Homeಚಳವಳಿರೈತರ ವಿರುದ್ಧ 'NAGA - ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ' ಕಂಪನಿ ನಿಂತಿದೆ: ಶ್ರೀ ಹರ್ಷಾನಂದ್‌ಜಿ...

ರೈತರ ವಿರುದ್ಧ ‘NAGA – ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ’ ಕಂಪನಿ ನಿಂತಿದೆ: ಶ್ರೀ ಹರ್ಷಾನಂದ್‌ಜಿ ಮಹಾರಾಜ್

ಜಗತ್ತಿನ ಎಲ್ಲ ವಸ್ತುಗಳನ್ನು ಮಾರುವವನು ನಿರ್ಧಾರ ಮಾಡುತ್ತಾನೆ. ಆದರೆ ರೈತನ ಫಸಲಿನ ಬೆಲೆಯನ್ನು ಮಾತ್ರ ಖರೀದಿಸುವವನು ನಿರ್ಧರಿಸುತ್ತಾನೆ

- Advertisement -
- Advertisement -

ರೈತರ ವಿರುದ್ಧ ‘ನಾಗ (NAGA)’ ಎಂಬ ಕಂಪನಿ ನಿಂತಿದೆ. ನಾಗ ಎಂದರೆ “ನರೇಂದ್ರ ಮೋದಿ, ಅಮಿತ್ ಶಾ‌, ಗೌತಮ್ ಅದಾನಿ,‌ ರಿಲಾಯನ್ಸ್ ಅಂಬಾನಿ” ಎಂದು ಯೋಗ ದರ್ಶನ ಪಾರಮಾರ್ಥಿಕ ಟ್ರಸ್ಟ್‌ ಸಂಸ್ಥಾಪಕ ಶ್ರೀ ಹರ್ಷಾನಂದಜಿ ಮಹಾರಾಜ್‌ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಹರ್ಷಾನಂದ್‌ ಜಿ ಮಹರಾಜ್‌, ‘ಮಾಸ್‌ ಮೀಡಿಯಾ ಫೌಂಡೇಷನ್‌’ ಪ್ರತಿನಿಧಿಯೊಂದಿಗೆ ಮಾತಾಡುತ್ತಾ, ಕಾರ್ಪೋರೇಟ್‌ ಶಕ್ತಿಗಳಿಗಾಗಿ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ ಎಂದಿದ್ದಾರೆ.

“ರೈತ ಭಾರತದ ಆತ್ಮ. ಇಂದು ಆ ರೈತ ಕನಿಷ್ಠ ಬೆಂಬಲ ಬೆಲೆಗಾಗಿ ಹೋರಾಟ ನಡೆಸುತ್ತಿದ್ದಾನೆ. ಜಗತ್ತಿನ ಎಲ್ಲ ವಸ್ತುಗಳನ್ನು ಮಾರುವವನು ನಿರ್ಧಾರ ಮಾಡುತ್ತಾನೆ. ಆದರೆ ರೈತನ ಫಸಲಿನ ಬೆಲೆಯನ್ನು ಮಾತ್ರ ಖರೀದಿಸುವವನು ನಿರ್ಧರಿಸುತ್ತಾನೆ” ಎಂದು ಬೇಸರ ವ್ಯಕ್ತಪಡಿಸಿದರು.

ಅವರು ಮಾತನಾಡಿದ ವಿಡಿಯೋ ನೋಡಿ.

ಈ ಚಿತ್ರಣವನ್ನು ಬದಲಿಸುವುದು ಈ ಸಮಯದ ಅಗತ್ಯ. ಆದರೆ ರೈತರಿಗೆ ಮುಖಾಮುಖಿಯಾಗಿರುವುದು ಒಂದು ಖಾಸಗಿ ಕಂಪನಿ. ಅದನ್ನು ನಾನು ನಾಗ ಎಂದು ಕರೆಯುತ್ತೇನೆ. ನಾಗ ಎಂದರೆ, ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ. ಸರ್ಕಾರ ಎಂಬುದು ಇದ್ದಿದ್ದರೆ, ರೈತರ ಜೊತೆಗೆ ಕೂತು ಮಾತನಾಡುತ್ತಿತ್ತು. ಆದರೆ ಇಂದು ವಿಶಾಲ ಆಕಾಶದ ಕೆಳಗೆ ಅಸಂಖ್ಯ ರೈತರು ಸೇರಿದ್ದಾರೆ. ಈ ಚಳಿಯಲ್ಲಿ ಅಮಾಯಕರು ಸಾವನ್ನಪ್ಪಿದ್ದಾರೆ. ಇದಾವುದೂ ಖಾಸಗಿ ಕಂಪನಿಯವರಿಗೆ ತಟ್ಟುತ್ತಿಲ್ಲ. ಅಂತಹ ಸಂವೇದನೆ ಅವರಿಗೆ ಇರುವುದೂ ಇಲ್ಲ” ಎಂದರು.

ನಾವು ಈಸ್ಟ್‌ ಇಂಡಿಯಾ ಕಂಪನಿಯನ್ನು ನೋಡಿದ್ದೇವೆ. ಅವರು ಹೇಗೆ ರಕ್ತ ಹೀರುತ್ತಿದ್ದರು ಎಂಬುದನ್ನು ನೋಡಿದ್ದೇವೆ. ಅದೇ ಪರಿಸ್ಥಿತಿ ಇಂದೂ ಇದೆ. ಈ ಪರಿಸ್ಥಿತಿಯನ್ನು ಬದಲಿಸುವುದಕ್ಕಾಗಿಯೇ ಪ್ರಕೃತಿಯೇ ಈ ಆಂದೋಲನವನ್ನು ನಡೆಸುತ್ತಿದೆ. ಈ ಆಂದೋಲನ ಸಂಪೂರ್ಣ ಮಾನವ ಕುಲಕ್ಕೆ ಪಾಠವಾಗಲಿದೆ. ಸೇವೆಯೊಂದಿಗೆ ಒಂದು ಆಂದೋಲನವನ್ನು ಹೇಗೆ ನಡೆಸಬಹುದು, ಹೇಗೆ ಜಯವನ್ನು ರೂಪಿಸಬಹುದು ಎಂಬುದನ್ನು ಕಲಿಸಿಕೊಡಲಿದೆ ಎಂಬ ವಿಶ್ವಾಸ ನನ್ನದು ಎಂದು ಹರ್ಷಾನಂದ್‌ ಜಿ ಮಹಾರಾಜ್‌ ಹೇಳಿದರು.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...