Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ವಿಶೇಷವೇನೆಂದರೆ ಎರಡು ರಾಜ್ಯಗಳಲ್ಲೂ ಬಿಜೆಪಿ ಮೈತ್ರಿ ಸರ್ಕಾರವಿದೆ.

- Advertisement -
- Advertisement -

ಭಾನುವಾರ ನಾಗಾಲ್ಯಾಂಡ್‌ನಲ್ಲಿ ನಡೆದ ನಾಗರಿಕ ಹತ್ಯೆಗಳ ನಡುವೆ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’(AFSPA) ಯನ್ನು ವಾಪಾಸು ಪಡೆಯಬೇಕು ಎಂದು ನಾಗಾಲ್ಯಾಂಡ್‌ ಮತ್ತು ಮೇಘಾಲಯ ಮುಖ್ಯಮಂತ್ರಿಗಳಿಬ್ಬರೂ ಒತ್ತಾಯಿಸಿದ್ದಾರೆ. ವಿಶೇಷವಾಗಿ ಎರಡು ರಾಜ್ಯಗಳಲ್ಲೂ ಬಿಜೆಪಿ ಮೈತ್ರಿ ಸರ್ಕಾರವಿದೆ. ನಾಗರಿಕ ಹಕ್ಕುಗಳ ಹೋರಾಟಗಾರರು “ಕಠಿಣ” ಕಾನೂನನ್ನು ಹಿಂತೆಗೆದುಕೊಳ್ಳಬೇಕೆಂದು ಹಲವಾರು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಈ ಕಾಯ್ದೆಯ ಅಡಿಯಲ್ಲಿ ಭದ್ರತಾ ಪಡೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ಅವರು ಆರೋಪ ಮಾಡುತ್ತಲೇ ಇದ್ದಾರೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ

“ AFSPA ರದ್ದುಗೊಳಿಸಬೇಕು” ಎಂದು ಕಾನ್ರಾಡ್ ಕೆ ಸಂಗ್ಮಾ ಟ್ವೀಟ್‌ ಮಾಡಿದ್ದಾರೆ, ಅವರ ಪಕ್ಷವು ಬಿಜೆಪಿಯ ಮಿತ್ರ ಪಕ್ಷವಾಗಿದೆ. ಮುಖ್ಯಮಂತ್ರಿಯ ಬೇಡಿಕೆಗೆ ರಾಜ್ಯ ಕಾಂಗ್ರೆಸ್ ಕೂಡ ಬೆಂಬಲಿಸಿದ್ದು, ಈ ಕುರಿತು ಸಮಾಲೋಚನೆಗಾಗಿ ಸಭೆ ಕರೆಯುವಂತೆ ಒತ್ತಾಯಿಸಿದೆ.

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು AFSPA ವಿಸ್ತರಣೆಗಾಗಿ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಇದು ಗೊಂದಲದ ಪ್ರದೇಶ ಎಂದು ಪ್ರತಿಪಾದಿಸಿ ಪ್ರತಿ ವರ್ಷ ಒಕ್ಕೂಟ ಸರ್ಕಾರ ನಾಗಾಲ್ಯಾಂಡ್‌ನಲ್ಲಿ ಎಎಫ್‌ಎಸ್‌ಪಿಎ ಅನ್ನು ವಿಸ್ತರಿಸುತ್ತದೆ. ಆದರೆ ಎಲ್ಲಾ ಸಶಸ್ತ್ರ ಗುಂಪುಗಳು ಕದನ ವಿರಾಮ ಮತ್ತು ಶಾಂತಿ ಮಾತುಕತೆಯ ಭಾಗವಾಗಿದೆ. ಹಾಗಾದರೆ ಅದನ್ನು ವಿಸ್ತರಿಸುವುದು ಯಾಕೆ?” ಎಂದು ಕೇಳಿದ್ದಾರೆ.

“ಎಎಫ್‌ಎಸ್‌ಪಿಎ ಸಶಸ್ತ್ರ ಪಡೆಗಳಿಗೆ ವಿನಾಯಿತಿ ನೀಡುತ್ತದೆ…ಈ ಕಾನೂನು ಅಂತರರಾಷ್ಟ್ರೀಯ ವೇದಿಕೆಗಳಲ್ಲಿಯೂ ಚರ್ಚೆಯಾಗುತ್ತಿದೆ. ನಾವು ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಬಹಳಷ್ಟು ಜನರು ಎಎಫ್‌ಎಸ್‌ಪಿಎ ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಭಾನುವಾರ ನಡೆದ ಸೇನೆಯ ಕಾರ್ಯಾಚರಣೆಯಲ್ಲಿ ಭೀಕರವಾಗಿ ಹತ್ಯಾಕಾಂಡ ನಡೆದಿದೆ. ಇದರಲ್ಲಿ 14 ಗ್ರಾಮಸ್ಥರು ಮತ್ತು ಒಬ್ಬ ಯೋಧ ಸಾವನ್ನಪ್ಪಿದ್ದಾರೆ. ಸೇನೆಯ 21 ಪ್ಯಾರಾ ವಿಶೇಷ ಪಡೆಗಳು ಏಕಾಏಕಿಯಾಗಿ ಗುಂಡು ಹಾರಿಸಿದವು ಎಂದು ಪೊಲೀಸ್ ಎಫ್‌ಐಆರ್ ಹೇಳಿದೆ. ಘಟನೆಯ ಬಗ್ಗೆ ಸೇನೆಯು ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದು, ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದೆ.

ಇದನ್ನೂ ಓದಿ:ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...