Homeಕರ್ನಾಟಕನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

ನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

- Advertisement -
- Advertisement -

ಭಾರತದ ಪುರಾಣಗಳಲ್ಲಿ ಹಾವುಗಳಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ನಾಗರ ಹಾವನ್ನು ದೇವರ ಅವತಾರವೆಂದು, ಅದರ ಹಣೆಯಲ್ಲಿ ವಜ್ರ (ನಾಗಮಣಿ) ಇದೆಯೆಂದು ಮತ್ತು ಅದನ್ನು ಆರಾಧನೆ ಮಾಡುವುದರಿಂದ ಹಲವಾರು ಕಾಯಿಲೆಗಳು ಗುಣವಾಗುತ್ತದೆ ಎಂದು ನಂಬಲಾಗುತ್ತದೆ.

ಒಮ್ಮೆ ಒಬ್ಬ ಹೆಂಗಸು ತನ್ನ ಮಗಳು, ಸುಂದರ ಮತ್ತು ಶ್ರೀಮಂತ ಹುಡಗನನ್ನು ಮದುವೆ ಆಗಬೇಕು, ಅದಕ್ಕಾಗಿ ಏನು ಮಾಡಬೇಕು ಎಂದು ಪುರೋಹಿತನ ಬಳಿ ಕೇಳುತ್ತಾಳೆ. ಆ ಪುರೋಹಿತ ಮಹಿಳೆಗೆ, “ನಿನ್ನ ಮಗಳು ನಾಗರ ಪಂಚಮಿಯ ದಿನ ಒಂದು ನಾಗರ ಹಾವನ್ನು ಮದುವೆ ಆಗಬೇಕು, ನಾಗರ ಪಂಚಮಿಯ ದಿನ ಮದುವೆ ಆದರೆ ಆ ಹಾವೇ ಒಂದು ಸುಂದರ ಯುವಕನಾಗಿ ಮತ್ತು ನಾಗಮಣಿ ಅದರ ಬಳಿ ಇರುವುದರಿಂದ ಶ್ರೀಮಂತನಾಗಿಯೂ ಬದಲಾಗುತ್ತಾನೆ” ಎಂದು ಸಲಹೆ ನೀಡುತ್ತಾನೆ.

ಅಂತೆಯೇ ಅವರು ಒಂದು ನಾಗರ ಹಾವನ್ನು ಹಿಡಿದು, ಪ್ರಜ್ಞೆ ತಪ್ಪಿಸಿ ’ಮದುವೆ’ ಮಾಡಿಸುತ್ತಾರೆ. ಮುಂದೇನಾಯಿತು ಎಂಬ ಕಾತರವೇ? ಅಂಥದ್ದೇನಿಲ್ಲ ಹಾವು ಎಚ್ಚರಗೊಂಡಮೇಲೆ ಒತ್ತಡ ಮತ್ತು ಗಾಬರಿಯಲ್ಲಿದ್ದ ಹಾವು ತನ್ನ ಆತ್ಮರಕ್ಷಣೆಗಾಗಿ ಆ ಹುಡುಗಿಯನ್ನು ಕಚ್ಚಿ ಓಡಿಹೋಯಿತು. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ನಡೆದುಹೋಗಿದೆ. ಇಂದಿನ ಆಧುನಿಕ ಯುಗದಲ್ಲಿಯೂ ಹಾವಿನ ಬಗ್ಗೆ ಆಪಾರವಾದ ತಪ್ಪು ಕಲ್ಪನೆಗಳು ಇದೆ ಮತ್ತು ಈ ಕಾರಣಕ್ಕೆ ಹಾವುಗಳ ಜೊತೆ ತಪ್ಪಾಗಿ ನಡೆದುಕೊಂಡು ಅವುಗಳ ಸಾವಿಗೂ ಕಾರಣವಾಗಿದೆ ಎಂಬುದು ಆತಂಕಕಾರಿ ವಿಚಾರ.

