Homeಎಲೆಮರೆಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

- Advertisement -
- Advertisement -

ಎಲೆಮರೆ- ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಏಳೆಂಟು ವರ್ಷದಿಂದ ಕೊಟ್ಟೂರಿನಲ್ಲಿ ಸ್ವಯಂ ಆಸಕ್ತಿಯಿಂದ ದಿನಾಲು ಪೌರ ಕಾರ್ಮಿಕರ ಜತೆ ಕಸ ಎತ್ತುವ ಶಿಕ್ಷಕ ನಾಗರಾಜ ಬಗ್ಗೆ ಮಿತ್ರ ಸತೀಶ್ ಪಾಟೀಲ್ ಗಮನ ಸೆಳೆದಾಗ ಅಚ್ಚರಿಯಾಗಿತ್ತು. ಈಚೆಗೆ ಕೊಟ್ಟೂರಲ್ಲಿ ನಾಗರಾಜರನ್ನು ಭೇಟಿ ಮಾಡಿದೆ. ರಸ್ತೆ ಬದಿ ಮಾತನಾಡುತ್ತಾ ನಿಂತಾಗ, ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಪೌರ ಕಾರ್ಮಿಕರು ನಾಗರಾಜರನ್ನು ನೋಡಿ ಮುಖ ಅರಳಿಸಿ `ಮೇಷ್ಟರೇ’ ಎಂದು ಮಾತನಾಡಿಸಿದರು. ನಾಗರಾಜ ಕೂಡ ಅವರಲ್ಲೊಬ್ಬರ ಹಾಗೆ ಆತ್ಮೀಯವಾಗಿ ಮಾತಿಗಿಳಿದರು. ನನ್ನನ್ನು ನಾಗರಾಜ್ ಅವರಿಗೆ ಪರಿಚಯಿಸಿದಾಗ `ಈ ಮೇಷ್ಟ್ರು ನಮಗೆ ಶಕ್ತಿ ಇದ್ದಂಗೆ ಸರ್, ನಮ್ಮ ಕಷ್ಟಕ್ಕೆ ಅಕ್ಕಾರೆ, ನಾವ್ ಬ್ಯಾಡ ಅಂದ್ರೂ ನಮ್ ಜತೆ ಕೆಲಸ ಮಾಡ್ತಾರೆ, ನಮ್ಮನ್ನ ಮನ್ಷಾರು ಅಂತಾನೂ ನೋಡದೆ ಇರೋವಾಗ ಈ ಮೇಷ್ಟ್ರು ನಮಗೆ ಗೌರವಿಸ್ತಾರೆ’ ಎಂದು ನಾಗರಾಜ ಅವರ ಬಗ್ಗೆ ಅಭಿಮಾನದ ಮಾತನ್ನಾಡಿದರು. ಇದನ್ನು ನೋಡುತ್ತಿದ್ದಂತೆ ನಾಗರಾಜ ಹೇಗೆ ಪೌರಕಾರ್ಮಿಕರ ಮನಸ್ಸಲ್ಲಿ ಬೇರೂರಿದ್ದಾರೆ ಅನ್ನಿಸಿತು.

ಕೊಟ್ಟೂರು ಸಮೀಪದ ಬಯಲು ತುಂಬರಗುದ್ದಿಯ ಸರಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ನಾಗರಾಜ್ ಬಂಜಾರ ಮೂಲತಃ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಅಡವಿ ಮಲ್ಲನಕೇರಿ ತಾಂಡಾದ ಮೇಘನಾಯಕ ಮತ್ತು ಲಕ್ಷ್ಮೀಬಾಯಿ ಅವರ ಮಗ. ಅಪ್ಪ ಮೇಘನಾಯಕ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಜವಾನರಾಗಿ ಕೆಲಸ ಮಾಡುತ್ತಲೆ ಕಾಲೇಜನ್ನು ಸ್ವಚ್ಛವಾಗಿಟ್ಟಿದ್ದರು, ಕಾಲೇಜಿನ ಪರಿಸರವನ್ನೂ ಹಸಿರಾಗಿಸಿದ್ದರು. ಮನೆಯಲ್ಲಿ ಸ್ವಚ್ಛತೆಯ ಪಾಠವೂ ನಡೆಯುತ್ತಿತ್ತು. ಅಪ್ಪನ ಮಾತುಗಳಿಗೆ ಅಷ್ಟೇನು ಕಿವಿಗೊಡದ ನಾಗರಾಜ ಪ್ರೌಢಶಾಲೆ ಶಿಕ್ಷಕರಾಗಿ ಕೆಲಸ ಮಾಡಿಕೊಂಡಿದ್ದರು. ತಂದೆ ಅನಾರೋಗ್ಯದಿಂದ ತೀರಿದ ಬಳಿಕ ಮಗನಿಗೆ ಅಪ್ಪನ ಸ್ವಚ್ಛತೆಯ ಅರಿವು ಕಾಡತೊಡಗಿತು. ಅಪ್ಪನ ಆಸೆಯನ್ನು ಆಚರಣೆಗೆ ತರುವ ಮೂಲಕ ಆತನನ್ನು ಗೌರವಿಸಬೇಕು ಎನ್ನುವ ಸಣ್ಣ ಆಲೋಚನೆ ಹೊಳೆಯಿತು.

