Homeಎಲೆಮರೆಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

- Advertisement -
- Advertisement -

ಎಲೆಮರೆ- ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಏಳೆಂಟು ವರ್ಷದಿಂದ ಕೊಟ್ಟೂರಿನಲ್ಲಿ ಸ್ವಯಂ ಆಸಕ್ತಿಯಿಂದ ದಿನಾಲು ಪೌರ ಕಾರ್ಮಿಕರ ಜತೆ ಕಸ ಎತ್ತುವ ಶಿಕ್ಷಕ ನಾಗರಾಜ ಬಗ್ಗೆ ಮಿತ್ರ ಸತೀಶ್ ಪಾಟೀಲ್ ಗಮನ ಸೆಳೆದಾಗ ಅಚ್ಚರಿಯಾಗಿತ್ತು. ಈಚೆಗೆ ಕೊಟ್ಟೂರಲ್ಲಿ ನಾಗರಾಜರನ್ನು ಭೇಟಿ ಮಾಡಿದೆ. ರಸ್ತೆ ಬದಿ ಮಾತನಾಡುತ್ತಾ ನಿಂತಾಗ, ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಪೌರ ಕಾರ್ಮಿಕರು ನಾಗರಾಜರನ್ನು ನೋಡಿ ಮುಖ ಅರಳಿಸಿ `ಮೇಷ್ಟರೇ’ ಎಂದು ಮಾತನಾಡಿಸಿದರು. ನಾಗರಾಜ ಕೂಡ ಅವರಲ್ಲೊಬ್ಬರ ಹಾಗೆ ಆತ್ಮೀಯವಾಗಿ ಮಾತಿಗಿಳಿದರು. ನನ್ನನ್ನು ನಾಗರಾಜ್ ಅವರಿಗೆ ಪರಿಚಯಿಸಿದಾಗ `ಈ ಮೇಷ್ಟ್ರು ನಮಗೆ ಶಕ್ತಿ ಇದ್ದಂಗೆ ಸರ್, ನಮ್ಮ ಕಷ್ಟಕ್ಕೆ ಅಕ್ಕಾರೆ, ನಾವ್ ಬ್ಯಾಡ ಅಂದ್ರೂ ನಮ್ ಜತೆ ಕೆಲಸ ಮಾಡ್ತಾರೆ, ನಮ್ಮನ್ನ ಮನ್ಷಾರು ಅಂತಾನೂ ನೋಡದೆ ಇರೋವಾಗ ಈ ಮೇಷ್ಟ್ರು ನಮಗೆ ಗೌರವಿಸ್ತಾರೆ’ ಎಂದು ನಾಗರಾಜ ಅವರ ಬಗ್ಗೆ ಅಭಿಮಾನದ ಮಾತನ್ನಾಡಿದರು. ಇದನ್ನು ನೋಡುತ್ತಿದ್ದಂತೆ ನಾಗರಾಜ ಹೇಗೆ ಪೌರಕಾರ್ಮಿಕರ ಮನಸ್ಸಲ್ಲಿ ಬೇರೂರಿದ್ದಾರೆ ಅನ್ನಿಸಿತು.

ಕೊಟ್ಟೂರು ಸಮೀಪದ ಬಯಲು ತುಂಬರಗುದ್ದಿಯ ಸರಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ನಾಗರಾಜ್ ಬಂಜಾರ ಮೂಲತಃ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಅಡವಿ ಮಲ್ಲನಕೇರಿ ತಾಂಡಾದ ಮೇಘನಾಯಕ ಮತ್ತು ಲಕ್ಷ್ಮೀಬಾಯಿ ಅವರ ಮಗ. ಅಪ್ಪ ಮೇಘನಾಯಕ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಜವಾನರಾಗಿ ಕೆಲಸ ಮಾಡುತ್ತಲೆ ಕಾಲೇಜನ್ನು ಸ್ವಚ್ಛವಾಗಿಟ್ಟಿದ್ದರು, ಕಾಲೇಜಿನ ಪರಿಸರವನ್ನೂ ಹಸಿರಾಗಿಸಿದ್ದರು. ಮನೆಯಲ್ಲಿ ಸ್ವಚ್ಛತೆಯ ಪಾಠವೂ ನಡೆಯುತ್ತಿತ್ತು. ಅಪ್ಪನ ಮಾತುಗಳಿಗೆ ಅಷ್ಟೇನು ಕಿವಿಗೊಡದ ನಾಗರಾಜ ಪ್ರೌಢಶಾಲೆ ಶಿಕ್ಷಕರಾಗಿ ಕೆಲಸ ಮಾಡಿಕೊಂಡಿದ್ದರು. ತಂದೆ ಅನಾರೋಗ್ಯದಿಂದ ತೀರಿದ ಬಳಿಕ ಮಗನಿಗೆ ಅಪ್ಪನ ಸ್ವಚ್ಛತೆಯ ಅರಿವು ಕಾಡತೊಡಗಿತು. ಅಪ್ಪನ ಆಸೆಯನ್ನು ಆಚರಣೆಗೆ ತರುವ ಮೂಲಕ ಆತನನ್ನು ಗೌರವಿಸಬೇಕು ಎನ್ನುವ ಸಣ್ಣ ಆಲೋಚನೆ ಹೊಳೆಯಿತು.

