Homeಕರ್ನಾಟಕನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

ನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

- Advertisement -
- Advertisement -

ಭಾರತದ ಪುರಾಣಗಳಲ್ಲಿ ಹಾವುಗಳಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ನಾಗರ ಹಾವನ್ನು ದೇವರ ಅವತಾರವೆಂದು, ಅದರ ಹಣೆಯಲ್ಲಿ ವಜ್ರ (ನಾಗಮಣಿ) ಇದೆಯೆಂದು ಮತ್ತು ಅದನ್ನು ಆರಾಧನೆ ಮಾಡುವುದರಿಂದ ಹಲವಾರು ಕಾಯಿಲೆಗಳು ಗುಣವಾಗುತ್ತದೆ ಎಂದು ನಂಬಲಾಗುತ್ತದೆ.

ಒಮ್ಮೆ ಒಬ್ಬ ಹೆಂಗಸು ತನ್ನ ಮಗಳು, ಸುಂದರ ಮತ್ತು ಶ್ರೀಮಂತ ಹುಡಗನನ್ನು ಮದುವೆ ಆಗಬೇಕು, ಅದಕ್ಕಾಗಿ ಏನು ಮಾಡಬೇಕು ಎಂದು ಪುರೋಹಿತನ ಬಳಿ ಕೇಳುತ್ತಾಳೆ. ಆ ಪುರೋಹಿತ ಮಹಿಳೆಗೆ, “ನಿನ್ನ ಮಗಳು ನಾಗರ ಪಂಚಮಿಯ ದಿನ ಒಂದು ನಾಗರ ಹಾವನ್ನು ಮದುವೆ ಆಗಬೇಕು, ನಾಗರ ಪಂಚಮಿಯ ದಿನ ಮದುವೆ ಆದರೆ ಆ ಹಾವೇ ಒಂದು ಸುಂದರ ಯುವಕನಾಗಿ ಮತ್ತು ನಾಗಮಣಿ ಅದರ ಬಳಿ ಇರುವುದರಿಂದ ಶ್ರೀಮಂತನಾಗಿಯೂ ಬದಲಾಗುತ್ತಾನೆ” ಎಂದು ಸಲಹೆ ನೀಡುತ್ತಾನೆ.

ಅಂತೆಯೇ ಅವರು ಒಂದು ನಾಗರ ಹಾವನ್ನು ಹಿಡಿದು, ಪ್ರಜ್ಞೆ ತಪ್ಪಿಸಿ ’ಮದುವೆ’ ಮಾಡಿಸುತ್ತಾರೆ. ಮುಂದೇನಾಯಿತು ಎಂಬ ಕಾತರವೇ? ಅಂಥದ್ದೇನಿಲ್ಲ ಹಾವು ಎಚ್ಚರಗೊಂಡಮೇಲೆ ಒತ್ತಡ ಮತ್ತು ಗಾಬರಿಯಲ್ಲಿದ್ದ ಹಾವು ತನ್ನ ಆತ್ಮರಕ್ಷಣೆಗಾಗಿ ಆ ಹುಡುಗಿಯನ್ನು ಕಚ್ಚಿ ಓಡಿಹೋಯಿತು. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ನಡೆದುಹೋಗಿದೆ. ಇಂದಿನ ಆಧುನಿಕ ಯುಗದಲ್ಲಿಯೂ ಹಾವಿನ ಬಗ್ಗೆ ಆಪಾರವಾದ ತಪ್ಪು ಕಲ್ಪನೆಗಳು ಇದೆ ಮತ್ತು ಈ ಕಾರಣಕ್ಕೆ ಹಾವುಗಳ ಜೊತೆ ತಪ್ಪಾಗಿ ನಡೆದುಕೊಂಡು ಅವುಗಳ ಸಾವಿಗೂ ಕಾರಣವಾಗಿದೆ ಎಂಬುದು ಆತಂಕಕಾರಿ ವಿಚಾರ.

