Homeಎಲೆಮರೆಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

- Advertisement -
- Advertisement -

ಎಲೆಮರೆ- ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಏಳೆಂಟು ವರ್ಷದಿಂದ ಕೊಟ್ಟೂರಿನಲ್ಲಿ ಸ್ವಯಂ ಆಸಕ್ತಿಯಿಂದ ದಿನಾಲು ಪೌರ ಕಾರ್ಮಿಕರ ಜತೆ ಕಸ ಎತ್ತುವ ಶಿಕ್ಷಕ ನಾಗರಾಜ ಬಗ್ಗೆ ಮಿತ್ರ ಸತೀಶ್ ಪಾಟೀಲ್ ಗಮನ ಸೆಳೆದಾಗ ಅಚ್ಚರಿಯಾಗಿತ್ತು. ಈಚೆಗೆ ಕೊಟ್ಟೂರಲ್ಲಿ ನಾಗರಾಜರನ್ನು ಭೇಟಿ ಮಾಡಿದೆ. ರಸ್ತೆ ಬದಿ ಮಾತನಾಡುತ್ತಾ ನಿಂತಾಗ, ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಪೌರ ಕಾರ್ಮಿಕರು ನಾಗರಾಜರನ್ನು ನೋಡಿ ಮುಖ ಅರಳಿಸಿ `ಮೇಷ್ಟರೇ’ ಎಂದು ಮಾತನಾಡಿಸಿದರು. ನಾಗರಾಜ ಕೂಡ ಅವರಲ್ಲೊಬ್ಬರ ಹಾಗೆ ಆತ್ಮೀಯವಾಗಿ ಮಾತಿಗಿಳಿದರು. ನನ್ನನ್ನು ನಾಗರಾಜ್ ಅವರಿಗೆ ಪರಿಚಯಿಸಿದಾಗ `ಈ ಮೇಷ್ಟ್ರು ನಮಗೆ ಶಕ್ತಿ ಇದ್ದಂಗೆ ಸರ್, ನಮ್ಮ ಕಷ್ಟಕ್ಕೆ ಅಕ್ಕಾರೆ, ನಾವ್ ಬ್ಯಾಡ ಅಂದ್ರೂ ನಮ್ ಜತೆ ಕೆಲಸ ಮಾಡ್ತಾರೆ, ನಮ್ಮನ್ನ ಮನ್ಷಾರು ಅಂತಾನೂ ನೋಡದೆ ಇರೋವಾಗ ಈ ಮೇಷ್ಟ್ರು ನಮಗೆ ಗೌರವಿಸ್ತಾರೆ’ ಎಂದು ನಾಗರಾಜ ಅವರ ಬಗ್ಗೆ ಅಭಿಮಾನದ ಮಾತನ್ನಾಡಿದರು. ಇದನ್ನು ನೋಡುತ್ತಿದ್ದಂತೆ ನಾಗರಾಜ ಹೇಗೆ ಪೌರಕಾರ್ಮಿಕರ ಮನಸ್ಸಲ್ಲಿ ಬೇರೂರಿದ್ದಾರೆ ಅನ್ನಿಸಿತು.

ಕೊಟ್ಟೂರು ಸಮೀಪದ ಬಯಲು ತುಂಬರಗುದ್ದಿಯ ಸರಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ನಾಗರಾಜ್ ಬಂಜಾರ ಮೂಲತಃ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಅಡವಿ ಮಲ್ಲನಕೇರಿ ತಾಂಡಾದ ಮೇಘನಾಯಕ ಮತ್ತು ಲಕ್ಷ್ಮೀಬಾಯಿ ಅವರ ಮಗ. ಅಪ್ಪ ಮೇಘನಾಯಕ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಜವಾನರಾಗಿ ಕೆಲಸ ಮಾಡುತ್ತಲೆ ಕಾಲೇಜನ್ನು ಸ್ವಚ್ಛವಾಗಿಟ್ಟಿದ್ದರು, ಕಾಲೇಜಿನ ಪರಿಸರವನ್ನೂ ಹಸಿರಾಗಿಸಿದ್ದರು. ಮನೆಯಲ್ಲಿ ಸ್ವಚ್ಛತೆಯ ಪಾಠವೂ ನಡೆಯುತ್ತಿತ್ತು. ಅಪ್ಪನ ಮಾತುಗಳಿಗೆ ಅಷ್ಟೇನು ಕಿವಿಗೊಡದ ನಾಗರಾಜ ಪ್ರೌಢಶಾಲೆ ಶಿಕ್ಷಕರಾಗಿ ಕೆಲಸ ಮಾಡಿಕೊಂಡಿದ್ದರು. ತಂದೆ ಅನಾರೋಗ್ಯದಿಂದ ತೀರಿದ ಬಳಿಕ ಮಗನಿಗೆ ಅಪ್ಪನ ಸ್ವಚ್ಛತೆಯ ಅರಿವು ಕಾಡತೊಡಗಿತು. ಅಪ್ಪನ ಆಸೆಯನ್ನು ಆಚರಣೆಗೆ ತರುವ ಮೂಲಕ ಆತನನ್ನು ಗೌರವಿಸಬೇಕು ಎನ್ನುವ ಸಣ್ಣ ಆಲೋಚನೆ ಹೊಳೆಯಿತು.

