Homeಚಳವಳಿರೈತರ ವಿರುದ್ಧ 'NAGA - ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ' ಕಂಪನಿ ನಿಂತಿದೆ: ಶ್ರೀ ಹರ್ಷಾನಂದ್‌ಜಿ...

ರೈತರ ವಿರುದ್ಧ ‘NAGA – ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ’ ಕಂಪನಿ ನಿಂತಿದೆ: ಶ್ರೀ ಹರ್ಷಾನಂದ್‌ಜಿ ಮಹಾರಾಜ್

ಜಗತ್ತಿನ ಎಲ್ಲ ವಸ್ತುಗಳನ್ನು ಮಾರುವವನು ನಿರ್ಧಾರ ಮಾಡುತ್ತಾನೆ. ಆದರೆ ರೈತನ ಫಸಲಿನ ಬೆಲೆಯನ್ನು ಮಾತ್ರ ಖರೀದಿಸುವವನು ನಿರ್ಧರಿಸುತ್ತಾನೆ

- Advertisement -
- Advertisement -

ರೈತರ ವಿರುದ್ಧ ‘ನಾಗ (NAGA)’ ಎಂಬ ಕಂಪನಿ ನಿಂತಿದೆ. ನಾಗ ಎಂದರೆ “ನರೇಂದ್ರ ಮೋದಿ, ಅಮಿತ್ ಶಾ‌, ಗೌತಮ್ ಅದಾನಿ,‌ ರಿಲಾಯನ್ಸ್ ಅಂಬಾನಿ” ಎಂದು ಯೋಗ ದರ್ಶನ ಪಾರಮಾರ್ಥಿಕ ಟ್ರಸ್ಟ್‌ ಸಂಸ್ಥಾಪಕ ಶ್ರೀ ಹರ್ಷಾನಂದಜಿ ಮಹಾರಾಜ್‌ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಹರ್ಷಾನಂದ್‌ ಜಿ ಮಹರಾಜ್‌, ‘ಮಾಸ್‌ ಮೀಡಿಯಾ ಫೌಂಡೇಷನ್‌’ ಪ್ರತಿನಿಧಿಯೊಂದಿಗೆ ಮಾತಾಡುತ್ತಾ, ಕಾರ್ಪೋರೇಟ್‌ ಶಕ್ತಿಗಳಿಗಾಗಿ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ ಎಂದಿದ್ದಾರೆ.

“ರೈತ ಭಾರತದ ಆತ್ಮ. ಇಂದು ಆ ರೈತ ಕನಿಷ್ಠ ಬೆಂಬಲ ಬೆಲೆಗಾಗಿ ಹೋರಾಟ ನಡೆಸುತ್ತಿದ್ದಾನೆ. ಜಗತ್ತಿನ ಎಲ್ಲ ವಸ್ತುಗಳನ್ನು ಮಾರುವವನು ನಿರ್ಧಾರ ಮಾಡುತ್ತಾನೆ. ಆದರೆ ರೈತನ ಫಸಲಿನ ಬೆಲೆಯನ್ನು ಮಾತ್ರ ಖರೀದಿಸುವವನು ನಿರ್ಧರಿಸುತ್ತಾನೆ” ಎಂದು ಬೇಸರ ವ್ಯಕ್ತಪಡಿಸಿದರು.

ಅವರು ಮಾತನಾಡಿದ ವಿಡಿಯೋ ನೋಡಿ.

ಈ ಚಿತ್ರಣವನ್ನು ಬದಲಿಸುವುದು ಈ ಸಮಯದ ಅಗತ್ಯ. ಆದರೆ ರೈತರಿಗೆ ಮುಖಾಮುಖಿಯಾಗಿರುವುದು ಒಂದು ಖಾಸಗಿ ಕಂಪನಿ. ಅದನ್ನು ನಾನು ನಾಗ ಎಂದು ಕರೆಯುತ್ತೇನೆ. ನಾಗ ಎಂದರೆ, ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ. ಸರ್ಕಾರ ಎಂಬುದು ಇದ್ದಿದ್ದರೆ, ರೈತರ ಜೊತೆಗೆ ಕೂತು ಮಾತನಾಡುತ್ತಿತ್ತು. ಆದರೆ ಇಂದು ವಿಶಾಲ ಆಕಾಶದ ಕೆಳಗೆ ಅಸಂಖ್ಯ ರೈತರು ಸೇರಿದ್ದಾರೆ. ಈ ಚಳಿಯಲ್ಲಿ ಅಮಾಯಕರು ಸಾವನ್ನಪ್ಪಿದ್ದಾರೆ. ಇದಾವುದೂ ಖಾಸಗಿ ಕಂಪನಿಯವರಿಗೆ ತಟ್ಟುತ್ತಿಲ್ಲ. ಅಂತಹ ಸಂವೇದನೆ ಅವರಿಗೆ ಇರುವುದೂ ಇಲ್ಲ” ಎಂದರು.

ನಾವು ಈಸ್ಟ್‌ ಇಂಡಿಯಾ ಕಂಪನಿಯನ್ನು ನೋಡಿದ್ದೇವೆ. ಅವರು ಹೇಗೆ ರಕ್ತ ಹೀರುತ್ತಿದ್ದರು ಎಂಬುದನ್ನು ನೋಡಿದ್ದೇವೆ. ಅದೇ ಪರಿಸ್ಥಿತಿ ಇಂದೂ ಇದೆ. ಈ ಪರಿಸ್ಥಿತಿಯನ್ನು ಬದಲಿಸುವುದಕ್ಕಾಗಿಯೇ ಪ್ರಕೃತಿಯೇ ಈ ಆಂದೋಲನವನ್ನು ನಡೆಸುತ್ತಿದೆ. ಈ ಆಂದೋಲನ ಸಂಪೂರ್ಣ ಮಾನವ ಕುಲಕ್ಕೆ ಪಾಠವಾಗಲಿದೆ. ಸೇವೆಯೊಂದಿಗೆ ಒಂದು ಆಂದೋಲನವನ್ನು ಹೇಗೆ ನಡೆಸಬಹುದು, ಹೇಗೆ ಜಯವನ್ನು ರೂಪಿಸಬಹುದು ಎಂಬುದನ್ನು ಕಲಿಸಿಕೊಡಲಿದೆ ಎಂಬ ವಿಶ್ವಾಸ ನನ್ನದು ಎಂದು ಹರ್ಷಾನಂದ್‌ ಜಿ ಮಹಾರಾಜ್‌ ಹೇಳಿದರು.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...