Homeಮುಖಪುಟನಾಗಾಲ್ಯಾಂಡ್‌: ಎಎಫ್‌ಎಸ್‌ಪಿಎ ಹಿಂಪಡೆಯಲು ಒತ್ತಾಯಿಸಿ ಮುಂದುವರಿದ ಹೋರಾಟ

ನಾಗಾಲ್ಯಾಂಡ್‌: ಎಎಫ್‌ಎಸ್‌ಪಿಎ ಹಿಂಪಡೆಯಲು ಒತ್ತಾಯಿಸಿ ಮುಂದುವರಿದ ಹೋರಾಟ

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಅಮಾಯಕ ಜನರನ್ನು ಸೇನೆಯು ಹತ್ಯೆ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರವು ಕ್ಷಮೆ ಕೇಳಬೇಕು ಮತ್ತು ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (ಎಎಫ್‌ಎಸ್‌ಪಿಎ) ಹಿಂಪಡೆಯಬೇಕು ಎಂದು ಒತ್ತಾಯಿಸಿ ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯ ತಿಜಿತ್‌ನ ಸಿವಿಲ್ ಸೊಸೈಟಿ ಕಾರ್ಯಕರ್ತರು ಶನಿವಾರ ಪ್ರತಿಭಟನಾ ರ್‍ಯಾಲಿ ನಡಸಿದ್ದಾರೆ.

ಈ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿರುವ ಪ್ರತಿಭಟನಾಕಾರರು, ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ತೀಝಿತ್ ಜನರು ಸುಮ್ಮನಿರುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

“ಭದ್ರತಾ ಪಡೆಗಳ ಹೊಂಚುದಾಳಿಯಲ್ಲಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತ ಸರ್ಕಾರ ಇದುವರೆಗೆ ಕ್ಷಮೆ ಕೇಳಿಲ್ಲ. ಅಲ್ಲದೆ, ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಂತ್ರಸ್ತರು ಭದ್ರತಾ ಪಡೆಗಳು ಸಿಗ್ನಲ್ ನೀಡಲಿದಾಗ ನಿಲ್ಲಿಸಲಿಲ್ಲ ಎಂದು ಗೃಹ ಸಚಿವರು ಸುಳ್ಳು ಹೇಳಿದ್ದಾರೆ. ಸುಳ್ಳು ಹಬ್ಬಿಸುತ್ತಿರುವವರು ಯಾರು?” ಎಂದು ಪ್ರತಿಭಟನಾಕಾರರೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಎಎಫ್‌‌ಎಸ್‌ಪಿಎ ಸಮಸ್ಯೆಗೆ ಮೂಲ ಕಾರಣವಾಗಿದೆ. “ಈಶಾನ್ಯ ರಾಜ್ಯಗಳಲ್ಲಿರುವ ಎಎಫ್‌ಎಸ್‌ಪಿಎ ರದ್ದುಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ನಮಗೆ ಭದ್ರತಾ ಪಡೆಗಳ ಅಗತ್ಯವಿಲ್ಲ. ನಾವು ಸ್ವತಂತ್ರವಾಗಿ ಬದುಕಲು ಬಯಸುತ್ತೇವೆ” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

 “ಭಾರತೀಯ ಸೈನಿಕರು ಅಮಾಯಕರನ್ನು ಕೊಲ್ಲುತ್ತಿದ್ದಾರೆ”, “ನಮಗೆ ನ್ಯಾಯ ಬೇಕು”, “ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆಯನ್ನು ಹಿಂಪಡೆಯಿರಿ”, “ಪ್ರಭುತ್ವ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಿ” ಇತ್ಯಾದಿ ಬ್ಯಾನರ್‌ಗಳನ್ನು ಪ್ರತಿಭಟನಾಕಾರರು ಹಿಡಿದಿದ್ದರು.

ಗಣಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನವನ್ನು ನಿಲ್ಲಿಸಲು ಭದ್ರತಾ ಸಿಬ್ಬಂದಿ ಕೇಳಿತು. ಆದರೆ, ಅದು ಪರಾರಿಯಾಗಲು ಯತ್ನಿಸಲಾಯಿತು. ಹೀಗಾಗಿ, ಈ ಘಟನೆ ಸಂಭವಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಸಂಸತ್ತಿನಲ್ಲಿ ಹೇಳಿದ್ದರು. ಇದು ನಾಗಾಲ್ಯಾಂಡ್‌ ಜನರನ್ನು ಮತ್ತಷ್ಟು ಕೆರಳಿಸಿದ್ದು, ಪ್ರತಿಭಟನೆಗಳು ಭುಗಿಲೆದ್ದಿವೆ. 


ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ


ಎಎಫ್‌ಎಸ್‌ಪಿಎ ರದ್ದುಗೊಳಿಸಲು ಹೆಚ್ಚಿದ ಒತ್ತಡ

ನಾಗಾಲ್ಯಾಂಡ್‌ನಲ್ಲಿ ನಡೆದ ನಾಗರಿಕ ಹತ್ಯೆಗಳ ನಡುವೆ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’(AFSPA) ಯನ್ನು ವಾಪಾಸು ಪಡೆಯಬೇಕು ಎಂದು ನಾಗಾಲ್ಯಾಂಡ್‌ ಮತ್ತು ಮೇಘಾಲಯ ಮುಖ್ಯಮಂತ್ರಿಗಳಿಬ್ಬರೂ ಇತ್ತೀಚೆಗೆ ಒತ್ತಾಯಿಸಿದ್ದಾರೆ. ವಿಶೇಷವಾಗಿ ಎರಡು ರಾಜ್ಯಗಳಲ್ಲೂ ಬಿಜೆಪಿ ಮೈತ್ರಿ ಸರ್ಕಾರವಿದೆ. ನಾಗರಿಕ ಹಕ್ಕುಗಳ ಹೋರಾಟಗಾರರು “ಕಠಿಣ” ಕಾನೂನನ್ನು ಹಿಂತೆಗೆದುಕೊಳ್ಳಬೇಕೆಂದು ಹಲವಾರು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಈ ಕಾಯ್ದೆಯ ಅಡಿಯಲ್ಲಿ ಭದ್ರತಾ ಪಡೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ಅವರು ಆರೋಪ ಮಾಡುತ್ತಲೇ ಇದ್ದಾರೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

“ AFSPA ರದ್ದುಗೊಳಿಸಬೇಕು” ಎಂದು ಕಾನ್ರಾಡ್ ಕೆ ಸಂಗ್ಮಾ ಟ್ವೀಟ್‌ ಮಾಡಿದ್ದಾರೆ, ಅವರ ಪಕ್ಷವು ಬಿಜೆಪಿಯ ಮಿತ್ರ ಪಕ್ಷವಾಗಿದೆ. ಮುಖ್ಯಮಂತ್ರಿಯ ಬೇಡಿಕೆಗೆ ರಾಜ್ಯ ಕಾಂಗ್ರೆಸ್ ಕೂಡ ಬೆಂಬಲಿಸಿದ್ದು, ಈ ಕುರಿತು ಸಮಾಲೋಚನೆಗಾಗಿ ಸಭೆ ಕರೆಯುವಂತೆ ಒತ್ತಾಯಿಸಿದೆ.

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು AFSPA ವಿಸ್ತರಣೆಗಾಗಿ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಇದು ಗೊಂದಲದ ಪ್ರದೇಶ ಎಂದು ಪ್ರತಿಪಾದಿಸಿ ಪ್ರತಿ ವರ್ಷ ಒಕ್ಕೂಟ ಸರ್ಕಾರ ನಾಗಾಲ್ಯಾಂಡ್‌ನಲ್ಲಿ ಎಎಫ್‌ಎಸ್‌ಪಿಎ ಅನ್ನು ವಿಸ್ತರಿಸುತ್ತದೆ. ಆದರೆ ಎಲ್ಲಾ ಸಶಸ್ತ್ರ ಗುಂಪುಗಳು ಕದನ ವಿರಾಮ ಮತ್ತು ಶಾಂತಿ ಮಾತುಕತೆಯ ಭಾಗವಾಗಿದೆ. ಹಾಗಾದರೆ ಅದನ್ನು ವಿಸ್ತರಿಸುವುದು ಯಾಕೆ?” ಎಂದು ಕೇಳಿದ್ದಾರೆ.

“ಎಎಫ್‌ಎಸ್‌ಪಿಎ ಸಶಸ್ತ್ರ ಪಡೆಗಳಿಗೆ ವಿನಾಯಿತಿ ನೀಡುತ್ತದೆ…ಈ ಕಾನೂನು ಅಂತರರಾಷ್ಟ್ರೀಯ ವೇದಿಕೆಗಳಲ್ಲಿಯೂ ಚರ್ಚೆಯಾಗುತ್ತಿದೆ. ನಾವು ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಬಹಳಷ್ಟು ಜನರು ಎಎಫ್‌ಎಸ್‌ಪಿಎ ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...