Homeಮುಖಪುಟಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್ ಕಲಾಂ ಆಜಾದ್, ಶಿಕ್ಷಣಕ್ಕೆ ಗಮನಾರ್ಹ ಕೊಡುಗೆ ನೀಡಿದ್ದ ಮುಸ್ಲಿಂ ