Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ-‘AFSPA ನೆರಳಿನಲ್ಲಿ ಶಾಂತಿ ಮಾತುಕತೆ ಇಲ್ಲ’: ಮಾಜಿ ಬಂಡಾಯ ನಾಗಾ ಸಂಘಟನೆ

ನಾಗಾಲ್ಯಾಂಡ್ ಹತ್ಯಾಕಾಂಡ-‘AFSPA ನೆರಳಿನಲ್ಲಿ ಶಾಂತಿ ಮಾತುಕತೆ ಇಲ್ಲ’: ಮಾಜಿ ಬಂಡಾಯ ನಾಗಾ ಸಂಘಟನೆ

ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ‘ನಾಗ ಜನಾಂಗದ ಗಾಯಗಳಿಗೆ ಉಪ್ಪು ಮತ್ತು ಮೆಣಸಿನಕಾಯಿಯನ್ನು ಉಜ್ಜಿದಂತೆ’ ಎಂದು NSCN-IM ಬಣ್ಣಿಸಿದೆ

- Advertisement -
- Advertisement -

ನಾಗಾ ರಾಜಕೀಯ ಸಂವಾದದಲ್ಲಿ ಒಕ್ಕೂಟ ಸರ್ಕಾರದೊಂದಿಗೆ ಪ್ರಮುಖ ಸಮಾಲೋಚಕರಾಗಿರುವ, “ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್-ಇಸಾಕ್‌‌ ಮುಯಿವಾ”( NSCN-IM) “AFSPA ‘ನೆರಳಿನಲ್ಲಿ’ ಯಾವುದೇ ಶಾಂತಿ ಮಾತುಕತೆ ಸಾಧ್ಯವಿಲ್ಲ” ಎಂದು ಬುಧವಾರ ಹೇಳಿದೆ. ಮಾಜಿ ಬಂಡುಕೋರ ಗುಂಪು ಕೂಡಾ ಅಗಿರುವ NSCN-IM, ಸಂಸತ್ತಿನಲ್ಲಿ ಅಮಿತ್ ಶಾ ಅವರು ಬಂಡಾಯ ನಿಗ್ರಹ ಕಾರ್ಯಾಚರಣೆಯ ಬಗ್ಗೆ ನೀಡಿದ ಹೇಳಿಕೆಯನ್ನು “ಬೇಜವಾಬ್ದಾರಿ” ಎಂದು ಬಣ್ಣಿಸಿದೆ.

“AFSPA ನೆರಳಿನಲ್ಲಿ ಯಾವುದೇ ರಾಜಕೀಯ ಮಾತುಕತೆಗಳು ಅರ್ಥಪೂರ್ಣವಾಗುವುದಿಲ್ಲ. ಮಾನವ ಘನತೆಯನ್ನು ಉಳಿಸಿಕೊಳ್ಳಲಿ, ನಂತರ ನಾಗಾ ರಾಜಕೀಯ ಶಾಂತಿ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಲಿ” ಎಂದು NSCN-IM ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA

ಡಿಸೆಂಬರ್ 4 ರಂದು ಮೋನ್ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಕನಿಷ್ಠ 14 ಕಲ್ಲಿದ್ದಲು ಗಣಿ ಕಾರ್ಮಿಕರ ಹತ್ಯೆಯ ಕುರಿತು ಸಂಸತ್ತಿನಲ್ಲಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆಯನ್ನು NSCN-IM ತೀವ್ರವಾಗಿ ಖಂಡಿಸಿದೆ.

