Homeಕರ್ನಾಟಕನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

ನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

- Advertisement -
- Advertisement -

ಸಂಸದೆ ಸುಮಲತಾ ಅಂಬರೀಶ್​ ಅವರು ಬಿಜೆಪಿಗೆ ಅಧಿಕೃತವಾಗಿ ಸೇರದಿದ್ದರೂ ತಮ್ಮ ಸಂಪೂರ್ಣ ಬೆಂಬಲ ಎಂದಿಗೂ ಬಿಜೆಪಿಗೆ ಇರುತ್ತದೆ ಎಂದು ಘೋಷಣೆ ಮಾಡಿದ್ದಾರೆ. ಇದು ಮಂಡ್ಯ ಜನತೆಗೆ ಆಘಾತ ತರಿಸಿದ್ದು, ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿನ ಲಂಕೇಶ್​ ರಂಗ ಮಂದಿರದಿಂದ ಸುಮಲತಾ ಅವರ ಫೋಟೋವನ್ನು ತೆರವುಗೊಳಿಸಿದ್ದಾರೆ.

ಹಿರಿಯ ನಟ ಅಂಬರೀಷ್ ಅವರು ಸಂಸದರಾಗಿದ್ದಾಗ ನೀಡಿದ್ದ ಅನುದಾನದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ನಿರ್ಮಿಸಿದ್ದ ರಂಗಮಂದಿರದಲ್ಲಿ ಸುಮಲತಾ ಅವರ ಫೋಟೊವನ್ನೂ ಅಳವಡಿಸಲಾಗಿತ್ತು. ಲಂಕೇಶ್ ಪತ್ರಿಕೆಯ‌ ಅಂಕಣಕಾರರಾಗಿದ್ದ ಬಿ.ಚಂದ್ರೇಗೌಡ ಅವರು ಪಿ.ಲಂಕೇಶ್‌ ಅವರ ಮೇಲಿನ ಪ್ರೀತಿ ಮತ್ತು ಅಭಿಮಾನದ ಪ್ರತೀಕವಾಗಿ ಗ್ರಾಮದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಿಸಿ ಗೌರಿ ಲಂಕೇಶ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಿದ್ದರು.

ಈ ರಂಗಮಂದಿರದಲ್ಲಿ ವರನಟ ಡಾ. ರಾಜ್​ಕುಮಾರ್​, ನಟ ಅಂಬರೀಶ್​ ಹಾಗೂ ಸುಮಲತಾರ ಫೋಟೋವನ್ನು ಅಳವಡಿಸಲಾಗಿತ್ತು. ಆದರೆ ಸುಮಲತಾ ಬಿಜೆಪಿಗೆ ಬೆಂಬಲ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ರಂಗಮಂದಿರದಲ್ಲಿದ್ದ ಸುಮಲತಾ ಫೋಟೋ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: ತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

ಕಳೆದ ಬಾರಿ ಸುಮಲತಾ ಅವರು ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದನ್ನು ಮಂಡ್ಯದ ಸ್ವಾಭಿಮಾನದ ಗೆಲುವು ಎಂದು ಬಣ್ಣಿಸಲಾಗಿತ್ತು. ಈ ಭಾಗದಲ್ಲಿ ಯಾವತ್ತೂ ಬಿಜೆಪಿ ಪಕ್ಷವನ್ನು ಒಪ್ಪಿಕೊಂಡಿರಲಿಲ್ಲ, ಇಲ್ಲಿಯ ಜನರು ಜೆಡಿಎಸ್ ಹಾಗೂ ಕಾಂಗ್ರೆಸ್‌ಗೆ ಒಲುವು ತೋರುತ್ತಾ ಬಂದಿದ್ದಾರೆ. ಆದರೆ ಇದೀಗ ಸುಮಲತಾ ಅವರು ಬಿಜೆಪಿಗೆ ಬೆಂಬಲ ಘೋಷಿಸಿದ ಬಳಿಕ ಮಂಡ್ಯದ ಜನರು ಸುಮಲತಾ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಅಂಕಣಕಾರ ಬಿ ಚಂದ್ರೇಗೌಡ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅವರಿಗೆ ನಮ್ಮೂರಿನಿಂದಲೇ (ಬಿದರಕೆರೆ ಗ್ರಾಮ) ಹೆಚ್ಚಿನ ಮತಗಳು ಬಂದಿವೆ. ಅವರು ಗೆದ್ದ ಬಳಿಕ ನಮ್ಮೂರಿನ ಯುವಕರು ಸುಮಲತಾ ಭಾವಚಿತ್ರವನ್ನು ಲಂಕೇಶ್ ರಂಗಮಂದಿರದಲ್ಲಿ ಹಾಕಿದ್ದರು ಎಂದು ತಿಳಿಸಿದರು.

