Homeಮುಖಪುಟವಿಕಲಾಂಗಚೇತನರ ಕಲ್ಯಾಣಕ್ಕಾಗಿ ತಮಿಳುನಾಡಿಗೆ ರಾಷ್ಟ್ರೀಯ ಪ್ರಶಸ್ತಿ

ವಿಕಲಾಂಗಚೇತನರ ಕಲ್ಯಾಣಕ್ಕಾಗಿ ತಮಿಳುನಾಡಿಗೆ ರಾಷ್ಟ್ರೀಯ ಪ್ರಶಸ್ತಿ

- Advertisement -
- Advertisement -

‘ವಿಕಲಾಂಗಚೇತನರ ಸಬಲೀಕರಣವನ್ನು ಉತ್ತೇಜಿಸುವಲ್ಲಿ ಅತ್ಯುತ್ತಮ ರಾಜ್ಯ’ ಎಂದು ತಮಿಳುನಾಡು ಗುರುತಿಸಲ್ಪಟ್ಟಿದೆ. ಸಾಮಾಜಿಕ ನ್ಯಾಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಸಚಿವಾಲಯವು ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಅಂಗವಿಕಲರ ಅಂತರಾಷ್ಟ್ರೀಯ ದಿನದಂದು (ಶುಕ್ರವಾರ) ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ತಮಿಳುನಾಡಿನ ಆರು ವಿಕಲಾಂಗ ನಾಗರಿಕರ ಗಣನೀಯ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಯವರು ಪ್ರಶಸ್ತಿಗಳನ್ನು ನೀಡಿದ್ದಾರೆ.

ತಮಿಳುನಾಡು ಸರ್ಕಾರವು ವಿಕಲಾಂಗಚೇತನರ ಜೀವನ ಮಟ್ಟವನ್ನು ಸುಧಾರಿಸಲು ವಿಕಲಚೇತನರ ಶಿಕ್ಷಣ ಮತ್ತು ಉದ್ಯೋಗದ ಮೇಲೆ ಹೆಚ್ಚುವರಿ ಗಮನವನ್ನು ಹರಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ರಾಜ್ಯ ಕಮಿಷನರೇಟ್ ಶ್ರಮಿಸಿದೆ. ವಿಕಲಾಂಗಚೇತನ ವ್ಯಕ್ತಿಗಳು ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಸಹಕಾರ ನೀಡಲಾಗಿದೆ.

“ಲಾಕ್‌ಡೌನ್ ಸಮಯದಲ್ಲಿ ಅಂಗವಿಕಲರಿಗೆ ಅಗತ್ಯ ವಸ್ತುಗಳನ್ನು ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಮನೆ-ಮನೆಗೆ ಪ್ರಚಾರವನ್ನು ಪ್ರಾರಂಭಿಸಿದೆವು. ಇಲಾಖೆಯಿಂದ ಈಗಾಗಲೇ ಗುರುತಿಸಲ್ಪಟ್ಟವರಲ್ಲದೆ, ಅಧಿಕಾರಿಗಳು ಮತ್ತು ಸ್ವಯಂಸೇವಕರ ಸ್ಥಳೀಯ ಸಂಪರ್ಕಗಳ ಮೂಲಕ ನಮ್ಮ ದಾಖಲೆಗಳಲ್ಲಿಲ್ಲದ ಜನರನ್ನೂ ನಾವು ತಲುಪಿದ್ದೇವೆ ” ಎಂದು ರಾಜ್ಯ ವಿಕಲಚೇತನರ ಕಲ್ಯಾಣ ಆಯುಕ್ತ ಜಾನಿ ಟಾಮ್ ವರ್ಗೀಸ್ ಹೇಳಿದ್ದಾರೆ.

ನಗದು ನೆರವು ಮತ್ತು ಔಷಧಿಗಳನ್ನು ಒದಗಿಸುವುದು, ವೈದ್ಯಕೀಯ ಉಪಕರಣಗಳನ್ನು ದೊರಕಿಸುವುದು, ಆನ್‌ಲೈನ್ ಫಿಸಿಯೋಥೆರಪಿ ಸೆಷನ್‌ಗಳನ್ನು ನೀಡುವುದು ಇಷ್ಟೇ ಅಲ್ಲದೇ, ವಿಕಲಾಂಗಚೇತನರಿಗೆ ಮತ್ತು ವೃದ್ಧರಿಗೆ ಲಸಿಕೆ ಹಾಕಿಸಲು ಮನೆಮನೆಗೆ ಭೇಟಿ ನೀಡಲಾಗಿದೆ. ಶೇ. 70ಕ್ಕಿಂತ ಹೆಚ್ಚು ವಯಸ್ಕ ವಿಕಲಾಂಗ ಚೇತನರಿಗೆ ಈ ಕಾರ್ಯಕ್ರಮ ತಲುಪಿದೆ ಎನ್ನುತ್ತಾರೆ ಅಧಿಕಾರಿಗಳು.

ವಿಕಲಚೇತನರ ಉದ್ಯೋಗ ಮತ್ತು ಜೀವನೋಪಾಯ ಕೇಂದ್ರವನ್ನು (DELC) ಸ್ಥಾಪಿಸಲಾಗಿದೆ. ಇದು ವಿಕಲಾಂಗ ವ್ಯಕ್ತಿಗಳ ಕೌಶಲ್ಯ, ಸಾಮಾಜಿಕ-ಆರ್ಥಿಕ ಸ್ಥಿತಿ ಮತ್ತು ಜೀವನೋಪಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಆಯುಕ್ತರು ಹೇಳಿದ್ದಾರೆ.

ಡಿಇಎಲ್‌ಸಿ ಕೇಂದ್ರವು ವಿಕಲಾಂಗ ಚೇತನರಿಗೆ ಉದ್ಯೋಗ ದೊರಕಿಸುವ ವೇದಿಕೆಯಾಗಿ ಕಾರ್ಯನಿರ್ವಹಿತ್ತಿದೆ. ಕಾರ್ಯಕ್ರಮಗಳನ್ನು ನಡೆಸಲು ಕೌಶಲ್ಯ ಅಭಿವೃದ್ಧಿ ಮಿಷನ್‌ನೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ವರ್ಗೀಸ್‌‌ ತಿಳಿಸಿದ್ದಾರೆ.

ಸೇಲಂ ಜಿಲ್ಲೆಯು ಪುನರ್ವಸತಿ ಸೇವೆಗಳನ್ನು ಒದಗಿಸುವ ಅತ್ಯುತ್ತಮ ಜಿಲ್ಲೆ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಈ ಪ್ರಶಸ್ತಿ ಪಡೆದ ದೇಶದ ಎರಡು ಜಿಲ್ಲೆಗಳಲ್ಲಿ ಸೇಲಂ ಕೂಡ ಒಂದಾಗಿದೆ.


ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...