Homeಮುಖಪುಟವಿಕಲಾಂಗಚೇತನರ ಕಲ್ಯಾಣಕ್ಕಾಗಿ ತಮಿಳುನಾಡಿಗೆ ರಾಷ್ಟ್ರೀಯ ಪ್ರಶಸ್ತಿ

ವಿಕಲಾಂಗಚೇತನರ ಕಲ್ಯಾಣಕ್ಕಾಗಿ ತಮಿಳುನಾಡಿಗೆ ರಾಷ್ಟ್ರೀಯ ಪ್ರಶಸ್ತಿ

- Advertisement -
- Advertisement -

‘ವಿಕಲಾಂಗಚೇತನರ ಸಬಲೀಕರಣವನ್ನು ಉತ್ತೇಜಿಸುವಲ್ಲಿ ಅತ್ಯುತ್ತಮ ರಾಜ್ಯ’ ಎಂದು ತಮಿಳುನಾಡು ಗುರುತಿಸಲ್ಪಟ್ಟಿದೆ. ಸಾಮಾಜಿಕ ನ್ಯಾಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಸಚಿವಾಲಯವು ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಅಂಗವಿಕಲರ ಅಂತರಾಷ್ಟ್ರೀಯ ದಿನದಂದು (ಶುಕ್ರವಾರ) ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ತಮಿಳುನಾಡಿನ ಆರು ವಿಕಲಾಂಗ ನಾಗರಿಕರ ಗಣನೀಯ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಯವರು ಪ್ರಶಸ್ತಿಗಳನ್ನು ನೀಡಿದ್ದಾರೆ.

ತಮಿಳುನಾಡು ಸರ್ಕಾರವು ವಿಕಲಾಂಗಚೇತನರ ಜೀವನ ಮಟ್ಟವನ್ನು ಸುಧಾರಿಸಲು ವಿಕಲಚೇತನರ ಶಿಕ್ಷಣ ಮತ್ತು ಉದ್ಯೋಗದ ಮೇಲೆ ಹೆಚ್ಚುವರಿ ಗಮನವನ್ನು ಹರಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ರಾಜ್ಯ ಕಮಿಷನರೇಟ್ ಶ್ರಮಿಸಿದೆ. ವಿಕಲಾಂಗಚೇತನ ವ್ಯಕ್ತಿಗಳು ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಸಹಕಾರ ನೀಡಲಾಗಿದೆ.

“ಲಾಕ್‌ಡೌನ್ ಸಮಯದಲ್ಲಿ ಅಂಗವಿಕಲರಿಗೆ ಅಗತ್ಯ ವಸ್ತುಗಳನ್ನು ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಮನೆ-ಮನೆಗೆ ಪ್ರಚಾರವನ್ನು ಪ್ರಾರಂಭಿಸಿದೆವು. ಇಲಾಖೆಯಿಂದ ಈಗಾಗಲೇ ಗುರುತಿಸಲ್ಪಟ್ಟವರಲ್ಲದೆ, ಅಧಿಕಾರಿಗಳು ಮತ್ತು ಸ್ವಯಂಸೇವಕರ ಸ್ಥಳೀಯ ಸಂಪರ್ಕಗಳ ಮೂಲಕ ನಮ್ಮ ದಾಖಲೆಗಳಲ್ಲಿಲ್ಲದ ಜನರನ್ನೂ ನಾವು ತಲುಪಿದ್ದೇವೆ ” ಎಂದು ರಾಜ್ಯ ವಿಕಲಚೇತನರ ಕಲ್ಯಾಣ ಆಯುಕ್ತ ಜಾನಿ ಟಾಮ್ ವರ್ಗೀಸ್ ಹೇಳಿದ್ದಾರೆ.

ನಗದು ನೆರವು ಮತ್ತು ಔಷಧಿಗಳನ್ನು ಒದಗಿಸುವುದು, ವೈದ್ಯಕೀಯ ಉಪಕರಣಗಳನ್ನು ದೊರಕಿಸುವುದು, ಆನ್‌ಲೈನ್ ಫಿಸಿಯೋಥೆರಪಿ ಸೆಷನ್‌ಗಳನ್ನು ನೀಡುವುದು ಇಷ್ಟೇ ಅಲ್ಲದೇ, ವಿಕಲಾಂಗಚೇತನರಿಗೆ ಮತ್ತು ವೃದ್ಧರಿಗೆ ಲಸಿಕೆ ಹಾಕಿಸಲು ಮನೆಮನೆಗೆ ಭೇಟಿ ನೀಡಲಾಗಿದೆ. ಶೇ. 70ಕ್ಕಿಂತ ಹೆಚ್ಚು ವಯಸ್ಕ ವಿಕಲಾಂಗ ಚೇತನರಿಗೆ ಈ ಕಾರ್ಯಕ್ರಮ ತಲುಪಿದೆ ಎನ್ನುತ್ತಾರೆ ಅಧಿಕಾರಿಗಳು.

ವಿಕಲಚೇತನರ ಉದ್ಯೋಗ ಮತ್ತು ಜೀವನೋಪಾಯ ಕೇಂದ್ರವನ್ನು (DELC) ಸ್ಥಾಪಿಸಲಾಗಿದೆ. ಇದು ವಿಕಲಾಂಗ ವ್ಯಕ್ತಿಗಳ ಕೌಶಲ್ಯ, ಸಾಮಾಜಿಕ-ಆರ್ಥಿಕ ಸ್ಥಿತಿ ಮತ್ತು ಜೀವನೋಪಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಆಯುಕ್ತರು ಹೇಳಿದ್ದಾರೆ.

ಡಿಇಎಲ್‌ಸಿ ಕೇಂದ್ರವು ವಿಕಲಾಂಗ ಚೇತನರಿಗೆ ಉದ್ಯೋಗ ದೊರಕಿಸುವ ವೇದಿಕೆಯಾಗಿ ಕಾರ್ಯನಿರ್ವಹಿತ್ತಿದೆ. ಕಾರ್ಯಕ್ರಮಗಳನ್ನು ನಡೆಸಲು ಕೌಶಲ್ಯ ಅಭಿವೃದ್ಧಿ ಮಿಷನ್‌ನೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ವರ್ಗೀಸ್‌‌ ತಿಳಿಸಿದ್ದಾರೆ.

ಸೇಲಂ ಜಿಲ್ಲೆಯು ಪುನರ್ವಸತಿ ಸೇವೆಗಳನ್ನು ಒದಗಿಸುವ ಅತ್ಯುತ್ತಮ ಜಿಲ್ಲೆ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಈ ಪ್ರಶಸ್ತಿ ಪಡೆದ ದೇಶದ ಎರಡು ಜಿಲ್ಲೆಗಳಲ್ಲಿ ಸೇಲಂ ಕೂಡ ಒಂದಾಗಿದೆ.


ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...