Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ-‘AFSPA ನೆರಳಿನಲ್ಲಿ ಶಾಂತಿ ಮಾತುಕತೆ ಇಲ್ಲ’: ಮಾಜಿ ಬಂಡಾಯ ನಾಗಾ ಸಂಘಟನೆ

ನಾಗಾಲ್ಯಾಂಡ್ ಹತ್ಯಾಕಾಂಡ-‘AFSPA ನೆರಳಿನಲ್ಲಿ ಶಾಂತಿ ಮಾತುಕತೆ ಇಲ್ಲ’: ಮಾಜಿ ಬಂಡಾಯ ನಾಗಾ ಸಂಘಟನೆ

ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ‘ನಾಗ ಜನಾಂಗದ ಗಾಯಗಳಿಗೆ ಉಪ್ಪು ಮತ್ತು ಮೆಣಸಿನಕಾಯಿಯನ್ನು ಉಜ್ಜಿದಂತೆ’ ಎಂದು NSCN-IM ಬಣ್ಣಿಸಿದೆ

- Advertisement -
- Advertisement -

ನಾಗಾ ರಾಜಕೀಯ ಸಂವಾದದಲ್ಲಿ ಒಕ್ಕೂಟ ಸರ್ಕಾರದೊಂದಿಗೆ ಪ್ರಮುಖ ಸಮಾಲೋಚಕರಾಗಿರುವ, “ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್-ಇಸಾಕ್‌‌ ಮುಯಿವಾ”( NSCN-IM) “AFSPA ‘ನೆರಳಿನಲ್ಲಿ’ ಯಾವುದೇ ಶಾಂತಿ ಮಾತುಕತೆ ಸಾಧ್ಯವಿಲ್ಲ” ಎಂದು ಬುಧವಾರ ಹೇಳಿದೆ. ಮಾಜಿ ಬಂಡುಕೋರ ಗುಂಪು ಕೂಡಾ ಅಗಿರುವ NSCN-IM, ಸಂಸತ್ತಿನಲ್ಲಿ ಅಮಿತ್ ಶಾ ಅವರು ಬಂಡಾಯ ನಿಗ್ರಹ ಕಾರ್ಯಾಚರಣೆಯ ಬಗ್ಗೆ ನೀಡಿದ ಹೇಳಿಕೆಯನ್ನು “ಬೇಜವಾಬ್ದಾರಿ” ಎಂದು ಬಣ್ಣಿಸಿದೆ.

“AFSPA ನೆರಳಿನಲ್ಲಿ ಯಾವುದೇ ರಾಜಕೀಯ ಮಾತುಕತೆಗಳು ಅರ್ಥಪೂರ್ಣವಾಗುವುದಿಲ್ಲ. ಮಾನವ ಘನತೆಯನ್ನು ಉಳಿಸಿಕೊಳ್ಳಲಿ, ನಂತರ ನಾಗಾ ರಾಜಕೀಯ ಶಾಂತಿ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಲಿ” ಎಂದು NSCN-IM ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA

ಡಿಸೆಂಬರ್ 4 ರಂದು ಮೋನ್ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಕನಿಷ್ಠ 14 ಕಲ್ಲಿದ್ದಲು ಗಣಿ ಕಾರ್ಮಿಕರ ಹತ್ಯೆಯ ಕುರಿತು ಸಂಸತ್ತಿನಲ್ಲಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆಯನ್ನು NSCN-IM ತೀವ್ರವಾಗಿ ಖಂಡಿಸಿದೆ.