ಈ ಆಲೋಚನೆ ಮನದೊಳಗೇ ಬೆಳೆದು ಬೆಟ್ಟವಾಯಿತು. ನಾವುಗಳೆ ಗಲೀಜು ಮಾಡುವುದನ್ನು ಪೌರಕಾರ್ಮಿಕರು ಎತ್ತುತ್ತಾರೆ. ಅವರ ಜತೆ ನಾನ್ಯಾಕೆ ಕೈಜೋಡಿಸಬಾರದು ಎನ್ನುವ ಆಲೋಚನೆ ಬಂದಿದೆ. ಹೀಗಾದಲ್ಲಿ ಮನೆಯಲ್ಲಿ ಹೆಂಡತಿ, ತಾಯಿ, ಹೊರಗಡೆ ಸ್ನೇಹಿತರು ಹೇಗೆ ನೋಡಬಹುದು? ಎಂಬ ಆತಂಕವೂ ಕಾಡಿದೆ. 2012 ರ ಒಂದು ದಿನ ಈ ಎಲ್ಲಾ ಭಯ ಆತಂಕ ಮುಜುಗರವನ್ನು ಸರಿಸಿ ಪೌರ ಕಾರ್ಮಿಕರ ಜತೆ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಂಡರು. ಪೌರಕಾರ್ಮಿಕರಿಗೆ ಭಯವಾಯಿತು, `ಸ್ವಾಮಿ ನೀವು ಮೇಷ್ಟ್ರು ನಿಮಗೆ ಸಮಾಜದಲ್ಲಿ ಗೌರವವಿದೆ, ನೀವ್ಯಾಕೆ ನಮ್ಮ ಕೀಳು ಕೆಲಸ ಮಾಡಿ ಮರ್ಯಾದೆ ಕಳಕೊಳ್ತೀರಿ’ ಎಂದರು. ನೋಡಿದ ಜನರು `ಯಾಕೆ ಮೇಷ್ಟ್ರೇ ಸ್ಕೂಲ್ ಬಿಟ್ಟು ಮುನ್ಸಿಪಾಲ್ಟಿಗೆ ಸೇರಿಕೊಂಡ್ರಾ’ ಎಂದು ಗೇಲಿ ಮಾಡಿದರು. `ನೌಕರಿ ಸಿಕ್ಕಾತಿ ಆರಾಮಾಗಿ ಇದ್ಕಂಡೋಗು ಯಾಕ ಹಿಂಗ್ ಮಾಡ್ತೀ’ ಅಂತ ತಾಯಿ ಪ್ರೀತಿಯಿಂದಲೆ ಗದರಿದ್ದರು. ಎದುರು ಹೇಳಲಾರದೆ ಹೆಂಡತಿ ಮುಸಿಮುಸಿ ಕೋಪಗೊಂಡಿದ್ದರು. ಇದೆಲ್ಲಕ್ಕೂ ನಾಗರಾಜ ಕಿವುಡಾಗಿ ತನ್ನ ಕಾರ್ಯವನ್ನು ಮುಂದುವರಿಸಿದರು. ಪೌರಕಾರ್ಮಿಕರೂ ಆಪ್ತರಾದರೂ, ವರ್ಷದಿಂದ ವರ್ಷಕ್ಕೆ ನಾಗರಾಜರ ಚಟುವಟಿಕೆ ಮುಂದುವರಿದಾಗ ಟೀಕೆಗಳೆಲ್ಲಾ ಪ್ರಶಂಸೆಗಳಾಗುವತ್ತ ಸಾಗಿದವು. ಇದೀಗ ಒಂದಿನ ಮನೇಲಿದ್ರೆ ಮಗಳು `ಅಪ್ಪಾ ಯಾಕೆ ಸ್ವಚ್ಛ ಭಾರತಕ್ಕೋಗಿಲ್ಲ’ ಎಂದು ಕೇಳುತ್ತಾಳೆ.

