Homeಎಲೆಮರೆಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

- Advertisement -
- Advertisement -

ಎಲೆಮರೆ- ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಏಳೆಂಟು ವರ್ಷದಿಂದ ಕೊಟ್ಟೂರಿನಲ್ಲಿ ಸ್ವಯಂ ಆಸಕ್ತಿಯಿಂದ ದಿನಾಲು ಪೌರ ಕಾರ್ಮಿಕರ ಜತೆ ಕಸ ಎತ್ತುವ ಶಿಕ್ಷಕ ನಾಗರಾಜ ಬಗ್ಗೆ ಮಿತ್ರ ಸತೀಶ್ ಪಾಟೀಲ್ ಗಮನ ಸೆಳೆದಾಗ ಅಚ್ಚರಿಯಾಗಿತ್ತು. ಈಚೆಗೆ ಕೊಟ್ಟೂರಲ್ಲಿ ನಾಗರಾಜರನ್ನು ಭೇಟಿ ಮಾಡಿದೆ. ರಸ್ತೆ ಬದಿ ಮಾತನಾಡುತ್ತಾ ನಿಂತಾಗ, ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಪೌರ ಕಾರ್ಮಿಕರು ನಾಗರಾಜರನ್ನು ನೋಡಿ ಮುಖ ಅರಳಿಸಿ `ಮೇಷ್ಟರೇ’ ಎಂದು ಮಾತನಾಡಿಸಿದರು. ನಾಗರಾಜ ಕೂಡ ಅವರಲ್ಲೊಬ್ಬರ ಹಾಗೆ ಆತ್ಮೀಯವಾಗಿ ಮಾತಿಗಿಳಿದರು. ನನ್ನನ್ನು ನಾಗರಾಜ್ ಅವರಿಗೆ ಪರಿಚಯಿಸಿದಾಗ `ಈ ಮೇಷ್ಟ್ರು ನಮಗೆ ಶಕ್ತಿ ಇದ್ದಂಗೆ ಸರ್, ನಮ್ಮ ಕಷ್ಟಕ್ಕೆ ಅಕ್ಕಾರೆ, ನಾವ್ ಬ್ಯಾಡ ಅಂದ್ರೂ ನಮ್ ಜತೆ ಕೆಲಸ ಮಾಡ್ತಾರೆ, ನಮ್ಮನ್ನ ಮನ್ಷಾರು ಅಂತಾನೂ ನೋಡದೆ ಇರೋವಾಗ ಈ ಮೇಷ್ಟ್ರು ನಮಗೆ ಗೌರವಿಸ್ತಾರೆ’ ಎಂದು ನಾಗರಾಜ ಅವರ ಬಗ್ಗೆ ಅಭಿಮಾನದ ಮಾತನ್ನಾಡಿದರು. ಇದನ್ನು ನೋಡುತ್ತಿದ್ದಂತೆ ನಾಗರಾಜ ಹೇಗೆ ಪೌರಕಾರ್ಮಿಕರ ಮನಸ್ಸಲ್ಲಿ ಬೇರೂರಿದ್ದಾರೆ ಅನ್ನಿಸಿತು.

ಕೊಟ್ಟೂರು ಸಮೀಪದ ಬಯಲು ತುಂಬರಗುದ್ದಿಯ ಸರಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ನಾಗರಾಜ್ ಬಂಜಾರ ಮೂಲತಃ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಅಡವಿ ಮಲ್ಲನಕೇರಿ ತಾಂಡಾದ ಮೇಘನಾಯಕ ಮತ್ತು ಲಕ್ಷ್ಮೀಬಾಯಿ ಅವರ ಮಗ. ಅಪ್ಪ ಮೇಘನಾಯಕ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಜವಾನರಾಗಿ ಕೆಲಸ ಮಾಡುತ್ತಲೆ ಕಾಲೇಜನ್ನು ಸ್ವಚ್ಛವಾಗಿಟ್ಟಿದ್ದರು, ಕಾಲೇಜಿನ ಪರಿಸರವನ್ನೂ ಹಸಿರಾಗಿಸಿದ್ದರು. ಮನೆಯಲ್ಲಿ ಸ್ವಚ್ಛತೆಯ ಪಾಠವೂ ನಡೆಯುತ್ತಿತ್ತು. ಅಪ್ಪನ ಮಾತುಗಳಿಗೆ ಅಷ್ಟೇನು ಕಿವಿಗೊಡದ ನಾಗರಾಜ ಪ್ರೌಢಶಾಲೆ ಶಿಕ್ಷಕರಾಗಿ ಕೆಲಸ ಮಾಡಿಕೊಂಡಿದ್ದರು. ತಂದೆ ಅನಾರೋಗ್ಯದಿಂದ ತೀರಿದ ಬಳಿಕ ಮಗನಿಗೆ ಅಪ್ಪನ ಸ್ವಚ್ಛತೆಯ ಅರಿವು ಕಾಡತೊಡಗಿತು. ಅಪ್ಪನ ಆಸೆಯನ್ನು ಆಚರಣೆಗೆ ತರುವ ಮೂಲಕ ಆತನನ್ನು ಗೌರವಿಸಬೇಕು ಎನ್ನುವ ಸಣ್ಣ ಆಲೋಚನೆ ಹೊಳೆಯಿತು.