ಈ ಆಲೋಚನೆ ಮನದೊಳಗೇ ಬೆಳೆದು ಬೆಟ್ಟವಾಯಿತು. ನಾವುಗಳೆ ಗಲೀಜು ಮಾಡುವುದನ್ನು ಪೌರಕಾರ್ಮಿಕರು ಎತ್ತುತ್ತಾರೆ. ಅವರ ಜತೆ ನಾನ್ಯಾಕೆ ಕೈಜೋಡಿಸಬಾರದು ಎನ್ನುವ ಆಲೋಚನೆ ಬಂದಿದೆ. ಹೀಗಾದಲ್ಲಿ ಮನೆಯಲ್ಲಿ ಹೆಂಡತಿ, ತಾಯಿ, ಹೊರಗಡೆ ಸ್ನೇಹಿತರು ಹೇಗೆ ನೋಡಬಹುದು? ಎಂಬ ಆತಂಕವೂ ಕಾಡಿದೆ. 2012 ರ ಒಂದು ದಿನ ಈ ಎಲ್ಲಾ ಭಯ ಆತಂಕ ಮುಜುಗರವನ್ನು ಸರಿಸಿ ಪೌರ ಕಾರ್ಮಿಕರ ಜತೆ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಂಡರು. ಪೌರಕಾರ್ಮಿಕರಿಗೆ ಭಯವಾಯಿತು, `ಸ್ವಾಮಿ ನೀವು ಮೇಷ್ಟ್ರು ನಿಮಗೆ ಸಮಾಜದಲ್ಲಿ ಗೌರವವಿದೆ, ನೀವ್ಯಾಕೆ ನಮ್ಮ ಕೀಳು ಕೆಲಸ ಮಾಡಿ ಮರ್ಯಾದೆ ಕಳಕೊಳ್ತೀರಿ’ ಎಂದರು. ನೋಡಿದ ಜನರು `ಯಾಕೆ ಮೇಷ್ಟ್ರೇ ಸ್ಕೂಲ್ ಬಿಟ್ಟು ಮುನ್ಸಿಪಾಲ್ಟಿಗೆ ಸೇರಿಕೊಂಡ್ರಾ’ ಎಂದು ಗೇಲಿ ಮಾಡಿದರು. `ನೌಕರಿ ಸಿಕ್ಕಾತಿ ಆರಾಮಾಗಿ ಇದ್ಕಂಡೋಗು ಯಾಕ ಹಿಂಗ್ ಮಾಡ್ತೀ’ ಅಂತ ತಾಯಿ ಪ್ರೀತಿಯಿಂದಲೆ ಗದರಿದ್ದರು. ಎದುರು ಹೇಳಲಾರದೆ ಹೆಂಡತಿ ಮುಸಿಮುಸಿ ಕೋಪಗೊಂಡಿದ್ದರು. ಇದೆಲ್ಲಕ್ಕೂ ನಾಗರಾಜ ಕಿವುಡಾಗಿ ತನ್ನ ಕಾರ್ಯವನ್ನು ಮುಂದುವರಿಸಿದರು. ಪೌರಕಾರ್ಮಿಕರೂ ಆಪ್ತರಾದರೂ, ವರ್ಷದಿಂದ ವರ್ಷಕ್ಕೆ ನಾಗರಾಜರ ಚಟುವಟಿಕೆ ಮುಂದುವರಿದಾಗ ಟೀಕೆಗಳೆಲ್ಲಾ ಪ್ರಶಂಸೆಗಳಾಗುವತ್ತ ಸಾಗಿದವು. ಇದೀಗ ಒಂದಿನ ಮನೇಲಿದ್ರೆ ಮಗಳು `ಅಪ್ಪಾ ಯಾಕೆ ಸ್ವಚ್ಛ ಭಾರತಕ್ಕೋಗಿಲ್ಲ’ ಎಂದು ಕೇಳುತ್ತಾಳೆ.

