Homeಕರ್ನಾಟಕನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

ನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

- Advertisement -
- Advertisement -

ಭಾರತದ ಪುರಾಣಗಳಲ್ಲಿ ಹಾವುಗಳಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ನಾಗರ ಹಾವನ್ನು ದೇವರ ಅವತಾರವೆಂದು, ಅದರ ಹಣೆಯಲ್ಲಿ ವಜ್ರ (ನಾಗಮಣಿ) ಇದೆಯೆಂದು ಮತ್ತು ಅದನ್ನು ಆರಾಧನೆ ಮಾಡುವುದರಿಂದ ಹಲವಾರು ಕಾಯಿಲೆಗಳು ಗುಣವಾಗುತ್ತದೆ ಎಂದು ನಂಬಲಾಗುತ್ತದೆ.

ಒಮ್ಮೆ ಒಬ್ಬ ಹೆಂಗಸು ತನ್ನ ಮಗಳು, ಸುಂದರ ಮತ್ತು ಶ್ರೀಮಂತ ಹುಡಗನನ್ನು ಮದುವೆ ಆಗಬೇಕು, ಅದಕ್ಕಾಗಿ ಏನು ಮಾಡಬೇಕು ಎಂದು ಪುರೋಹಿತನ ಬಳಿ ಕೇಳುತ್ತಾಳೆ. ಆ ಪುರೋಹಿತ ಮಹಿಳೆಗೆ, “ನಿನ್ನ ಮಗಳು ನಾಗರ ಪಂಚಮಿಯ ದಿನ ಒಂದು ನಾಗರ ಹಾವನ್ನು ಮದುವೆ ಆಗಬೇಕು, ನಾಗರ ಪಂಚಮಿಯ ದಿನ ಮದುವೆ ಆದರೆ ಆ ಹಾವೇ ಒಂದು ಸುಂದರ ಯುವಕನಾಗಿ ಮತ್ತು ನಾಗಮಣಿ ಅದರ ಬಳಿ ಇರುವುದರಿಂದ ಶ್ರೀಮಂತನಾಗಿಯೂ ಬದಲಾಗುತ್ತಾನೆ” ಎಂದು ಸಲಹೆ ನೀಡುತ್ತಾನೆ.

ಅಂತೆಯೇ ಅವರು ಒಂದು ನಾಗರ ಹಾವನ್ನು ಹಿಡಿದು, ಪ್ರಜ್ಞೆ ತಪ್ಪಿಸಿ ’ಮದುವೆ’ ಮಾಡಿಸುತ್ತಾರೆ. ಮುಂದೇನಾಯಿತು ಎಂಬ ಕಾತರವೇ? ಅಂಥದ್ದೇನಿಲ್ಲ ಹಾವು ಎಚ್ಚರಗೊಂಡಮೇಲೆ ಒತ್ತಡ ಮತ್ತು ಗಾಬರಿಯಲ್ಲಿದ್ದ ಹಾವು ತನ್ನ ಆತ್ಮರಕ್ಷಣೆಗಾಗಿ ಆ ಹುಡುಗಿಯನ್ನು ಕಚ್ಚಿ ಓಡಿಹೋಯಿತು. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ನಡೆದುಹೋಗಿದೆ. ಇಂದಿನ ಆಧುನಿಕ ಯುಗದಲ್ಲಿಯೂ ಹಾವಿನ ಬಗ್ಗೆ ಆಪಾರವಾದ ತಪ್ಪು ಕಲ್ಪನೆಗಳು ಇದೆ ಮತ್ತು ಈ ಕಾರಣಕ್ಕೆ ಹಾವುಗಳ ಜೊತೆ ತಪ್ಪಾಗಿ ನಡೆದುಕೊಂಡು ಅವುಗಳ ಸಾವಿಗೂ ಕಾರಣವಾಗಿದೆ ಎಂಬುದು ಆತಂಕಕಾರಿ ವಿಚಾರ.

ಇದನ್ನೂ ಓದಿ: ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ಈ ನಾಗರ ಪಂಚಮಿಯ ದಿನ ಹಾವುಗಳ ಕುರಿತು ಇರುವ ಮಿಥ್ಯೆ ಮತ್ತು ಸತ್ಯಗಳನ್ನು ತಿಳಿದುಕೊಳ್ಳೋಣ

೧. ಹಾವುಗಳು ಹಾಲು ಕುಡಿಯುತ್ತವೆ:

ನಾಗರ ಪಂಚಮಿಯ ದಿನ ಜನರು ಹುತ್ತಗಳಿಗೆ, ಹಾವುಗಳಿಗೆ ಹಾಲುಣಿಸುವುದು ಹಬ್ಬದ ಬಹುಮುಖ್ಯ ಭಾಗವಾಗಿದೆ. ಮತ್ತು ಹಾಲು ಕುಡಿಯುತ್ತದೆ ಎನ್ನುವುದು ಹಾವುಗಳ ಕುರಿತು ಇರುವ ಅತ್ಯಂತ ದೊಡ್ಡ ಮಿಥ್ಯೆ. ವೈಜ್ಞಾನಿಕವಾಗಿ ಜೀವರಾಶಿಯಲ್ಲಿ ಹಾಲು ಕುಡಿಯುವ ಜೀವಿಗಳು ಎಂದರೆ ಸಸ್ತನಿಗಳು, ಹಾವುಗಳು ಸರಿಸೃಪಗಳು ಹಾಗಾಗಿ ಹಾವುಗಳು ಹಾಲು ಕುಡಿಯುದಿಲ್ಲ.

ಹಾಲು ಕುಡಿಯುವ ದೃಶ್ಯ ನಾನು ನೋಡಿದ್ದೇನಲ್ಲ..?

ಸಾಮಾನ್ಯವಾಗಿ ನಾಗರ ಪಂಚಮಿ ಅಥವಾ ಯಾವುದಾರು ವಿಶೇಷ ಸಂದರ್ಭದಲ್ಲಿ ಪೂಜಾರಿಗಳು ಹಾವುಗಳನ್ನು ಹಿಡಿದು ಅವುಗಳಿಗೆ ಆಹಾರ, ನೀರು ಏನೂ ಸಿಗದಂತೆ ಮಾಡಿ ತಿಂಗಳು ಗಟ್ಟಲೆ ಇಡಲಾಗುತ್ತದೆ. ಇದರಿಂದ ಹಾವುಗಳು ಬಳಲಿ ಡೀಹೈಡ್ರೇಟ್ ಆಗುತ್ತದೆ. ಅಂತ ಹಾವುಗಳಿಗೆ ಮಾತ್ರ ಬಲವಂತವಾಗಿ ಹಾಲು ಕುಡಿಸಲಾಗುತ್ತದೆ. ಹಾವುಗಳು ಶೀತ ರಕ್ತದ ಸರೀಸೃಪಗಳು ಅವುಗಳಿಗೆ ಬಲವಂತವಾಗಿ ಹಾಲು ಕುಡಿಸುವುದರಿಂದ ಅವಕ್ಕೆ ಸಾವು ಸಂಭವಿಸುತ್ತದೆ!

೨. ನಾಗರ ಹಾವುಗಳು ಕ್ರೂರ ಜೀವಿಗಳು, ಹಾವುಗಳಿಗೆ 12 ವರ್ಷ ದ್ವೇಷ ಇರುತ್ತದೆ:

ಸಿನೆಮಾದವರಿಗೆ ದೊಡ್ಡ ನಮಸ್ಕಾರ ಹೊಡಿಯಬೇಕು. ಇಂತಹದೊಂದು ತಪ್ಪು ಕಲ್ಪನೆಗೆ ಪುರಾಣಗಳ ಜೊತೆಜೊತೆಗೆ ಹೆಚ್ಚಿನ ಕೊಡುಗೆ ನೀಡಿದ್ದು ಸಿನೆಮಾ ರಂಗ. ದ್ವೇಷ ಎನ್ನುವುದು ಹೆಚ್ಚು ಅಭಿವೃದ್ದಿಗೊಂಡ ಮನುಷ್ಯರ ಮೆದಿಳಿನಲ್ಲಿ ಇರುತ್ತದೆಯೇ ಹೊರತು ಹಾವುಗಳಲ್ಲಿ ಇರುವುದೇ ಇಲ್ಲ. ಹಾವುಗಳು ದ್ವೇಷ ಮಾಡುವ ಜೀವಿಗಳಲ್ಲ, ಅವುಗಳಿಗೆ ಅಷ್ಟು ತೀಕ್ಷ್ಣವಾದ ನೆನಪಿನ ಶಕ್ತಿ ಇಲ್ಲ ಮತ್ತು ಅವುಗಳ ಮೆದಿಳು ಅಷ್ಟು ’ಅಭಿವೃದ್ಧಿಯೂ’ ಆಗಿಲ್ಲ. ದಶಕಗಳ ಕಾಲ ಮನುಷ್ಯರ ಮುಖವನ್ನು ನೆನಪಿನಲ್ಲಿಟ್ಟುಕೊಂಡು ಸಾಯಿಸಲು ಬರುತ್ತದೆ ಎನ್ನುವ ಮೂಢ ನಂಬಿಕೆ ಹುಟ್ಟಲು ಕಾರಣಕರ್ತರು ನಮ್ಮ ಸಿನೆಮಾದವರು.