ಈ ಆಲೋಚನೆ ಮನದೊಳಗೇ ಬೆಳೆದು ಬೆಟ್ಟವಾಯಿತು. ನಾವುಗಳೆ ಗಲೀಜು ಮಾಡುವುದನ್ನು ಪೌರಕಾರ್ಮಿಕರು ಎತ್ತುತ್ತಾರೆ. ಅವರ ಜತೆ ನಾನ್ಯಾಕೆ ಕೈಜೋಡಿಸಬಾರದು ಎನ್ನುವ ಆಲೋಚನೆ ಬಂದಿದೆ. ಹೀಗಾದಲ್ಲಿ ಮನೆಯಲ್ಲಿ ಹೆಂಡತಿ, ತಾಯಿ, ಹೊರಗಡೆ ಸ್ನೇಹಿತರು ಹೇಗೆ ನೋಡಬಹುದು? ಎಂಬ ಆತಂಕವೂ ಕಾಡಿದೆ. 2012 ರ ಒಂದು ದಿನ ಈ ಎಲ್ಲಾ ಭಯ ಆತಂಕ ಮುಜುಗರವನ್ನು ಸರಿಸಿ ಪೌರ ಕಾರ್ಮಿಕರ ಜತೆ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಂಡರು. ಪೌರಕಾರ್ಮಿಕರಿಗೆ ಭಯವಾಯಿತು, `ಸ್ವಾಮಿ ನೀವು ಮೇಷ್ಟ್ರು ನಿಮಗೆ ಸಮಾಜದಲ್ಲಿ ಗೌರವವಿದೆ, ನೀವ್ಯಾಕೆ ನಮ್ಮ ಕೀಳು ಕೆಲಸ ಮಾಡಿ ಮರ್ಯಾದೆ ಕಳಕೊಳ್ತೀರಿ’ ಎಂದರು. ನೋಡಿದ ಜನರು `ಯಾಕೆ ಮೇಷ್ಟ್ರೇ ಸ್ಕೂಲ್ ಬಿಟ್ಟು ಮುನ್ಸಿಪಾಲ್ಟಿಗೆ ಸೇರಿಕೊಂಡ್ರಾ’ ಎಂದು ಗೇಲಿ ಮಾಡಿದರು. `ನೌಕರಿ ಸಿಕ್ಕಾತಿ ಆರಾಮಾಗಿ ಇದ್ಕಂಡೋಗು ಯಾಕ ಹಿಂಗ್ ಮಾಡ್ತೀ’ ಅಂತ ತಾಯಿ ಪ್ರೀತಿಯಿಂದಲೆ ಗದರಿದ್ದರು. ಎದುರು ಹೇಳಲಾರದೆ ಹೆಂಡತಿ ಮುಸಿಮುಸಿ ಕೋಪಗೊಂಡಿದ್ದರು. ಇದೆಲ್ಲಕ್ಕೂ ನಾಗರಾಜ ಕಿವುಡಾಗಿ ತನ್ನ ಕಾರ್ಯವನ್ನು ಮುಂದುವರಿಸಿದರು. ಪೌರಕಾರ್ಮಿಕರೂ ಆಪ್ತರಾದರೂ, ವರ್ಷದಿಂದ ವರ್ಷಕ್ಕೆ ನಾಗರಾಜರ ಚಟುವಟಿಕೆ ಮುಂದುವರಿದಾಗ ಟೀಕೆಗಳೆಲ್ಲಾ ಪ್ರಶಂಸೆಗಳಾಗುವತ್ತ ಸಾಗಿದವು. ಇದೀಗ ಒಂದಿನ ಮನೇಲಿದ್ರೆ ಮಗಳು `ಅಪ್ಪಾ ಯಾಕೆ ಸ್ವಚ್ಛ ಭಾರತಕ್ಕೋಗಿಲ್ಲ’ ಎಂದು ಕೇಳುತ್ತಾಳೆ.

