Homeಮುಖಪುಟಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್ ಕಲಾಂ ಆಜಾದ್, ಶಿಕ್ಷಣಕ್ಕೆ ಗಮನಾರ್ಹ ಕೊಡುಗೆ ನೀಡಿದ್ದ ಮುಸ್ಲಿಂ ಶಿಕ್ಷಣ ತಜ್ಞರನ್ನು ಹಾಗೂ ಎಡಪಂಥೀಯರ ವಿರುದ್ದ ನಾಗೇಶ್ವರ್‌ ರಾವ್‌ ಟ್ವಿಟ್ಟರ್‌ನಲ್ಲಿ ಅವಹೇಳನಕಾರಿ ಭಾಷೆ ಬಳಸಿ ಟೀಕಿಸಿದ್ದರು.

- Advertisement -
- Advertisement -

ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ಕೋಮು ಸಾಮರಸ್ಯ ಕದಡುವ ಐಪಿಎಸ್ ನಾಗೇಶ್ವರರಾವ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಿಪಿಐ (ಎಂ) ಪಾಲಿಟ್ ಬ್ಯೂರೋ ಸದಸ್ಯರಾದ ಬೃಂದಾ ಕಾರಟ್‌ ಕೇಂದ್ರ ಗೃಹಸಚಿವ ಅಮಿ‌ತ್‌ ಶಾ ಮತ್ತು ದೆಹಲಿ ಪೋಲೀಸರಿಗೆ ಪತ್ರ ಬರೆದಿದ್ದಾರೆ.

ಗೃಹ ಸಚಿವಾಲಯದ ಅಡಿಯಲ್ಲಿ ಅಗ್ನಿಶಾಮಕ ಸೇವೆಗಳು, ಗೃಹರಕ್ಷಕರು ಮತ್ತು ನಾಗರಿಕ ರಕ್ಷಣಾ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಕೇಡರ್ ನಾಗೇಶ್ವರ ರಾವ್ ಟ್ವಿಟರ್‌ನಲ್ಲಿ ಅತ್ಯಂತ ಅತಿರೇಕದ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿದ್ದು ಅದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಗೃಹಸಚಿವ ಅಮಿತ್‌ ಷಾಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್ ಕಲಾಂ ಆಜಾದ್, ಶಿಕ್ಷಣಕ್ಕೆ ಗಮನಾರ್ಹ ಕೊಡುಗೆ ನೀಡಿದ್ದ ಮುಸ್ಲಿಂ ಶಿಕ್ಷಣ ತಜ್ಞರನ್ನು ಹಾಗೂ ಎಡಪಂಥೀಯರ ವಿರುದ್ದ ಅವರು ಟ್ವಿಟ್ಟರ್‌ನಲ್ಲಿ ಅವಹೇಳನಕಾರಿ ಭಾಷೆ ಬಳಸಿ ಟೀಕಿಸಿದ್ದರು.

ಅಲ್ಲದೆ ಆರೆಸ್ಸೆಸ್‌ ಮತ್ತು ಬಿಜೆಪಿ ಭಾರತದ ಪುನರ್ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಪ್ರಸ್ತುತ ಐಪಿಎಸ್‌ ಸೇವೆಯಲ್ಲಿ ಇರುವ ನಾಗೇಶ್ವರ ರಾವ್ ಹೊಗಳಿದ್ದಾರೆ.

ಇದನ್ನು ಖಂಡಿಸಿರುವ ಬೃಂದಾ ಕಾರಟ್, ಸಾಂವಿಧಾನಿಕ ಹಕ್ಕಿನ ಪ್ರಕಾರ ಒಬ್ಬ ವ್ಯಕ್ತಿಯು ತನ್ನ ಅಭಿಪ್ರಾಯ ಹೇಳುವುದು ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ. ಆದರೆ ನಾಗರಿಕ ಸೇವೆ ಸಲ್ಲಿಸುತ್ತಿರುವ ಅಧಿಕಾರಿಯಾಗಿ, ನಾಗೇಶ್ವರ ರಾವ್ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಐಪಿಸಿಯ ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಈ ಅಪರಾಧಗಳಿಗೆ ಅವರು ತಪ್ಪಿತಸ್ಥನಾಗಿದ್ದಾರೆ ಎಂದು ಹೇಳಿದ್ದಾರೆ.

ನಾಗೇಶ್ವರ್‌ ರಾಮ್‌ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಅಥವಾ ಕೋಮು ಭಾವನೆಗಳನ್ನು ಪ್ರಚೋದಿಸುವುದು ಇದೇ ಮೊದಲಲ್ಲ ಎಂದು ಅವರು ಹಲವಾರು ಘಟನೆಗಳ ಉದಾಹಣೆ ನೀಡಿದ್ದಾರೆ.

ನಾಗೇಶ್ವರ್‌ ಹೇಳಿಕೆಗಳು ನೋಡಿದರೆ ಜುಲೈ 31 ರಂದು ನಿವೃತ್ತಿಯ ನಂತರ ಬಿಜೆಪಿ ಅಥವಾ ಆರೆಸ್ಸೆಸ್‌‌ಗೆ ಸೇರ್ಪಡೆಗೊಳ್ಳಲು ಅರ್ಹರಾಗಬಹುದು ಎಂದು ಅವರು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಬಂದಿರುವ ವರದಿಗಳನ್ನು ಉಲ್ಲೇಖಿಸಿರುವ ಬೃಂದಾ ಕಾರಟ್‌, ಸೇವೆ ಸಲ್ಲಿಸುವ ಅಧಿಕಾರಿಯಾಗಿ ನಾಗೇಶ್ವರ್‌ ರಾವ್‌ ಪಕ್ಷಾಪಾತಿ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಸೇವಾ ನಿಯಮಗಳ ಉಲ್ಲಂಘನೆಗಾಗಿ ಅವರ ಮೇಲೆ ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಿ ಚಾರ್ಜ್‌ಶೀಟ್ ಹಾಕಬೇಕು ಎಂದು ಬರೆದಿದ್ದಾರೆ.

ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಎಫ್‌ಐಆರ್ ನೋಂದಣಿ ಮಾಡುವಂತೆ ಕೋರಿ ನಾಗೇಶ್ವರ್‌ ರಾವ್‌ ವಿರುದ್ಧ ದೂರು ದಾಖಲಿಸಿರುವ ಬೃಂದಾ ಕಾರಟ್‌, ಅವರ ವಿಚಾರಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಗೃಹಸಚಿವರಿಗೆ ವಿನಂತಿಸಿದ್ದಾರೆ.


ಇದನ್ನೂ ಓದಿ: ಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...