಜೆಪಿಗಳ ದನಿ. ಅದಕ್ಕೆ ಆತನ ಪರ ನಿಂತರು. ಅದಾಳು ಬಿದ್ದೋಗಲಿ ಕುಮಾರಸ್ವಾಮಿ ಮಗನ ಮದುವೆ ವಿಷಯದಲ್ಲಿ ತಲೆ ಕೆಡಿಸಿಕೊಂಡಿರುವ ವಿಶ್ವನಾಥ್ ಎಂಬ ಕಾಂಗ್ರೆಸ್ ಪ್ರವಾದಿ ಬಾಯಿಗೆ ಅದಾವ ಗೂಟ ಬಡಿದುಕೊಂಡಿದ್ದರೆಂದು ಹಾಲಿ ಕಾಂಗ್ರೆಸ್‍ಗಳು ಗುಸುಗುಟ್ಟುತ್ತಿವೆಯಂತಲ್ಲಾ ಥೂತ್ತೇರಿ.

ಕುಮಾರಸ್ವಾಮಿ ಮಗನ ಮದುವೆ ವಿಷಯದಲ್ಲಿ ಮೂಗು ತೂರಿಸಿ ಕುಮಾರಣ್ಣನಿಂದಲೇ ಸರಿಯಾಗಿ ಇಕ್ಕಿಸಿಕೊಂಡಿದ್ದಾರಲ್ಲಾ ಈ ವಿಶ್ವನಾಥ. ನನ್ನ ಮಗನ ಖರ್ಚಿನ ವಿಷಯದಲ್ಲಿ ಮಾತನಾಡುವ ಈ ವಿಶ್ವನಾಥ ಇದ್ದಕ್ಕಿದ್ದಂತೆ ರಾಜಿನಾಮೆ ನೀಡಿ ಹತ್ತಾರು ಕೋಟಿ ಖರ್ಚಿನಿಂದ ಮತ್ತೆ ಚುನಾವಣೆ ಎದುರಿಸಿದರಲ್ಲಾ ಅದು ಯಾರ ದುಡ್ಡು ಎಂದಿದ್ದಾರಲ್ಲಾ. ಇಬ್ಬರ ಅಭಿಪ್ರಾಯಗಳು ಅರ್ಥವತ್ತಾಗಿವೆ. ಹೇಗೆಂದರೆ, ಚುನಾವಣೆಗೆ ನಿಂತು ಖರ್ಚು ಮಾಡಿಕೊಂಡು ಸಾಲ ಮಾಡಿದ್ದ ವಿಶ್ವನಾಥ್ ಅದನ್ನ ತೀರಿಸಲು ಬಿಜೆಪಿ ಸೇರಿ ಚುನಾವಣೆಗೆ ಹಣ ಖರ್ಚು ಮಾಡಿದರು. ಇತ್ತ ಕುಮಾರಣ್ಣ ಮಂಡ್ಯ ಲೋಕಸಭಾ ಚುನಾವಣೆಗೆ ಮಗನನ್ನು ನಿಲ್ಲಿಸಿ ನೂರು ಕೋಟಿ ಸುರಿದರು. ಈಗ ಅಷ್ಟೇ ದುಡ್ಡಿನಿಂದ ಮಗನ ಮದುವೆ ಮಾಡುತ್ತಿದ್ದಾರೆ. ಇವರಿಬ್ಬರೂ ಖರ್ಚು ಮಾಡಿದ ಹಣ ಸ್ವಂತ ದುಡಿಮೆಯಿಂದ ಸಂಗ್ರಹಿಸಿದ್ದಲ್ಲ. ಅಷ್ಟಕ್ಕೂ ಸಾರ್ವಜನಿಕ ಹಣ ಇಟ್ಟುಕೊಂಡು ಏನು ಮಾಡುವುದು. ಅವರಿಗೇ ಖರ್ಚು ಮಾಡಬೇಕು. ಅದಕ್ಕಾಗಿ ಕುಮಾರಣ್ಣ ಮಗನ ಮದುವೆ ನೆಪದಲ್ಲಿ ಕಾರ್ಯಕರ್ತರಿಗೆ ಊಟ ಉಡುಗೊರೆ ಕೊಟ್ಟು ಪಾರ್ಟಿ ಬಲಪಸುತ್ತಿದ್ದಾರಂತೆ. ಇದನ್ನ ನೋಡಿದ ಜೆಡಿಎಸ್ ವಕ್ತಾರ ರಮೇಶ್ ಬಾಬು, ಜೆಡಿಎಸ್ ಜನಸಮೂಹ ಪ್ರತಿನಿಧಿಸುವ ಪಾರ್ಟಿ ಅಲ್ಲ ಎಂದು ಕಾಲ್ಕೀಳುತ್ತಿದ್ದಾರೆ. ಎಷ್ಟು ತಡವಾಗಿ ಜ್ಞಾನೋದಯವಾಯಿತ್ತಲ್ಲ ಥೂತ್ತೇರಿ.