ನಾಗರಾಜ್ ಪೌರಕಾರ್ಮಿಕರ ಜತೆ ಕಸ ಎತ್ತುವುದಷ್ಟಕ್ಕೆ ಸೀಮಿತವಾಗಲಿಲ್ಲ, ನಿಧಾನಕ್ಕೆ ಪೌರ ಕಾರ್ಮಿಕರ ಸಮಸ್ಯೆಗಳಿಗೆ ನೆರವಾಗತೊಡಗಿದರು. ಸಂಘಸಂಸ್ಥೆಗಳಿಂದಲೂ ಅವರಿಗೆ ಸಹಾಯ ಸಿಗುವಂತೆಯೂ, ಅವರ ಕಾರ್ಯಕ್ರಮಗಳಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸುವಂತೆಯೂ ಮಾಡಿದರು. ಹೀಗೆ ನಿರಂತರ ಒಡನಾಟದಿಂದ ಪೌರ ಕಾರ್ಮಿಕರಲ್ಲಿ ಕೆಲವು ಬದಲಾವಣೆ ತರುವಲ್ಲಿಯೂ ಯಶಸ್ವಿಯಾದರು.

ಮೊದಮೊದಲು ಆರೋಗ್ಯದ ಬಗ್ಗೆ ಅಷ್ಟೇನು ಕಾಳಜಿ ಇಲ್ಲದವರು ಈಗೀಗ ಕಾಳಜಿ ವಹಿಸತೊಡಗಿದ್ದಾರೆ. ಜನರು ಮೊದಲು ಪೌರಕಾರ್ಮಿಕರನ್ನು ಹೆಸರಿಡಿದು ಕರೆಯುತ್ತಿರಲಿಲ್ಲ. ಈಗ ಅವರನ್ನು ಹೆಸರಿಡಿದು ಮಾತಾಡಿಸುವ ಮಟ್ಟಿಗೆ, ಅವರು ಮಾಡಿದ ಕೆಲಸ ನೋಡಿ ಥ್ಯಾಂಕ್ಸ್ ಹೇಳುವ ಮಟ್ಟಿಗೆ ಜನರಲ್ಲಿ ಬದಲಾವಣೆ ಬಂದಿದೆ. ಮುಖ್ಯವಾಗಿ ಪೌರಕಾರ್ಮಿಕರನ್ನು ಸಂಘಟಿಸುವ, ಅವರ ಹಕ್ಕುಗಳಿಗಾಗಿ ಹೋರಾಟ ಮಾಡುವ, ಅವರಿಗಾಗುವ ಅನ್ಯಾಯಗಳ ವಿರುದ್ಧ ಪ್ರತಿಭಟಿಸುವ ಬಗೆಗೆ ನಾಗರಾಜ್ ಪೌರಕಾರ್ಮಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ.

