HomeಚಳವಳಿAFSPA ರದ್ದತಿಗೆ ಆಗ್ರಹಿಸಿ 70 ಕಿ.ಮೀ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವ ನಾಗಾಲ್ಯಾಂಡ್‌ ನಾಗರಿಕರು

AFSPA ರದ್ದತಿಗೆ ಆಗ್ರಹಿಸಿ 70 ಕಿ.ಮೀ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವ ನಾಗಾಲ್ಯಾಂಡ್‌ ನಾಗರಿಕರು

- Advertisement -
- Advertisement -

ನಾಗಾಲ್ಯಾಂಡ್‌ನಿಂದ ವಿವಾದಿತ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ (AFSPA) ಅನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ನಾಗಾಲ್ಯಾಂಡ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌ ರಾಜ್ಯದ ಸಮಾನ ಮನಸ್ಕ ನಾಗರಿಕರು‌‌‌‌‌‌‌‌‌‌‌‌‌‌‌‌ ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಕಳೆದ ತಿಂಗಳು ಸೋಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳು 14 ನಾಗರಿಕರನ್ನು ಹತ್ಯೆ ಮಾಡಿದ್ದನ್ನು ವಿರೋಧಿಸಿ ನಾಗಾಲ್ಯಾಂಡ್‌ನ ನೂರಾರು ಜನರು ಸೋಮವಾರದಿಂದ ಆರಂಭವಾಗಿರುವ “AFSPA ವಿರುದ್ಧದ ಮೆರವಣಿಗೆ ”ಯಲ್ಲಿ ಭಾಗವಹಿಸಿದ್ದಾರೆ.

ಎರಡು ದಿನಗಳಲ್ಲಿ, ನಾಗಾಲ್ಯಾಂಡ್‌ನ ವಾಣಿಜ್ಯ ಕೇಂದ್ರವಾದ ದಿಮಾಪುರ್‌ನಿಂದ ರಾಜ್ಯದ ರಾಜಧಾನಿ ಕೊಹಿಮಾದವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸುತ್ತಿದ್ದಾರೆ. ವಾಕಥಾನ್‌ಗೆ ರಾಜ್ಯದ ವಿವಿಧ ಬುಡಕಟ್ಟು ಸಂಸ್ಥೆಗಳು ಮತ್ತು ನಾಗರಿಕ ಸಂಘಟನೆಗಳ ಬೆಂಬಲ ಸಿಕ್ಕಿದೆ.

ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

ದಿಮಾಪುರ್‌ನಿಂದ ರಾಜಭವನ ಕೊಹಿಮಾವರೆಗೆ ಎರಡು ದಿನಗಳಲ್ಲಿ ಸುಮಾರು 70 ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಲಿದೆ. ಕೊಹಿಮಾದಲ್ಲಿ ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿ ವಾಕ್‌ಥಾನ್‌ ನಿಲ್ಲಿಸಲಾಗುತ್ತದೆ.

ಇದೊಂದು ಸಾಮೂಹಿಕವಾಗಿ ಸಾರ್ವಜನಿಕರು ಆರಂಭಿಸಿರುವ ಪ್ರತಿಭಟನಾ ಮೆರವಣಿಗೆಯಾಗಿದ್ದು, ಯಾವುದೇ ನಾಗರಿಕ ಸಮಾಜ ಸಂಘಟನೆಗಳು ಅಥವಾ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ನಡೆಯುತ್ತಿಲ್ಲ ಎಂದು ರ್‍ಯಾಲಿ ಸಂಘಟಕರೊಬ್ಬರು ಸ್ಪಷ್ಟಪಡಿಸಿದ್ದಾರೆ.

ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಯನ್ನು ವಾಪಾಸ್ ಪಡೆಯುವ ಕುರಿತು ನಿರ್ಧರಿಸಲು ಸಮತಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾರೊಂದಿಗಿನ ಸಭೆಯ ಬಳಿಕ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ತಿಳಿಸಿದ್ದರು.

ಡಿಸೆಂಬರ್ 4 ಮತ್ತು 5 ರಂದು ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ನಡೆದ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಯಲ್ಲಿ 14 ನಾಗರಿಕರು ಮತ್ತು ಇತರ ಎಂಟು ಮಂದಿ ಭದ್ರತಾ ಪಡೆಗಳಿಂದ ಕೊಲ್ಲಲ್ಪಟ್ಟಿದ್ದರು. ಈ ಘಟನೆಯು ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿ, ಈ AFSPA ಕಾನೂನನ್ನು ಹಿಂತೆಗೆದುಕೊಳ್ಳುವ ಬೇಡಿಕೆಗೆ ಮತ್ತಷ್ಟು ಬಲ ನೀಡಿತು.


ಇದನ್ನೂ ಓದಿ: AFSPA ರದ್ದುಗೊಳಿಸಲು ಒತ್ತಡ: ಜ.10 ಮತ್ತು 11ಕ್ಕೆ ನಾಗಾಲ್ಯಾಂಡ್ ಜನರಿಂದ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...