Homeಎಲೆಮರೆಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

- Advertisement -
- Advertisement -

ಎಲೆಮರೆ- ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಏಳೆಂಟು ವರ್ಷದಿಂದ ಕೊಟ್ಟೂರಿನಲ್ಲಿ ಸ್ವಯಂ ಆಸಕ್ತಿಯಿಂದ ದಿನಾಲು ಪೌರ ಕಾರ್ಮಿಕರ ಜತೆ ಕಸ ಎತ್ತುವ ಶಿಕ್ಷಕ ನಾಗರಾಜ ಬಗ್ಗೆ ಮಿತ್ರ ಸತೀಶ್ ಪಾಟೀಲ್ ಗಮನ ಸೆಳೆದಾಗ ಅಚ್ಚರಿಯಾಗಿತ್ತು. ಈಚೆಗೆ ಕೊಟ್ಟೂರಲ್ಲಿ ನಾಗರಾಜರನ್ನು ಭೇಟಿ ಮಾಡಿದೆ. ರಸ್ತೆ ಬದಿ ಮಾತನಾಡುತ್ತಾ ನಿಂತಾಗ, ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಪೌರ ಕಾರ್ಮಿಕರು ನಾಗರಾಜರನ್ನು ನೋಡಿ ಮುಖ ಅರಳಿಸಿ `ಮೇಷ್ಟರೇ’ ಎಂದು ಮಾತನಾಡಿಸಿದರು. ನಾಗರಾಜ ಕೂಡ ಅವರಲ್ಲೊಬ್ಬರ ಹಾಗೆ ಆತ್ಮೀಯವಾಗಿ ಮಾತಿಗಿಳಿದರು. ನನ್ನನ್ನು ನಾಗರಾಜ್ ಅವರಿಗೆ ಪರಿಚಯಿಸಿದಾಗ `ಈ ಮೇಷ್ಟ್ರು ನಮಗೆ ಶಕ್ತಿ ಇದ್ದಂಗೆ ಸರ್, ನಮ್ಮ ಕಷ್ಟಕ್ಕೆ ಅಕ್ಕಾರೆ, ನಾವ್ ಬ್ಯಾಡ ಅಂದ್ರೂ ನಮ್ ಜತೆ ಕೆಲಸ ಮಾಡ್ತಾರೆ, ನಮ್ಮನ್ನ ಮನ್ಷಾರು ಅಂತಾನೂ ನೋಡದೆ ಇರೋವಾಗ ಈ ಮೇಷ್ಟ್ರು ನಮಗೆ ಗೌರವಿಸ್ತಾರೆ’ ಎಂದು ನಾಗರಾಜ ಅವರ ಬಗ್ಗೆ ಅಭಿಮಾನದ ಮಾತನ್ನಾಡಿದರು. ಇದನ್ನು ನೋಡುತ್ತಿದ್ದಂತೆ ನಾಗರಾಜ ಹೇಗೆ ಪೌರಕಾರ್ಮಿಕರ ಮನಸ್ಸಲ್ಲಿ ಬೇರೂರಿದ್ದಾರೆ ಅನ್ನಿಸಿತು.

ಕೊಟ್ಟೂರು ಸಮೀಪದ ಬಯಲು ತುಂಬರಗುದ್ದಿಯ ಸರಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ನಾಗರಾಜ್ ಬಂಜಾರ ಮೂಲತಃ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಅಡವಿ ಮಲ್ಲನಕೇರಿ ತಾಂಡಾದ ಮೇಘನಾಯಕ ಮತ್ತು ಲಕ್ಷ್ಮೀಬಾಯಿ ಅವರ ಮಗ. ಅಪ್ಪ ಮೇಘನಾಯಕ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಜವಾನರಾಗಿ ಕೆಲಸ ಮಾಡುತ್ತಲೆ ಕಾಲೇಜನ್ನು ಸ್ವಚ್ಛವಾಗಿಟ್ಟಿದ್ದರು, ಕಾಲೇಜಿನ ಪರಿಸರವನ್ನೂ ಹಸಿರಾಗಿಸಿದ್ದರು. ಮನೆಯಲ್ಲಿ ಸ್ವಚ್ಛತೆಯ ಪಾಠವೂ ನಡೆಯುತ್ತಿತ್ತು. ಅಪ್ಪನ ಮಾತುಗಳಿಗೆ ಅಷ್ಟೇನು ಕಿವಿಗೊಡದ ನಾಗರಾಜ ಪ್ರೌಢಶಾಲೆ ಶಿಕ್ಷಕರಾಗಿ ಕೆಲಸ ಮಾಡಿಕೊಂಡಿದ್ದರು. ತಂದೆ ಅನಾರೋಗ್ಯದಿಂದ ತೀರಿದ ಬಳಿಕ ಮಗನಿಗೆ ಅಪ್ಪನ ಸ್ವಚ್ಛತೆಯ ಅರಿವು ಕಾಡತೊಡಗಿತು. ಅಪ್ಪನ ಆಸೆಯನ್ನು ಆಚರಣೆಗೆ ತರುವ ಮೂಲಕ ಆತನನ್ನು ಗೌರವಿಸಬೇಕು ಎನ್ನುವ ಸಣ್ಣ ಆಲೋಚನೆ ಹೊಳೆಯಿತು.

