Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ-‘AFSPA ನೆರಳಿನಲ್ಲಿ ಶಾಂತಿ ಮಾತುಕತೆ ಇಲ್ಲ’: ಮಾಜಿ ಬಂಡಾಯ ನಾಗಾ ಸಂಘಟನೆ

ನಾಗಾಲ್ಯಾಂಡ್ ಹತ್ಯಾಕಾಂಡ-‘AFSPA ನೆರಳಿನಲ್ಲಿ ಶಾಂತಿ ಮಾತುಕತೆ ಇಲ್ಲ’: ಮಾಜಿ ಬಂಡಾಯ ನಾಗಾ ಸಂಘಟನೆ

ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ‘ನಾಗ ಜನಾಂಗದ ಗಾಯಗಳಿಗೆ ಉಪ್ಪು ಮತ್ತು ಮೆಣಸಿನಕಾಯಿಯನ್ನು ಉಜ್ಜಿದಂತೆ’ ಎಂದು NSCN-IM ಬಣ್ಣಿಸಿದೆ

- Advertisement -
- Advertisement -

ನಾಗಾ ರಾಜಕೀಯ ಸಂವಾದದಲ್ಲಿ ಒಕ್ಕೂಟ ಸರ್ಕಾರದೊಂದಿಗೆ ಪ್ರಮುಖ ಸಮಾಲೋಚಕರಾಗಿರುವ, “ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್-ಇಸಾಕ್‌‌ ಮುಯಿವಾ”( NSCN-IM) “AFSPA ‘ನೆರಳಿನಲ್ಲಿ’ ಯಾವುದೇ ಶಾಂತಿ ಮಾತುಕತೆ ಸಾಧ್ಯವಿಲ್ಲ” ಎಂದು ಬುಧವಾರ ಹೇಳಿದೆ. ಮಾಜಿ ಬಂಡುಕೋರ ಗುಂಪು ಕೂಡಾ ಅಗಿರುವ NSCN-IM, ಸಂಸತ್ತಿನಲ್ಲಿ ಅಮಿತ್ ಶಾ ಅವರು ಬಂಡಾಯ ನಿಗ್ರಹ ಕಾರ್ಯಾಚರಣೆಯ ಬಗ್ಗೆ ನೀಡಿದ ಹೇಳಿಕೆಯನ್ನು “ಬೇಜವಾಬ್ದಾರಿ” ಎಂದು ಬಣ್ಣಿಸಿದೆ.

“AFSPA ನೆರಳಿನಲ್ಲಿ ಯಾವುದೇ ರಾಜಕೀಯ ಮಾತುಕತೆಗಳು ಅರ್ಥಪೂರ್ಣವಾಗುವುದಿಲ್ಲ. ಮಾನವ ಘನತೆಯನ್ನು ಉಳಿಸಿಕೊಳ್ಳಲಿ, ನಂತರ ನಾಗಾ ರಾಜಕೀಯ ಶಾಂತಿ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಲಿ” ಎಂದು NSCN-IM ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA

ಡಿಸೆಂಬರ್ 4 ರಂದು ಮೋನ್ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಕನಿಷ್ಠ 14 ಕಲ್ಲಿದ್ದಲು ಗಣಿ ಕಾರ್ಮಿಕರ ಹತ್ಯೆಯ ಕುರಿತು ಸಂಸತ್ತಿನಲ್ಲಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆಯನ್ನು NSCN-IM ತೀವ್ರವಾಗಿ ಖಂಡಿಸಿದೆ.

