Homeಎಲೆಮರೆಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

- Advertisement -
- Advertisement -

ಎಲೆಮರೆ- ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಏಳೆಂಟು ವರ್ಷದಿಂದ ಕೊಟ್ಟೂರಿನಲ್ಲಿ ಸ್ವಯಂ ಆಸಕ್ತಿಯಿಂದ ದಿನಾಲು ಪೌರ ಕಾರ್ಮಿಕರ ಜತೆ ಕಸ ಎತ್ತುವ ಶಿಕ್ಷಕ ನಾಗರಾಜ ಬಗ್ಗೆ ಮಿತ್ರ ಸತೀಶ್ ಪಾಟೀಲ್ ಗಮನ ಸೆಳೆದಾಗ ಅಚ್ಚರಿಯಾಗಿತ್ತು. ಈಚೆಗೆ ಕೊಟ್ಟೂರಲ್ಲಿ ನಾಗರಾಜರನ್ನು ಭೇಟಿ ಮಾಡಿದೆ. ರಸ್ತೆ ಬದಿ ಮಾತನಾಡುತ್ತಾ ನಿಂತಾಗ, ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಪೌರ ಕಾರ್ಮಿಕರು ನಾಗರಾಜರನ್ನು ನೋಡಿ ಮುಖ ಅರಳಿಸಿ `ಮೇಷ್ಟರೇ’ ಎಂದು ಮಾತನಾಡಿಸಿದರು. ನಾಗರಾಜ ಕೂಡ ಅವರಲ್ಲೊಬ್ಬರ ಹಾಗೆ ಆತ್ಮೀಯವಾಗಿ ಮಾತಿಗಿಳಿದರು. ನನ್ನನ್ನು ನಾಗರಾಜ್ ಅವರಿಗೆ ಪರಿಚಯಿಸಿದಾಗ `ಈ ಮೇಷ್ಟ್ರು ನಮಗೆ ಶಕ್ತಿ ಇದ್ದಂಗೆ ಸರ್, ನಮ್ಮ ಕಷ್ಟಕ್ಕೆ ಅಕ್ಕಾರೆ, ನಾವ್ ಬ್ಯಾಡ ಅಂದ್ರೂ ನಮ್ ಜತೆ ಕೆಲಸ ಮಾಡ್ತಾರೆ, ನಮ್ಮನ್ನ ಮನ್ಷಾರು ಅಂತಾನೂ ನೋಡದೆ ಇರೋವಾಗ ಈ ಮೇಷ್ಟ್ರು ನಮಗೆ ಗೌರವಿಸ್ತಾರೆ’ ಎಂದು ನಾಗರಾಜ ಅವರ ಬಗ್ಗೆ ಅಭಿಮಾನದ ಮಾತನ್ನಾಡಿದರು. ಇದನ್ನು ನೋಡುತ್ತಿದ್ದಂತೆ ನಾಗರಾಜ ಹೇಗೆ ಪೌರಕಾರ್ಮಿಕರ ಮನಸ್ಸಲ್ಲಿ ಬೇರೂರಿದ್ದಾರೆ ಅನ್ನಿಸಿತು.

ಕೊಟ್ಟೂರು ಸಮೀಪದ ಬಯಲು ತುಂಬರಗುದ್ದಿಯ ಸರಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ನಾಗರಾಜ್ ಬಂಜಾರ ಮೂಲತಃ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಅಡವಿ ಮಲ್ಲನಕೇರಿ ತಾಂಡಾದ ಮೇಘನಾಯಕ ಮತ್ತು ಲಕ್ಷ್ಮೀಬಾಯಿ ಅವರ ಮಗ. ಅಪ್ಪ ಮೇಘನಾಯಕ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಜವಾನರಾಗಿ ಕೆಲಸ ಮಾಡುತ್ತಲೆ ಕಾಲೇಜನ್ನು ಸ್ವಚ್ಛವಾಗಿಟ್ಟಿದ್ದರು, ಕಾಲೇಜಿನ ಪರಿಸರವನ್ನೂ ಹಸಿರಾಗಿಸಿದ್ದರು. ಮನೆಯಲ್ಲಿ ಸ್ವಚ್ಛತೆಯ ಪಾಠವೂ ನಡೆಯುತ್ತಿತ್ತು. ಅಪ್ಪನ ಮಾತುಗಳಿಗೆ ಅಷ್ಟೇನು ಕಿವಿಗೊಡದ ನಾಗರಾಜ ಪ್ರೌಢಶಾಲೆ ಶಿಕ್ಷಕರಾಗಿ ಕೆಲಸ ಮಾಡಿಕೊಂಡಿದ್ದರು. ತಂದೆ ಅನಾರೋಗ್ಯದಿಂದ ತೀರಿದ ಬಳಿಕ ಮಗನಿಗೆ ಅಪ್ಪನ ಸ್ವಚ್ಛತೆಯ ಅರಿವು ಕಾಡತೊಡಗಿತು. ಅಪ್ಪನ ಆಸೆಯನ್ನು ಆಚರಣೆಗೆ ತರುವ ಮೂಲಕ ಆತನನ್ನು ಗೌರವಿಸಬೇಕು ಎನ್ನುವ ಸಣ್ಣ ಆಲೋಚನೆ ಹೊಳೆಯಿತು.

