Homeಕರ್ನಾಟಕನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

ನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

- Advertisement -
- Advertisement -

ಸಂಸದೆ ಸುಮಲತಾ ಅಂಬರೀಶ್​ ಅವರು ಬಿಜೆಪಿಗೆ ಅಧಿಕೃತವಾಗಿ ಸೇರದಿದ್ದರೂ ತಮ್ಮ ಸಂಪೂರ್ಣ ಬೆಂಬಲ ಎಂದಿಗೂ ಬಿಜೆಪಿಗೆ ಇರುತ್ತದೆ ಎಂದು ಘೋಷಣೆ ಮಾಡಿದ್ದಾರೆ. ಇದು ಮಂಡ್ಯ ಜನತೆಗೆ ಆಘಾತ ತರಿಸಿದ್ದು, ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿನ ಲಂಕೇಶ್​ ರಂಗ ಮಂದಿರದಿಂದ ಸುಮಲತಾ ಅವರ ಫೋಟೋವನ್ನು ತೆರವುಗೊಳಿಸಿದ್ದಾರೆ.

ಹಿರಿಯ ನಟ ಅಂಬರೀಷ್ ಅವರು ಸಂಸದರಾಗಿದ್ದಾಗ ನೀಡಿದ್ದ ಅನುದಾನದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ನಿರ್ಮಿಸಿದ್ದ ರಂಗಮಂದಿರದಲ್ಲಿ ಸುಮಲತಾ ಅವರ ಫೋಟೊವನ್ನೂ ಅಳವಡಿಸಲಾಗಿತ್ತು. ಲಂಕೇಶ್ ಪತ್ರಿಕೆಯ‌ ಅಂಕಣಕಾರರಾಗಿದ್ದ ಬಿ.ಚಂದ್ರೇಗೌಡ ಅವರು ಪಿ.ಲಂಕೇಶ್‌ ಅವರ ಮೇಲಿನ ಪ್ರೀತಿ ಮತ್ತು ಅಭಿಮಾನದ ಪ್ರತೀಕವಾಗಿ ಗ್ರಾಮದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಿಸಿ ಗೌರಿ ಲಂಕೇಶ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಿದ್ದರು.

ಈ ರಂಗಮಂದಿರದಲ್ಲಿ ವರನಟ ಡಾ. ರಾಜ್​ಕುಮಾರ್​, ನಟ ಅಂಬರೀಶ್​ ಹಾಗೂ ಸುಮಲತಾರ ಫೋಟೋವನ್ನು ಅಳವಡಿಸಲಾಗಿತ್ತು. ಆದರೆ ಸುಮಲತಾ ಬಿಜೆಪಿಗೆ ಬೆಂಬಲ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ರಂಗಮಂದಿರದಲ್ಲಿದ್ದ ಸುಮಲತಾ ಫೋಟೋ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: ತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

ಕಳೆದ ಬಾರಿ ಸುಮಲತಾ ಅವರು ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದನ್ನು ಮಂಡ್ಯದ ಸ್ವಾಭಿಮಾನದ ಗೆಲುವು ಎಂದು ಬಣ್ಣಿಸಲಾಗಿತ್ತು. ಈ ಭಾಗದಲ್ಲಿ ಯಾವತ್ತೂ ಬಿಜೆಪಿ ಪಕ್ಷವನ್ನು ಒಪ್ಪಿಕೊಂಡಿರಲಿಲ್ಲ, ಇಲ್ಲಿಯ ಜನರು ಜೆಡಿಎಸ್ ಹಾಗೂ ಕಾಂಗ್ರೆಸ್‌ಗೆ ಒಲುವು ತೋರುತ್ತಾ ಬಂದಿದ್ದಾರೆ. ಆದರೆ ಇದೀಗ ಸುಮಲತಾ ಅವರು ಬಿಜೆಪಿಗೆ ಬೆಂಬಲ ಘೋಷಿಸಿದ ಬಳಿಕ ಮಂಡ್ಯದ ಜನರು ಸುಮಲತಾ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಅಂಕಣಕಾರ ಬಿ ಚಂದ್ರೇಗೌಡ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅವರಿಗೆ ನಮ್ಮೂರಿನಿಂದಲೇ (ಬಿದರಕೆರೆ ಗ್ರಾಮ) ಹೆಚ್ಚಿನ ಮತಗಳು ಬಂದಿವೆ. ಅವರು ಗೆದ್ದ ಬಳಿಕ ನಮ್ಮೂರಿನ ಯುವಕರು ಸುಮಲತಾ ಭಾವಚಿತ್ರವನ್ನು ಲಂಕೇಶ್ ರಂಗಮಂದಿರದಲ್ಲಿ ಹಾಕಿದ್ದರು ಎಂದು ತಿಳಿಸಿದರು.

