Homeಕರ್ನಾಟಕನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

ನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

- Advertisement -
- Advertisement -

ಸಂಸದೆ ಸುಮಲತಾ ಅಂಬರೀಶ್​ ಅವರು ಬಿಜೆಪಿಗೆ ಅಧಿಕೃತವಾಗಿ ಸೇರದಿದ್ದರೂ ತಮ್ಮ ಸಂಪೂರ್ಣ ಬೆಂಬಲ ಎಂದಿಗೂ ಬಿಜೆಪಿಗೆ ಇರುತ್ತದೆ ಎಂದು ಘೋಷಣೆ ಮಾಡಿದ್ದಾರೆ. ಇದು ಮಂಡ್ಯ ಜನತೆಗೆ ಆಘಾತ ತರಿಸಿದ್ದು, ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿನ ಲಂಕೇಶ್​ ರಂಗ ಮಂದಿರದಿಂದ ಸುಮಲತಾ ಅವರ ಫೋಟೋವನ್ನು ತೆರವುಗೊಳಿಸಿದ್ದಾರೆ.

ಹಿರಿಯ ನಟ ಅಂಬರೀಷ್ ಅವರು ಸಂಸದರಾಗಿದ್ದಾಗ ನೀಡಿದ್ದ ಅನುದಾನದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ನಿರ್ಮಿಸಿದ್ದ ರಂಗಮಂದಿರದಲ್ಲಿ ಸುಮಲತಾ ಅವರ ಫೋಟೊವನ್ನೂ ಅಳವಡಿಸಲಾಗಿತ್ತು. ಲಂಕೇಶ್ ಪತ್ರಿಕೆಯ‌ ಅಂಕಣಕಾರರಾಗಿದ್ದ ಬಿ.ಚಂದ್ರೇಗೌಡ ಅವರು ಪಿ.ಲಂಕೇಶ್‌ ಅವರ ಮೇಲಿನ ಪ್ರೀತಿ ಮತ್ತು ಅಭಿಮಾನದ ಪ್ರತೀಕವಾಗಿ ಗ್ರಾಮದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಿಸಿ ಗೌರಿ ಲಂಕೇಶ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಿದ್ದರು.

ಈ ರಂಗಮಂದಿರದಲ್ಲಿ ವರನಟ ಡಾ. ರಾಜ್​ಕುಮಾರ್​, ನಟ ಅಂಬರೀಶ್​ ಹಾಗೂ ಸುಮಲತಾರ ಫೋಟೋವನ್ನು ಅಳವಡಿಸಲಾಗಿತ್ತು. ಆದರೆ ಸುಮಲತಾ ಬಿಜೆಪಿಗೆ ಬೆಂಬಲ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ರಂಗಮಂದಿರದಲ್ಲಿದ್ದ ಸುಮಲತಾ ಫೋಟೋ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: ತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

ಕಳೆದ ಬಾರಿ ಸುಮಲತಾ ಅವರು ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದನ್ನು ಮಂಡ್ಯದ ಸ್ವಾಭಿಮಾನದ ಗೆಲುವು ಎಂದು ಬಣ್ಣಿಸಲಾಗಿತ್ತು. ಈ ಭಾಗದಲ್ಲಿ ಯಾವತ್ತೂ ಬಿಜೆಪಿ ಪಕ್ಷವನ್ನು ಒಪ್ಪಿಕೊಂಡಿರಲಿಲ್ಲ, ಇಲ್ಲಿಯ ಜನರು ಜೆಡಿಎಸ್ ಹಾಗೂ ಕಾಂಗ್ರೆಸ್‌ಗೆ ಒಲುವು ತೋರುತ್ತಾ ಬಂದಿದ್ದಾರೆ. ಆದರೆ ಇದೀಗ ಸುಮಲತಾ ಅವರು ಬಿಜೆಪಿಗೆ ಬೆಂಬಲ ಘೋಷಿಸಿದ ಬಳಿಕ ಮಂಡ್ಯದ ಜನರು ಸುಮಲತಾ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಅಂಕಣಕಾರ ಬಿ ಚಂದ್ರೇಗೌಡ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅವರಿಗೆ ನಮ್ಮೂರಿನಿಂದಲೇ (ಬಿದರಕೆರೆ ಗ್ರಾಮ) ಹೆಚ್ಚಿನ ಮತಗಳು ಬಂದಿವೆ. ಅವರು ಗೆದ್ದ ಬಳಿಕ ನಮ್ಮೂರಿನ ಯುವಕರು ಸುಮಲತಾ ಭಾವಚಿತ್ರವನ್ನು ಲಂಕೇಶ್ ರಂಗಮಂದಿರದಲ್ಲಿ ಹಾಕಿದ್ದರು ಎಂದು ತಿಳಿಸಿದರು.

