Homeಕರ್ನಾಟಕನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

ನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

- Advertisement -
- Advertisement -

ಸಂಸದೆ ಸುಮಲತಾ ಅಂಬರೀಶ್​ ಅವರು ಬಿಜೆಪಿಗೆ ಅಧಿಕೃತವಾಗಿ ಸೇರದಿದ್ದರೂ ತಮ್ಮ ಸಂಪೂರ್ಣ ಬೆಂಬಲ ಎಂದಿಗೂ ಬಿಜೆಪಿಗೆ ಇರುತ್ತದೆ ಎಂದು ಘೋಷಣೆ ಮಾಡಿದ್ದಾರೆ. ಇದು ಮಂಡ್ಯ ಜನತೆಗೆ ಆಘಾತ ತರಿಸಿದ್ದು, ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿನ ಲಂಕೇಶ್​ ರಂಗ ಮಂದಿರದಿಂದ ಸುಮಲತಾ ಅವರ ಫೋಟೋವನ್ನು ತೆರವುಗೊಳಿಸಿದ್ದಾರೆ.

ಹಿರಿಯ ನಟ ಅಂಬರೀಷ್ ಅವರು ಸಂಸದರಾಗಿದ್ದಾಗ ನೀಡಿದ್ದ ಅನುದಾನದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ನಿರ್ಮಿಸಿದ್ದ ರಂಗಮಂದಿರದಲ್ಲಿ ಸುಮಲತಾ ಅವರ ಫೋಟೊವನ್ನೂ ಅಳವಡಿಸಲಾಗಿತ್ತು. ಲಂಕೇಶ್ ಪತ್ರಿಕೆಯ‌ ಅಂಕಣಕಾರರಾಗಿದ್ದ ಬಿ.ಚಂದ್ರೇಗೌಡ ಅವರು ಪಿ.ಲಂಕೇಶ್‌ ಅವರ ಮೇಲಿನ ಪ್ರೀತಿ ಮತ್ತು ಅಭಿಮಾನದ ಪ್ರತೀಕವಾಗಿ ಗ್ರಾಮದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಿಸಿ ಗೌರಿ ಲಂಕೇಶ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಿದ್ದರು.

ಈ ರಂಗಮಂದಿರದಲ್ಲಿ ವರನಟ ಡಾ. ರಾಜ್​ಕುಮಾರ್​, ನಟ ಅಂಬರೀಶ್​ ಹಾಗೂ ಸುಮಲತಾರ ಫೋಟೋವನ್ನು ಅಳವಡಿಸಲಾಗಿತ್ತು. ಆದರೆ ಸುಮಲತಾ ಬಿಜೆಪಿಗೆ ಬೆಂಬಲ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ರಂಗಮಂದಿರದಲ್ಲಿದ್ದ ಸುಮಲತಾ ಫೋಟೋ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: ತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

ಕಳೆದ ಬಾರಿ ಸುಮಲತಾ ಅವರು ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದನ್ನು ಮಂಡ್ಯದ ಸ್ವಾಭಿಮಾನದ ಗೆಲುವು ಎಂದು ಬಣ್ಣಿಸಲಾಗಿತ್ತು. ಈ ಭಾಗದಲ್ಲಿ ಯಾವತ್ತೂ ಬಿಜೆಪಿ ಪಕ್ಷವನ್ನು ಒಪ್ಪಿಕೊಂಡಿರಲಿಲ್ಲ, ಇಲ್ಲಿಯ ಜನರು ಜೆಡಿಎಸ್ ಹಾಗೂ ಕಾಂಗ್ರೆಸ್‌ಗೆ ಒಲುವು ತೋರುತ್ತಾ ಬಂದಿದ್ದಾರೆ. ಆದರೆ ಇದೀಗ ಸುಮಲತಾ ಅವರು ಬಿಜೆಪಿಗೆ ಬೆಂಬಲ ಘೋಷಿಸಿದ ಬಳಿಕ ಮಂಡ್ಯದ ಜನರು ಸುಮಲತಾ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಅಂಕಣಕಾರ ಬಿ ಚಂದ್ರೇಗೌಡ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅವರಿಗೆ ನಮ್ಮೂರಿನಿಂದಲೇ (ಬಿದರಕೆರೆ ಗ್ರಾಮ) ಹೆಚ್ಚಿನ ಮತಗಳು ಬಂದಿವೆ. ಅವರು ಗೆದ್ದ ಬಳಿಕ ನಮ್ಮೂರಿನ ಯುವಕರು ಸುಮಲತಾ ಭಾವಚಿತ್ರವನ್ನು ಲಂಕೇಶ್ ರಂಗಮಂದಿರದಲ್ಲಿ ಹಾಕಿದ್ದರು ಎಂದು ತಿಳಿಸಿದರು.

