Homeಮುಖಪುಟನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

- Advertisement -
- Advertisement -

ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಗ್ರಾಮಸ್ಥರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ನಡೆದ ನಾಗರಿಕರ ಹತ್ಯೆಗಳ ಹೊಣೆಗಾರಿಕೆಯನ್ನು ಸೇನೆ ಹೊರುತ್ತಿದೆ ಎಂದು ದಿಮಾಪುರ್ ಮೂಲದ 3 ಕಾರ್ಪ್ಸ್ ಡಿಸೆಂಬರ್ 5 ರ ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಿಂದ ನೇಮಿಸಲ್ಪಟ್ಟ ವಿಶೇಷ ತನಿಖಾ ತಂಡ ಈ ಬಗ್ಗೆ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ.

ಮ್ಯಾನ್ಮಾರ್ ಗಡಿಯಲ್ಲಿರುವ ಮೋನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ದಂಗೆಕೋರರ ವಿರುದ್ಧದ ಕಾರ್ಯಾಚರಣೆಗೆ ಸಜ್ಜಾಗಿದ್ದವು. ದಂಗೆಕೋರರ ಚಲನವಲನದ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಆಧಾರದ ಮೇಲೆ ಓಟಿಂಗ್ ಗ್ರಾಮದ ಬಳಿ ದಾಳಿ ನಡೆಸಿದ್ದರು. ಆದರೆ ತಿರು-ಓಟಿಂಗ್ ರಸ್ತೆಯಲ್ಲಿ ಗ್ರಾಮಸ್ಥರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಂಡಿನ ದಾಳಿಯಿಂದ ಆಕ್ರೋಶಗೊಂಡ ಸ್ಥಳೀಯರು ಭದ್ರತಾ ಪಡೆಗಳನ್ನು ಸುತ್ತುವರೆದರು. ಹೀಗಾಗಿ ಆತ್ಮ ರಕ್ಷಣೆಗಾಗಿ ಗುಂಪಿನ ಮೇಲೆ ಭದ್ರತಾ ಪೆಗಳು ಗುಂಡು ಹಾರಿಸಿದ್ದರು ಇದರಿಂದ ಕನಿಷ್ಠ ಏಳು ಗ್ರಾಮಸ್ಥರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಭದ್ರತಾ ಪಡೆಗಳ ಮೂರು ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ.

ಇದನ್ನೂ ಓದಿ: MLC ಚುನಾವಣೆ: ಪರೇಶ್ ಮೇಸ್ತ ತಂದೆಗೇಕೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ? ಮಾಜಿ ಶಾಸಕ ಸತೀಶ್ ಸೈಲ್ ಪ್ರಶ್ನೆ

“ಬಂಡುಕೋರರ ಚಲನವಲನದ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಆಧಾರದ ಮೇಲೆ, ತಿರು, ಸೋಮ ಜಿಲ್ಲೆ, ನಾಗಾಲ್ಯಾಂಡ್ ಪ್ರದೇಶದಲ್ಲಿ ನಿರ್ದಿಷ್ಟ ಕಾರ್ಯಾಚರಣೆಯನ್ನು ನಡೆಸಲು ಯೋಜಿಸಲಾಗಿತ್ತು. ಆದರೆ, ಅದರ ನಂತರ ನಡೆದ ಘಟನೆ ಬಗ್ಗೆ ತೀವ್ರವಾಗಿ ವಿಷಾದಿಸುತ್ತವೆ. ಈ ದುರದೃಷ್ಟಕರ ಪ್ರಾಣಹಾನಿಯ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದೆ. ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ನಾಗಾಲ್ಯಾಂಡ್‌ನ ದಿಮಾಪುರ್ ಮೂಲದ 3 ಕಾರ್ಪ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಾಗಾಲ್ಯಾಂಡ್‌ನ ಓಟಿಂಗ್‌ನಲ್ಲಿ ನಡೆದ ದುರದೃಷ್ಟಕರ ಘಟನೆಯಿಂದ ದುಃಖವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ರಾಜ್ಯ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಎಸ್‌ಐಟಿ ಈ ಘಟನೆಯನ್ನು ಕೂಲಂಕಷವಾಗಿ ತನಿಖೆ ನಡೆಸಿ ನ್ಯಾಯ ಒದಗಿಸುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...