Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ

ನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ

- Advertisement -
- Advertisement -

ಭಾನುವಾರ ನಾಗಾಲ್ಯಾಂಡ್‌ನಲ್ಲಿ ಸೇನೆಯ ದಾಳಿಯಿಂದ ಮೃತಪಟ್ಟ 14 ನಾಗರಿಕರ ಸಾವಿಗೆ ಒಕ್ಕೂಟ ಸರ್ಕಾರ ವಿಷಾದ ವ್ಯಕ್ತಪಡಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ. ಸಂಜೆ ರಾಜ್ಯಸಭೆಯಲ್ಲಿ ನಾಗಾಲ್ಯಾಂಡ್ ವಿಷಯದ ಕುರಿತು ಮತ್ತೊಮ್ಮೆ ಅಮಿತ್‌‌ ಶಾ ಹೇಳಿಕೆ ನೀಡಲಿದ್ದಾರೆ.

“ಭಾರತ ಸರ್ಕಾರವು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತದೆ ಮತ್ತು ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸುತ್ತದೆ. ಘಟನೆಯ ತನಿಖೆಗಾಗಿ SIT ರಚಿಸಲಾಗಿದ್ದು, ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ದೇಶಿಸಲಾಗಿದೆ. ನಾಗಾಲ್ಯಾಂಡ್ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಆದರೆ ನಿಯಂತ್ರಣದಲ್ಲಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಎಲ್ಲಾ ಸಂಸ್ಥೆಗಳು ಅದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಅಮಿತ್ ಶಾ ಲೋಕಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ಅಮಿತ್‌ ಶಾ ಹೇಳಿಕೆಯ ನಂತರ ಆಕ್ರೊಶಗೊಂಡ ವಿರೋಧ ಪಕ್ಷದ ಸಂಸದರು ಪ್ರತಿಭಟನೆ ಮತ್ತು ಆಕ್ಷೇಪಣೆಗಳನ್ನು ಕೂಗಿದ್ದಾರೆ. ಈ ವಿಷಯದ ಬಗ್ಗೆ ವಿವರವಾದ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಹಾಜರಿರಬೇಕೆಂದು ಕಾಂಗ್ರೆಸ್ ಕೂಡ ಒತ್ತಾಯಿಸಿತ್ತು, ಆದರೆ ಪ್ರಧಾನಿ ಮೋದಿ ಈ ಅಧಿವೇಶನದಿಂದ ದೂರ ಉಳಿದಿದ್ದಾರೆ.

ಇಂದು ಬೆಳಿಗ್ಗೆ ಪ್ರಧಾನಿ ಮೋದಿ ಅಮಿತ್‌ ಷಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ತಮ್ಮ ಸಂಪುಟದ ಹಿರಿಯ ಸದಸ್ಯರನ್ನು ಭೇಟಿಯಾಗಿ ಪರಿಸ್ಥಿತಿ ಮತ್ತು ಒಕ್ಕೂಟ ಸರ್ಕಾರದ ಪ್ರತಿಕ್ರಿಯೆಯನ್ನು ಚರ್ಚಿಸಿದ್ದಾರೆ. ನಾಗಾಲ್ಯಾಂಡ್ ಮತ್ತು ಮೇಘಾಲಯ ಮುಖ್ಯಮಂತ್ರಿಗಳು ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ-1958(AFSPA) ಅನ್ನು ರದ್ದುಗೊಳಿಸುವ ಬಗ್ಗೆ ಬೇಡಿಕೆಗಳನ್ನು ಮುಂದಿಟ್ಟಿದ್ದು, ತಮ್ಮ ನಾಗರಿಕರ ಸಾವಿನ ವಿರುದ್ದ ಒಕ್ಕೂಟ ಸರ್ಕಾರದ ಮೇಲೆ ದಾಳಿ ಮಾಡಿದ್ದಾರೆ.

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು AFSPA ವಿಸ್ತರಣೆಗಾಗಿ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. “ಇದು ಗೊಂದಲದ ಪ್ರದೇಶ ಎಂದು ಪ್ರತಿಪಾದಿಸಿ ಪ್ರತಿ ವರ್ಷ ಒಕ್ಕೂಟ ಸರ್ಕಾರ ನಾಗಾಲ್ಯಾಂಡ್‌ನಲ್ಲಿ ಎಎಫ್‌ಎಸ್‌ಪಿಎ ಅನ್ನು ವಿಸ್ತರಿಸುತ್ತದೆ. ಆದರೆ ಎಲ್ಲಾ ಸಶಸ್ತ್ರ ಗುಂಪುಗಳು ಕದನ ವಿರಾಮ ಮತ್ತು ಶಾಂತಿ ಮಾತುಕತೆಯ ಭಾಗವಾಗಿದೆ. ಹಾಗಾದರೆ ಅದನ್ನು ವಿಸ್ತರಿಸುವುದು ಯಾಕೆ?” ಎಂದು ಕೇಳಿದ್ದಾರೆ.

ಇದನ್ನೂ ಓದಿ:ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

“ಎಎಫ್‌ಎಸ್‌ಪಿಎ ಸಶಸ್ತ್ರ ಪಡೆಗಳಿಗೆ ವಿನಾಯಿತಿ ನೀಡುತ್ತದೆ…ಈ ಕಾನೂನು ಅಂತರರಾಷ್ಟ್ರೀಯ ವೇದಿಕೆಗಳಲ್ಲಿಯೂ ಚರ್ಚೆಯಾಗುತ್ತಿದೆ. ನಾವು ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಬಹಳಷ್ಟು ಜನರು ಎಎಫ್‌ಎಸ್‌ಪಿಎ ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಭಾನುವಾರ ನಡೆದ ಸೇನೆಯ ಕಾರ್ಯಾಚರಣೆಯಲ್ಲಿ ಭೀಕರವಾಗಿ ಹತ್ಯಾಕಾಂಡ ನಡೆದಿದೆ. ಇದರಲ್ಲಿ 14 ಗ್ರಾಮಸ್ಥರು ಮತ್ತು ಒಬ್ಬ ಯೋಧ ಸಾವನ್ನಪ್ಪಿದ್ದಾರೆ. ಸೇನೆಯ 21 ಪ್ಯಾರಾ ವಿಶೇಷ ಪಡೆಗಳು ಏಕಾಏಕಿಯಾಗಿ ಗುಂಡು ಹಾರಿಸಿದವು ಎಂದು ಪೊಲೀಸ್ ಎಫ್‌ಐಆರ್ ಹೇಳಿದೆ. ಘಟನೆಯ ಬಗ್ಗೆ ಸೇನೆಯು ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದು, ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದೆ.

ಇದನ್ನೂ ಓದಿ:ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...