ಈ ಆಲೋಚನೆ ಮನದೊಳಗೇ ಬೆಳೆದು ಬೆಟ್ಟವಾಯಿತು. ನಾವುಗಳೆ ಗಲೀಜು ಮಾಡುವುದನ್ನು ಪೌರಕಾರ್ಮಿಕರು ಎತ್ತುತ್ತಾರೆ. ಅವರ ಜತೆ ನಾನ್ಯಾಕೆ ಕೈಜೋಡಿಸಬಾರದು ಎನ್ನುವ ಆಲೋಚನೆ ಬಂದಿದೆ. ಹೀಗಾದಲ್ಲಿ ಮನೆಯಲ್ಲಿ ಹೆಂಡತಿ, ತಾಯಿ, ಹೊರಗಡೆ ಸ್ನೇಹಿತರು ಹೇಗೆ ನೋಡಬಹುದು? ಎಂಬ ಆತಂಕವೂ ಕಾಡಿದೆ. 2012 ರ ಒಂದು ದಿನ ಈ ಎಲ್ಲಾ ಭಯ ಆತಂಕ ಮುಜುಗರವನ್ನು ಸರಿಸಿ ಪೌರ ಕಾರ್ಮಿಕರ ಜತೆ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಂಡರು. ಪೌರಕಾರ್ಮಿಕರಿಗೆ ಭಯವಾಯಿತು, `ಸ್ವಾಮಿ ನೀವು ಮೇಷ್ಟ್ರು ನಿಮಗೆ ಸಮಾಜದಲ್ಲಿ ಗೌರವವಿದೆ, ನೀವ್ಯಾಕೆ ನಮ್ಮ ಕೀಳು ಕೆಲಸ ಮಾಡಿ ಮರ್ಯಾದೆ ಕಳಕೊಳ್ತೀರಿ’ ಎಂದರು. ನೋಡಿದ ಜನರು `ಯಾಕೆ ಮೇಷ್ಟ್ರೇ ಸ್ಕೂಲ್ ಬಿಟ್ಟು ಮುನ್ಸಿಪಾಲ್ಟಿಗೆ ಸೇರಿಕೊಂಡ್ರಾ’ ಎಂದು ಗೇಲಿ ಮಾಡಿದರು. `ನೌಕರಿ ಸಿಕ್ಕಾತಿ ಆರಾಮಾಗಿ ಇದ್ಕಂಡೋಗು ಯಾಕ ಹಿಂಗ್ ಮಾಡ್ತೀ’ ಅಂತ ತಾಯಿ ಪ್ರೀತಿಯಿಂದಲೆ ಗದರಿದ್ದರು. ಎದುರು ಹೇಳಲಾರದೆ ಹೆಂಡತಿ ಮುಸಿಮುಸಿ ಕೋಪಗೊಂಡಿದ್ದರು. ಇದೆಲ್ಲಕ್ಕೂ ನಾಗರಾಜ ಕಿವುಡಾಗಿ ತನ್ನ ಕಾರ್ಯವನ್ನು ಮುಂದುವರಿಸಿದರು. ಪೌರಕಾರ್ಮಿಕರೂ ಆಪ್ತರಾದರೂ, ವರ್ಷದಿಂದ ವರ್ಷಕ್ಕೆ ನಾಗರಾಜರ ಚಟುವಟಿಕೆ ಮುಂದುವರಿದಾಗ ಟೀಕೆಗಳೆಲ್ಲಾ ಪ್ರಶಂಸೆಗಳಾಗುವತ್ತ ಸಾಗಿದವು. ಇದೀಗ ಒಂದಿನ ಮನೇಲಿದ್ರೆ ಮಗಳು `ಅಪ್ಪಾ ಯಾಕೆ ಸ್ವಚ್ಛ ಭಾರತಕ್ಕೋಗಿಲ್ಲ’ ಎಂದು ಕೇಳುತ್ತಾಳೆ.