”ಅಂಬರೀಶ್ ಅವರು ಮಹಾನ್ ಸೆಕ್ಯೂಲರ್ ಮನುಷ್ಯ ಆಗಿದ್ದರು. ಸುಮಲತಾ ಕೂಡ ಅವರ ಹಾದಿಯಲ್ಲೇ ನಡೆಯುತ್ತಾರೆ ಎಂದು ಭಾವಿಸಿದ್ದೆವು. ಆದರೆ ಸುಮಲತಾ ಅವರು ಕೋಮುವಾದಿ ಪಕ್ಷವಾಗಿರುವ ಬಿಜೆಪಿಗೆ ಅಧಿಕೃತವಾಗಿ ಸೇರದಿದ್ದರೂ, ಬೆಂಬಲ ಕೊಡುತ್ತೇನೆ ಎಂದು ಹೇಳಿರುವುದು ನಮ್ಮ ಊರಿನ ಜನರಿಗೆ ಬೇಸರ ತರಿಸಿತು. ಹಾಗಾಗಿ ಸುಮಲತಾ ಘೋಷಣೆ ಬೆನ್ನಲ್ಲೇ ನಮ್ಮೂರಿನ ಯುವಕರು ಅವರ ಫೋಟೋವನ್ನು ತಗೆದು ಬಿಸಾಕಿದ್ದಾರೆ. ಸುಮಲತಾ ಅವರು ಬಿಜೆಪಿಗೆ ಸೇರುವ ಮೂಲಕ ಮಂಡ್ಯ ಜನರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

”ಸುಮಲತಾ ಅವರು ಪಕ್ಷೇತರರಾಗಿ ಗೆಲುವು ಸಾಧಿಸಿದ್ದು ಒಂದು ಇತಿಹಾಸ, ಅವರು ಯಾವುದೇ ನಿರ್ಧಾರ ತಗೆದುಕೊಳ್ಳುವ ಮುನ್ನ ಕಾರ್ಯಕರ್ತರ ಅಭಿಪ್ರಾಯ ಕೇಳುತ್ತೇನೆ ಎಂದು ಹೇಳಿದ್ದರು. ಆದರೆ ಇಂದು ಆ ಮಾತು ಮರೆತಿದ್ದಾರೆ. ಮಂಡ್ಯ ಜನರ ನಂಬಿಕೆಗೆ ದ್ರೋಹ ಬಗೆದಿದ್ದಾರೆ. ಹಾಗಾಗಿ ರಂಗಮಂದಿರದಲ್ಲಿನ ಅವರ ಭಾವಚಿತ್ರವನ್ನು ತಗೆದುಬಿಸಾಕಿದ್ದಾರೆ. ಆ ಜಗಕ್ಕೆ ಪುನಿತ್ ರಾಜಕುಮಾರ್ ಫೋಟೋ ಹಾಕಲಾಗುತ್ತಿದೆ” ಎಂದು ಚಂದ್ರೇಗೌಡ ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...