“ಇಂತಹ ಪರಿಸ್ಥಿತಿಯಲ್ಲಿ ಅಮಿತ್ ಶಾ ಅವರು ಸಾಮಾಜಿಕ-ರಾಜಕೀಯ ಏರುಪೇರುಗಳನ್ನು ತಣ್ಣಗಾಗಿಸಲು ರಾಜಕೀಯ ಪ್ರಬುದ್ಧತೆ ಮತ್ತು ಪ್ರಾಯೋಗಿಕ ರಾಜನೀತಿಯನ್ನು ತೋರಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ವಿಪರ್ಯಾಸವೆಂದರೆ, ಅವರು ಪ್ಯಾರಾ ಕಮಾಂಡೋಗಳ ಹಿಂದೆ ನಿಂತು ಜ್ವಲಂತ ಸಮಸ್ಯೆಗೆ ಇಂಧನವನ್ನು ಸುರಿದರು” ಎಂದು ಮಾಜಿ ಬಂಡಾಯ ಗುಂಪು ಹೇಳಿದೆ.

ಅಮಿತ್‌ ಶಾ ಅವರ ಹೇಳಿಕೆಯನ್ನು “ನಾಗ ಜನಾಂಗದ ಗಾಯಗಳಿಗೆ ಉಪ್ಪು ಮತ್ತು ಮೆಣಸಿನಕಾಯಿಯನ್ನು ಉಜ್ಜಿದಂತೆ” ಎಂದು NSCN-IM ಬಣ್ಣಿಸಿದ್ದು, ಕೊಲ್ಲುವ ಉದ್ದೇಶದಿಂದಲೇ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂಬ ಸತ್ಯವನ್ನು ಯಾರಿಂದಲೂ ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ:‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

ಭಾರತ ಸರ್ಕಾರವು ನಾಗಾ ಜನರಿಗೆ ನ್ಯಾಯವನ್ನು ಮಾಡಲು ಬಯಸಿದರೆ, AFSPA ಅನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ತಪ್ಪಿತಸ್ಥರ ವಿರುದ್ದ ಸರಿಯಾದ ಕಾನೂನು ಕ್ರಮಕ್ಕಾಗಿ ತನಿಖೆಯನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು NSCN-IM ವಾದಿಸಿದೆ.

ಮಾಧ್ಯಮಗಳ ದೃಷ್ಟಿಯಲ್ಲಿ ಮೃತಪಟ್ಟವರು ಉಗ್ರಗಾಮಿಗಳು ಎಂಬ ಭಾವನೆಯನ್ನು ಮೂಡಿಸಲು ಮೃತಪಟ್ಟ ನಾಗಾ ಜನರ ಮೃತದೇಹಕ್ಕೆ ಮಿಲಿಟರಿ ಉಡುಗೆಯನ್ನು ಸೇನೆಯು ಧರಿಸುವಲ್ಲಿ ಹೊರಟಿತ್ತು, ಅದೃಷ್ಟವಶಾತ್, ಅವರು ತಮ್ಮ ಯೋಜನೆಯಲ್ಲಿ ಯಶಸ್ವಿಯಾಗುವ ಮೊದಲು ಗ್ರಾಮಸ್ಥರಿಂದ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು ಎಂದು NSCN-IM ಹೇಳಿಕೆ ನೀಡಿದೆ.

ನಾಗಾ ರಾಜಕೀಯ ಸಮಸ್ಯೆಯ ಪರಿಹಾರಕ್ಕಾಗಿ 1997 ರಿಂದ NSCN-IM ಒಕ್ಕೂಟ ಸರ್ಕಾರದೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಆಗಸ್ಟ್ 2015 ರಲ್ಲಿ ಅವುಗಳ ಸಮಸ್ಯೆಯ ಪರಿಹಾರ ಕಾರ್ಯದ ಒಪ್ಪಂದವೊಂದಕ್ಕೆ ಸಹಿ ಹಾಕಲಾಗಿತ್ತು. ಆದಾಗ್ಯೂ, ನಾಗಾಗಳಿಗೆ ಪ್ರತ್ಯೇಕ ಧ್ವಜ ಮತ್ತು ಸಂವಿಧಾನದ ಬೇಡಿಕೆಯನ್ನು ಈಡೇರಿಸುವಲ್ಲಿ ಯಾವುದೇ ಪರಿಹಾರ ಸಾಧ್ಯವಾಗಿಲ್ಲ.

ಇದನ್ನೂ ಓದಿ: ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...