Homeಕರ್ನಾಟಕಪ್ರಚೋದನಕಾರಿ ಹೇಳಿಕೆ | ಶೋಭಾ ಕರಂದ್ಲಾಜೆ & ಆರ್. ಅಶೋಕ ವಿರುದ್ಧ ಎಫ್‌ಐಆರ್

ಪ್ರಚೋದನಕಾರಿ ಹೇಳಿಕೆ | ಶೋಭಾ ಕರಂದ್ಲಾಜೆ & ಆರ್. ಅಶೋಕ ವಿರುದ್ಧ ಎಫ್‌ಐಆರ್

- Advertisement -
- Advertisement -

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮುಗಲಭೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇಬ್ಬರೂ ನಾಯಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಾಗಮಂಗಲ ಟೌನ್ ಪೊಲೀಸ್ ಠಾಣೆಯ ಗುಪ್ತಚರ ವಿಭಾಗದ ಪೊಲೀಸ್ ಅಧಿಕಾರಿ ಎಂ ರಮೇಶ ಅವರು ದೂರು ದಾಖಲಿಸಿದ್ದಾರೆ. ಸೆಪ್ಟೆಂಬರ್ 11 ರಂದು ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕೋಮುಗಲಭೆ ಭುಗಿಲೆದ್ದ ನಂತರ ಆರೋಪಿಗಳ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು “ಅಶಾಂತಿಯನ್ನು ಪ್ರಚೋದಿಸುವ” ಗುರಿಯನ್ನು ಹೊಂದಿವೆ ಎಂದು ಅವರು ಹೇಳಿದ್ದಾರೆ.

ಸಚಿವೆ ಶೋಭಾ ಅವರು ಸೆಪ್ಟೆಂಬರ್ 13 ರಂದು ತಮ್ಮ ಎಕ್ಸ್ ಖಾತೆಯಲ್ಲಿ ತಪ್ಪುದಾರಿಗೆಳೆಯುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಶೋಭಾ ಬೇರೆ ಫೋಟೋಗಳನ್ನು ಪೋಸ್ಟ್ ಮಾಡಿ, ಅದು ನಾಗಮಂಗಲದ ಚಿತ್ರ ಎಂದು ಪ್ರತಿಪಾದಿಸಿದ್ದಾರೆ ಎಂದು ಎಫ್‌ಐಆರ್ ಹೇಳುತ್ತದೆ.

ಪೊಲೀಸ್ ಅಧಿಕಾರಿಯೊಬ್ಬರು ಗಣೇಶನ ವಿಗ್ರಹವನ್ನು ತಬ್ಬಿಕೊಂಡಿರುವ ಚಿತ್ರಗಳನ್ನು ಹಂಚಿ, ವಿಗ್ರಹವನ್ನು “ಬಂಧಿಸಲಾಗಿದೆ” ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ನಾಗಮಂಗಲದ “ಘಟನೆಗಳ ಸುಳ್ಳು ನಿರೂಪಣೆಯನ್ನು ಪ್ರಸ್ತುತಪಡಿಸಿ ಸಾಮಾಜಿಕ ಅಶಾಂತಿಯನ್ನು ಪ್ರಚೋದಿಸಲು” ಪೋಸ್ಟ್ ಪ್ರಯತ್ನಿಸಿದೆ ಎಂದು ಪೊಲೀಸ್ ಅಧಿಕಾರಿ ಆರೋಪಿಸಿದ್ದಾರೆ.

ಇದನ್ನೂಓದಿ: ದಿನೇಶ್‌ ಪತ್ನಿ ಮುಸ್ಲಿಂ ಆದ ಮಾತ್ರಕ್ಕೆ ಅವರ ಮನೆಯನ್ನು ಅರ್ಧ ಪಾಕಿಸ್ತಾನ ಎನ್ನಬಹುದೇ? ಯತ್ನಾಳ್‌ಗೆ ಹೈಕೋರ್ಟ್‌ ತರಾಟೆ

ಆರ್ ಅಶೋಕ ಅವರು X ನಲ್ಲಿ ಸಂಬಂಧವಿಲ್ಲದ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ ಎಂಬ ಆರೋಪಿಸಲಾಗಿದೆ. ತಪ್ಪಾದ ವಿಡಯೊ ಹಾಕಿ ನಾಗಮಂಗಲ ಗಣೇಶ ವಿಸರ್ಜನೆಯ ಮೆರವಣಿಗೆಯ ಹಿಂಸಾಚಾರ ಎಂದು ಬಿಂಬಿಸಲಾಗಿದೆ. ಆದರೆ ಈ ದೃಶ್ಯಾವಳಿಗಳು ಸೆಪ್ಟೆಂಬರ್ 11 ರಂದು ಪಟ್ಟಣದಲ್ಲಿ ನಡೆದ ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿಲ್ಲ ಎಂದು ಎಫ್‌ಐಆರ್ ಹೇಳಿದೆ. ಅಶೋಕ ಅವರ ಪೋಸ್ಟ್‌ಗಳು, ಹಿಂಸಾಚಾರದ ಘಟನೆಗಳು ದೊಡ್ಡ ಕೋಮು ಪಿತೂರಿಯ ಭಾಗವಾಗಿದೆ ಎಂದು ಸೂಚಿಸುವ ಮೂಲಕ ಮತ್ತಷ್ಟು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಗುರಿಯನ್ನು ಹೊಂದಿದ್ದವು ಎಂದು ಆರೋಪಿಸಲಾಗಿದೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂಸಾಚಾರದ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರ್‌. ಅಶೋಕ ಹೇಳಿಕೊಂಡಿದ್ದು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೀಡಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಈ ಘಟನೆಗಳ ಹಿಂದೆ ನಿಷೇಧಿತ ಸಂಘಟನೆಗಳ ಕೈವಾಡವಿದ್ದು, ಕೋಮುಗಲಭೆಗೆ ಮತ್ತಷ್ಟು ಉತ್ತೇಜನ ನೀಡುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದರು. ಪ್ರಚೋದನಕಾರಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸೆಪ್ಟೆಂಬರ್ 12 ರ ಬುಧವಾರ ರಾತ್ರಿ ಗಣೇಶ ಚತುರ್ಥಿ ಮೆರವಣಿಗೆ ವೇಳೆ ಮಸೀದಿ ಬಳಿ ಸಾಗುತ್ತಿದ್ದಾಗ ಕೋಮು ಘರ್ಷಣೆ ಸಂಭವಿಸಿದೆ. ಈ ವೇಳೆ ಕಿಡಿಗೇಡಿಗಳು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯು ನಾಗಮಂಗಲ ಟೌನ್ ಬಳಿ ಮೈಸೂರು ರಸ್ತೆ ಬಳಿ ಸಾಗುತ್ತಿದ್ದಾಗ ಘರ್ಷಣೆ ಸಂಭವಿಸಿತ್ತು.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...