ಇದನ್ನೂ ಓದಿ: ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ಈ ನಾಗರ ಪಂಚಮಿಯ ದಿನ ಹಾವುಗಳ ಕುರಿತು ಇರುವ ಮಿಥ್ಯೆ ಮತ್ತು ಸತ್ಯಗಳನ್ನು ತಿಳಿದುಕೊಳ್ಳೋಣ

೧. ಹಾವುಗಳು ಹಾಲು ಕುಡಿಯುತ್ತವೆ:

ನಾಗರ ಪಂಚಮಿಯ ದಿನ ಜನರು ಹುತ್ತಗಳಿಗೆ, ಹಾವುಗಳಿಗೆ ಹಾಲುಣಿಸುವುದು ಹಬ್ಬದ ಬಹುಮುಖ್ಯ ಭಾಗವಾಗಿದೆ. ಮತ್ತು ಹಾಲು ಕುಡಿಯುತ್ತದೆ ಎನ್ನುವುದು ಹಾವುಗಳ ಕುರಿತು ಇರುವ ಅತ್ಯಂತ ದೊಡ್ಡ ಮಿಥ್ಯೆ. ವೈಜ್ಞಾನಿಕವಾಗಿ ಜೀವರಾಶಿಯಲ್ಲಿ ಹಾಲು ಕುಡಿಯುವ ಜೀವಿಗಳು ಎಂದರೆ ಸಸ್ತನಿಗಳು, ಹಾವುಗಳು ಸರಿಸೃಪಗಳು ಹಾಗಾಗಿ ಹಾವುಗಳು ಹಾಲು ಕುಡಿಯುದಿಲ್ಲ.

ಹಾಲು ಕುಡಿಯುವ ದೃಶ್ಯ ನಾನು ನೋಡಿದ್ದೇನಲ್ಲ..?

ಸಾಮಾನ್ಯವಾಗಿ ನಾಗರ ಪಂಚಮಿ ಅಥವಾ ಯಾವುದಾರು ವಿಶೇಷ ಸಂದರ್ಭದಲ್ಲಿ ಪೂಜಾರಿಗಳು ಹಾವುಗಳನ್ನು ಹಿಡಿದು ಅವುಗಳಿಗೆ ಆಹಾರ, ನೀರು ಏನೂ ಸಿಗದಂತೆ ಮಾಡಿ ತಿಂಗಳು ಗಟ್ಟಲೆ ಇಡಲಾಗುತ್ತದೆ. ಇದರಿಂದ ಹಾವುಗಳು ಬಳಲಿ ಡೀಹೈಡ್ರೇಟ್ ಆಗುತ್ತದೆ. ಅಂತ ಹಾವುಗಳಿಗೆ ಮಾತ್ರ ಬಲವಂತವಾಗಿ ಹಾಲು ಕುಡಿಸಲಾಗುತ್ತದೆ. ಹಾವುಗಳು ಶೀತ ರಕ್ತದ ಸರೀಸೃಪಗಳು ಅವುಗಳಿಗೆ ಬಲವಂತವಾಗಿ ಹಾಲು ಕುಡಿಸುವುದರಿಂದ ಅವಕ್ಕೆ ಸಾವು ಸಂಭವಿಸುತ್ತದೆ!

೨. ನಾಗರ ಹಾವುಗಳು ಕ್ರೂರ ಜೀವಿಗಳು, ಹಾವುಗಳಿಗೆ 12 ವರ್ಷ ದ್ವೇಷ ಇರುತ್ತದೆ:

ಸಿನೆಮಾದವರಿಗೆ ದೊಡ್ಡ ನಮಸ್ಕಾರ ಹೊಡಿಯಬೇಕು. ಇಂತಹದೊಂದು ತಪ್ಪು ಕಲ್ಪನೆಗೆ ಪುರಾಣಗಳ ಜೊತೆಜೊತೆಗೆ ಹೆಚ್ಚಿನ ಕೊಡುಗೆ ನೀಡಿದ್ದು ಸಿನೆಮಾ ರಂಗ. ದ್ವೇಷ ಎನ್ನುವುದು ಹೆಚ್ಚು ಅಭಿವೃದ್ದಿಗೊಂಡ ಮನುಷ್ಯರ ಮೆದಿಳಿನಲ್ಲಿ ಇರುತ್ತದೆಯೇ ಹೊರತು ಹಾವುಗಳಲ್ಲಿ ಇರುವುದೇ ಇಲ್ಲ. ಹಾವುಗಳು ದ್ವೇಷ ಮಾಡುವ ಜೀವಿಗಳಲ್ಲ, ಅವುಗಳಿಗೆ ಅಷ್ಟು ತೀಕ್ಷ್ಣವಾದ ನೆನಪಿನ ಶಕ್ತಿ ಇಲ್ಲ ಮತ್ತು ಅವುಗಳ ಮೆದಿಳು ಅಷ್ಟು ’ಅಭಿವೃದ್ಧಿಯೂ’ ಆಗಿಲ್ಲ. ದಶಕಗಳ ಕಾಲ ಮನುಷ್ಯರ ಮುಖವನ್ನು ನೆನಪಿನಲ್ಲಿಟ್ಟುಕೊಂಡು ಸಾಯಿಸಲು ಬರುತ್ತದೆ ಎನ್ನುವ ಮೂಢ ನಂಬಿಕೆ ಹುಟ್ಟಲು ಕಾರಣಕರ್ತರು ನಮ್ಮ ಸಿನೆಮಾದವರು.