ಈ ಆಲೋಚನೆ ಮನದೊಳಗೇ ಬೆಳೆದು ಬೆಟ್ಟವಾಯಿತು. ನಾವುಗಳೆ ಗಲೀಜು ಮಾಡುವುದನ್ನು ಪೌರಕಾರ್ಮಿಕರು ಎತ್ತುತ್ತಾರೆ. ಅವರ ಜತೆ ನಾನ್ಯಾಕೆ ಕೈಜೋಡಿಸಬಾರದು ಎನ್ನುವ ಆಲೋಚನೆ ಬಂದಿದೆ. ಹೀಗಾದಲ್ಲಿ ಮನೆಯಲ್ಲಿ ಹೆಂಡತಿ, ತಾಯಿ, ಹೊರಗಡೆ ಸ್ನೇಹಿತರು ಹೇಗೆ ನೋಡಬಹುದು? ಎಂಬ ಆತಂಕವೂ ಕಾಡಿದೆ. 2012 ರ ಒಂದು ದಿನ ಈ ಎಲ್ಲಾ ಭಯ ಆತಂಕ ಮುಜುಗರವನ್ನು ಸರಿಸಿ ಪೌರ ಕಾರ್ಮಿಕರ ಜತೆ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಂಡರು. ಪೌರಕಾರ್ಮಿಕರಿಗೆ ಭಯವಾಯಿತು, `ಸ್ವಾಮಿ ನೀವು ಮೇಷ್ಟ್ರು ನಿಮಗೆ ಸಮಾಜದಲ್ಲಿ ಗೌರವವಿದೆ, ನೀವ್ಯಾಕೆ ನಮ್ಮ ಕೀಳು ಕೆಲಸ ಮಾಡಿ ಮರ್ಯಾದೆ ಕಳಕೊಳ್ತೀರಿ’ ಎಂದರು. ನೋಡಿದ ಜನರು `ಯಾಕೆ ಮೇಷ್ಟ್ರೇ ಸ್ಕೂಲ್ ಬಿಟ್ಟು ಮುನ್ಸಿಪಾಲ್ಟಿಗೆ ಸೇರಿಕೊಂಡ್ರಾ’ ಎಂದು ಗೇಲಿ ಮಾಡಿದರು. `ನೌಕರಿ ಸಿಕ್ಕಾತಿ ಆರಾಮಾಗಿ ಇದ್ಕಂಡೋಗು ಯಾಕ ಹಿಂಗ್ ಮಾಡ್ತೀ’ ಅಂತ ತಾಯಿ ಪ್ರೀತಿಯಿಂದಲೆ ಗದರಿದ್ದರು. ಎದುರು ಹೇಳಲಾರದೆ ಹೆಂಡತಿ ಮುಸಿಮುಸಿ ಕೋಪಗೊಂಡಿದ್ದರು. ಇದೆಲ್ಲಕ್ಕೂ ನಾಗರಾಜ ಕಿವುಡಾಗಿ ತನ್ನ ಕಾರ್ಯವನ್ನು ಮುಂದುವರಿಸಿದರು. ಪೌರಕಾರ್ಮಿಕರೂ ಆಪ್ತರಾದರೂ, ವರ್ಷದಿಂದ ವರ್ಷಕ್ಕೆ ನಾಗರಾಜರ ಚಟುವಟಿಕೆ ಮುಂದುವರಿದಾಗ ಟೀಕೆಗಳೆಲ್ಲಾ ಪ್ರಶಂಸೆಗಳಾಗುವತ್ತ ಸಾಗಿದವು. ಇದೀಗ ಒಂದಿನ ಮನೇಲಿದ್ರೆ ಮಗಳು `ಅಪ್ಪಾ ಯಾಕೆ ಸ್ವಚ್ಛ ಭಾರತಕ್ಕೋಗಿಲ್ಲ’ ಎಂದು ಕೇಳುತ್ತಾಳೆ.