ಇದನ್ನೂ ಓದಿ: ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ಈ ನಾಗರ ಪಂಚಮಿಯ ದಿನ ಹಾವುಗಳ ಕುರಿತು ಇರುವ ಮಿಥ್ಯೆ ಮತ್ತು ಸತ್ಯಗಳನ್ನು ತಿಳಿದುಕೊಳ್ಳೋಣ

೧. ಹಾವುಗಳು ಹಾಲು ಕುಡಿಯುತ್ತವೆ:

ನಾಗರ ಪಂಚಮಿಯ ದಿನ ಜನರು ಹುತ್ತಗಳಿಗೆ, ಹಾವುಗಳಿಗೆ ಹಾಲುಣಿಸುವುದು ಹಬ್ಬದ ಬಹುಮುಖ್ಯ ಭಾಗವಾಗಿದೆ. ಮತ್ತು ಹಾಲು ಕುಡಿಯುತ್ತದೆ ಎನ್ನುವುದು ಹಾವುಗಳ ಕುರಿತು ಇರುವ ಅತ್ಯಂತ ದೊಡ್ಡ ಮಿಥ್ಯೆ. ವೈಜ್ಞಾನಿಕವಾಗಿ ಜೀವರಾಶಿಯಲ್ಲಿ ಹಾಲು ಕುಡಿಯುವ ಜೀವಿಗಳು ಎಂದರೆ ಸಸ್ತನಿಗಳು, ಹಾವುಗಳು ಸರಿಸೃಪಗಳು ಹಾಗಾಗಿ ಹಾವುಗಳು ಹಾಲು ಕುಡಿಯುದಿಲ್ಲ.

ಹಾಲು ಕುಡಿಯುವ ದೃಶ್ಯ ನಾನು ನೋಡಿದ್ದೇನಲ್ಲ..?

ಸಾಮಾನ್ಯವಾಗಿ ನಾಗರ ಪಂಚಮಿ ಅಥವಾ ಯಾವುದಾರು ವಿಶೇಷ ಸಂದರ್ಭದಲ್ಲಿ ಪೂಜಾರಿಗಳು ಹಾವುಗಳನ್ನು ಹಿಡಿದು ಅವುಗಳಿಗೆ ಆಹಾರ, ನೀರು ಏನೂ ಸಿಗದಂತೆ ಮಾಡಿ ತಿಂಗಳು ಗಟ್ಟಲೆ ಇಡಲಾಗುತ್ತದೆ. ಇದರಿಂದ ಹಾವುಗಳು ಬಳಲಿ ಡೀಹೈಡ್ರೇಟ್ ಆಗುತ್ತದೆ. ಅಂತ ಹಾವುಗಳಿಗೆ ಮಾತ್ರ ಬಲವಂತವಾಗಿ ಹಾಲು ಕುಡಿಸಲಾಗುತ್ತದೆ. ಹಾವುಗಳು ಶೀತ ರಕ್ತದ ಸರೀಸೃಪಗಳು ಅವುಗಳಿಗೆ ಬಲವಂತವಾಗಿ ಹಾಲು ಕುಡಿಸುವುದರಿಂದ ಅವಕ್ಕೆ ಸಾವು ಸಂಭವಿಸುತ್ತದೆ!

೨. ನಾಗರ ಹಾವುಗಳು ಕ್ರೂರ ಜೀವಿಗಳು, ಹಾವುಗಳಿಗೆ 12 ವರ್ಷ ದ್ವೇಷ ಇರುತ್ತದೆ:

ಸಿನೆಮಾದವರಿಗೆ ದೊಡ್ಡ ನಮಸ್ಕಾರ ಹೊಡಿಯಬೇಕು. ಇಂತಹದೊಂದು ತಪ್ಪು ಕಲ್ಪನೆಗೆ ಪುರಾಣಗಳ ಜೊತೆಜೊತೆಗೆ ಹೆಚ್ಚಿನ ಕೊಡುಗೆ ನೀಡಿದ್ದು ಸಿನೆಮಾ ರಂಗ. ದ್ವೇಷ ಎನ್ನುವುದು ಹೆಚ್ಚು ಅಭಿವೃದ್ದಿಗೊಂಡ ಮನುಷ್ಯರ ಮೆದಿಳಿನಲ್ಲಿ ಇರುತ್ತದೆಯೇ ಹೊರತು ಹಾವುಗಳಲ್ಲಿ ಇರುವುದೇ ಇಲ್ಲ. ಹಾವುಗಳು ದ್ವೇಷ ಮಾಡುವ ಜೀವಿಗಳಲ್ಲ, ಅವುಗಳಿಗೆ ಅಷ್ಟು ತೀಕ್ಷ್ಣವಾದ ನೆನಪಿನ ಶಕ್ತಿ ಇಲ್ಲ ಮತ್ತು ಅವುಗಳ ಮೆದಿಳು ಅಷ್ಟು ’ಅಭಿವೃದ್ಧಿಯೂ’ ಆಗಿಲ್ಲ. ದಶಕಗಳ ಕಾಲ ಮನುಷ್ಯರ ಮುಖವನ್ನು ನೆನಪಿನಲ್ಲಿಟ್ಟುಕೊಂಡು ಸಾಯಿಸಲು ಬರುತ್ತದೆ ಎನ್ನುವ ಮೂಢ ನಂಬಿಕೆ ಹುಟ್ಟಲು ಕಾರಣಕರ್ತರು ನಮ್ಮ ಸಿನೆಮಾದವರು.