ನಾಗರಾಜ್ ಪೌರಕಾರ್ಮಿಕರ ಜತೆ ಕಸ ಎತ್ತುವುದಷ್ಟಕ್ಕೆ ಸೀಮಿತವಾಗಲಿಲ್ಲ, ನಿಧಾನಕ್ಕೆ ಪೌರ ಕಾರ್ಮಿಕರ ಸಮಸ್ಯೆಗಳಿಗೆ ನೆರವಾಗತೊಡಗಿದರು. ಸಂಘಸಂಸ್ಥೆಗಳಿಂದಲೂ ಅವರಿಗೆ ಸಹಾಯ ಸಿಗುವಂತೆಯೂ, ಅವರ ಕಾರ್ಯಕ್ರಮಗಳಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸುವಂತೆಯೂ ಮಾಡಿದರು. ಹೀಗೆ ನಿರಂತರ ಒಡನಾಟದಿಂದ ಪೌರ ಕಾರ್ಮಿಕರಲ್ಲಿ ಕೆಲವು ಬದಲಾವಣೆ ತರುವಲ್ಲಿಯೂ ಯಶಸ್ವಿಯಾದರು.

ಮೊದಮೊದಲು ಆರೋಗ್ಯದ ಬಗ್ಗೆ ಅಷ್ಟೇನು ಕಾಳಜಿ ಇಲ್ಲದವರು ಈಗೀಗ ಕಾಳಜಿ ವಹಿಸತೊಡಗಿದ್ದಾರೆ. ಜನರು ಮೊದಲು ಪೌರಕಾರ್ಮಿಕರನ್ನು ಹೆಸರಿಡಿದು ಕರೆಯುತ್ತಿರಲಿಲ್ಲ. ಈಗ ಅವರನ್ನು ಹೆಸರಿಡಿದು ಮಾತಾಡಿಸುವ ಮಟ್ಟಿಗೆ, ಅವರು ಮಾಡಿದ ಕೆಲಸ ನೋಡಿ ಥ್ಯಾಂಕ್ಸ್ ಹೇಳುವ ಮಟ್ಟಿಗೆ ಜನರಲ್ಲಿ ಬದಲಾವಣೆ ಬಂದಿದೆ. ಮುಖ್ಯವಾಗಿ ಪೌರಕಾರ್ಮಿಕರನ್ನು ಸಂಘಟಿಸುವ, ಅವರ ಹಕ್ಕುಗಳಿಗಾಗಿ ಹೋರಾಟ ಮಾಡುವ, ಅವರಿಗಾಗುವ ಅನ್ಯಾಯಗಳ ವಿರುದ್ಧ ಪ್ರತಿಭಟಿಸುವ ಬಗೆಗೆ ನಾಗರಾಜ್ ಪೌರಕಾರ್ಮಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ.