Nag Panchami Festival In Bidar - YouTube

 

೩. ನಾಗರ ಹಾವಿನ ಬಳಿ ನಾಗಮಣಿ ಇದೆ, ಅದರಿಂದ ಸನ್ಮೋಹಿನಿ ಮಾಡುತ್ತದೆ.

ಇದು ತಮಾಷೆಯಾಗಿದೆಯಾದರೂ ಪುರಾಣ ಮತ್ತು ಸಿನೆಮಾ ಜುಗಲ್‌ಬಂದಿಯಿಂದಾಗಿ ಈ ನಂಬಿಕೆಯೂ ರೂಢಿಯಲ್ಲಿದೆ. ಹಾವುಗಳ ಹಣೆಯಲ್ಲಿ ಕೋಟಿಗಟ್ಟಲೆ ಬೆಲೆ ಬಾಳುವ ವಜ್ರ(ನಾಗಮಣಿ) ಇದೆ ಎನ್ನುವ ಕಾರಣಕ್ಕೆ ಅದೆಷ್ಟೋ ನಾಗರಗಳನ್ನು ಹಿಡಿದು ಚಿತ್ರಹಿಂಸೆ ನೀಡಿ ಸಾಯಿಸಲಾಗಿದೆ.

೪. ಹಾವುಗಳಿಗೆ ಏಳು ತಲೆಗಳು ಇರುತ್ತದೆ.

ಏಳು ತಲೆಯ ಹಾವು ಈ ದೇವಸ್ಥಾನದಲ್ಲಿ ಕಾವಲಿದೆ, ಆ ನಿಧಿಗೆ ಕಾವಲಿದೆ, ಅವನು ಏಳು ತಲೆಯ ಹಾವು ನೋಡಿದನಂತೆ ಹಾಗಾಗಿ ಸತ್ತುಹೋದ. ಇಂತಹ ಹಲವಾರು ಮಾತುಗಳನ್ನು ನಾವು ಕೇಳಿರುತ್ತೇವೆ. ಇನ್ನೂ ಕೆಲವರು ಈಗ ಇಲ್ಲ ಮುಂಚೆ ಇತ್ತು, ದೇವರುಗಳಿಗೆ ಏಳೆಡೆಯ ಹಾವು ಕಾವಲು ಇರುತ್ತಿತ್ತು ಎಂದು ಹೇಳುತ್ತಾರೆ. ಈಗ ಅಸ್ತಿತ್ವದಲ್ಲಿ ಇಲ್ಲದ ಡೈನಾಸಾರ್‌ಗಳ ಪಳೆಯುಳಿಕೆಗಳಿಂದ ಮತ್ತು ಹಲವಾರು ವೈಜ್ಞಾನಿಕ ಪರೀಕ್ಷೆಗಳ ಮೂಲಕ ಡೈನಾಸಾರ್ ಗಳು ಇದ್ದವು ಎನ್ನುವ ನಿರ್ಧಾರಕ್ಕೆ ವಿಜ್ಞಾನಿಗಳು ಬಂದಿದ್ದಾರೆ. ಆದರೆ ಏಳು ತಲೆಯ ಹಾವುಗಳು ಇರುವ/ಇದ್ದ ಕುರಿತಾಗಿ ಯಾವುದೇ ಆಧಾರಗಳು ಲಭ್ಯವಿಲ್ಲ.