ಮುಖ್ಯಮಂತ್ರಿಯಾಗಿದ್ದಾಗ ಅದ್ದೂರಿ ಮದುವೆಗೆ ಕಡಿವಾಣ ಹಾಕಲು ಹೊರಟಿದ್ದ ಸಿದ್ದರಾಮಯ್ಯ ಅದ್ದೂರಿ ಮದುವೆ ಹುಡುಕಿಕೊಂಡು ತಿರುಗುತ್ತಿದ್ದಾರಲ್ಲಾ. ರಾಮುಲು ಮಗಳ ಮದುವೆಗೆ ಹೋಗಿ ಮುಖತೋರಿದ ಸಿದ್ದುವನ್ನ ಎದುರುಗೊಂಡ ಜನಾರ್ಧನರೆಡ್ಡಿ ಎಂಬ ಗಣಿಕಳ್ಳ ಮದುವೆ ಉಸ್ತುವಾರಿ ಹೊತ್ತವನಂತೆ ಓಡಿಬಂದು ಕೈಕುಲುಕಿ, ಹಲ್ಲು ಬಿಟ್ಟಿದ್ದನ್ನು ಹಾದರಕ್ಕೆ ಹುಟ್ಟಿದಂತಿರುವ ಕೆಲವು ಟಿವಿಯ ತಿರುಬೋಕಿಗಳು ಇಡೀ ದಿನ ತೋರಿ ಅದರಲ್ಲೇ ಉಂಡುತಿಂದು ತೇಗಿದವಂತಲ್ಲಾ. ಇದೇ ಜನ ಸಿದ್ದು ಅದ್ದೂರಿ ಮದುವೆಗೆ ಕಡಿವಾಣ ಹಾಕಲು ಹೊರಟಾಗ ವಿರೋಧವಾಗಿ ಮಾತನಾಡುವವರನ್ನ ತಂದು ಕೂರಿಸಿಕೊಂಡು ಸರಳ ಮದುವೆ ಸಾಧ್ಯವೇಯಿಲ್ಲ ನಾವು ಹೊಡೆದು ಮಡಗಿರುವ ಕಳ್ಳಧನವನ್ನ ಖರ್ಚು ಮಾಡುವುದೇಗೆ ಎಂಬಂತೆ ಊಳಿಡಲು ಅವಕಾಶಮಡಿಕೊಟ್ಟಿದ್ದರು. ಸದ್ಯದ ಆತಂಕ ಯಾವುದೆಂದರೆ, ಕೋಟ್ಯಾನುಕೋಟಿ ಖರ್ಚು ಮಾಡಿ ಮಾಡುವ ಮದುವೆಗಳು ಮುಂದೆ ಮುರಿದುಬಿದ್ದರೆ ಕತೆಯೇನು ಎಂಬುದು ಅದ್ದೂರಿ ಮದುವೆ ಕಂಡರಾಗದವರ ವ್ಯಾಖ್ಯಾನವಾಗಿದೆಯಂತಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...