“ಇಂತಹ ಪರಿಸ್ಥಿತಿಯಲ್ಲಿ ಅಮಿತ್ ಶಾ ಅವರು ಸಾಮಾಜಿಕ-ರಾಜಕೀಯ ಏರುಪೇರುಗಳನ್ನು ತಣ್ಣಗಾಗಿಸಲು ರಾಜಕೀಯ ಪ್ರಬುದ್ಧತೆ ಮತ್ತು ಪ್ರಾಯೋಗಿಕ ರಾಜನೀತಿಯನ್ನು ತೋರಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ವಿಪರ್ಯಾಸವೆಂದರೆ, ಅವರು ಪ್ಯಾರಾ ಕಮಾಂಡೋಗಳ ಹಿಂದೆ ನಿಂತು ಜ್ವಲಂತ ಸಮಸ್ಯೆಗೆ ಇಂಧನವನ್ನು ಸುರಿದರು” ಎಂದು ಮಾಜಿ ಬಂಡಾಯ ಗುಂಪು ಹೇಳಿದೆ.

ಅಮಿತ್‌ ಶಾ ಅವರ ಹೇಳಿಕೆಯನ್ನು “ನಾಗ ಜನಾಂಗದ ಗಾಯಗಳಿಗೆ ಉಪ್ಪು ಮತ್ತು ಮೆಣಸಿನಕಾಯಿಯನ್ನು ಉಜ್ಜಿದಂತೆ” ಎಂದು NSCN-IM ಬಣ್ಣಿಸಿದ್ದು, ಕೊಲ್ಲುವ ಉದ್ದೇಶದಿಂದಲೇ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂಬ ಸತ್ಯವನ್ನು ಯಾರಿಂದಲೂ ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ:‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

ಭಾರತ ಸರ್ಕಾರವು ನಾಗಾ ಜನರಿಗೆ ನ್ಯಾಯವನ್ನು ಮಾಡಲು ಬಯಸಿದರೆ, AFSPA ಅನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ತಪ್ಪಿತಸ್ಥರ ವಿರುದ್ದ ಸರಿಯಾದ ಕಾನೂನು ಕ್ರಮಕ್ಕಾಗಿ ತನಿಖೆಯನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು NSCN-IM ವಾದಿಸಿದೆ.

ಮಾಧ್ಯಮಗಳ ದೃಷ್ಟಿಯಲ್ಲಿ ಮೃತಪಟ್ಟವರು ಉಗ್ರಗಾಮಿಗಳು ಎಂಬ ಭಾವನೆಯನ್ನು ಮೂಡಿಸಲು ಮೃತಪಟ್ಟ ನಾಗಾ ಜನರ ಮೃತದೇಹಕ್ಕೆ ಮಿಲಿಟರಿ ಉಡುಗೆಯನ್ನು ಸೇನೆಯು ಧರಿಸುವಲ್ಲಿ ಹೊರಟಿತ್ತು, ಅದೃಷ್ಟವಶಾತ್, ಅವರು ತಮ್ಮ ಯೋಜನೆಯಲ್ಲಿ ಯಶಸ್ವಿಯಾಗುವ ಮೊದಲು ಗ್ರಾಮಸ್ಥರಿಂದ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು ಎಂದು NSCN-IM ಹೇಳಿಕೆ ನೀಡಿದೆ.

ನಾಗಾ ರಾಜಕೀಯ ಸಮಸ್ಯೆಯ ಪರಿಹಾರಕ್ಕಾಗಿ 1997 ರಿಂದ NSCN-IM ಒಕ್ಕೂಟ ಸರ್ಕಾರದೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಆಗಸ್ಟ್ 2015 ರಲ್ಲಿ ಅವುಗಳ ಸಮಸ್ಯೆಯ ಪರಿಹಾರ ಕಾರ್ಯದ ಒಪ್ಪಂದವೊಂದಕ್ಕೆ ಸಹಿ ಹಾಕಲಾಗಿತ್ತು. ಆದಾಗ್ಯೂ, ನಾಗಾಗಳಿಗೆ ಪ್ರತ್ಯೇಕ ಧ್ವಜ ಮತ್ತು ಸಂವಿಧಾನದ ಬೇಡಿಕೆಯನ್ನು ಈಡೇರಿಸುವಲ್ಲಿ ಯಾವುದೇ ಪರಿಹಾರ ಸಾಧ್ಯವಾಗಿಲ್ಲ.

ಇದನ್ನೂ ಓದಿ: ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...