”ಅಂಬರೀಶ್ ಅವರು ಮಹಾನ್ ಸೆಕ್ಯೂಲರ್ ಮನುಷ್ಯ ಆಗಿದ್ದರು. ಸುಮಲತಾ ಕೂಡ ಅವರ ಹಾದಿಯಲ್ಲೇ ನಡೆಯುತ್ತಾರೆ ಎಂದು ಭಾವಿಸಿದ್ದೆವು. ಆದರೆ ಸುಮಲತಾ ಅವರು ಕೋಮುವಾದಿ ಪಕ್ಷವಾಗಿರುವ ಬಿಜೆಪಿಗೆ ಅಧಿಕೃತವಾಗಿ ಸೇರದಿದ್ದರೂ, ಬೆಂಬಲ ಕೊಡುತ್ತೇನೆ ಎಂದು ಹೇಳಿರುವುದು ನಮ್ಮ ಊರಿನ ಜನರಿಗೆ ಬೇಸರ ತರಿಸಿತು. ಹಾಗಾಗಿ ಸುಮಲತಾ ಘೋಷಣೆ ಬೆನ್ನಲ್ಲೇ ನಮ್ಮೂರಿನ ಯುವಕರು ಅವರ ಫೋಟೋವನ್ನು ತಗೆದು ಬಿಸಾಕಿದ್ದಾರೆ. ಸುಮಲತಾ ಅವರು ಬಿಜೆಪಿಗೆ ಸೇರುವ ಮೂಲಕ ಮಂಡ್ಯ ಜನರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

”ಸುಮಲತಾ ಅವರು ಪಕ್ಷೇತರರಾಗಿ ಗೆಲುವು ಸಾಧಿಸಿದ್ದು ಒಂದು ಇತಿಹಾಸ, ಅವರು ಯಾವುದೇ ನಿರ್ಧಾರ ತಗೆದುಕೊಳ್ಳುವ ಮುನ್ನ ಕಾರ್ಯಕರ್ತರ ಅಭಿಪ್ರಾಯ ಕೇಳುತ್ತೇನೆ ಎಂದು ಹೇಳಿದ್ದರು. ಆದರೆ ಇಂದು ಆ ಮಾತು ಮರೆತಿದ್ದಾರೆ. ಮಂಡ್ಯ ಜನರ ನಂಬಿಕೆಗೆ ದ್ರೋಹ ಬಗೆದಿದ್ದಾರೆ. ಹಾಗಾಗಿ ರಂಗಮಂದಿರದಲ್ಲಿನ ಅವರ ಭಾವಚಿತ್ರವನ್ನು ತಗೆದುಬಿಸಾಕಿದ್ದಾರೆ. ಆ ಜಗಕ್ಕೆ ಪುನಿತ್ ರಾಜಕುಮಾರ್ ಫೋಟೋ ಹಾಕಲಾಗುತ್ತಿದೆ” ಎಂದು ಚಂದ್ರೇಗೌಡ ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...