`ಬೀದಿನಾಟಕದ ತಂಡ ಮಾಡ್ಕೊಂಡು ಪ್ರತೀ ಗ್ರಾಮಪಂಚಾಯ್ತಿಯಲ್ಲಿ ಬೀದಿ ನಾಟಕ ಮಾಡ್ತಿದ್ವಿ. ಮುಂದೆ ಪೌರ ಕಾರ್ಮಿಕರ ಕಲ್ಯಾಣ ನಿಧಿ ಅಂತ ಮಾಡಿ, ಹೊರಗಿನವರಿಗಿಂತ ಪೌರ ಕಾರ್ಮಿಕರನ್ನೇ ತರಬೇತಿಗೊಳಿಸಿ ಬೀದಿ ನಾಟಕ ಮಾಡಿಸಬೇಕು ಅಂತ ಪ್ಲಾನ್ ಇದೆ ಸರ್’ ಎಂದು ಮುಂದಿನ ಚಟುವಟಿಕೆ ಬಗ್ಗೆ ನಾಗರಾಜ್ ಹೇಳುತ್ತಾರೆ. ದೇಹದ ಆರೋಗ್ಯ ಕಾಪಾಡುವ ಡಾಕ್ಟರ್ ಹತ್ರ ಹೋದಾಗ ನಮಗೆ ಎಷ್ಟೇ ಸುಸ್ತಾಗಿರಲಿ ಎದ್ದು ಅವರಿಗೆ ಗೌರವಿಸುತ್ತೇವೆ. ಹಾಗೆ ನಮ್ಮ ಸುತ್ತಮುತ್ತಣ ಪರಿಸರದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ಬಂದಾಗಲೂ ಎದ್ದು ಅವರಿಗೆ ಗೌರವ ತೋರಿಸಬೇಕು. ಡಾಕ್ಟರ್ ರೋಗ ಬಂದಾಗ ವಾಸಿ ಮಾಡ್ತಾರೆ, ಪೌರ ಕಾರ್ಮಿಕರು ರೋಗ ಬರದಂತೆ ಪರಿಸರವನ್ನ ಸ್ವಚ್ಛ ಮಾಡ್ತಾರೆ, ಹಾಗಾಗಿ ಅವರನ್ನು ಪರಿಸರದ ಡಾಕ್ಟರ್ ಎಂದು ಗೌರವಿಸಬೇಕು ಎನ್ನುವುದು ನಾಗರಾಜರ ತಿಳಿವು.

ಹಿಂದೆ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ಅವರು ನಾಗರಾಜ್ ಅವರ ಕೆಲಸಗಳನ್ನು ಗಮನಿಸಿ ಜಾಗೃತಿ ಮೂಡಿಸಲು ಒಂದು ಸೈಕಲ್ ಕೊಡಿಸಿದ್ದರು. ಅದನ್ನು `ಜಾಗೃತಿ ವಾಹನ’ದ ಹಾಗೆ ಬಳಸುತ್ತಿದ್ದಾರೆ. ಶಾಲಾಮಕ್ಕಳಿಂದ ಹಳ್ಳಿಗಳಲ್ಲಿ ಪರಿಸರ ಜಾಗೃತಿಯ ಬೀದಿ ನಾಟಕ ಮಾಡಿಸಿದ್ದಾರೆ. ಬಿಡುವಿದ್ದಾಗ ಶನಿವಾರ ಭಾನುವಾರ ಹಳ್ಳಿಗಳಿಗೆ ಹೋಗಿ ಹಾಡು ಕತೆ ನಾಟಕಗಳ ಮೂಲಕ ಪರಿಸರದ ಜಾಗೃತಿ ಮೂಡಿಸುತ್ತಿದ್ದಾರೆ.

ನಿಧಾನವಾಗಿ ನನ್ನ ಜತೆ ಕೆಲಸ ಮಾಡೋಕು ಒಂದಷ್ಟು ಜನ ಆಸಕ್ತಿ ತೋರಿದರು. ಇಂಥವರೆಲ್ಲಾ ಸೇರಿ 34 ಜನರ `ಹಸಿರು ಹೊನಲು’ ತಂಡ ರಚನೆಯಾಗಿದೆ. ಈ ತಂಡದಿಂದ ಹತ್ತು ಪಾರ್ಕುಗಳನ್ನು ದತ್ತು ತೆಗೆದುಕೊಳ್ಳಲಾಗಿದೆ. ಗಿಡ ನೆಡುವ ಜತೆ, ಆಯಾ ಗಿಡಗಳನ್ನು ಬೆಳೆಸಲು ಒಂದು ಗಿಡಕ್ಕೆ ಇಬ್ಬರಂತೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. 2016 ರಲ್ಲಿ ನೇಕಾರ ಕಾಲನಿಯಲ್ಲಿ ಜಾಲಿಮರಗಳಿದ್ದ ಪಾರ್ಕನ್ನು ಈಗ ಉದ್ಯಾನವನ ಮಾಡಿದ್ದೀವಿ. ಇದೀಗ 70 ಮರಗಳು, 30 ಆಯುರ್ವೇದಿಕ್ ಸಸ್ಯಗಳಿವೆ. ಇದೀಗ ಅದು ಔಷಧೀಯ ಉದ್ಯಾನವನ. ಪ್ರತಿ ತಿಂಗಳೂ ಒಂದೊಂದು ಕಷಾಯ ಕೊಡ್ತೀವಿ’ ಎಂದು ನಾಗರಾಜ ಈಚಿನ ಚಟುವಟಿಕೆಯ ಬಗ್ಗೆ ವಿವರಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...