Homeಚಳವಳಿನಾಗಾಲ್ಯಾಂಡ್: ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಸೈನಿಕರ ತನಿಖೆ ನಡೆಸಲು ಅವಕಾಶ ನೀಡಿದ ಸೇನೆ

ನಾಗಾಲ್ಯಾಂಡ್: ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಸೈನಿಕರ ತನಿಖೆ ನಡೆಸಲು ಅವಕಾಶ ನೀಡಿದ ಸೇನೆ

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಡಿಸೆಂಬರ್ 5 ರಂದು 14 ನಾಗರಿಕರನ್ನು ಬಲಿತೆಗೆದುಕೊಂಡ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೈನಿಕರ ಹೇಳಿಕೆಯನ್ನು ದಾಖಲಿಸಲು ಸೇನೆಯು ರಾಜ್ಯದ ತನಿಖಾ ತಂಡಕ್ಕೆ ಅನುಮತಿ ನೀಡಿದೆ.

ಗುಂಡಿನ ದಾಳಿ ಪ್ರಕರಣದ ತನಿಖೆಗಾಗಿ ನಾಗಾಲ್ಯಾಂಡ್ ತಲುಪಿದ ಸೇನಾ ತಂಡವು ನಾಗರಿಕರ ಹತ್ಯಾಕಾಂಡದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಯೋಧರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ರಾಜ್ಯದ ತನಿಖಾ ತಂಡಕ್ಕೆ ಅನುಮತಿ ನೀಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ನಾಗಾಲ್ಯಾಂಡ್ ವಿಶೇಷ ತನಿಖಾ ತಂಡ ಅಥವಾ ಎಸ್‌ಐಟಿ ಈ ವಾರ 21 ಪ್ಯಾರಾ ವಿಶೇಷ ಪಡೆಯ ಯೋಧರ ಹೇಳಿಕೆಗಳನ್ನು ದಾಖಲಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಗ್ರಾಮಸ್ಥರು ಸಾವನ್ನಪ್ಪಿದ್ದರು. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದರು.

ಇದನ್ನೂ ಓದಿ: AFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ ಹೇಳಿಕೆ

ನಾಗಾಲ್ಯಾಂಡ್ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಅಡಿಯಲ್ಲಿ ಇರುವುದರಿಂದ ರಾಜ್ಯ ಮಟ್ಟದ ತಂಡದಿಂದ ತನಿಖೆ ಹೇಗೆ ನಡೆಸುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ತನಿಖೆಯನ್ನು ವೇಗಗೊಳಿಸಲು ನಾಗಾಲ್ಯಾಂಡ್ ಎಸ್‌ಐಟಿಯನ್ನು ಎಂಟು ಸದಸ್ಯರಿಂದ 22 ಸದಸ್ಯರಿಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ದೊಡ್ಡ ತಂಡವು ಐದು ಭಾರತೀಯ ಪೊಲೀಸ್ ಸೇವಾ ಅಧಿಕಾರಿಗಳನ್ನು ಒಳಗೊಂಡಿದೆ. ಎಸ್‌ಐಟಿಯನ್ನು ಏಳು ತಂಡಗಳಾಗಿ ವಿಂಗಡಿಸಲಾಗಿದೆ.

ಇನ್ನು ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಯನ್ನು ವಾಪಾಸ್ ಪಡೆಯುವ ಕುರಿತು ನಿರ್ಧರಿಸಲು ಸಮತಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾರೊಂದಿಗಿನ ಸಭೆಯ ಬಳಿಕ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ತಿಳಿಸಿದ್ದಾರೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.


ಇದನ್ನೂ ಓದಿ: ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Tu loafer nanmakla nachike, maana, maryade enu ella Tu nim janmakke, enta naayi jeevana nimdu, sainikara bagge mathadoke yogyate beeku ayogya nanmakla, terrorists, naxal galige support mado sule malli neevu

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...