Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ-‘AFSPA ನೆರಳಿನಲ್ಲಿ ಶಾಂತಿ ಮಾತುಕತೆ ಇಲ್ಲ’: ಮಾಜಿ ಬಂಡಾಯ ನಾಗಾ ಸಂಘಟನೆ

ನಾಗಾಲ್ಯಾಂಡ್ ಹತ್ಯಾಕಾಂಡ-‘AFSPA ನೆರಳಿನಲ್ಲಿ ಶಾಂತಿ ಮಾತುಕತೆ ಇಲ್ಲ’: ಮಾಜಿ ಬಂಡಾಯ ನಾಗಾ ಸಂಘಟನೆ

ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ‘ನಾಗ ಜನಾಂಗದ ಗಾಯಗಳಿಗೆ ಉಪ್ಪು ಮತ್ತು ಮೆಣಸಿನಕಾಯಿಯನ್ನು ಉಜ್ಜಿದಂತೆ’ ಎಂದು NSCN-IM ಬಣ್ಣಿಸಿದೆ

- Advertisement -
- Advertisement -

ನಾಗಾ ರಾಜಕೀಯ ಸಂವಾದದಲ್ಲಿ ಒಕ್ಕೂಟ ಸರ್ಕಾರದೊಂದಿಗೆ ಪ್ರಮುಖ ಸಮಾಲೋಚಕರಾಗಿರುವ, “ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್-ಇಸಾಕ್‌‌ ಮುಯಿವಾ”( NSCN-IM) “AFSPA ‘ನೆರಳಿನಲ್ಲಿ’ ಯಾವುದೇ ಶಾಂತಿ ಮಾತುಕತೆ ಸಾಧ್ಯವಿಲ್ಲ” ಎಂದು ಬುಧವಾರ ಹೇಳಿದೆ. ಮಾಜಿ ಬಂಡುಕೋರ ಗುಂಪು ಕೂಡಾ ಅಗಿರುವ NSCN-IM, ಸಂಸತ್ತಿನಲ್ಲಿ ಅಮಿತ್ ಶಾ ಅವರು ಬಂಡಾಯ ನಿಗ್ರಹ ಕಾರ್ಯಾಚರಣೆಯ ಬಗ್ಗೆ ನೀಡಿದ ಹೇಳಿಕೆಯನ್ನು “ಬೇಜವಾಬ್ದಾರಿ” ಎಂದು ಬಣ್ಣಿಸಿದೆ.

“AFSPA ನೆರಳಿನಲ್ಲಿ ಯಾವುದೇ ರಾಜಕೀಯ ಮಾತುಕತೆಗಳು ಅರ್ಥಪೂರ್ಣವಾಗುವುದಿಲ್ಲ. ಮಾನವ ಘನತೆಯನ್ನು ಉಳಿಸಿಕೊಳ್ಳಲಿ, ನಂತರ ನಾಗಾ ರಾಜಕೀಯ ಶಾಂತಿ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಲಿ” ಎಂದು NSCN-IM ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA

ಡಿಸೆಂಬರ್ 4 ರಂದು ಮೋನ್ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಕನಿಷ್ಠ 14 ಕಲ್ಲಿದ್ದಲು ಗಣಿ ಕಾರ್ಮಿಕರ ಹತ್ಯೆಯ ಕುರಿತು ಸಂಸತ್ತಿನಲ್ಲಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆಯನ್ನು NSCN-IM ತೀವ್ರವಾಗಿ ಖಂಡಿಸಿದೆ.