ನಾಗರಾಜ್ ಪೌರಕಾರ್ಮಿಕರ ಜತೆ ಕಸ ಎತ್ತುವುದಷ್ಟಕ್ಕೆ ಸೀಮಿತವಾಗಲಿಲ್ಲ, ನಿಧಾನಕ್ಕೆ ಪೌರ ಕಾರ್ಮಿಕರ ಸಮಸ್ಯೆಗಳಿಗೆ ನೆರವಾಗತೊಡಗಿದರು. ಸಂಘಸಂಸ್ಥೆಗಳಿಂದಲೂ ಅವರಿಗೆ ಸಹಾಯ ಸಿಗುವಂತೆಯೂ, ಅವರ ಕಾರ್ಯಕ್ರಮಗಳಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸುವಂತೆಯೂ ಮಾಡಿದರು. ಹೀಗೆ ನಿರಂತರ ಒಡನಾಟದಿಂದ ಪೌರ ಕಾರ್ಮಿಕರಲ್ಲಿ ಕೆಲವು ಬದಲಾವಣೆ ತರುವಲ್ಲಿಯೂ ಯಶಸ್ವಿಯಾದರು.

ಮೊದಮೊದಲು ಆರೋಗ್ಯದ ಬಗ್ಗೆ ಅಷ್ಟೇನು ಕಾಳಜಿ ಇಲ್ಲದವರು ಈಗೀಗ ಕಾಳಜಿ ವಹಿಸತೊಡಗಿದ್ದಾರೆ. ಜನರು ಮೊದಲು ಪೌರಕಾರ್ಮಿಕರನ್ನು ಹೆಸರಿಡಿದು ಕರೆಯುತ್ತಿರಲಿಲ್ಲ. ಈಗ ಅವರನ್ನು ಹೆಸರಿಡಿದು ಮಾತಾಡಿಸುವ ಮಟ್ಟಿಗೆ, ಅವರು ಮಾಡಿದ ಕೆಲಸ ನೋಡಿ ಥ್ಯಾಂಕ್ಸ್ ಹೇಳುವ ಮಟ್ಟಿಗೆ ಜನರಲ್ಲಿ ಬದಲಾವಣೆ ಬಂದಿದೆ. ಮುಖ್ಯವಾಗಿ ಪೌರಕಾರ್ಮಿಕರನ್ನು ಸಂಘಟಿಸುವ, ಅವರ ಹಕ್ಕುಗಳಿಗಾಗಿ ಹೋರಾಟ ಮಾಡುವ, ಅವರಿಗಾಗುವ ಅನ್ಯಾಯಗಳ ವಿರುದ್ಧ ಪ್ರತಿಭಟಿಸುವ ಬಗೆಗೆ ನಾಗರಾಜ್ ಪೌರಕಾರ್ಮಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ.

