Homeಎಲೆಮರೆಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

- Advertisement -
- Advertisement -

ಎಲೆಮರೆ- ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಏಳೆಂಟು ವರ್ಷದಿಂದ ಕೊಟ್ಟೂರಿನಲ್ಲಿ ಸ್ವಯಂ ಆಸಕ್ತಿಯಿಂದ ದಿನಾಲು ಪೌರ ಕಾರ್ಮಿಕರ ಜತೆ ಕಸ ಎತ್ತುವ ಶಿಕ್ಷಕ ನಾಗರಾಜ ಬಗ್ಗೆ ಮಿತ್ರ ಸತೀಶ್ ಪಾಟೀಲ್ ಗಮನ ಸೆಳೆದಾಗ ಅಚ್ಚರಿಯಾಗಿತ್ತು. ಈಚೆಗೆ ಕೊಟ್ಟೂರಲ್ಲಿ ನಾಗರಾಜರನ್ನು ಭೇಟಿ ಮಾಡಿದೆ. ರಸ್ತೆ ಬದಿ ಮಾತನಾಡುತ್ತಾ ನಿಂತಾಗ, ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಪೌರ ಕಾರ್ಮಿಕರು ನಾಗರಾಜರನ್ನು ನೋಡಿ ಮುಖ ಅರಳಿಸಿ `ಮೇಷ್ಟರೇ’ ಎಂದು ಮಾತನಾಡಿಸಿದರು. ನಾಗರಾಜ ಕೂಡ ಅವರಲ್ಲೊಬ್ಬರ ಹಾಗೆ ಆತ್ಮೀಯವಾಗಿ ಮಾತಿಗಿಳಿದರು. ನನ್ನನ್ನು ನಾಗರಾಜ್ ಅವರಿಗೆ ಪರಿಚಯಿಸಿದಾಗ `ಈ ಮೇಷ್ಟ್ರು ನಮಗೆ ಶಕ್ತಿ ಇದ್ದಂಗೆ ಸರ್, ನಮ್ಮ ಕಷ್ಟಕ್ಕೆ ಅಕ್ಕಾರೆ, ನಾವ್ ಬ್ಯಾಡ ಅಂದ್ರೂ ನಮ್ ಜತೆ ಕೆಲಸ ಮಾಡ್ತಾರೆ, ನಮ್ಮನ್ನ ಮನ್ಷಾರು ಅಂತಾನೂ ನೋಡದೆ ಇರೋವಾಗ ಈ ಮೇಷ್ಟ್ರು ನಮಗೆ ಗೌರವಿಸ್ತಾರೆ’ ಎಂದು ನಾಗರಾಜ ಅವರ ಬಗ್ಗೆ ಅಭಿಮಾನದ ಮಾತನ್ನಾಡಿದರು. ಇದನ್ನು ನೋಡುತ್ತಿದ್ದಂತೆ ನಾಗರಾಜ ಹೇಗೆ ಪೌರಕಾರ್ಮಿಕರ ಮನಸ್ಸಲ್ಲಿ ಬೇರೂರಿದ್ದಾರೆ ಅನ್ನಿಸಿತು.

ಕೊಟ್ಟೂರು ಸಮೀಪದ ಬಯಲು ತುಂಬರಗುದ್ದಿಯ ಸರಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ನಾಗರಾಜ್ ಬಂಜಾರ ಮೂಲತಃ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಅಡವಿ ಮಲ್ಲನಕೇರಿ ತಾಂಡಾದ ಮೇಘನಾಯಕ ಮತ್ತು ಲಕ್ಷ್ಮೀಬಾಯಿ ಅವರ ಮಗ. ಅಪ್ಪ ಮೇಘನಾಯಕ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಜವಾನರಾಗಿ ಕೆಲಸ ಮಾಡುತ್ತಲೆ ಕಾಲೇಜನ್ನು ಸ್ವಚ್ಛವಾಗಿಟ್ಟಿದ್ದರು, ಕಾಲೇಜಿನ ಪರಿಸರವನ್ನೂ ಹಸಿರಾಗಿಸಿದ್ದರು. ಮನೆಯಲ್ಲಿ ಸ್ವಚ್ಛತೆಯ ಪಾಠವೂ ನಡೆಯುತ್ತಿತ್ತು. ಅಪ್ಪನ ಮಾತುಗಳಿಗೆ ಅಷ್ಟೇನು ಕಿವಿಗೊಡದ ನಾಗರಾಜ ಪ್ರೌಢಶಾಲೆ ಶಿಕ್ಷಕರಾಗಿ ಕೆಲಸ ಮಾಡಿಕೊಂಡಿದ್ದರು. ತಂದೆ ಅನಾರೋಗ್ಯದಿಂದ ತೀರಿದ ಬಳಿಕ ಮಗನಿಗೆ ಅಪ್ಪನ ಸ್ವಚ್ಛತೆಯ ಅರಿವು ಕಾಡತೊಡಗಿತು. ಅಪ್ಪನ ಆಸೆಯನ್ನು ಆಚರಣೆಗೆ ತರುವ ಮೂಲಕ ಆತನನ್ನು ಗೌರವಿಸಬೇಕು ಎನ್ನುವ ಸಣ್ಣ ಆಲೋಚನೆ ಹೊಳೆಯಿತು.