Nag Panchami Festival In Bidar - YouTube

 

೩. ನಾಗರ ಹಾವಿನ ಬಳಿ ನಾಗಮಣಿ ಇದೆ, ಅದರಿಂದ ಸನ್ಮೋಹಿನಿ ಮಾಡುತ್ತದೆ.

ಇದು ತಮಾಷೆಯಾಗಿದೆಯಾದರೂ ಪುರಾಣ ಮತ್ತು ಸಿನೆಮಾ ಜುಗಲ್‌ಬಂದಿಯಿಂದಾಗಿ ಈ ನಂಬಿಕೆಯೂ ರೂಢಿಯಲ್ಲಿದೆ. ಹಾವುಗಳ ಹಣೆಯಲ್ಲಿ ಕೋಟಿಗಟ್ಟಲೆ ಬೆಲೆ ಬಾಳುವ ವಜ್ರ(ನಾಗಮಣಿ) ಇದೆ ಎನ್ನುವ ಕಾರಣಕ್ಕೆ ಅದೆಷ್ಟೋ ನಾಗರಗಳನ್ನು ಹಿಡಿದು ಚಿತ್ರಹಿಂಸೆ ನೀಡಿ ಸಾಯಿಸಲಾಗಿದೆ.

೪. ಹಾವುಗಳಿಗೆ ಏಳು ತಲೆಗಳು ಇರುತ್ತದೆ.

ಏಳು ತಲೆಯ ಹಾವು ಈ ದೇವಸ್ಥಾನದಲ್ಲಿ ಕಾವಲಿದೆ, ಆ ನಿಧಿಗೆ ಕಾವಲಿದೆ, ಅವನು ಏಳು ತಲೆಯ ಹಾವು ನೋಡಿದನಂತೆ ಹಾಗಾಗಿ ಸತ್ತುಹೋದ. ಇಂತಹ ಹಲವಾರು ಮಾತುಗಳನ್ನು ನಾವು ಕೇಳಿರುತ್ತೇವೆ. ಇನ್ನೂ ಕೆಲವರು ಈಗ ಇಲ್ಲ ಮುಂಚೆ ಇತ್ತು, ದೇವರುಗಳಿಗೆ ಏಳೆಡೆಯ ಹಾವು ಕಾವಲು ಇರುತ್ತಿತ್ತು ಎಂದು ಹೇಳುತ್ತಾರೆ. ಈಗ ಅಸ್ತಿತ್ವದಲ್ಲಿ ಇಲ್ಲದ ಡೈನಾಸಾರ್‌ಗಳ ಪಳೆಯುಳಿಕೆಗಳಿಂದ ಮತ್ತು ಹಲವಾರು ವೈಜ್ಞಾನಿಕ ಪರೀಕ್ಷೆಗಳ ಮೂಲಕ ಡೈನಾಸಾರ್ ಗಳು ಇದ್ದವು ಎನ್ನುವ ನಿರ್ಧಾರಕ್ಕೆ ವಿಜ್ಞಾನಿಗಳು ಬಂದಿದ್ದಾರೆ. ಆದರೆ ಏಳು ತಲೆಯ ಹಾವುಗಳು ಇರುವ/ಇದ್ದ ಕುರಿತಾಗಿ ಯಾವುದೇ ಆಧಾರಗಳು ಲಭ್ಯವಿಲ್ಲ.