ನಾಗರಾಜ್ ಪೌರಕಾರ್ಮಿಕರ ಜತೆ ಕಸ ಎತ್ತುವುದಷ್ಟಕ್ಕೆ ಸೀಮಿತವಾಗಲಿಲ್ಲ, ನಿಧಾನಕ್ಕೆ ಪೌರ ಕಾರ್ಮಿಕರ ಸಮಸ್ಯೆಗಳಿಗೆ ನೆರವಾಗತೊಡಗಿದರು. ಸಂಘಸಂಸ್ಥೆಗಳಿಂದಲೂ ಅವರಿಗೆ ಸಹಾಯ ಸಿಗುವಂತೆಯೂ, ಅವರ ಕಾರ್ಯಕ್ರಮಗಳಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸುವಂತೆಯೂ ಮಾಡಿದರು. ಹೀಗೆ ನಿರಂತರ ಒಡನಾಟದಿಂದ ಪೌರ ಕಾರ್ಮಿಕರಲ್ಲಿ ಕೆಲವು ಬದಲಾವಣೆ ತರುವಲ್ಲಿಯೂ ಯಶಸ್ವಿಯಾದರು.

ಮೊದಮೊದಲು ಆರೋಗ್ಯದ ಬಗ್ಗೆ ಅಷ್ಟೇನು ಕಾಳಜಿ ಇಲ್ಲದವರು ಈಗೀಗ ಕಾಳಜಿ ವಹಿಸತೊಡಗಿದ್ದಾರೆ. ಜನರು ಮೊದಲು ಪೌರಕಾರ್ಮಿಕರನ್ನು ಹೆಸರಿಡಿದು ಕರೆಯುತ್ತಿರಲಿಲ್ಲ. ಈಗ ಅವರನ್ನು ಹೆಸರಿಡಿದು ಮಾತಾಡಿಸುವ ಮಟ್ಟಿಗೆ, ಅವರು ಮಾಡಿದ ಕೆಲಸ ನೋಡಿ ಥ್ಯಾಂಕ್ಸ್ ಹೇಳುವ ಮಟ್ಟಿಗೆ ಜನರಲ್ಲಿ ಬದಲಾವಣೆ ಬಂದಿದೆ. ಮುಖ್ಯವಾಗಿ ಪೌರಕಾರ್ಮಿಕರನ್ನು ಸಂಘಟಿಸುವ, ಅವರ ಹಕ್ಕುಗಳಿಗಾಗಿ ಹೋರಾಟ ಮಾಡುವ, ಅವರಿಗಾಗುವ ಅನ್ಯಾಯಗಳ ವಿರುದ್ಧ ಪ್ರತಿಭಟಿಸುವ ಬಗೆಗೆ ನಾಗರಾಜ್ ಪೌರಕಾರ್ಮಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ.

