Homeಎಲೆಮರೆಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

- Advertisement -
- Advertisement -

ಎಲೆಮರೆ- ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಏಳೆಂಟು ವರ್ಷದಿಂದ ಕೊಟ್ಟೂರಿನಲ್ಲಿ ಸ್ವಯಂ ಆಸಕ್ತಿಯಿಂದ ದಿನಾಲು ಪೌರ ಕಾರ್ಮಿಕರ ಜತೆ ಕಸ ಎತ್ತುವ ಶಿಕ್ಷಕ ನಾಗರಾಜ ಬಗ್ಗೆ ಮಿತ್ರ ಸತೀಶ್ ಪಾಟೀಲ್ ಗಮನ ಸೆಳೆದಾಗ ಅಚ್ಚರಿಯಾಗಿತ್ತು. ಈಚೆಗೆ ಕೊಟ್ಟೂರಲ್ಲಿ ನಾಗರಾಜರನ್ನು ಭೇಟಿ ಮಾಡಿದೆ. ರಸ್ತೆ ಬದಿ ಮಾತನಾಡುತ್ತಾ ನಿಂತಾಗ, ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಪೌರ ಕಾರ್ಮಿಕರು ನಾಗರಾಜರನ್ನು ನೋಡಿ ಮುಖ ಅರಳಿಸಿ `ಮೇಷ್ಟರೇ’ ಎಂದು ಮಾತನಾಡಿಸಿದರು. ನಾಗರಾಜ ಕೂಡ ಅವರಲ್ಲೊಬ್ಬರ ಹಾಗೆ ಆತ್ಮೀಯವಾಗಿ ಮಾತಿಗಿಳಿದರು. ನನ್ನನ್ನು ನಾಗರಾಜ್ ಅವರಿಗೆ ಪರಿಚಯಿಸಿದಾಗ `ಈ ಮೇಷ್ಟ್ರು ನಮಗೆ ಶಕ್ತಿ ಇದ್ದಂಗೆ ಸರ್, ನಮ್ಮ ಕಷ್ಟಕ್ಕೆ ಅಕ್ಕಾರೆ, ನಾವ್ ಬ್ಯಾಡ ಅಂದ್ರೂ ನಮ್ ಜತೆ ಕೆಲಸ ಮಾಡ್ತಾರೆ, ನಮ್ಮನ್ನ ಮನ್ಷಾರು ಅಂತಾನೂ ನೋಡದೆ ಇರೋವಾಗ ಈ ಮೇಷ್ಟ್ರು ನಮಗೆ ಗೌರವಿಸ್ತಾರೆ’ ಎಂದು ನಾಗರಾಜ ಅವರ ಬಗ್ಗೆ ಅಭಿಮಾನದ ಮಾತನ್ನಾಡಿದರು. ಇದನ್ನು ನೋಡುತ್ತಿದ್ದಂತೆ ನಾಗರಾಜ ಹೇಗೆ ಪೌರಕಾರ್ಮಿಕರ ಮನಸ್ಸಲ್ಲಿ ಬೇರೂರಿದ್ದಾರೆ ಅನ್ನಿಸಿತು.

ಕೊಟ್ಟೂರು ಸಮೀಪದ ಬಯಲು ತುಂಬರಗುದ್ದಿಯ ಸರಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ನಾಗರಾಜ್ ಬಂಜಾರ ಮೂಲತಃ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಅಡವಿ ಮಲ್ಲನಕೇರಿ ತಾಂಡಾದ ಮೇಘನಾಯಕ ಮತ್ತು ಲಕ್ಷ್ಮೀಬಾಯಿ ಅವರ ಮಗ. ಅಪ್ಪ ಮೇಘನಾಯಕ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಜವಾನರಾಗಿ ಕೆಲಸ ಮಾಡುತ್ತಲೆ ಕಾಲೇಜನ್ನು ಸ್ವಚ್ಛವಾಗಿಟ್ಟಿದ್ದರು, ಕಾಲೇಜಿನ ಪರಿಸರವನ್ನೂ ಹಸಿರಾಗಿಸಿದ್ದರು. ಮನೆಯಲ್ಲಿ ಸ್ವಚ್ಛತೆಯ ಪಾಠವೂ ನಡೆಯುತ್ತಿತ್ತು. ಅಪ್ಪನ ಮಾತುಗಳಿಗೆ ಅಷ್ಟೇನು ಕಿವಿಗೊಡದ ನಾಗರಾಜ ಪ್ರೌಢಶಾಲೆ ಶಿಕ್ಷಕರಾಗಿ ಕೆಲಸ ಮಾಡಿಕೊಂಡಿದ್ದರು. ತಂದೆ ಅನಾರೋಗ್ಯದಿಂದ ತೀರಿದ ಬಳಿಕ ಮಗನಿಗೆ ಅಪ್ಪನ ಸ್ವಚ್ಛತೆಯ ಅರಿವು ಕಾಡತೊಡಗಿತು. ಅಪ್ಪನ ಆಸೆಯನ್ನು ಆಚರಣೆಗೆ ತರುವ ಮೂಲಕ ಆತನನ್ನು ಗೌರವಿಸಬೇಕು ಎನ್ನುವ ಸಣ್ಣ ಆಲೋಚನೆ ಹೊಳೆಯಿತು.

