Homeಕರ್ನಾಟಕನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

ನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

- Advertisement -
- Advertisement -

ಭಾರತದ ಪುರಾಣಗಳಲ್ಲಿ ಹಾವುಗಳಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ನಾಗರ ಹಾವನ್ನು ದೇವರ ಅವತಾರವೆಂದು, ಅದರ ಹಣೆಯಲ್ಲಿ ವಜ್ರ (ನಾಗಮಣಿ) ಇದೆಯೆಂದು ಮತ್ತು ಅದನ್ನು ಆರಾಧನೆ ಮಾಡುವುದರಿಂದ ಹಲವಾರು ಕಾಯಿಲೆಗಳು ಗುಣವಾಗುತ್ತದೆ ಎಂದು ನಂಬಲಾಗುತ್ತದೆ.

ಒಮ್ಮೆ ಒಬ್ಬ ಹೆಂಗಸು ತನ್ನ ಮಗಳು, ಸುಂದರ ಮತ್ತು ಶ್ರೀಮಂತ ಹುಡಗನನ್ನು ಮದುವೆ ಆಗಬೇಕು, ಅದಕ್ಕಾಗಿ ಏನು ಮಾಡಬೇಕು ಎಂದು ಪುರೋಹಿತನ ಬಳಿ ಕೇಳುತ್ತಾಳೆ. ಆ ಪುರೋಹಿತ ಮಹಿಳೆಗೆ, “ನಿನ್ನ ಮಗಳು ನಾಗರ ಪಂಚಮಿಯ ದಿನ ಒಂದು ನಾಗರ ಹಾವನ್ನು ಮದುವೆ ಆಗಬೇಕು, ನಾಗರ ಪಂಚಮಿಯ ದಿನ ಮದುವೆ ಆದರೆ ಆ ಹಾವೇ ಒಂದು ಸುಂದರ ಯುವಕನಾಗಿ ಮತ್ತು ನಾಗಮಣಿ ಅದರ ಬಳಿ ಇರುವುದರಿಂದ ಶ್ರೀಮಂತನಾಗಿಯೂ ಬದಲಾಗುತ್ತಾನೆ” ಎಂದು ಸಲಹೆ ನೀಡುತ್ತಾನೆ.

ಅಂತೆಯೇ ಅವರು ಒಂದು ನಾಗರ ಹಾವನ್ನು ಹಿಡಿದು, ಪ್ರಜ್ಞೆ ತಪ್ಪಿಸಿ ’ಮದುವೆ’ ಮಾಡಿಸುತ್ತಾರೆ. ಮುಂದೇನಾಯಿತು ಎಂಬ ಕಾತರವೇ? ಅಂಥದ್ದೇನಿಲ್ಲ ಹಾವು ಎಚ್ಚರಗೊಂಡಮೇಲೆ ಒತ್ತಡ ಮತ್ತು ಗಾಬರಿಯಲ್ಲಿದ್ದ ಹಾವು ತನ್ನ ಆತ್ಮರಕ್ಷಣೆಗಾಗಿ ಆ ಹುಡುಗಿಯನ್ನು ಕಚ್ಚಿ ಓಡಿಹೋಯಿತು. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ನಡೆದುಹೋಗಿದೆ. ಇಂದಿನ ಆಧುನಿಕ ಯುಗದಲ್ಲಿಯೂ ಹಾವಿನ ಬಗ್ಗೆ ಆಪಾರವಾದ ತಪ್ಪು ಕಲ್ಪನೆಗಳು ಇದೆ ಮತ್ತು ಈ ಕಾರಣಕ್ಕೆ ಹಾವುಗಳ ಜೊತೆ ತಪ್ಪಾಗಿ ನಡೆದುಕೊಂಡು ಅವುಗಳ ಸಾವಿಗೂ ಕಾರಣವಾಗಿದೆ ಎಂಬುದು ಆತಂಕಕಾರಿ ವಿಚಾರ.