`ಬೀದಿನಾಟಕದ ತಂಡ ಮಾಡ್ಕೊಂಡು ಪ್ರತೀ ಗ್ರಾಮಪಂಚಾಯ್ತಿಯಲ್ಲಿ ಬೀದಿ ನಾಟಕ ಮಾಡ್ತಿದ್ವಿ. ಮುಂದೆ ಪೌರ ಕಾರ್ಮಿಕರ ಕಲ್ಯಾಣ ನಿಧಿ ಅಂತ ಮಾಡಿ, ಹೊರಗಿನವರಿಗಿಂತ ಪೌರ ಕಾರ್ಮಿಕರನ್ನೇ ತರಬೇತಿಗೊಳಿಸಿ ಬೀದಿ ನಾಟಕ ಮಾಡಿಸಬೇಕು ಅಂತ ಪ್ಲಾನ್ ಇದೆ ಸರ್’ ಎಂದು ಮುಂದಿನ ಚಟುವಟಿಕೆ ಬಗ್ಗೆ ನಾಗರಾಜ್ ಹೇಳುತ್ತಾರೆ. ದೇಹದ ಆರೋಗ್ಯ ಕಾಪಾಡುವ ಡಾಕ್ಟರ್ ಹತ್ರ ಹೋದಾಗ ನಮಗೆ ಎಷ್ಟೇ ಸುಸ್ತಾಗಿರಲಿ ಎದ್ದು ಅವರಿಗೆ ಗೌರವಿಸುತ್ತೇವೆ. ಹಾಗೆ ನಮ್ಮ ಸುತ್ತಮುತ್ತಣ ಪರಿಸರದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ಬಂದಾಗಲೂ ಎದ್ದು ಅವರಿಗೆ ಗೌರವ ತೋರಿಸಬೇಕು. ಡಾಕ್ಟರ್ ರೋಗ ಬಂದಾಗ ವಾಸಿ ಮಾಡ್ತಾರೆ, ಪೌರ ಕಾರ್ಮಿಕರು ರೋಗ ಬರದಂತೆ ಪರಿಸರವನ್ನ ಸ್ವಚ್ಛ ಮಾಡ್ತಾರೆ, ಹಾಗಾಗಿ ಅವರನ್ನು ಪರಿಸರದ ಡಾಕ್ಟರ್ ಎಂದು ಗೌರವಿಸಬೇಕು ಎನ್ನುವುದು ನಾಗರಾಜರ ತಿಳಿವು.

ಹಿಂದೆ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ಅವರು ನಾಗರಾಜ್ ಅವರ ಕೆಲಸಗಳನ್ನು ಗಮನಿಸಿ ಜಾಗೃತಿ ಮೂಡಿಸಲು ಒಂದು ಸೈಕಲ್ ಕೊಡಿಸಿದ್ದರು. ಅದನ್ನು `ಜಾಗೃತಿ ವಾಹನ’ದ ಹಾಗೆ ಬಳಸುತ್ತಿದ್ದಾರೆ. ಶಾಲಾಮಕ್ಕಳಿಂದ ಹಳ್ಳಿಗಳಲ್ಲಿ ಪರಿಸರ ಜಾಗೃತಿಯ ಬೀದಿ ನಾಟಕ ಮಾಡಿಸಿದ್ದಾರೆ. ಬಿಡುವಿದ್ದಾಗ ಶನಿವಾರ ಭಾನುವಾರ ಹಳ್ಳಿಗಳಿಗೆ ಹೋಗಿ ಹಾಡು ಕತೆ ನಾಟಕಗಳ ಮೂಲಕ ಪರಿಸರದ ಜಾಗೃತಿ ಮೂಡಿಸುತ್ತಿದ್ದಾರೆ.

ನಿಧಾನವಾಗಿ ನನ್ನ ಜತೆ ಕೆಲಸ ಮಾಡೋಕು ಒಂದಷ್ಟು ಜನ ಆಸಕ್ತಿ ತೋರಿದರು. ಇಂಥವರೆಲ್ಲಾ ಸೇರಿ 34 ಜನರ `ಹಸಿರು ಹೊನಲು’ ತಂಡ ರಚನೆಯಾಗಿದೆ. ಈ ತಂಡದಿಂದ ಹತ್ತು ಪಾರ್ಕುಗಳನ್ನು ದತ್ತು ತೆಗೆದುಕೊಳ್ಳಲಾಗಿದೆ. ಗಿಡ ನೆಡುವ ಜತೆ, ಆಯಾ ಗಿಡಗಳನ್ನು ಬೆಳೆಸಲು ಒಂದು ಗಿಡಕ್ಕೆ ಇಬ್ಬರಂತೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. 2016 ರಲ್ಲಿ ನೇಕಾರ ಕಾಲನಿಯಲ್ಲಿ ಜಾಲಿಮರಗಳಿದ್ದ ಪಾರ್ಕನ್ನು ಈಗ ಉದ್ಯಾನವನ ಮಾಡಿದ್ದೀವಿ. ಇದೀಗ 70 ಮರಗಳು, 30 ಆಯುರ್ವೇದಿಕ್ ಸಸ್ಯಗಳಿವೆ. ಇದೀಗ ಅದು ಔಷಧೀಯ ಉದ್ಯಾನವನ. ಪ್ರತಿ ತಿಂಗಳೂ ಒಂದೊಂದು ಕಷಾಯ ಕೊಡ್ತೀವಿ’ ಎಂದು ನಾಗರಾಜ ಈಚಿನ ಚಟುವಟಿಕೆಯ ಬಗ್ಗೆ ವಿವರಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...