ಈ ಆಲೋಚನೆ ಮನದೊಳಗೇ ಬೆಳೆದು ಬೆಟ್ಟವಾಯಿತು. ನಾವುಗಳೆ ಗಲೀಜು ಮಾಡುವುದನ್ನು ಪೌರಕಾರ್ಮಿಕರು ಎತ್ತುತ್ತಾರೆ. ಅವರ ಜತೆ ನಾನ್ಯಾಕೆ ಕೈಜೋಡಿಸಬಾರದು ಎನ್ನುವ ಆಲೋಚನೆ ಬಂದಿದೆ. ಹೀಗಾದಲ್ಲಿ ಮನೆಯಲ್ಲಿ ಹೆಂಡತಿ, ತಾಯಿ, ಹೊರಗಡೆ ಸ್ನೇಹಿತರು ಹೇಗೆ ನೋಡಬಹುದು? ಎಂಬ ಆತಂಕವೂ ಕಾಡಿದೆ. 2012 ರ ಒಂದು ದಿನ ಈ ಎಲ್ಲಾ ಭಯ ಆತಂಕ ಮುಜುಗರವನ್ನು ಸರಿಸಿ ಪೌರ ಕಾರ್ಮಿಕರ ಜತೆ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಂಡರು. ಪೌರಕಾರ್ಮಿಕರಿಗೆ ಭಯವಾಯಿತು, `ಸ್ವಾಮಿ ನೀವು ಮೇಷ್ಟ್ರು ನಿಮಗೆ ಸಮಾಜದಲ್ಲಿ ಗೌರವವಿದೆ, ನೀವ್ಯಾಕೆ ನಮ್ಮ ಕೀಳು ಕೆಲಸ ಮಾಡಿ ಮರ್ಯಾದೆ ಕಳಕೊಳ್ತೀರಿ’ ಎಂದರು. ನೋಡಿದ ಜನರು `ಯಾಕೆ ಮೇಷ್ಟ್ರೇ ಸ್ಕೂಲ್ ಬಿಟ್ಟು ಮುನ್ಸಿಪಾಲ್ಟಿಗೆ ಸೇರಿಕೊಂಡ್ರಾ’ ಎಂದು ಗೇಲಿ ಮಾಡಿದರು. `ನೌಕರಿ ಸಿಕ್ಕಾತಿ ಆರಾಮಾಗಿ ಇದ್ಕಂಡೋಗು ಯಾಕ ಹಿಂಗ್ ಮಾಡ್ತೀ’ ಅಂತ ತಾಯಿ ಪ್ರೀತಿಯಿಂದಲೆ ಗದರಿದ್ದರು. ಎದುರು ಹೇಳಲಾರದೆ ಹೆಂಡತಿ ಮುಸಿಮುಸಿ ಕೋಪಗೊಂಡಿದ್ದರು. ಇದೆಲ್ಲಕ್ಕೂ ನಾಗರಾಜ ಕಿವುಡಾಗಿ ತನ್ನ ಕಾರ್ಯವನ್ನು ಮುಂದುವರಿಸಿದರು. ಪೌರಕಾರ್ಮಿಕರೂ ಆಪ್ತರಾದರೂ, ವರ್ಷದಿಂದ ವರ್ಷಕ್ಕೆ ನಾಗರಾಜರ ಚಟುವಟಿಕೆ ಮುಂದುವರಿದಾಗ ಟೀಕೆಗಳೆಲ್ಲಾ ಪ್ರಶಂಸೆಗಳಾಗುವತ್ತ ಸಾಗಿದವು. ಇದೀಗ ಒಂದಿನ ಮನೇಲಿದ್ರೆ ಮಗಳು `ಅಪ್ಪಾ ಯಾಕೆ ಸ್ವಚ್ಛ ಭಾರತಕ್ಕೋಗಿಲ್ಲ’ ಎಂದು ಕೇಳುತ್ತಾಳೆ.