ಇದನ್ನೂ ಓದಿ: ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ಈ ನಾಗರ ಪಂಚಮಿಯ ದಿನ ಹಾವುಗಳ ಕುರಿತು ಇರುವ ಮಿಥ್ಯೆ ಮತ್ತು ಸತ್ಯಗಳನ್ನು ತಿಳಿದುಕೊಳ್ಳೋಣ

೧. ಹಾವುಗಳು ಹಾಲು ಕುಡಿಯುತ್ತವೆ:

ನಾಗರ ಪಂಚಮಿಯ ದಿನ ಜನರು ಹುತ್ತಗಳಿಗೆ, ಹಾವುಗಳಿಗೆ ಹಾಲುಣಿಸುವುದು ಹಬ್ಬದ ಬಹುಮುಖ್ಯ ಭಾಗವಾಗಿದೆ. ಮತ್ತು ಹಾಲು ಕುಡಿಯುತ್ತದೆ ಎನ್ನುವುದು ಹಾವುಗಳ ಕುರಿತು ಇರುವ ಅತ್ಯಂತ ದೊಡ್ಡ ಮಿಥ್ಯೆ. ವೈಜ್ಞಾನಿಕವಾಗಿ ಜೀವರಾಶಿಯಲ್ಲಿ ಹಾಲು ಕುಡಿಯುವ ಜೀವಿಗಳು ಎಂದರೆ ಸಸ್ತನಿಗಳು, ಹಾವುಗಳು ಸರಿಸೃಪಗಳು ಹಾಗಾಗಿ ಹಾವುಗಳು ಹಾಲು ಕುಡಿಯುದಿಲ್ಲ.

ಹಾಲು ಕುಡಿಯುವ ದೃಶ್ಯ ನಾನು ನೋಡಿದ್ದೇನಲ್ಲ..?

ಸಾಮಾನ್ಯವಾಗಿ ನಾಗರ ಪಂಚಮಿ ಅಥವಾ ಯಾವುದಾರು ವಿಶೇಷ ಸಂದರ್ಭದಲ್ಲಿ ಪೂಜಾರಿಗಳು ಹಾವುಗಳನ್ನು ಹಿಡಿದು ಅವುಗಳಿಗೆ ಆಹಾರ, ನೀರು ಏನೂ ಸಿಗದಂತೆ ಮಾಡಿ ತಿಂಗಳು ಗಟ್ಟಲೆ ಇಡಲಾಗುತ್ತದೆ. ಇದರಿಂದ ಹಾವುಗಳು ಬಳಲಿ ಡೀಹೈಡ್ರೇಟ್ ಆಗುತ್ತದೆ. ಅಂತ ಹಾವುಗಳಿಗೆ ಮಾತ್ರ ಬಲವಂತವಾಗಿ ಹಾಲು ಕುಡಿಸಲಾಗುತ್ತದೆ. ಹಾವುಗಳು ಶೀತ ರಕ್ತದ ಸರೀಸೃಪಗಳು ಅವುಗಳಿಗೆ ಬಲವಂತವಾಗಿ ಹಾಲು ಕುಡಿಸುವುದರಿಂದ ಅವಕ್ಕೆ ಸಾವು ಸಂಭವಿಸುತ್ತದೆ!

೨. ನಾಗರ ಹಾವುಗಳು ಕ್ರೂರ ಜೀವಿಗಳು, ಹಾವುಗಳಿಗೆ 12 ವರ್ಷ ದ್ವೇಷ ಇರುತ್ತದೆ:

ಸಿನೆಮಾದವರಿಗೆ ದೊಡ್ಡ ನಮಸ್ಕಾರ ಹೊಡಿಯಬೇಕು. ಇಂತಹದೊಂದು ತಪ್ಪು ಕಲ್ಪನೆಗೆ ಪುರಾಣಗಳ ಜೊತೆಜೊತೆಗೆ ಹೆಚ್ಚಿನ ಕೊಡುಗೆ ನೀಡಿದ್ದು ಸಿನೆಮಾ ರಂಗ. ದ್ವೇಷ ಎನ್ನುವುದು ಹೆಚ್ಚು ಅಭಿವೃದ್ದಿಗೊಂಡ ಮನುಷ್ಯರ ಮೆದಿಳಿನಲ್ಲಿ ಇರುತ್ತದೆಯೇ ಹೊರತು ಹಾವುಗಳಲ್ಲಿ ಇರುವುದೇ ಇಲ್ಲ. ಹಾವುಗಳು ದ್ವೇಷ ಮಾಡುವ ಜೀವಿಗಳಲ್ಲ, ಅವುಗಳಿಗೆ ಅಷ್ಟು ತೀಕ್ಷ್ಣವಾದ ನೆನಪಿನ ಶಕ್ತಿ ಇಲ್ಲ ಮತ್ತು ಅವುಗಳ ಮೆದಿಳು ಅಷ್ಟು ’ಅಭಿವೃದ್ಧಿಯೂ’ ಆಗಿಲ್ಲ. ದಶಕಗಳ ಕಾಲ ಮನುಷ್ಯರ ಮುಖವನ್ನು ನೆನಪಿನಲ್ಲಿಟ್ಟುಕೊಂಡು ಸಾಯಿಸಲು ಬರುತ್ತದೆ ಎನ್ನುವ ಮೂಢ ನಂಬಿಕೆ ಹುಟ್ಟಲು ಕಾರಣಕರ್ತರು ನಮ್ಮ ಸಿನೆಮಾದವರು.