“ಇಂತಹ ಪರಿಸ್ಥಿತಿಯಲ್ಲಿ ಅಮಿತ್ ಶಾ ಅವರು ಸಾಮಾಜಿಕ-ರಾಜಕೀಯ ಏರುಪೇರುಗಳನ್ನು ತಣ್ಣಗಾಗಿಸಲು ರಾಜಕೀಯ ಪ್ರಬುದ್ಧತೆ ಮತ್ತು ಪ್ರಾಯೋಗಿಕ ರಾಜನೀತಿಯನ್ನು ತೋರಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ವಿಪರ್ಯಾಸವೆಂದರೆ, ಅವರು ಪ್ಯಾರಾ ಕಮಾಂಡೋಗಳ ಹಿಂದೆ ನಿಂತು ಜ್ವಲಂತ ಸಮಸ್ಯೆಗೆ ಇಂಧನವನ್ನು ಸುರಿದರು” ಎಂದು ಮಾಜಿ ಬಂಡಾಯ ಗುಂಪು ಹೇಳಿದೆ.

ಅಮಿತ್‌ ಶಾ ಅವರ ಹೇಳಿಕೆಯನ್ನು “ನಾಗ ಜನಾಂಗದ ಗಾಯಗಳಿಗೆ ಉಪ್ಪು ಮತ್ತು ಮೆಣಸಿನಕಾಯಿಯನ್ನು ಉಜ್ಜಿದಂತೆ” ಎಂದು NSCN-IM ಬಣ್ಣಿಸಿದ್ದು, ಕೊಲ್ಲುವ ಉದ್ದೇಶದಿಂದಲೇ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂಬ ಸತ್ಯವನ್ನು ಯಾರಿಂದಲೂ ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ:‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

ಭಾರತ ಸರ್ಕಾರವು ನಾಗಾ ಜನರಿಗೆ ನ್ಯಾಯವನ್ನು ಮಾಡಲು ಬಯಸಿದರೆ, AFSPA ಅನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ತಪ್ಪಿತಸ್ಥರ ವಿರುದ್ದ ಸರಿಯಾದ ಕಾನೂನು ಕ್ರಮಕ್ಕಾಗಿ ತನಿಖೆಯನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು NSCN-IM ವಾದಿಸಿದೆ.

ಮಾಧ್ಯಮಗಳ ದೃಷ್ಟಿಯಲ್ಲಿ ಮೃತಪಟ್ಟವರು ಉಗ್ರಗಾಮಿಗಳು ಎಂಬ ಭಾವನೆಯನ್ನು ಮೂಡಿಸಲು ಮೃತಪಟ್ಟ ನಾಗಾ ಜನರ ಮೃತದೇಹಕ್ಕೆ ಮಿಲಿಟರಿ ಉಡುಗೆಯನ್ನು ಸೇನೆಯು ಧರಿಸುವಲ್ಲಿ ಹೊರಟಿತ್ತು, ಅದೃಷ್ಟವಶಾತ್, ಅವರು ತಮ್ಮ ಯೋಜನೆಯಲ್ಲಿ ಯಶಸ್ವಿಯಾಗುವ ಮೊದಲು ಗ್ರಾಮಸ್ಥರಿಂದ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು ಎಂದು NSCN-IM ಹೇಳಿಕೆ ನೀಡಿದೆ.

ನಾಗಾ ರಾಜಕೀಯ ಸಮಸ್ಯೆಯ ಪರಿಹಾರಕ್ಕಾಗಿ 1997 ರಿಂದ NSCN-IM ಒಕ್ಕೂಟ ಸರ್ಕಾರದೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಆಗಸ್ಟ್ 2015 ರಲ್ಲಿ ಅವುಗಳ ಸಮಸ್ಯೆಯ ಪರಿಹಾರ ಕಾರ್ಯದ ಒಪ್ಪಂದವೊಂದಕ್ಕೆ ಸಹಿ ಹಾಕಲಾಗಿತ್ತು. ಆದಾಗ್ಯೂ, ನಾಗಾಗಳಿಗೆ ಪ್ರತ್ಯೇಕ ಧ್ವಜ ಮತ್ತು ಸಂವಿಧಾನದ ಬೇಡಿಕೆಯನ್ನು ಈಡೇರಿಸುವಲ್ಲಿ ಯಾವುದೇ ಪರಿಹಾರ ಸಾಧ್ಯವಾಗಿಲ್ಲ.

ಇದನ್ನೂ ಓದಿ: ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...