”ಅಂಬರೀಶ್ ಅವರು ಮಹಾನ್ ಸೆಕ್ಯೂಲರ್ ಮನುಷ್ಯ ಆಗಿದ್ದರು. ಸುಮಲತಾ ಕೂಡ ಅವರ ಹಾದಿಯಲ್ಲೇ ನಡೆಯುತ್ತಾರೆ ಎಂದು ಭಾವಿಸಿದ್ದೆವು. ಆದರೆ ಸುಮಲತಾ ಅವರು ಕೋಮುವಾದಿ ಪಕ್ಷವಾಗಿರುವ ಬಿಜೆಪಿಗೆ ಅಧಿಕೃತವಾಗಿ ಸೇರದಿದ್ದರೂ, ಬೆಂಬಲ ಕೊಡುತ್ತೇನೆ ಎಂದು ಹೇಳಿರುವುದು ನಮ್ಮ ಊರಿನ ಜನರಿಗೆ ಬೇಸರ ತರಿಸಿತು. ಹಾಗಾಗಿ ಸುಮಲತಾ ಘೋಷಣೆ ಬೆನ್ನಲ್ಲೇ ನಮ್ಮೂರಿನ ಯುವಕರು ಅವರ ಫೋಟೋವನ್ನು ತಗೆದು ಬಿಸಾಕಿದ್ದಾರೆ. ಸುಮಲತಾ ಅವರು ಬಿಜೆಪಿಗೆ ಸೇರುವ ಮೂಲಕ ಮಂಡ್ಯ ಜನರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

”ಸುಮಲತಾ ಅವರು ಪಕ್ಷೇತರರಾಗಿ ಗೆಲುವು ಸಾಧಿಸಿದ್ದು ಒಂದು ಇತಿಹಾಸ, ಅವರು ಯಾವುದೇ ನಿರ್ಧಾರ ತಗೆದುಕೊಳ್ಳುವ ಮುನ್ನ ಕಾರ್ಯಕರ್ತರ ಅಭಿಪ್ರಾಯ ಕೇಳುತ್ತೇನೆ ಎಂದು ಹೇಳಿದ್ದರು. ಆದರೆ ಇಂದು ಆ ಮಾತು ಮರೆತಿದ್ದಾರೆ. ಮಂಡ್ಯ ಜನರ ನಂಬಿಕೆಗೆ ದ್ರೋಹ ಬಗೆದಿದ್ದಾರೆ. ಹಾಗಾಗಿ ರಂಗಮಂದಿರದಲ್ಲಿನ ಅವರ ಭಾವಚಿತ್ರವನ್ನು ತಗೆದುಬಿಸಾಕಿದ್ದಾರೆ. ಆ ಜಗಕ್ಕೆ ಪುನಿತ್ ರಾಜಕುಮಾರ್ ಫೋಟೋ ಹಾಕಲಾಗುತ್ತಿದೆ” ಎಂದು ಚಂದ್ರೇಗೌಡ ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...