ಈ ಆಲೋಚನೆ ಮನದೊಳಗೇ ಬೆಳೆದು ಬೆಟ್ಟವಾಯಿತು. ನಾವುಗಳೆ ಗಲೀಜು ಮಾಡುವುದನ್ನು ಪೌರಕಾರ್ಮಿಕರು ಎತ್ತುತ್ತಾರೆ. ಅವರ ಜತೆ ನಾನ್ಯಾಕೆ ಕೈಜೋಡಿಸಬಾರದು ಎನ್ನುವ ಆಲೋಚನೆ ಬಂದಿದೆ. ಹೀಗಾದಲ್ಲಿ ಮನೆಯಲ್ಲಿ ಹೆಂಡತಿ, ತಾಯಿ, ಹೊರಗಡೆ ಸ್ನೇಹಿತರು ಹೇಗೆ ನೋಡಬಹುದು? ಎಂಬ ಆತಂಕವೂ ಕಾಡಿದೆ. 2012 ರ ಒಂದು ದಿನ ಈ ಎಲ್ಲಾ ಭಯ ಆತಂಕ ಮುಜುಗರವನ್ನು ಸರಿಸಿ ಪೌರ ಕಾರ್ಮಿಕರ ಜತೆ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಂಡರು. ಪೌರಕಾರ್ಮಿಕರಿಗೆ ಭಯವಾಯಿತು, `ಸ್ವಾಮಿ ನೀವು ಮೇಷ್ಟ್ರು ನಿಮಗೆ ಸಮಾಜದಲ್ಲಿ ಗೌರವವಿದೆ, ನೀವ್ಯಾಕೆ ನಮ್ಮ ಕೀಳು ಕೆಲಸ ಮಾಡಿ ಮರ್ಯಾದೆ ಕಳಕೊಳ್ತೀರಿ’ ಎಂದರು. ನೋಡಿದ ಜನರು `ಯಾಕೆ ಮೇಷ್ಟ್ರೇ ಸ್ಕೂಲ್ ಬಿಟ್ಟು ಮುನ್ಸಿಪಾಲ್ಟಿಗೆ ಸೇರಿಕೊಂಡ್ರಾ’ ಎಂದು ಗೇಲಿ ಮಾಡಿದರು. `ನೌಕರಿ ಸಿಕ್ಕಾತಿ ಆರಾಮಾಗಿ ಇದ್ಕಂಡೋಗು ಯಾಕ ಹಿಂಗ್ ಮಾಡ್ತೀ’ ಅಂತ ತಾಯಿ ಪ್ರೀತಿಯಿಂದಲೆ ಗದರಿದ್ದರು. ಎದುರು ಹೇಳಲಾರದೆ ಹೆಂಡತಿ ಮುಸಿಮುಸಿ ಕೋಪಗೊಂಡಿದ್ದರು. ಇದೆಲ್ಲಕ್ಕೂ ನಾಗರಾಜ ಕಿವುಡಾಗಿ ತನ್ನ ಕಾರ್ಯವನ್ನು ಮುಂದುವರಿಸಿದರು. ಪೌರಕಾರ್ಮಿಕರೂ ಆಪ್ತರಾದರೂ, ವರ್ಷದಿಂದ ವರ್ಷಕ್ಕೆ ನಾಗರಾಜರ ಚಟುವಟಿಕೆ ಮುಂದುವರಿದಾಗ ಟೀಕೆಗಳೆಲ್ಲಾ ಪ್ರಶಂಸೆಗಳಾಗುವತ್ತ ಸಾಗಿದವು. ಇದೀಗ ಒಂದಿನ ಮನೇಲಿದ್ರೆ ಮಗಳು `ಅಪ್ಪಾ ಯಾಕೆ ಸ್ವಚ್ಛ ಭಾರತಕ್ಕೋಗಿಲ್ಲ’ ಎಂದು ಕೇಳುತ್ತಾಳೆ.