೫. ಹಾವುಗಳು ಹಾರುತ್ತವೆ.

ಹಾವುಗಳು ಹಾರುತ್ತದೆ ಎನ್ನುವುದನ್ನು ಕೆಲವೇ ಕೆಲವು ಜನರು ನಂಬುತ್ತಾರೆ, ಹಾರುವ ಕೆಲಸ ಏನಿದ್ದರು ಪಕ್ಷಿಗಳದ್ದು. ಸರೀಸೃಪಗಳು ತೆವಳುತ್ತವೆ. ಕೆಲವು ಸಂದರ್ಭದಲ್ಲಿ ಮತ್ತು ಕೆಲವು ಹಾವುಗಳು ಮಾತ್ರ ತಮ್ಮ ದೇಹ ರಚನೆ, ತೂಕ ಆಧಾರದ ಮೇಲೆ ಮರದ ರೆಂಬೆಯಿಂದ ಮತ್ತೊಂದು ರೆಂಬೆಗೆ ಅಥವಾ ಆಳದ ಜಾಗವನ್ನು ದಾಟುವಾಗ ಜಿಗಿಯುತ್ತದೆ ಆದರೆ ಹಾವುಗಳು ಹಾರುವುದಿಲ್ಲ.

ಹಾವುಗಳ ಕುರಿತು ಭಾರತದಲ್ಲಿ ಇಂತಹ ಇನ್ನೂ ಹತ್ತಾರು ಮೂಢ ನಂಬಿಕೆಗಳು ಆಚರಣೆಯಲ್ಲಿದೆ. ಕೆಲವನ್ನು ಮಾತ್ರ ಇಲ್ಲಿ ಚರ್ಚಿಸಲಾಗಿದೆ.

ವಾಸುಕಿ, ಶೇಶನಾಗ ಮತ್ತು ಹಲವು ಪುರಾಣಗಳನ್ನು ಆಧರಿಸಿ ಹಾವುಗಳನ್ನು ಶತಮಾನಗಳನ್ನು ಹಿಂದೂ ಸಂಪ್ರದಾಯದ ಪ್ರಕಾರ ದೇವರೆಂದು ಆರಾಧಾನೆ ಮಾಡಲಾಗುತ್ತಿದೆ. ಅಲ್ಲದೇ ಬೇರೆ ಸಂಪ್ರದಾಯದಲ್ಲಿಯೂ ಆರಾಧನೆ ಇದೆ. ಈಜಿಪ್ಟ್ ಪುರಾಣದ ವಾಜೆಟ್ ನಲ್ಲಿಯೂ ನಾಗ ದೇವಿಯನ್ನು ಆರಾಧಾನೆ ಮಾಡಲಾಗುತ್ತದೆ. ಮತ್ತು (ಬೈಬಲ್ ನ ಸರ್ಪೆಂಟ್ ಸೈತಾನ್) ಹಾವುಗಳನ್ನು ಕೆಟ್ಟ ರಾಕ್ಷಸ ಎಂಬಂತೆಯೂ ನೋಡಲಾಗುತ್ತದೆ. ಆದರೆ ಹಿಂದೂ ಸಂಪ್ರದಾಯದ ಆಚರಣೆಯಲ್ಲಿ ಇಂದಿಗೂ ನಾಗರ ಹಾವುಗಳ ಆರಾಧನೆ ಮುಂದುವರೆದಿದೆ. ಒಟ್ಟಾರೆಯಲ್ಲಿ ಹಾವುಗಳ ಅತೀಯಾದ ಆರಾಧನೆ ಅಥವಾ ದ್ವೇಷ ಈ ಎರಡರಿಂದಲೂ ಹಾವುಗಳ ಅತ್ಯಂತ ತಪ್ಪಾಗಿ ಅರ್ಥ ಮಾಡಿಕೊಳ್ಳಲಾದ ಜೀವಿಯಾಗಿದೆ ಮತ್ತು ಇದರಿಂದಾಗಿ ನಿರಪರಾದಿ ಮುಗ್ದ ಹಾವಿನ ಜೀವಕ್ಕೂ ಅಪಾಯ ತಂದೊಡ್ಡಿದೆ.

ಆಧಾರ: PUGDUNDEE SAFARIS


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...