Nag Panchami Festival In Bidar - YouTube

 

೩. ನಾಗರ ಹಾವಿನ ಬಳಿ ನಾಗಮಣಿ ಇದೆ, ಅದರಿಂದ ಸನ್ಮೋಹಿನಿ ಮಾಡುತ್ತದೆ.

ಇದು ತಮಾಷೆಯಾಗಿದೆಯಾದರೂ ಪುರಾಣ ಮತ್ತು ಸಿನೆಮಾ ಜುಗಲ್‌ಬಂದಿಯಿಂದಾಗಿ ಈ ನಂಬಿಕೆಯೂ ರೂಢಿಯಲ್ಲಿದೆ. ಹಾವುಗಳ ಹಣೆಯಲ್ಲಿ ಕೋಟಿಗಟ್ಟಲೆ ಬೆಲೆ ಬಾಳುವ ವಜ್ರ(ನಾಗಮಣಿ) ಇದೆ ಎನ್ನುವ ಕಾರಣಕ್ಕೆ ಅದೆಷ್ಟೋ ನಾಗರಗಳನ್ನು ಹಿಡಿದು ಚಿತ್ರಹಿಂಸೆ ನೀಡಿ ಸಾಯಿಸಲಾಗಿದೆ.

೪. ಹಾವುಗಳಿಗೆ ಏಳು ತಲೆಗಳು ಇರುತ್ತದೆ.

ಏಳು ತಲೆಯ ಹಾವು ಈ ದೇವಸ್ಥಾನದಲ್ಲಿ ಕಾವಲಿದೆ, ಆ ನಿಧಿಗೆ ಕಾವಲಿದೆ, ಅವನು ಏಳು ತಲೆಯ ಹಾವು ನೋಡಿದನಂತೆ ಹಾಗಾಗಿ ಸತ್ತುಹೋದ. ಇಂತಹ ಹಲವಾರು ಮಾತುಗಳನ್ನು ನಾವು ಕೇಳಿರುತ್ತೇವೆ. ಇನ್ನೂ ಕೆಲವರು ಈಗ ಇಲ್ಲ ಮುಂಚೆ ಇತ್ತು, ದೇವರುಗಳಿಗೆ ಏಳೆಡೆಯ ಹಾವು ಕಾವಲು ಇರುತ್ತಿತ್ತು ಎಂದು ಹೇಳುತ್ತಾರೆ. ಈಗ ಅಸ್ತಿತ್ವದಲ್ಲಿ ಇಲ್ಲದ ಡೈನಾಸಾರ್‌ಗಳ ಪಳೆಯುಳಿಕೆಗಳಿಂದ ಮತ್ತು ಹಲವಾರು ವೈಜ್ಞಾನಿಕ ಪರೀಕ್ಷೆಗಳ ಮೂಲಕ ಡೈನಾಸಾರ್ ಗಳು ಇದ್ದವು ಎನ್ನುವ ನಿರ್ಧಾರಕ್ಕೆ ವಿಜ್ಞಾನಿಗಳು ಬಂದಿದ್ದಾರೆ. ಆದರೆ ಏಳು ತಲೆಯ ಹಾವುಗಳು ಇರುವ/ಇದ್ದ ಕುರಿತಾಗಿ ಯಾವುದೇ ಆಧಾರಗಳು ಲಭ್ಯವಿಲ್ಲ.