ನಾಗರಾಜ್ ಪೌರಕಾರ್ಮಿಕರ ಜತೆ ಕಸ ಎತ್ತುವುದಷ್ಟಕ್ಕೆ ಸೀಮಿತವಾಗಲಿಲ್ಲ, ನಿಧಾನಕ್ಕೆ ಪೌರ ಕಾರ್ಮಿಕರ ಸಮಸ್ಯೆಗಳಿಗೆ ನೆರವಾಗತೊಡಗಿದರು. ಸಂಘಸಂಸ್ಥೆಗಳಿಂದಲೂ ಅವರಿಗೆ ಸಹಾಯ ಸಿಗುವಂತೆಯೂ, ಅವರ ಕಾರ್ಯಕ್ರಮಗಳಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸುವಂತೆಯೂ ಮಾಡಿದರು. ಹೀಗೆ ನಿರಂತರ ಒಡನಾಟದಿಂದ ಪೌರ ಕಾರ್ಮಿಕರಲ್ಲಿ ಕೆಲವು ಬದಲಾವಣೆ ತರುವಲ್ಲಿಯೂ ಯಶಸ್ವಿಯಾದರು.

ಮೊದಮೊದಲು ಆರೋಗ್ಯದ ಬಗ್ಗೆ ಅಷ್ಟೇನು ಕಾಳಜಿ ಇಲ್ಲದವರು ಈಗೀಗ ಕಾಳಜಿ ವಹಿಸತೊಡಗಿದ್ದಾರೆ. ಜನರು ಮೊದಲು ಪೌರಕಾರ್ಮಿಕರನ್ನು ಹೆಸರಿಡಿದು ಕರೆಯುತ್ತಿರಲಿಲ್ಲ. ಈಗ ಅವರನ್ನು ಹೆಸರಿಡಿದು ಮಾತಾಡಿಸುವ ಮಟ್ಟಿಗೆ, ಅವರು ಮಾಡಿದ ಕೆಲಸ ನೋಡಿ ಥ್ಯಾಂಕ್ಸ್ ಹೇಳುವ ಮಟ್ಟಿಗೆ ಜನರಲ್ಲಿ ಬದಲಾವಣೆ ಬಂದಿದೆ. ಮುಖ್ಯವಾಗಿ ಪೌರಕಾರ್ಮಿಕರನ್ನು ಸಂಘಟಿಸುವ, ಅವರ ಹಕ್ಕುಗಳಿಗಾಗಿ ಹೋರಾಟ ಮಾಡುವ, ಅವರಿಗಾಗುವ ಅನ್ಯಾಯಗಳ ವಿರುದ್ಧ ಪ್ರತಿಭಟಿಸುವ ಬಗೆಗೆ ನಾಗರಾಜ್ ಪೌರಕಾರ್ಮಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ.