Nag Panchami Festival In Bidar - YouTube

 

೩. ನಾಗರ ಹಾವಿನ ಬಳಿ ನಾಗಮಣಿ ಇದೆ, ಅದರಿಂದ ಸನ್ಮೋಹಿನಿ ಮಾಡುತ್ತದೆ.

ಇದು ತಮಾಷೆಯಾಗಿದೆಯಾದರೂ ಪುರಾಣ ಮತ್ತು ಸಿನೆಮಾ ಜುಗಲ್‌ಬಂದಿಯಿಂದಾಗಿ ಈ ನಂಬಿಕೆಯೂ ರೂಢಿಯಲ್ಲಿದೆ. ಹಾವುಗಳ ಹಣೆಯಲ್ಲಿ ಕೋಟಿಗಟ್ಟಲೆ ಬೆಲೆ ಬಾಳುವ ವಜ್ರ(ನಾಗಮಣಿ) ಇದೆ ಎನ್ನುವ ಕಾರಣಕ್ಕೆ ಅದೆಷ್ಟೋ ನಾಗರಗಳನ್ನು ಹಿಡಿದು ಚಿತ್ರಹಿಂಸೆ ನೀಡಿ ಸಾಯಿಸಲಾಗಿದೆ.

೪. ಹಾವುಗಳಿಗೆ ಏಳು ತಲೆಗಳು ಇರುತ್ತದೆ.

ಏಳು ತಲೆಯ ಹಾವು ಈ ದೇವಸ್ಥಾನದಲ್ಲಿ ಕಾವಲಿದೆ, ಆ ನಿಧಿಗೆ ಕಾವಲಿದೆ, ಅವನು ಏಳು ತಲೆಯ ಹಾವು ನೋಡಿದನಂತೆ ಹಾಗಾಗಿ ಸತ್ತುಹೋದ. ಇಂತಹ ಹಲವಾರು ಮಾತುಗಳನ್ನು ನಾವು ಕೇಳಿರುತ್ತೇವೆ. ಇನ್ನೂ ಕೆಲವರು ಈಗ ಇಲ್ಲ ಮುಂಚೆ ಇತ್ತು, ದೇವರುಗಳಿಗೆ ಏಳೆಡೆಯ ಹಾವು ಕಾವಲು ಇರುತ್ತಿತ್ತು ಎಂದು ಹೇಳುತ್ತಾರೆ. ಈಗ ಅಸ್ತಿತ್ವದಲ್ಲಿ ಇಲ್ಲದ ಡೈನಾಸಾರ್‌ಗಳ ಪಳೆಯುಳಿಕೆಗಳಿಂದ ಮತ್ತು ಹಲವಾರು ವೈಜ್ಞಾನಿಕ ಪರೀಕ್ಷೆಗಳ ಮೂಲಕ ಡೈನಾಸಾರ್ ಗಳು ಇದ್ದವು ಎನ್ನುವ ನಿರ್ಧಾರಕ್ಕೆ ವಿಜ್ಞಾನಿಗಳು ಬಂದಿದ್ದಾರೆ. ಆದರೆ ಏಳು ತಲೆಯ ಹಾವುಗಳು ಇರುವ/ಇದ್ದ ಕುರಿತಾಗಿ ಯಾವುದೇ ಆಧಾರಗಳು ಲಭ್ಯವಿಲ್ಲ.

