Homeಮುಖಪುಟನಾಗಾಲ್ಯಾಂಡ್‌: ಎಎಫ್‌ಎಸ್‌ಪಿಎ ಹಿಂಪಡೆಯಲು ಒತ್ತಾಯಿಸಿ ಮುಂದುವರಿದ ಹೋರಾಟ

ನಾಗಾಲ್ಯಾಂಡ್‌: ಎಎಫ್‌ಎಸ್‌ಪಿಎ ಹಿಂಪಡೆಯಲು ಒತ್ತಾಯಿಸಿ ಮುಂದುವರಿದ ಹೋರಾಟ

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಅಮಾಯಕ ಜನರನ್ನು ಸೇನೆಯು ಹತ್ಯೆ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರವು ಕ್ಷಮೆ ಕೇಳಬೇಕು ಮತ್ತು ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (ಎಎಫ್‌ಎಸ್‌ಪಿಎ) ಹಿಂಪಡೆಯಬೇಕು ಎಂದು ಒತ್ತಾಯಿಸಿ ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯ ತಿಜಿತ್‌ನ ಸಿವಿಲ್ ಸೊಸೈಟಿ ಕಾರ್ಯಕರ್ತರು ಶನಿವಾರ ಪ್ರತಿಭಟನಾ ರ್‍ಯಾಲಿ ನಡಸಿದ್ದಾರೆ.

ಈ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿರುವ ಪ್ರತಿಭಟನಾಕಾರರು, ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ತೀಝಿತ್ ಜನರು ಸುಮ್ಮನಿರುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

“ಭದ್ರತಾ ಪಡೆಗಳ ಹೊಂಚುದಾಳಿಯಲ್ಲಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತ ಸರ್ಕಾರ ಇದುವರೆಗೆ ಕ್ಷಮೆ ಕೇಳಿಲ್ಲ. ಅಲ್ಲದೆ, ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಂತ್ರಸ್ತರು ಭದ್ರತಾ ಪಡೆಗಳು ಸಿಗ್ನಲ್ ನೀಡಲಿದಾಗ ನಿಲ್ಲಿಸಲಿಲ್ಲ ಎಂದು ಗೃಹ ಸಚಿವರು ಸುಳ್ಳು ಹೇಳಿದ್ದಾರೆ. ಸುಳ್ಳು ಹಬ್ಬಿಸುತ್ತಿರುವವರು ಯಾರು?” ಎಂದು ಪ್ರತಿಭಟನಾಕಾರರೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಎಎಫ್‌‌ಎಸ್‌ಪಿಎ ಸಮಸ್ಯೆಗೆ ಮೂಲ ಕಾರಣವಾಗಿದೆ. “ಈಶಾನ್ಯ ರಾಜ್ಯಗಳಲ್ಲಿರುವ ಎಎಫ್‌ಎಸ್‌ಪಿಎ ರದ್ದುಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ನಮಗೆ ಭದ್ರತಾ ಪಡೆಗಳ ಅಗತ್ಯವಿಲ್ಲ. ನಾವು ಸ್ವತಂತ್ರವಾಗಿ ಬದುಕಲು ಬಯಸುತ್ತೇವೆ” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

 “ಭಾರತೀಯ ಸೈನಿಕರು ಅಮಾಯಕರನ್ನು ಕೊಲ್ಲುತ್ತಿದ್ದಾರೆ”, “ನಮಗೆ ನ್ಯಾಯ ಬೇಕು”, “ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆಯನ್ನು ಹಿಂಪಡೆಯಿರಿ”, “ಪ್ರಭುತ್ವ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಿ” ಇತ್ಯಾದಿ ಬ್ಯಾನರ್‌ಗಳನ್ನು ಪ್ರತಿಭಟನಾಕಾರರು ಹಿಡಿದಿದ್ದರು.

ಗಣಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನವನ್ನು ನಿಲ್ಲಿಸಲು ಭದ್ರತಾ ಸಿಬ್ಬಂದಿ ಕೇಳಿತು. ಆದರೆ, ಅದು ಪರಾರಿಯಾಗಲು ಯತ್ನಿಸಲಾಯಿತು. ಹೀಗಾಗಿ, ಈ ಘಟನೆ ಸಂಭವಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಸಂಸತ್ತಿನಲ್ಲಿ ಹೇಳಿದ್ದರು. ಇದು ನಾಗಾಲ್ಯಾಂಡ್‌ ಜನರನ್ನು ಮತ್ತಷ್ಟು ಕೆರಳಿಸಿದ್ದು, ಪ್ರತಿಭಟನೆಗಳು ಭುಗಿಲೆದ್ದಿವೆ. 


ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ


ಎಎಫ್‌ಎಸ್‌ಪಿಎ ರದ್ದುಗೊಳಿಸಲು ಹೆಚ್ಚಿದ ಒತ್ತಡ

ನಾಗಾಲ್ಯಾಂಡ್‌ನಲ್ಲಿ ನಡೆದ ನಾಗರಿಕ ಹತ್ಯೆಗಳ ನಡುವೆ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’(AFSPA) ಯನ್ನು ವಾಪಾಸು ಪಡೆಯಬೇಕು ಎಂದು ನಾಗಾಲ್ಯಾಂಡ್‌ ಮತ್ತು ಮೇಘಾಲಯ ಮುಖ್ಯಮಂತ್ರಿಗಳಿಬ್ಬರೂ ಇತ್ತೀಚೆಗೆ ಒತ್ತಾಯಿಸಿದ್ದಾರೆ. ವಿಶೇಷವಾಗಿ ಎರಡು ರಾಜ್ಯಗಳಲ್ಲೂ ಬಿಜೆಪಿ ಮೈತ್ರಿ ಸರ್ಕಾರವಿದೆ. ನಾಗರಿಕ ಹಕ್ಕುಗಳ ಹೋರಾಟಗಾರರು “ಕಠಿಣ” ಕಾನೂನನ್ನು ಹಿಂತೆಗೆದುಕೊಳ್ಳಬೇಕೆಂದು ಹಲವಾರು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಈ ಕಾಯ್ದೆಯ ಅಡಿಯಲ್ಲಿ ಭದ್ರತಾ ಪಡೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ಅವರು ಆರೋಪ ಮಾಡುತ್ತಲೇ ಇದ್ದಾರೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

“ AFSPA ರದ್ದುಗೊಳಿಸಬೇಕು” ಎಂದು ಕಾನ್ರಾಡ್ ಕೆ ಸಂಗ್ಮಾ ಟ್ವೀಟ್‌ ಮಾಡಿದ್ದಾರೆ, ಅವರ ಪಕ್ಷವು ಬಿಜೆಪಿಯ ಮಿತ್ರ ಪಕ್ಷವಾಗಿದೆ. ಮುಖ್ಯಮಂತ್ರಿಯ ಬೇಡಿಕೆಗೆ ರಾಜ್ಯ ಕಾಂಗ್ರೆಸ್ ಕೂಡ ಬೆಂಬಲಿಸಿದ್ದು, ಈ ಕುರಿತು ಸಮಾಲೋಚನೆಗಾಗಿ ಸಭೆ ಕರೆಯುವಂತೆ ಒತ್ತಾಯಿಸಿದೆ.

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು AFSPA ವಿಸ್ತರಣೆಗಾಗಿ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಇದು ಗೊಂದಲದ ಪ್ರದೇಶ ಎಂದು ಪ್ರತಿಪಾದಿಸಿ ಪ್ರತಿ ವರ್ಷ ಒಕ್ಕೂಟ ಸರ್ಕಾರ ನಾಗಾಲ್ಯಾಂಡ್‌ನಲ್ಲಿ ಎಎಫ್‌ಎಸ್‌ಪಿಎ ಅನ್ನು ವಿಸ್ತರಿಸುತ್ತದೆ. ಆದರೆ ಎಲ್ಲಾ ಸಶಸ್ತ್ರ ಗುಂಪುಗಳು ಕದನ ವಿರಾಮ ಮತ್ತು ಶಾಂತಿ ಮಾತುಕತೆಯ ಭಾಗವಾಗಿದೆ. ಹಾಗಾದರೆ ಅದನ್ನು ವಿಸ್ತರಿಸುವುದು ಯಾಕೆ?” ಎಂದು ಕೇಳಿದ್ದಾರೆ.

“ಎಎಫ್‌ಎಸ್‌ಪಿಎ ಸಶಸ್ತ್ರ ಪಡೆಗಳಿಗೆ ವಿನಾಯಿತಿ ನೀಡುತ್ತದೆ…ಈ ಕಾನೂನು ಅಂತರರಾಷ್ಟ್ರೀಯ ವೇದಿಕೆಗಳಲ್ಲಿಯೂ ಚರ್ಚೆಯಾಗುತ್ತಿದೆ. ನಾವು ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಬಹಳಷ್ಟು ಜನರು ಎಎಫ್‌ಎಸ್‌ಪಿಎ ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...