ಈ ಆಲೋಚನೆ ಮನದೊಳಗೇ ಬೆಳೆದು ಬೆಟ್ಟವಾಯಿತು. ನಾವುಗಳೆ ಗಲೀಜು ಮಾಡುವುದನ್ನು ಪೌರಕಾರ್ಮಿಕರು ಎತ್ತುತ್ತಾರೆ. ಅವರ ಜತೆ ನಾನ್ಯಾಕೆ ಕೈಜೋಡಿಸಬಾರದು ಎನ್ನುವ ಆಲೋಚನೆ ಬಂದಿದೆ. ಹೀಗಾದಲ್ಲಿ ಮನೆಯಲ್ಲಿ ಹೆಂಡತಿ, ತಾಯಿ, ಹೊರಗಡೆ ಸ್ನೇಹಿತರು ಹೇಗೆ ನೋಡಬಹುದು? ಎಂಬ ಆತಂಕವೂ ಕಾಡಿದೆ. 2012 ರ ಒಂದು ದಿನ ಈ ಎಲ್ಲಾ ಭಯ ಆತಂಕ ಮುಜುಗರವನ್ನು ಸರಿಸಿ ಪೌರ ಕಾರ್ಮಿಕರ ಜತೆ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಂಡರು. ಪೌರಕಾರ್ಮಿಕರಿಗೆ ಭಯವಾಯಿತು, `ಸ್ವಾಮಿ ನೀವು ಮೇಷ್ಟ್ರು ನಿಮಗೆ ಸಮಾಜದಲ್ಲಿ ಗೌರವವಿದೆ, ನೀವ್ಯಾಕೆ ನಮ್ಮ ಕೀಳು ಕೆಲಸ ಮಾಡಿ ಮರ್ಯಾದೆ ಕಳಕೊಳ್ತೀರಿ’ ಎಂದರು. ನೋಡಿದ ಜನರು `ಯಾಕೆ ಮೇಷ್ಟ್ರೇ ಸ್ಕೂಲ್ ಬಿಟ್ಟು ಮುನ್ಸಿಪಾಲ್ಟಿಗೆ ಸೇರಿಕೊಂಡ್ರಾ’ ಎಂದು ಗೇಲಿ ಮಾಡಿದರು. `ನೌಕರಿ ಸಿಕ್ಕಾತಿ ಆರಾಮಾಗಿ ಇದ್ಕಂಡೋಗು ಯಾಕ ಹಿಂಗ್ ಮಾಡ್ತೀ’ ಅಂತ ತಾಯಿ ಪ್ರೀತಿಯಿಂದಲೆ ಗದರಿದ್ದರು. ಎದುರು ಹೇಳಲಾರದೆ ಹೆಂಡತಿ ಮುಸಿಮುಸಿ ಕೋಪಗೊಂಡಿದ್ದರು. ಇದೆಲ್ಲಕ್ಕೂ ನಾಗರಾಜ ಕಿವುಡಾಗಿ ತನ್ನ ಕಾರ್ಯವನ್ನು ಮುಂದುವರಿಸಿದರು. ಪೌರಕಾರ್ಮಿಕರೂ ಆಪ್ತರಾದರೂ, ವರ್ಷದಿಂದ ವರ್ಷಕ್ಕೆ ನಾಗರಾಜರ ಚಟುವಟಿಕೆ ಮುಂದುವರಿದಾಗ ಟೀಕೆಗಳೆಲ್ಲಾ ಪ್ರಶಂಸೆಗಳಾಗುವತ್ತ ಸಾಗಿದವು. ಇದೀಗ ಒಂದಿನ ಮನೇಲಿದ್ರೆ ಮಗಳು `ಅಪ್ಪಾ ಯಾಕೆ ಸ್ವಚ್ಛ ಭಾರತಕ್ಕೋಗಿಲ್ಲ’ ಎಂದು ಕೇಳುತ್ತಾಳೆ.