`ಬೀದಿನಾಟಕದ ತಂಡ ಮಾಡ್ಕೊಂಡು ಪ್ರತೀ ಗ್ರಾಮಪಂಚಾಯ್ತಿಯಲ್ಲಿ ಬೀದಿ ನಾಟಕ ಮಾಡ್ತಿದ್ವಿ. ಮುಂದೆ ಪೌರ ಕಾರ್ಮಿಕರ ಕಲ್ಯಾಣ ನಿಧಿ ಅಂತ ಮಾಡಿ, ಹೊರಗಿನವರಿಗಿಂತ ಪೌರ ಕಾರ್ಮಿಕರನ್ನೇ ತರಬೇತಿಗೊಳಿಸಿ ಬೀದಿ ನಾಟಕ ಮಾಡಿಸಬೇಕು ಅಂತ ಪ್ಲಾನ್ ಇದೆ ಸರ್’ ಎಂದು ಮುಂದಿನ ಚಟುವಟಿಕೆ ಬಗ್ಗೆ ನಾಗರಾಜ್ ಹೇಳುತ್ತಾರೆ. ದೇಹದ ಆರೋಗ್ಯ ಕಾಪಾಡುವ ಡಾಕ್ಟರ್ ಹತ್ರ ಹೋದಾಗ ನಮಗೆ ಎಷ್ಟೇ ಸುಸ್ತಾಗಿರಲಿ ಎದ್ದು ಅವರಿಗೆ ಗೌರವಿಸುತ್ತೇವೆ. ಹಾಗೆ ನಮ್ಮ ಸುತ್ತಮುತ್ತಣ ಪರಿಸರದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ಬಂದಾಗಲೂ ಎದ್ದು ಅವರಿಗೆ ಗೌರವ ತೋರಿಸಬೇಕು. ಡಾಕ್ಟರ್ ರೋಗ ಬಂದಾಗ ವಾಸಿ ಮಾಡ್ತಾರೆ, ಪೌರ ಕಾರ್ಮಿಕರು ರೋಗ ಬರದಂತೆ ಪರಿಸರವನ್ನ ಸ್ವಚ್ಛ ಮಾಡ್ತಾರೆ, ಹಾಗಾಗಿ ಅವರನ್ನು ಪರಿಸರದ ಡಾಕ್ಟರ್ ಎಂದು ಗೌರವಿಸಬೇಕು ಎನ್ನುವುದು ನಾಗರಾಜರ ತಿಳಿವು.

ಹಿಂದೆ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ಅವರು ನಾಗರಾಜ್ ಅವರ ಕೆಲಸಗಳನ್ನು ಗಮನಿಸಿ ಜಾಗೃತಿ ಮೂಡಿಸಲು ಒಂದು ಸೈಕಲ್ ಕೊಡಿಸಿದ್ದರು. ಅದನ್ನು `ಜಾಗೃತಿ ವಾಹನ’ದ ಹಾಗೆ ಬಳಸುತ್ತಿದ್ದಾರೆ. ಶಾಲಾಮಕ್ಕಳಿಂದ ಹಳ್ಳಿಗಳಲ್ಲಿ ಪರಿಸರ ಜಾಗೃತಿಯ ಬೀದಿ ನಾಟಕ ಮಾಡಿಸಿದ್ದಾರೆ. ಬಿಡುವಿದ್ದಾಗ ಶನಿವಾರ ಭಾನುವಾರ ಹಳ್ಳಿಗಳಿಗೆ ಹೋಗಿ ಹಾಡು ಕತೆ ನಾಟಕಗಳ ಮೂಲಕ ಪರಿಸರದ ಜಾಗೃತಿ ಮೂಡಿಸುತ್ತಿದ್ದಾರೆ.

ನಿಧಾನವಾಗಿ ನನ್ನ ಜತೆ ಕೆಲಸ ಮಾಡೋಕು ಒಂದಷ್ಟು ಜನ ಆಸಕ್ತಿ ತೋರಿದರು. ಇಂಥವರೆಲ್ಲಾ ಸೇರಿ 34 ಜನರ `ಹಸಿರು ಹೊನಲು’ ತಂಡ ರಚನೆಯಾಗಿದೆ. ಈ ತಂಡದಿಂದ ಹತ್ತು ಪಾರ್ಕುಗಳನ್ನು ದತ್ತು ತೆಗೆದುಕೊಳ್ಳಲಾಗಿದೆ. ಗಿಡ ನೆಡುವ ಜತೆ, ಆಯಾ ಗಿಡಗಳನ್ನು ಬೆಳೆಸಲು ಒಂದು ಗಿಡಕ್ಕೆ ಇಬ್ಬರಂತೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. 2016 ರಲ್ಲಿ ನೇಕಾರ ಕಾಲನಿಯಲ್ಲಿ ಜಾಲಿಮರಗಳಿದ್ದ ಪಾರ್ಕನ್ನು ಈಗ ಉದ್ಯಾನವನ ಮಾಡಿದ್ದೀವಿ. ಇದೀಗ 70 ಮರಗಳು, 30 ಆಯುರ್ವೇದಿಕ್ ಸಸ್ಯಗಳಿವೆ. ಇದೀಗ ಅದು ಔಷಧೀಯ ಉದ್ಯಾನವನ. ಪ್ರತಿ ತಿಂಗಳೂ ಒಂದೊಂದು ಕಷಾಯ ಕೊಡ್ತೀವಿ’ ಎಂದು ನಾಗರಾಜ ಈಚಿನ ಚಟುವಟಿಕೆಯ ಬಗ್ಗೆ ವಿವರಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...