೫. ಹಾವುಗಳು ಹಾರುತ್ತವೆ.

ಹಾವುಗಳು ಹಾರುತ್ತದೆ ಎನ್ನುವುದನ್ನು ಕೆಲವೇ ಕೆಲವು ಜನರು ನಂಬುತ್ತಾರೆ, ಹಾರುವ ಕೆಲಸ ಏನಿದ್ದರು ಪಕ್ಷಿಗಳದ್ದು. ಸರೀಸೃಪಗಳು ತೆವಳುತ್ತವೆ. ಕೆಲವು ಸಂದರ್ಭದಲ್ಲಿ ಮತ್ತು ಕೆಲವು ಹಾವುಗಳು ಮಾತ್ರ ತಮ್ಮ ದೇಹ ರಚನೆ, ತೂಕ ಆಧಾರದ ಮೇಲೆ ಮರದ ರೆಂಬೆಯಿಂದ ಮತ್ತೊಂದು ರೆಂಬೆಗೆ ಅಥವಾ ಆಳದ ಜಾಗವನ್ನು ದಾಟುವಾಗ ಜಿಗಿಯುತ್ತದೆ ಆದರೆ ಹಾವುಗಳು ಹಾರುವುದಿಲ್ಲ.

ಹಾವುಗಳ ಕುರಿತು ಭಾರತದಲ್ಲಿ ಇಂತಹ ಇನ್ನೂ ಹತ್ತಾರು ಮೂಢ ನಂಬಿಕೆಗಳು ಆಚರಣೆಯಲ್ಲಿದೆ. ಕೆಲವನ್ನು ಮಾತ್ರ ಇಲ್ಲಿ ಚರ್ಚಿಸಲಾಗಿದೆ.

ವಾಸುಕಿ, ಶೇಶನಾಗ ಮತ್ತು ಹಲವು ಪುರಾಣಗಳನ್ನು ಆಧರಿಸಿ ಹಾವುಗಳನ್ನು ಶತಮಾನಗಳನ್ನು ಹಿಂದೂ ಸಂಪ್ರದಾಯದ ಪ್ರಕಾರ ದೇವರೆಂದು ಆರಾಧಾನೆ ಮಾಡಲಾಗುತ್ತಿದೆ. ಅಲ್ಲದೇ ಬೇರೆ ಸಂಪ್ರದಾಯದಲ್ಲಿಯೂ ಆರಾಧನೆ ಇದೆ. ಈಜಿಪ್ಟ್ ಪುರಾಣದ ವಾಜೆಟ್ ನಲ್ಲಿಯೂ ನಾಗ ದೇವಿಯನ್ನು ಆರಾಧಾನೆ ಮಾಡಲಾಗುತ್ತದೆ. ಮತ್ತು (ಬೈಬಲ್ ನ ಸರ್ಪೆಂಟ್ ಸೈತಾನ್) ಹಾವುಗಳನ್ನು ಕೆಟ್ಟ ರಾಕ್ಷಸ ಎಂಬಂತೆಯೂ ನೋಡಲಾಗುತ್ತದೆ. ಆದರೆ ಹಿಂದೂ ಸಂಪ್ರದಾಯದ ಆಚರಣೆಯಲ್ಲಿ ಇಂದಿಗೂ ನಾಗರ ಹಾವುಗಳ ಆರಾಧನೆ ಮುಂದುವರೆದಿದೆ. ಒಟ್ಟಾರೆಯಲ್ಲಿ ಹಾವುಗಳ ಅತೀಯಾದ ಆರಾಧನೆ ಅಥವಾ ದ್ವೇಷ ಈ ಎರಡರಿಂದಲೂ ಹಾವುಗಳ ಅತ್ಯಂತ ತಪ್ಪಾಗಿ ಅರ್ಥ ಮಾಡಿಕೊಳ್ಳಲಾದ ಜೀವಿಯಾಗಿದೆ ಮತ್ತು ಇದರಿಂದಾಗಿ ನಿರಪರಾದಿ ಮುಗ್ದ ಹಾವಿನ ಜೀವಕ್ಕೂ ಅಪಾಯ ತಂದೊಡ್ಡಿದೆ.

ಆಧಾರ: PUGDUNDEE SAFARIS


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...