ನಾಗರಾಜ್ ಪೌರಕಾರ್ಮಿಕರ ಜತೆ ಕಸ ಎತ್ತುವುದಷ್ಟಕ್ಕೆ ಸೀಮಿತವಾಗಲಿಲ್ಲ, ನಿಧಾನಕ್ಕೆ ಪೌರ ಕಾರ್ಮಿಕರ ಸಮಸ್ಯೆಗಳಿಗೆ ನೆರವಾಗತೊಡಗಿದರು. ಸಂಘಸಂಸ್ಥೆಗಳಿಂದಲೂ ಅವರಿಗೆ ಸಹಾಯ ಸಿಗುವಂತೆಯೂ, ಅವರ ಕಾರ್ಯಕ್ರಮಗಳಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸುವಂತೆಯೂ ಮಾಡಿದರು. ಹೀಗೆ ನಿರಂತರ ಒಡನಾಟದಿಂದ ಪೌರ ಕಾರ್ಮಿಕರಲ್ಲಿ ಕೆಲವು ಬದಲಾವಣೆ ತರುವಲ್ಲಿಯೂ ಯಶಸ್ವಿಯಾದರು.

ಮೊದಮೊದಲು ಆರೋಗ್ಯದ ಬಗ್ಗೆ ಅಷ್ಟೇನು ಕಾಳಜಿ ಇಲ್ಲದವರು ಈಗೀಗ ಕಾಳಜಿ ವಹಿಸತೊಡಗಿದ್ದಾರೆ. ಜನರು ಮೊದಲು ಪೌರಕಾರ್ಮಿಕರನ್ನು ಹೆಸರಿಡಿದು ಕರೆಯುತ್ತಿರಲಿಲ್ಲ. ಈಗ ಅವರನ್ನು ಹೆಸರಿಡಿದು ಮಾತಾಡಿಸುವ ಮಟ್ಟಿಗೆ, ಅವರು ಮಾಡಿದ ಕೆಲಸ ನೋಡಿ ಥ್ಯಾಂಕ್ಸ್ ಹೇಳುವ ಮಟ್ಟಿಗೆ ಜನರಲ್ಲಿ ಬದಲಾವಣೆ ಬಂದಿದೆ. ಮುಖ್ಯವಾಗಿ ಪೌರಕಾರ್ಮಿಕರನ್ನು ಸಂಘಟಿಸುವ, ಅವರ ಹಕ್ಕುಗಳಿಗಾಗಿ ಹೋರಾಟ ಮಾಡುವ, ಅವರಿಗಾಗುವ ಅನ್ಯಾಯಗಳ ವಿರುದ್ಧ ಪ್ರತಿಭಟಿಸುವ ಬಗೆಗೆ ನಾಗರಾಜ್ ಪೌರಕಾರ್ಮಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ.

