Homeಮುಖಪುಟನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

- Advertisement -
- Advertisement -

ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಗ್ರಾಮಸ್ಥರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ನಡೆದ ನಾಗರಿಕರ ಹತ್ಯೆಗಳ ಹೊಣೆಗಾರಿಕೆಯನ್ನು ಸೇನೆ ಹೊರುತ್ತಿದೆ ಎಂದು ದಿಮಾಪುರ್ ಮೂಲದ 3 ಕಾರ್ಪ್ಸ್ ಡಿಸೆಂಬರ್ 5 ರ ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಿಂದ ನೇಮಿಸಲ್ಪಟ್ಟ ವಿಶೇಷ ತನಿಖಾ ತಂಡ ಈ ಬಗ್ಗೆ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ.

ಮ್ಯಾನ್ಮಾರ್ ಗಡಿಯಲ್ಲಿರುವ ಮೋನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ದಂಗೆಕೋರರ ವಿರುದ್ಧದ ಕಾರ್ಯಾಚರಣೆಗೆ ಸಜ್ಜಾಗಿದ್ದವು. ದಂಗೆಕೋರರ ಚಲನವಲನದ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಆಧಾರದ ಮೇಲೆ ಓಟಿಂಗ್ ಗ್ರಾಮದ ಬಳಿ ದಾಳಿ ನಡೆಸಿದ್ದರು. ಆದರೆ ತಿರು-ಓಟಿಂಗ್ ರಸ್ತೆಯಲ್ಲಿ ಗ್ರಾಮಸ್ಥರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಂಡಿನ ದಾಳಿಯಿಂದ ಆಕ್ರೋಶಗೊಂಡ ಸ್ಥಳೀಯರು ಭದ್ರತಾ ಪಡೆಗಳನ್ನು ಸುತ್ತುವರೆದರು. ಹೀಗಾಗಿ ಆತ್ಮ ರಕ್ಷಣೆಗಾಗಿ ಗುಂಪಿನ ಮೇಲೆ ಭದ್ರತಾ ಪೆಗಳು ಗುಂಡು ಹಾರಿಸಿದ್ದರು ಇದರಿಂದ ಕನಿಷ್ಠ ಏಳು ಗ್ರಾಮಸ್ಥರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಭದ್ರತಾ ಪಡೆಗಳ ಮೂರು ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ.

ಇದನ್ನೂ ಓದಿ: MLC ಚುನಾವಣೆ: ಪರೇಶ್ ಮೇಸ್ತ ತಂದೆಗೇಕೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ? ಮಾಜಿ ಶಾಸಕ ಸತೀಶ್ ಸೈಲ್ ಪ್ರಶ್ನೆ

“ಬಂಡುಕೋರರ ಚಲನವಲನದ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಆಧಾರದ ಮೇಲೆ, ತಿರು, ಸೋಮ ಜಿಲ್ಲೆ, ನಾಗಾಲ್ಯಾಂಡ್ ಪ್ರದೇಶದಲ್ಲಿ ನಿರ್ದಿಷ್ಟ ಕಾರ್ಯಾಚರಣೆಯನ್ನು ನಡೆಸಲು ಯೋಜಿಸಲಾಗಿತ್ತು. ಆದರೆ, ಅದರ ನಂತರ ನಡೆದ ಘಟನೆ ಬಗ್ಗೆ ತೀವ್ರವಾಗಿ ವಿಷಾದಿಸುತ್ತವೆ. ಈ ದುರದೃಷ್ಟಕರ ಪ್ರಾಣಹಾನಿಯ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದೆ. ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ನಾಗಾಲ್ಯಾಂಡ್‌ನ ದಿಮಾಪುರ್ ಮೂಲದ 3 ಕಾರ್ಪ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಾಗಾಲ್ಯಾಂಡ್‌ನ ಓಟಿಂಗ್‌ನಲ್ಲಿ ನಡೆದ ದುರದೃಷ್ಟಕರ ಘಟನೆಯಿಂದ ದುಃಖವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ರಾಜ್ಯ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಎಸ್‌ಐಟಿ ಈ ಘಟನೆಯನ್ನು ಕೂಲಂಕಷವಾಗಿ ತನಿಖೆ ನಡೆಸಿ ನ್ಯಾಯ ಒದಗಿಸುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...