ನಾಗರಾಜ್ ಪೌರಕಾರ್ಮಿಕರ ಜತೆ ಕಸ ಎತ್ತುವುದಷ್ಟಕ್ಕೆ ಸೀಮಿತವಾಗಲಿಲ್ಲ, ನಿಧಾನಕ್ಕೆ ಪೌರ ಕಾರ್ಮಿಕರ ಸಮಸ್ಯೆಗಳಿಗೆ ನೆರವಾಗತೊಡಗಿದರು. ಸಂಘಸಂಸ್ಥೆಗಳಿಂದಲೂ ಅವರಿಗೆ ಸಹಾಯ ಸಿಗುವಂತೆಯೂ, ಅವರ ಕಾರ್ಯಕ್ರಮಗಳಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸುವಂತೆಯೂ ಮಾಡಿದರು. ಹೀಗೆ ನಿರಂತರ ಒಡನಾಟದಿಂದ ಪೌರ ಕಾರ್ಮಿಕರಲ್ಲಿ ಕೆಲವು ಬದಲಾವಣೆ ತರುವಲ್ಲಿಯೂ ಯಶಸ್ವಿಯಾದರು.

ಮೊದಮೊದಲು ಆರೋಗ್ಯದ ಬಗ್ಗೆ ಅಷ್ಟೇನು ಕಾಳಜಿ ಇಲ್ಲದವರು ಈಗೀಗ ಕಾಳಜಿ ವಹಿಸತೊಡಗಿದ್ದಾರೆ. ಜನರು ಮೊದಲು ಪೌರಕಾರ್ಮಿಕರನ್ನು ಹೆಸರಿಡಿದು ಕರೆಯುತ್ತಿರಲಿಲ್ಲ. ಈಗ ಅವರನ್ನು ಹೆಸರಿಡಿದು ಮಾತಾಡಿಸುವ ಮಟ್ಟಿಗೆ, ಅವರು ಮಾಡಿದ ಕೆಲಸ ನೋಡಿ ಥ್ಯಾಂಕ್ಸ್ ಹೇಳುವ ಮಟ್ಟಿಗೆ ಜನರಲ್ಲಿ ಬದಲಾವಣೆ ಬಂದಿದೆ. ಮುಖ್ಯವಾಗಿ ಪೌರಕಾರ್ಮಿಕರನ್ನು ಸಂಘಟಿಸುವ, ಅವರ ಹಕ್ಕುಗಳಿಗಾಗಿ ಹೋರಾಟ ಮಾಡುವ, ಅವರಿಗಾಗುವ ಅನ್ಯಾಯಗಳ ವಿರುದ್ಧ ಪ್ರತಿಭಟಿಸುವ ಬಗೆಗೆ ನಾಗರಾಜ್ ಪೌರಕಾರ್ಮಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ.