೫. ಹಾವುಗಳು ಹಾರುತ್ತವೆ.

ಹಾವುಗಳು ಹಾರುತ್ತದೆ ಎನ್ನುವುದನ್ನು ಕೆಲವೇ ಕೆಲವು ಜನರು ನಂಬುತ್ತಾರೆ, ಹಾರುವ ಕೆಲಸ ಏನಿದ್ದರು ಪಕ್ಷಿಗಳದ್ದು. ಸರೀಸೃಪಗಳು ತೆವಳುತ್ತವೆ. ಕೆಲವು ಸಂದರ್ಭದಲ್ಲಿ ಮತ್ತು ಕೆಲವು ಹಾವುಗಳು ಮಾತ್ರ ತಮ್ಮ ದೇಹ ರಚನೆ, ತೂಕ ಆಧಾರದ ಮೇಲೆ ಮರದ ರೆಂಬೆಯಿಂದ ಮತ್ತೊಂದು ರೆಂಬೆಗೆ ಅಥವಾ ಆಳದ ಜಾಗವನ್ನು ದಾಟುವಾಗ ಜಿಗಿಯುತ್ತದೆ ಆದರೆ ಹಾವುಗಳು ಹಾರುವುದಿಲ್ಲ.

ಹಾವುಗಳ ಕುರಿತು ಭಾರತದಲ್ಲಿ ಇಂತಹ ಇನ್ನೂ ಹತ್ತಾರು ಮೂಢ ನಂಬಿಕೆಗಳು ಆಚರಣೆಯಲ್ಲಿದೆ. ಕೆಲವನ್ನು ಮಾತ್ರ ಇಲ್ಲಿ ಚರ್ಚಿಸಲಾಗಿದೆ.

ವಾಸುಕಿ, ಶೇಶನಾಗ ಮತ್ತು ಹಲವು ಪುರಾಣಗಳನ್ನು ಆಧರಿಸಿ ಹಾವುಗಳನ್ನು ಶತಮಾನಗಳನ್ನು ಹಿಂದೂ ಸಂಪ್ರದಾಯದ ಪ್ರಕಾರ ದೇವರೆಂದು ಆರಾಧಾನೆ ಮಾಡಲಾಗುತ್ತಿದೆ. ಅಲ್ಲದೇ ಬೇರೆ ಸಂಪ್ರದಾಯದಲ್ಲಿಯೂ ಆರಾಧನೆ ಇದೆ. ಈಜಿಪ್ಟ್ ಪುರಾಣದ ವಾಜೆಟ್ ನಲ್ಲಿಯೂ ನಾಗ ದೇವಿಯನ್ನು ಆರಾಧಾನೆ ಮಾಡಲಾಗುತ್ತದೆ. ಮತ್ತು (ಬೈಬಲ್ ನ ಸರ್ಪೆಂಟ್ ಸೈತಾನ್) ಹಾವುಗಳನ್ನು ಕೆಟ್ಟ ರಾಕ್ಷಸ ಎಂಬಂತೆಯೂ ನೋಡಲಾಗುತ್ತದೆ. ಆದರೆ ಹಿಂದೂ ಸಂಪ್ರದಾಯದ ಆಚರಣೆಯಲ್ಲಿ ಇಂದಿಗೂ ನಾಗರ ಹಾವುಗಳ ಆರಾಧನೆ ಮುಂದುವರೆದಿದೆ. ಒಟ್ಟಾರೆಯಲ್ಲಿ ಹಾವುಗಳ ಅತೀಯಾದ ಆರಾಧನೆ ಅಥವಾ ದ್ವೇಷ ಈ ಎರಡರಿಂದಲೂ ಹಾವುಗಳ ಅತ್ಯಂತ ತಪ್ಪಾಗಿ ಅರ್ಥ ಮಾಡಿಕೊಳ್ಳಲಾದ ಜೀವಿಯಾಗಿದೆ ಮತ್ತು ಇದರಿಂದಾಗಿ ನಿರಪರಾದಿ ಮುಗ್ದ ಹಾವಿನ ಜೀವಕ್ಕೂ ಅಪಾಯ ತಂದೊಡ್ಡಿದೆ.

ಆಧಾರ: PUGDUNDEE SAFARIS


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...