೫. ಹಾವುಗಳು ಹಾರುತ್ತವೆ.

ಹಾವುಗಳು ಹಾರುತ್ತದೆ ಎನ್ನುವುದನ್ನು ಕೆಲವೇ ಕೆಲವು ಜನರು ನಂಬುತ್ತಾರೆ, ಹಾರುವ ಕೆಲಸ ಏನಿದ್ದರು ಪಕ್ಷಿಗಳದ್ದು. ಸರೀಸೃಪಗಳು ತೆವಳುತ್ತವೆ. ಕೆಲವು ಸಂದರ್ಭದಲ್ಲಿ ಮತ್ತು ಕೆಲವು ಹಾವುಗಳು ಮಾತ್ರ ತಮ್ಮ ದೇಹ ರಚನೆ, ತೂಕ ಆಧಾರದ ಮೇಲೆ ಮರದ ರೆಂಬೆಯಿಂದ ಮತ್ತೊಂದು ರೆಂಬೆಗೆ ಅಥವಾ ಆಳದ ಜಾಗವನ್ನು ದಾಟುವಾಗ ಜಿಗಿಯುತ್ತದೆ ಆದರೆ ಹಾವುಗಳು ಹಾರುವುದಿಲ್ಲ.

ಹಾವುಗಳ ಕುರಿತು ಭಾರತದಲ್ಲಿ ಇಂತಹ ಇನ್ನೂ ಹತ್ತಾರು ಮೂಢ ನಂಬಿಕೆಗಳು ಆಚರಣೆಯಲ್ಲಿದೆ. ಕೆಲವನ್ನು ಮಾತ್ರ ಇಲ್ಲಿ ಚರ್ಚಿಸಲಾಗಿದೆ.

ವಾಸುಕಿ, ಶೇಶನಾಗ ಮತ್ತು ಹಲವು ಪುರಾಣಗಳನ್ನು ಆಧರಿಸಿ ಹಾವುಗಳನ್ನು ಶತಮಾನಗಳನ್ನು ಹಿಂದೂ ಸಂಪ್ರದಾಯದ ಪ್ರಕಾರ ದೇವರೆಂದು ಆರಾಧಾನೆ ಮಾಡಲಾಗುತ್ತಿದೆ. ಅಲ್ಲದೇ ಬೇರೆ ಸಂಪ್ರದಾಯದಲ್ಲಿಯೂ ಆರಾಧನೆ ಇದೆ. ಈಜಿಪ್ಟ್ ಪುರಾಣದ ವಾಜೆಟ್ ನಲ್ಲಿಯೂ ನಾಗ ದೇವಿಯನ್ನು ಆರಾಧಾನೆ ಮಾಡಲಾಗುತ್ತದೆ. ಮತ್ತು (ಬೈಬಲ್ ನ ಸರ್ಪೆಂಟ್ ಸೈತಾನ್) ಹಾವುಗಳನ್ನು ಕೆಟ್ಟ ರಾಕ್ಷಸ ಎಂಬಂತೆಯೂ ನೋಡಲಾಗುತ್ತದೆ. ಆದರೆ ಹಿಂದೂ ಸಂಪ್ರದಾಯದ ಆಚರಣೆಯಲ್ಲಿ ಇಂದಿಗೂ ನಾಗರ ಹಾವುಗಳ ಆರಾಧನೆ ಮುಂದುವರೆದಿದೆ. ಒಟ್ಟಾರೆಯಲ್ಲಿ ಹಾವುಗಳ ಅತೀಯಾದ ಆರಾಧನೆ ಅಥವಾ ದ್ವೇಷ ಈ ಎರಡರಿಂದಲೂ ಹಾವುಗಳ ಅತ್ಯಂತ ತಪ್ಪಾಗಿ ಅರ್ಥ ಮಾಡಿಕೊಳ್ಳಲಾದ ಜೀವಿಯಾಗಿದೆ ಮತ್ತು ಇದರಿಂದಾಗಿ ನಿರಪರಾದಿ ಮುಗ್ದ ಹಾವಿನ ಜೀವಕ್ಕೂ ಅಪಾಯ ತಂದೊಡ್ಡಿದೆ.

ಆಧಾರ: PUGDUNDEE SAFARIS


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...