“ಇಂತಹ ಪರಿಸ್ಥಿತಿಯಲ್ಲಿ ಅಮಿತ್ ಶಾ ಅವರು ಸಾಮಾಜಿಕ-ರಾಜಕೀಯ ಏರುಪೇರುಗಳನ್ನು ತಣ್ಣಗಾಗಿಸಲು ರಾಜಕೀಯ ಪ್ರಬುದ್ಧತೆ ಮತ್ತು ಪ್ರಾಯೋಗಿಕ ರಾಜನೀತಿಯನ್ನು ತೋರಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ವಿಪರ್ಯಾಸವೆಂದರೆ, ಅವರು ಪ್ಯಾರಾ ಕಮಾಂಡೋಗಳ ಹಿಂದೆ ನಿಂತು ಜ್ವಲಂತ ಸಮಸ್ಯೆಗೆ ಇಂಧನವನ್ನು ಸುರಿದರು” ಎಂದು ಮಾಜಿ ಬಂಡಾಯ ಗುಂಪು ಹೇಳಿದೆ.

ಅಮಿತ್‌ ಶಾ ಅವರ ಹೇಳಿಕೆಯನ್ನು “ನಾಗ ಜನಾಂಗದ ಗಾಯಗಳಿಗೆ ಉಪ್ಪು ಮತ್ತು ಮೆಣಸಿನಕಾಯಿಯನ್ನು ಉಜ್ಜಿದಂತೆ” ಎಂದು NSCN-IM ಬಣ್ಣಿಸಿದ್ದು, ಕೊಲ್ಲುವ ಉದ್ದೇಶದಿಂದಲೇ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂಬ ಸತ್ಯವನ್ನು ಯಾರಿಂದಲೂ ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ:‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

ಭಾರತ ಸರ್ಕಾರವು ನಾಗಾ ಜನರಿಗೆ ನ್ಯಾಯವನ್ನು ಮಾಡಲು ಬಯಸಿದರೆ, AFSPA ಅನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ತಪ್ಪಿತಸ್ಥರ ವಿರುದ್ದ ಸರಿಯಾದ ಕಾನೂನು ಕ್ರಮಕ್ಕಾಗಿ ತನಿಖೆಯನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು NSCN-IM ವಾದಿಸಿದೆ.

ಮಾಧ್ಯಮಗಳ ದೃಷ್ಟಿಯಲ್ಲಿ ಮೃತಪಟ್ಟವರು ಉಗ್ರಗಾಮಿಗಳು ಎಂಬ ಭಾವನೆಯನ್ನು ಮೂಡಿಸಲು ಮೃತಪಟ್ಟ ನಾಗಾ ಜನರ ಮೃತದೇಹಕ್ಕೆ ಮಿಲಿಟರಿ ಉಡುಗೆಯನ್ನು ಸೇನೆಯು ಧರಿಸುವಲ್ಲಿ ಹೊರಟಿತ್ತು, ಅದೃಷ್ಟವಶಾತ್, ಅವರು ತಮ್ಮ ಯೋಜನೆಯಲ್ಲಿ ಯಶಸ್ವಿಯಾಗುವ ಮೊದಲು ಗ್ರಾಮಸ್ಥರಿಂದ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು ಎಂದು NSCN-IM ಹೇಳಿಕೆ ನೀಡಿದೆ.

ನಾಗಾ ರಾಜಕೀಯ ಸಮಸ್ಯೆಯ ಪರಿಹಾರಕ್ಕಾಗಿ 1997 ರಿಂದ NSCN-IM ಒಕ್ಕೂಟ ಸರ್ಕಾರದೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಆಗಸ್ಟ್ 2015 ರಲ್ಲಿ ಅವುಗಳ ಸಮಸ್ಯೆಯ ಪರಿಹಾರ ಕಾರ್ಯದ ಒಪ್ಪಂದವೊಂದಕ್ಕೆ ಸಹಿ ಹಾಕಲಾಗಿತ್ತು. ಆದಾಗ್ಯೂ, ನಾಗಾಗಳಿಗೆ ಪ್ರತ್ಯೇಕ ಧ್ವಜ ಮತ್ತು ಸಂವಿಧಾನದ ಬೇಡಿಕೆಯನ್ನು ಈಡೇರಿಸುವಲ್ಲಿ ಯಾವುದೇ ಪರಿಹಾರ ಸಾಧ್ಯವಾಗಿಲ್ಲ.

ಇದನ್ನೂ ಓದಿ: ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...