`ಬೀದಿನಾಟಕದ ತಂಡ ಮಾಡ್ಕೊಂಡು ಪ್ರತೀ ಗ್ರಾಮಪಂಚಾಯ್ತಿಯಲ್ಲಿ ಬೀದಿ ನಾಟಕ ಮಾಡ್ತಿದ್ವಿ. ಮುಂದೆ ಪೌರ ಕಾರ್ಮಿಕರ ಕಲ್ಯಾಣ ನಿಧಿ ಅಂತ ಮಾಡಿ, ಹೊರಗಿನವರಿಗಿಂತ ಪೌರ ಕಾರ್ಮಿಕರನ್ನೇ ತರಬೇತಿಗೊಳಿಸಿ ಬೀದಿ ನಾಟಕ ಮಾಡಿಸಬೇಕು ಅಂತ ಪ್ಲಾನ್ ಇದೆ ಸರ್’ ಎಂದು ಮುಂದಿನ ಚಟುವಟಿಕೆ ಬಗ್ಗೆ ನಾಗರಾಜ್ ಹೇಳುತ್ತಾರೆ. ದೇಹದ ಆರೋಗ್ಯ ಕಾಪಾಡುವ ಡಾಕ್ಟರ್ ಹತ್ರ ಹೋದಾಗ ನಮಗೆ ಎಷ್ಟೇ ಸುಸ್ತಾಗಿರಲಿ ಎದ್ದು ಅವರಿಗೆ ಗೌರವಿಸುತ್ತೇವೆ. ಹಾಗೆ ನಮ್ಮ ಸುತ್ತಮುತ್ತಣ ಪರಿಸರದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ಬಂದಾಗಲೂ ಎದ್ದು ಅವರಿಗೆ ಗೌರವ ತೋರಿಸಬೇಕು. ಡಾಕ್ಟರ್ ರೋಗ ಬಂದಾಗ ವಾಸಿ ಮಾಡ್ತಾರೆ, ಪೌರ ಕಾರ್ಮಿಕರು ರೋಗ ಬರದಂತೆ ಪರಿಸರವನ್ನ ಸ್ವಚ್ಛ ಮಾಡ್ತಾರೆ, ಹಾಗಾಗಿ ಅವರನ್ನು ಪರಿಸರದ ಡಾಕ್ಟರ್ ಎಂದು ಗೌರವಿಸಬೇಕು ಎನ್ನುವುದು ನಾಗರಾಜರ ತಿಳಿವು.

ಹಿಂದೆ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ಅವರು ನಾಗರಾಜ್ ಅವರ ಕೆಲಸಗಳನ್ನು ಗಮನಿಸಿ ಜಾಗೃತಿ ಮೂಡಿಸಲು ಒಂದು ಸೈಕಲ್ ಕೊಡಿಸಿದ್ದರು. ಅದನ್ನು `ಜಾಗೃತಿ ವಾಹನ’ದ ಹಾಗೆ ಬಳಸುತ್ತಿದ್ದಾರೆ. ಶಾಲಾಮಕ್ಕಳಿಂದ ಹಳ್ಳಿಗಳಲ್ಲಿ ಪರಿಸರ ಜಾಗೃತಿಯ ಬೀದಿ ನಾಟಕ ಮಾಡಿಸಿದ್ದಾರೆ. ಬಿಡುವಿದ್ದಾಗ ಶನಿವಾರ ಭಾನುವಾರ ಹಳ್ಳಿಗಳಿಗೆ ಹೋಗಿ ಹಾಡು ಕತೆ ನಾಟಕಗಳ ಮೂಲಕ ಪರಿಸರದ ಜಾಗೃತಿ ಮೂಡಿಸುತ್ತಿದ್ದಾರೆ.

ನಿಧಾನವಾಗಿ ನನ್ನ ಜತೆ ಕೆಲಸ ಮಾಡೋಕು ಒಂದಷ್ಟು ಜನ ಆಸಕ್ತಿ ತೋರಿದರು. ಇಂಥವರೆಲ್ಲಾ ಸೇರಿ 34 ಜನರ `ಹಸಿರು ಹೊನಲು’ ತಂಡ ರಚನೆಯಾಗಿದೆ. ಈ ತಂಡದಿಂದ ಹತ್ತು ಪಾರ್ಕುಗಳನ್ನು ದತ್ತು ತೆಗೆದುಕೊಳ್ಳಲಾಗಿದೆ. ಗಿಡ ನೆಡುವ ಜತೆ, ಆಯಾ ಗಿಡಗಳನ್ನು ಬೆಳೆಸಲು ಒಂದು ಗಿಡಕ್ಕೆ ಇಬ್ಬರಂತೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. 2016 ರಲ್ಲಿ ನೇಕಾರ ಕಾಲನಿಯಲ್ಲಿ ಜಾಲಿಮರಗಳಿದ್ದ ಪಾರ್ಕನ್ನು ಈಗ ಉದ್ಯಾನವನ ಮಾಡಿದ್ದೀವಿ. ಇದೀಗ 70 ಮರಗಳು, 30 ಆಯುರ್ವೇದಿಕ್ ಸಸ್ಯಗಳಿವೆ. ಇದೀಗ ಅದು ಔಷಧೀಯ ಉದ್ಯಾನವನ. ಪ್ರತಿ ತಿಂಗಳೂ ಒಂದೊಂದು ಕಷಾಯ ಕೊಡ್ತೀವಿ’ ಎಂದು ನಾಗರಾಜ ಈಚಿನ ಚಟುವಟಿಕೆಯ ಬಗ್ಗೆ ವಿವರಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...