”ಅಂಬರೀಶ್ ಅವರು ಮಹಾನ್ ಸೆಕ್ಯೂಲರ್ ಮನುಷ್ಯ ಆಗಿದ್ದರು. ಸುಮಲತಾ ಕೂಡ ಅವರ ಹಾದಿಯಲ್ಲೇ ನಡೆಯುತ್ತಾರೆ ಎಂದು ಭಾವಿಸಿದ್ದೆವು. ಆದರೆ ಸುಮಲತಾ ಅವರು ಕೋಮುವಾದಿ ಪಕ್ಷವಾಗಿರುವ ಬಿಜೆಪಿಗೆ ಅಧಿಕೃತವಾಗಿ ಸೇರದಿದ್ದರೂ, ಬೆಂಬಲ ಕೊಡುತ್ತೇನೆ ಎಂದು ಹೇಳಿರುವುದು ನಮ್ಮ ಊರಿನ ಜನರಿಗೆ ಬೇಸರ ತರಿಸಿತು. ಹಾಗಾಗಿ ಸುಮಲತಾ ಘೋಷಣೆ ಬೆನ್ನಲ್ಲೇ ನಮ್ಮೂರಿನ ಯುವಕರು ಅವರ ಫೋಟೋವನ್ನು ತಗೆದು ಬಿಸಾಕಿದ್ದಾರೆ. ಸುಮಲತಾ ಅವರು ಬಿಜೆಪಿಗೆ ಸೇರುವ ಮೂಲಕ ಮಂಡ್ಯ ಜನರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

”ಸುಮಲತಾ ಅವರು ಪಕ್ಷೇತರರಾಗಿ ಗೆಲುವು ಸಾಧಿಸಿದ್ದು ಒಂದು ಇತಿಹಾಸ, ಅವರು ಯಾವುದೇ ನಿರ್ಧಾರ ತಗೆದುಕೊಳ್ಳುವ ಮುನ್ನ ಕಾರ್ಯಕರ್ತರ ಅಭಿಪ್ರಾಯ ಕೇಳುತ್ತೇನೆ ಎಂದು ಹೇಳಿದ್ದರು. ಆದರೆ ಇಂದು ಆ ಮಾತು ಮರೆತಿದ್ದಾರೆ. ಮಂಡ್ಯ ಜನರ ನಂಬಿಕೆಗೆ ದ್ರೋಹ ಬಗೆದಿದ್ದಾರೆ. ಹಾಗಾಗಿ ರಂಗಮಂದಿರದಲ್ಲಿನ ಅವರ ಭಾವಚಿತ್ರವನ್ನು ತಗೆದುಬಿಸಾಕಿದ್ದಾರೆ. ಆ ಜಗಕ್ಕೆ ಪುನಿತ್ ರಾಜಕುಮಾರ್ ಫೋಟೋ ಹಾಕಲಾಗುತ್ತಿದೆ” ಎಂದು ಚಂದ್ರೇಗೌಡ ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...