ನಾಗರಾಜ್ ಪೌರಕಾರ್ಮಿಕರ ಜತೆ ಕಸ ಎತ್ತುವುದಷ್ಟಕ್ಕೆ ಸೀಮಿತವಾಗಲಿಲ್ಲ, ನಿಧಾನಕ್ಕೆ ಪೌರ ಕಾರ್ಮಿಕರ ಸಮಸ್ಯೆಗಳಿಗೆ ನೆರವಾಗತೊಡಗಿದರು. ಸಂಘಸಂಸ್ಥೆಗಳಿಂದಲೂ ಅವರಿಗೆ ಸಹಾಯ ಸಿಗುವಂತೆಯೂ, ಅವರ ಕಾರ್ಯಕ್ರಮಗಳಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸುವಂತೆಯೂ ಮಾಡಿದರು. ಹೀಗೆ ನಿರಂತರ ಒಡನಾಟದಿಂದ ಪೌರ ಕಾರ್ಮಿಕರಲ್ಲಿ ಕೆಲವು ಬದಲಾವಣೆ ತರುವಲ್ಲಿಯೂ ಯಶಸ್ವಿಯಾದರು.

ಮೊದಮೊದಲು ಆರೋಗ್ಯದ ಬಗ್ಗೆ ಅಷ್ಟೇನು ಕಾಳಜಿ ಇಲ್ಲದವರು ಈಗೀಗ ಕಾಳಜಿ ವಹಿಸತೊಡಗಿದ್ದಾರೆ. ಜನರು ಮೊದಲು ಪೌರಕಾರ್ಮಿಕರನ್ನು ಹೆಸರಿಡಿದು ಕರೆಯುತ್ತಿರಲಿಲ್ಲ. ಈಗ ಅವರನ್ನು ಹೆಸರಿಡಿದು ಮಾತಾಡಿಸುವ ಮಟ್ಟಿಗೆ, ಅವರು ಮಾಡಿದ ಕೆಲಸ ನೋಡಿ ಥ್ಯಾಂಕ್ಸ್ ಹೇಳುವ ಮಟ್ಟಿಗೆ ಜನರಲ್ಲಿ ಬದಲಾವಣೆ ಬಂದಿದೆ. ಮುಖ್ಯವಾಗಿ ಪೌರಕಾರ್ಮಿಕರನ್ನು ಸಂಘಟಿಸುವ, ಅವರ ಹಕ್ಕುಗಳಿಗಾಗಿ ಹೋರಾಟ ಮಾಡುವ, ಅವರಿಗಾಗುವ ಅನ್ಯಾಯಗಳ ವಿರುದ್ಧ ಪ್ರತಿಭಟಿಸುವ ಬಗೆಗೆ ನಾಗರಾಜ್ ಪೌರಕಾರ್ಮಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ.