`ಬೀದಿನಾಟಕದ ತಂಡ ಮಾಡ್ಕೊಂಡು ಪ್ರತೀ ಗ್ರಾಮಪಂಚಾಯ್ತಿಯಲ್ಲಿ ಬೀದಿ ನಾಟಕ ಮಾಡ್ತಿದ್ವಿ. ಮುಂದೆ ಪೌರ ಕಾರ್ಮಿಕರ ಕಲ್ಯಾಣ ನಿಧಿ ಅಂತ ಮಾಡಿ, ಹೊರಗಿನವರಿಗಿಂತ ಪೌರ ಕಾರ್ಮಿಕರನ್ನೇ ತರಬೇತಿಗೊಳಿಸಿ ಬೀದಿ ನಾಟಕ ಮಾಡಿಸಬೇಕು ಅಂತ ಪ್ಲಾನ್ ಇದೆ ಸರ್’ ಎಂದು ಮುಂದಿನ ಚಟುವಟಿಕೆ ಬಗ್ಗೆ ನಾಗರಾಜ್ ಹೇಳುತ್ತಾರೆ. ದೇಹದ ಆರೋಗ್ಯ ಕಾಪಾಡುವ ಡಾಕ್ಟರ್ ಹತ್ರ ಹೋದಾಗ ನಮಗೆ ಎಷ್ಟೇ ಸುಸ್ತಾಗಿರಲಿ ಎದ್ದು ಅವರಿಗೆ ಗೌರವಿಸುತ್ತೇವೆ. ಹಾಗೆ ನಮ್ಮ ಸುತ್ತಮುತ್ತಣ ಪರಿಸರದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ಬಂದಾಗಲೂ ಎದ್ದು ಅವರಿಗೆ ಗೌರವ ತೋರಿಸಬೇಕು. ಡಾಕ್ಟರ್ ರೋಗ ಬಂದಾಗ ವಾಸಿ ಮಾಡ್ತಾರೆ, ಪೌರ ಕಾರ್ಮಿಕರು ರೋಗ ಬರದಂತೆ ಪರಿಸರವನ್ನ ಸ್ವಚ್ಛ ಮಾಡ್ತಾರೆ, ಹಾಗಾಗಿ ಅವರನ್ನು ಪರಿಸರದ ಡಾಕ್ಟರ್ ಎಂದು ಗೌರವಿಸಬೇಕು ಎನ್ನುವುದು ನಾಗರಾಜರ ತಿಳಿವು.

ಹಿಂದೆ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ಅವರು ನಾಗರಾಜ್ ಅವರ ಕೆಲಸಗಳನ್ನು ಗಮನಿಸಿ ಜಾಗೃತಿ ಮೂಡಿಸಲು ಒಂದು ಸೈಕಲ್ ಕೊಡಿಸಿದ್ದರು. ಅದನ್ನು `ಜಾಗೃತಿ ವಾಹನ’ದ ಹಾಗೆ ಬಳಸುತ್ತಿದ್ದಾರೆ. ಶಾಲಾಮಕ್ಕಳಿಂದ ಹಳ್ಳಿಗಳಲ್ಲಿ ಪರಿಸರ ಜಾಗೃತಿಯ ಬೀದಿ ನಾಟಕ ಮಾಡಿಸಿದ್ದಾರೆ. ಬಿಡುವಿದ್ದಾಗ ಶನಿವಾರ ಭಾನುವಾರ ಹಳ್ಳಿಗಳಿಗೆ ಹೋಗಿ ಹಾಡು ಕತೆ ನಾಟಕಗಳ ಮೂಲಕ ಪರಿಸರದ ಜಾಗೃತಿ ಮೂಡಿಸುತ್ತಿದ್ದಾರೆ.

ನಿಧಾನವಾಗಿ ನನ್ನ ಜತೆ ಕೆಲಸ ಮಾಡೋಕು ಒಂದಷ್ಟು ಜನ ಆಸಕ್ತಿ ತೋರಿದರು. ಇಂಥವರೆಲ್ಲಾ ಸೇರಿ 34 ಜನರ `ಹಸಿರು ಹೊನಲು’ ತಂಡ ರಚನೆಯಾಗಿದೆ. ಈ ತಂಡದಿಂದ ಹತ್ತು ಪಾರ್ಕುಗಳನ್ನು ದತ್ತು ತೆಗೆದುಕೊಳ್ಳಲಾಗಿದೆ. ಗಿಡ ನೆಡುವ ಜತೆ, ಆಯಾ ಗಿಡಗಳನ್ನು ಬೆಳೆಸಲು ಒಂದು ಗಿಡಕ್ಕೆ ಇಬ್ಬರಂತೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. 2016 ರಲ್ಲಿ ನೇಕಾರ ಕಾಲನಿಯಲ್ಲಿ ಜಾಲಿಮರಗಳಿದ್ದ ಪಾರ್ಕನ್ನು ಈಗ ಉದ್ಯಾನವನ ಮಾಡಿದ್ದೀವಿ. ಇದೀಗ 70 ಮರಗಳು, 30 ಆಯುರ್ವೇದಿಕ್ ಸಸ್ಯಗಳಿವೆ. ಇದೀಗ ಅದು ಔಷಧೀಯ ಉದ್ಯಾನವನ. ಪ್ರತಿ ತಿಂಗಳೂ ಒಂದೊಂದು ಕಷಾಯ ಕೊಡ್ತೀವಿ’ ಎಂದು ನಾಗರಾಜ ಈಚಿನ ಚಟುವಟಿಕೆಯ ಬಗ್ಗೆ ವಿವರಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...