`ಬೀದಿನಾಟಕದ ತಂಡ ಮಾಡ್ಕೊಂಡು ಪ್ರತೀ ಗ್ರಾಮಪಂಚಾಯ್ತಿಯಲ್ಲಿ ಬೀದಿ ನಾಟಕ ಮಾಡ್ತಿದ್ವಿ. ಮುಂದೆ ಪೌರ ಕಾರ್ಮಿಕರ ಕಲ್ಯಾಣ ನಿಧಿ ಅಂತ ಮಾಡಿ, ಹೊರಗಿನವರಿಗಿಂತ ಪೌರ ಕಾರ್ಮಿಕರನ್ನೇ ತರಬೇತಿಗೊಳಿಸಿ ಬೀದಿ ನಾಟಕ ಮಾಡಿಸಬೇಕು ಅಂತ ಪ್ಲಾನ್ ಇದೆ ಸರ್’ ಎಂದು ಮುಂದಿನ ಚಟುವಟಿಕೆ ಬಗ್ಗೆ ನಾಗರಾಜ್ ಹೇಳುತ್ತಾರೆ. ದೇಹದ ಆರೋಗ್ಯ ಕಾಪಾಡುವ ಡಾಕ್ಟರ್ ಹತ್ರ ಹೋದಾಗ ನಮಗೆ ಎಷ್ಟೇ ಸುಸ್ತಾಗಿರಲಿ ಎದ್ದು ಅವರಿಗೆ ಗೌರವಿಸುತ್ತೇವೆ. ಹಾಗೆ ನಮ್ಮ ಸುತ್ತಮುತ್ತಣ ಪರಿಸರದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ಬಂದಾಗಲೂ ಎದ್ದು ಅವರಿಗೆ ಗೌರವ ತೋರಿಸಬೇಕು. ಡಾಕ್ಟರ್ ರೋಗ ಬಂದಾಗ ವಾಸಿ ಮಾಡ್ತಾರೆ, ಪೌರ ಕಾರ್ಮಿಕರು ರೋಗ ಬರದಂತೆ ಪರಿಸರವನ್ನ ಸ್ವಚ್ಛ ಮಾಡ್ತಾರೆ, ಹಾಗಾಗಿ ಅವರನ್ನು ಪರಿಸರದ ಡಾಕ್ಟರ್ ಎಂದು ಗೌರವಿಸಬೇಕು ಎನ್ನುವುದು ನಾಗರಾಜರ ತಿಳಿವು.

ಹಿಂದೆ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ಅವರು ನಾಗರಾಜ್ ಅವರ ಕೆಲಸಗಳನ್ನು ಗಮನಿಸಿ ಜಾಗೃತಿ ಮೂಡಿಸಲು ಒಂದು ಸೈಕಲ್ ಕೊಡಿಸಿದ್ದರು. ಅದನ್ನು `ಜಾಗೃತಿ ವಾಹನ’ದ ಹಾಗೆ ಬಳಸುತ್ತಿದ್ದಾರೆ. ಶಾಲಾಮಕ್ಕಳಿಂದ ಹಳ್ಳಿಗಳಲ್ಲಿ ಪರಿಸರ ಜಾಗೃತಿಯ ಬೀದಿ ನಾಟಕ ಮಾಡಿಸಿದ್ದಾರೆ. ಬಿಡುವಿದ್ದಾಗ ಶನಿವಾರ ಭಾನುವಾರ ಹಳ್ಳಿಗಳಿಗೆ ಹೋಗಿ ಹಾಡು ಕತೆ ನಾಟಕಗಳ ಮೂಲಕ ಪರಿಸರದ ಜಾಗೃತಿ ಮೂಡಿಸುತ್ತಿದ್ದಾರೆ.

ನಿಧಾನವಾಗಿ ನನ್ನ ಜತೆ ಕೆಲಸ ಮಾಡೋಕು ಒಂದಷ್ಟು ಜನ ಆಸಕ್ತಿ ತೋರಿದರು. ಇಂಥವರೆಲ್ಲಾ ಸೇರಿ 34 ಜನರ `ಹಸಿರು ಹೊನಲು’ ತಂಡ ರಚನೆಯಾಗಿದೆ. ಈ ತಂಡದಿಂದ ಹತ್ತು ಪಾರ್ಕುಗಳನ್ನು ದತ್ತು ತೆಗೆದುಕೊಳ್ಳಲಾಗಿದೆ. ಗಿಡ ನೆಡುವ ಜತೆ, ಆಯಾ ಗಿಡಗಳನ್ನು ಬೆಳೆಸಲು ಒಂದು ಗಿಡಕ್ಕೆ ಇಬ್ಬರಂತೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. 2016 ರಲ್ಲಿ ನೇಕಾರ ಕಾಲನಿಯಲ್ಲಿ ಜಾಲಿಮರಗಳಿದ್ದ ಪಾರ್ಕನ್ನು ಈಗ ಉದ್ಯಾನವನ ಮಾಡಿದ್ದೀವಿ. ಇದೀಗ 70 ಮರಗಳು, 30 ಆಯುರ್ವೇದಿಕ್ ಸಸ್ಯಗಳಿವೆ. ಇದೀಗ ಅದು ಔಷಧೀಯ ಉದ್ಯಾನವನ. ಪ್ರತಿ ತಿಂಗಳೂ ಒಂದೊಂದು ಕಷಾಯ ಕೊಡ್ತೀವಿ’ ಎಂದು ನಾಗರಾಜ ಈಚಿನ ಚಟುವಟಿಕೆಯ ಬಗ್ಗೆ ವಿವರಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...