Homeಮುಖಪುಟವಿಕಲಾಂಗಚೇತನರ ಕಲ್ಯಾಣಕ್ಕಾಗಿ ತಮಿಳುನಾಡಿಗೆ ರಾಷ್ಟ್ರೀಯ ಪ್ರಶಸ್ತಿ

ವಿಕಲಾಂಗಚೇತನರ ಕಲ್ಯಾಣಕ್ಕಾಗಿ ತಮಿಳುನಾಡಿಗೆ ರಾಷ್ಟ್ರೀಯ ಪ್ರಶಸ್ತಿ

- Advertisement -
- Advertisement -

‘ವಿಕಲಾಂಗಚೇತನರ ಸಬಲೀಕರಣವನ್ನು ಉತ್ತೇಜಿಸುವಲ್ಲಿ ಅತ್ಯುತ್ತಮ ರಾಜ್ಯ’ ಎಂದು ತಮಿಳುನಾಡು ಗುರುತಿಸಲ್ಪಟ್ಟಿದೆ. ಸಾಮಾಜಿಕ ನ್ಯಾಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಸಚಿವಾಲಯವು ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಅಂಗವಿಕಲರ ಅಂತರಾಷ್ಟ್ರೀಯ ದಿನದಂದು (ಶುಕ್ರವಾರ) ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ತಮಿಳುನಾಡಿನ ಆರು ವಿಕಲಾಂಗ ನಾಗರಿಕರ ಗಣನೀಯ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಯವರು ಪ್ರಶಸ್ತಿಗಳನ್ನು ನೀಡಿದ್ದಾರೆ.

ತಮಿಳುನಾಡು ಸರ್ಕಾರವು ವಿಕಲಾಂಗಚೇತನರ ಜೀವನ ಮಟ್ಟವನ್ನು ಸುಧಾರಿಸಲು ವಿಕಲಚೇತನರ ಶಿಕ್ಷಣ ಮತ್ತು ಉದ್ಯೋಗದ ಮೇಲೆ ಹೆಚ್ಚುವರಿ ಗಮನವನ್ನು ಹರಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ರಾಜ್ಯ ಕಮಿಷನರೇಟ್ ಶ್ರಮಿಸಿದೆ. ವಿಕಲಾಂಗಚೇತನ ವ್ಯಕ್ತಿಗಳು ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಸಹಕಾರ ನೀಡಲಾಗಿದೆ.

“ಲಾಕ್‌ಡೌನ್ ಸಮಯದಲ್ಲಿ ಅಂಗವಿಕಲರಿಗೆ ಅಗತ್ಯ ವಸ್ತುಗಳನ್ನು ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಮನೆ-ಮನೆಗೆ ಪ್ರಚಾರವನ್ನು ಪ್ರಾರಂಭಿಸಿದೆವು. ಇಲಾಖೆಯಿಂದ ಈಗಾಗಲೇ ಗುರುತಿಸಲ್ಪಟ್ಟವರಲ್ಲದೆ, ಅಧಿಕಾರಿಗಳು ಮತ್ತು ಸ್ವಯಂಸೇವಕರ ಸ್ಥಳೀಯ ಸಂಪರ್ಕಗಳ ಮೂಲಕ ನಮ್ಮ ದಾಖಲೆಗಳಲ್ಲಿಲ್ಲದ ಜನರನ್ನೂ ನಾವು ತಲುಪಿದ್ದೇವೆ ” ಎಂದು ರಾಜ್ಯ ವಿಕಲಚೇತನರ ಕಲ್ಯಾಣ ಆಯುಕ್ತ ಜಾನಿ ಟಾಮ್ ವರ್ಗೀಸ್ ಹೇಳಿದ್ದಾರೆ.

ನಗದು ನೆರವು ಮತ್ತು ಔಷಧಿಗಳನ್ನು ಒದಗಿಸುವುದು, ವೈದ್ಯಕೀಯ ಉಪಕರಣಗಳನ್ನು ದೊರಕಿಸುವುದು, ಆನ್‌ಲೈನ್ ಫಿಸಿಯೋಥೆರಪಿ ಸೆಷನ್‌ಗಳನ್ನು ನೀಡುವುದು ಇಷ್ಟೇ ಅಲ್ಲದೇ, ವಿಕಲಾಂಗಚೇತನರಿಗೆ ಮತ್ತು ವೃದ್ಧರಿಗೆ ಲಸಿಕೆ ಹಾಕಿಸಲು ಮನೆಮನೆಗೆ ಭೇಟಿ ನೀಡಲಾಗಿದೆ. ಶೇ. 70ಕ್ಕಿಂತ ಹೆಚ್ಚು ವಯಸ್ಕ ವಿಕಲಾಂಗ ಚೇತನರಿಗೆ ಈ ಕಾರ್ಯಕ್ರಮ ತಲುಪಿದೆ ಎನ್ನುತ್ತಾರೆ ಅಧಿಕಾರಿಗಳು.

ವಿಕಲಚೇತನರ ಉದ್ಯೋಗ ಮತ್ತು ಜೀವನೋಪಾಯ ಕೇಂದ್ರವನ್ನು (DELC) ಸ್ಥಾಪಿಸಲಾಗಿದೆ. ಇದು ವಿಕಲಾಂಗ ವ್ಯಕ್ತಿಗಳ ಕೌಶಲ್ಯ, ಸಾಮಾಜಿಕ-ಆರ್ಥಿಕ ಸ್ಥಿತಿ ಮತ್ತು ಜೀವನೋಪಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಆಯುಕ್ತರು ಹೇಳಿದ್ದಾರೆ.

ಡಿಇಎಲ್‌ಸಿ ಕೇಂದ್ರವು ವಿಕಲಾಂಗ ಚೇತನರಿಗೆ ಉದ್ಯೋಗ ದೊರಕಿಸುವ ವೇದಿಕೆಯಾಗಿ ಕಾರ್ಯನಿರ್ವಹಿತ್ತಿದೆ. ಕಾರ್ಯಕ್ರಮಗಳನ್ನು ನಡೆಸಲು ಕೌಶಲ್ಯ ಅಭಿವೃದ್ಧಿ ಮಿಷನ್‌ನೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ವರ್ಗೀಸ್‌‌ ತಿಳಿಸಿದ್ದಾರೆ.

ಸೇಲಂ ಜಿಲ್ಲೆಯು ಪುನರ್ವಸತಿ ಸೇವೆಗಳನ್ನು ಒದಗಿಸುವ ಅತ್ಯುತ್ತಮ ಜಿಲ್ಲೆ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಈ ಪ್ರಶಸ್ತಿ ಪಡೆದ ದೇಶದ ಎರಡು ಜಿಲ್ಲೆಗಳಲ್ಲಿ ಸೇಲಂ ಕೂಡ ಒಂದಾಗಿದೆ.


ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...