`ಬೀದಿನಾಟಕದ ತಂಡ ಮಾಡ್ಕೊಂಡು ಪ್ರತೀ ಗ್ರಾಮಪಂಚಾಯ್ತಿಯಲ್ಲಿ ಬೀದಿ ನಾಟಕ ಮಾಡ್ತಿದ್ವಿ. ಮುಂದೆ ಪೌರ ಕಾರ್ಮಿಕರ ಕಲ್ಯಾಣ ನಿಧಿ ಅಂತ ಮಾಡಿ, ಹೊರಗಿನವರಿಗಿಂತ ಪೌರ ಕಾರ್ಮಿಕರನ್ನೇ ತರಬೇತಿಗೊಳಿಸಿ ಬೀದಿ ನಾಟಕ ಮಾಡಿಸಬೇಕು ಅಂತ ಪ್ಲಾನ್ ಇದೆ ಸರ್’ ಎಂದು ಮುಂದಿನ ಚಟುವಟಿಕೆ ಬಗ್ಗೆ ನಾಗರಾಜ್ ಹೇಳುತ್ತಾರೆ. ದೇಹದ ಆರೋಗ್ಯ ಕಾಪಾಡುವ ಡಾಕ್ಟರ್ ಹತ್ರ ಹೋದಾಗ ನಮಗೆ ಎಷ್ಟೇ ಸುಸ್ತಾಗಿರಲಿ ಎದ್ದು ಅವರಿಗೆ ಗೌರವಿಸುತ್ತೇವೆ. ಹಾಗೆ ನಮ್ಮ ಸುತ್ತಮುತ್ತಣ ಪರಿಸರದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ಬಂದಾಗಲೂ ಎದ್ದು ಅವರಿಗೆ ಗೌರವ ತೋರಿಸಬೇಕು. ಡಾಕ್ಟರ್ ರೋಗ ಬಂದಾಗ ವಾಸಿ ಮಾಡ್ತಾರೆ, ಪೌರ ಕಾರ್ಮಿಕರು ರೋಗ ಬರದಂತೆ ಪರಿಸರವನ್ನ ಸ್ವಚ್ಛ ಮಾಡ್ತಾರೆ, ಹಾಗಾಗಿ ಅವರನ್ನು ಪರಿಸರದ ಡಾಕ್ಟರ್ ಎಂದು ಗೌರವಿಸಬೇಕು ಎನ್ನುವುದು ನಾಗರಾಜರ ತಿಳಿವು.

ಹಿಂದೆ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ಅವರು ನಾಗರಾಜ್ ಅವರ ಕೆಲಸಗಳನ್ನು ಗಮನಿಸಿ ಜಾಗೃತಿ ಮೂಡಿಸಲು ಒಂದು ಸೈಕಲ್ ಕೊಡಿಸಿದ್ದರು. ಅದನ್ನು `ಜಾಗೃತಿ ವಾಹನ’ದ ಹಾಗೆ ಬಳಸುತ್ತಿದ್ದಾರೆ. ಶಾಲಾಮಕ್ಕಳಿಂದ ಹಳ್ಳಿಗಳಲ್ಲಿ ಪರಿಸರ ಜಾಗೃತಿಯ ಬೀದಿ ನಾಟಕ ಮಾಡಿಸಿದ್ದಾರೆ. ಬಿಡುವಿದ್ದಾಗ ಶನಿವಾರ ಭಾನುವಾರ ಹಳ್ಳಿಗಳಿಗೆ ಹೋಗಿ ಹಾಡು ಕತೆ ನಾಟಕಗಳ ಮೂಲಕ ಪರಿಸರದ ಜಾಗೃತಿ ಮೂಡಿಸುತ್ತಿದ್ದಾರೆ.

ನಿಧಾನವಾಗಿ ನನ್ನ ಜತೆ ಕೆಲಸ ಮಾಡೋಕು ಒಂದಷ್ಟು ಜನ ಆಸಕ್ತಿ ತೋರಿದರು. ಇಂಥವರೆಲ್ಲಾ ಸೇರಿ 34 ಜನರ `ಹಸಿರು ಹೊನಲು’ ತಂಡ ರಚನೆಯಾಗಿದೆ. ಈ ತಂಡದಿಂದ ಹತ್ತು ಪಾರ್ಕುಗಳನ್ನು ದತ್ತು ತೆಗೆದುಕೊಳ್ಳಲಾಗಿದೆ. ಗಿಡ ನೆಡುವ ಜತೆ, ಆಯಾ ಗಿಡಗಳನ್ನು ಬೆಳೆಸಲು ಒಂದು ಗಿಡಕ್ಕೆ ಇಬ್ಬರಂತೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. 2016 ರಲ್ಲಿ ನೇಕಾರ ಕಾಲನಿಯಲ್ಲಿ ಜಾಲಿಮರಗಳಿದ್ದ ಪಾರ್ಕನ್ನು ಈಗ ಉದ್ಯಾನವನ ಮಾಡಿದ್ದೀವಿ. ಇದೀಗ 70 ಮರಗಳು, 30 ಆಯುರ್ವೇದಿಕ್ ಸಸ್ಯಗಳಿವೆ. ಇದೀಗ ಅದು ಔಷಧೀಯ ಉದ್ಯಾನವನ. ಪ್ರತಿ ತಿಂಗಳೂ ಒಂದೊಂದು ಕಷಾಯ ಕೊಡ್ತೀವಿ’ ಎಂದು ನಾಗರಾಜ ಈಚಿನ ಚಟುವಟಿಕೆಯ ಬಗ್ಗೆ ವಿವರಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....