`ಬೀದಿನಾಟಕದ ತಂಡ ಮಾಡ್ಕೊಂಡು ಪ್ರತೀ ಗ್ರಾಮಪಂಚಾಯ್ತಿಯಲ್ಲಿ ಬೀದಿ ನಾಟಕ ಮಾಡ್ತಿದ್ವಿ. ಮುಂದೆ ಪೌರ ಕಾರ್ಮಿಕರ ಕಲ್ಯಾಣ ನಿಧಿ ಅಂತ ಮಾಡಿ, ಹೊರಗಿನವರಿಗಿಂತ ಪೌರ ಕಾರ್ಮಿಕರನ್ನೇ ತರಬೇತಿಗೊಳಿಸಿ ಬೀದಿ ನಾಟಕ ಮಾಡಿಸಬೇಕು ಅಂತ ಪ್ಲಾನ್ ಇದೆ ಸರ್’ ಎಂದು ಮುಂದಿನ ಚಟುವಟಿಕೆ ಬಗ್ಗೆ ನಾಗರಾಜ್ ಹೇಳುತ್ತಾರೆ. ದೇಹದ ಆರೋಗ್ಯ ಕಾಪಾಡುವ ಡಾಕ್ಟರ್ ಹತ್ರ ಹೋದಾಗ ನಮಗೆ ಎಷ್ಟೇ ಸುಸ್ತಾಗಿರಲಿ ಎದ್ದು ಅವರಿಗೆ ಗೌರವಿಸುತ್ತೇವೆ. ಹಾಗೆ ನಮ್ಮ ಸುತ್ತಮುತ್ತಣ ಪರಿಸರದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ಬಂದಾಗಲೂ ಎದ್ದು ಅವರಿಗೆ ಗೌರವ ತೋರಿಸಬೇಕು. ಡಾಕ್ಟರ್ ರೋಗ ಬಂದಾಗ ವಾಸಿ ಮಾಡ್ತಾರೆ, ಪೌರ ಕಾರ್ಮಿಕರು ರೋಗ ಬರದಂತೆ ಪರಿಸರವನ್ನ ಸ್ವಚ್ಛ ಮಾಡ್ತಾರೆ, ಹಾಗಾಗಿ ಅವರನ್ನು ಪರಿಸರದ ಡಾಕ್ಟರ್ ಎಂದು ಗೌರವಿಸಬೇಕು ಎನ್ನುವುದು ನಾಗರಾಜರ ತಿಳಿವು.

ಹಿಂದೆ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ಅವರು ನಾಗರಾಜ್ ಅವರ ಕೆಲಸಗಳನ್ನು ಗಮನಿಸಿ ಜಾಗೃತಿ ಮೂಡಿಸಲು ಒಂದು ಸೈಕಲ್ ಕೊಡಿಸಿದ್ದರು. ಅದನ್ನು `ಜಾಗೃತಿ ವಾಹನ’ದ ಹಾಗೆ ಬಳಸುತ್ತಿದ್ದಾರೆ. ಶಾಲಾಮಕ್ಕಳಿಂದ ಹಳ್ಳಿಗಳಲ್ಲಿ ಪರಿಸರ ಜಾಗೃತಿಯ ಬೀದಿ ನಾಟಕ ಮಾಡಿಸಿದ್ದಾರೆ. ಬಿಡುವಿದ್ದಾಗ ಶನಿವಾರ ಭಾನುವಾರ ಹಳ್ಳಿಗಳಿಗೆ ಹೋಗಿ ಹಾಡು ಕತೆ ನಾಟಕಗಳ ಮೂಲಕ ಪರಿಸರದ ಜಾಗೃತಿ ಮೂಡಿಸುತ್ತಿದ್ದಾರೆ.

ನಿಧಾನವಾಗಿ ನನ್ನ ಜತೆ ಕೆಲಸ ಮಾಡೋಕು ಒಂದಷ್ಟು ಜನ ಆಸಕ್ತಿ ತೋರಿದರು. ಇಂಥವರೆಲ್ಲಾ ಸೇರಿ 34 ಜನರ `ಹಸಿರು ಹೊನಲು’ ತಂಡ ರಚನೆಯಾಗಿದೆ. ಈ ತಂಡದಿಂದ ಹತ್ತು ಪಾರ್ಕುಗಳನ್ನು ದತ್ತು ತೆಗೆದುಕೊಳ್ಳಲಾಗಿದೆ. ಗಿಡ ನೆಡುವ ಜತೆ, ಆಯಾ ಗಿಡಗಳನ್ನು ಬೆಳೆಸಲು ಒಂದು ಗಿಡಕ್ಕೆ ಇಬ್ಬರಂತೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. 2016 ರಲ್ಲಿ ನೇಕಾರ ಕಾಲನಿಯಲ್ಲಿ ಜಾಲಿಮರಗಳಿದ್ದ ಪಾರ್ಕನ್ನು ಈಗ ಉದ್ಯಾನವನ ಮಾಡಿದ್ದೀವಿ. ಇದೀಗ 70 ಮರಗಳು, 30 ಆಯುರ್ವೇದಿಕ್ ಸಸ್ಯಗಳಿವೆ. ಇದೀಗ ಅದು ಔಷಧೀಯ ಉದ್ಯಾನವನ. ಪ್ರತಿ ತಿಂಗಳೂ ಒಂದೊಂದು ಕಷಾಯ ಕೊಡ್ತೀವಿ’ ಎಂದು ನಾಗರಾಜ ಈಚಿನ ಚಟುವಟಿಕೆಯ ಬಗ್ಗೆ ವಿವರಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...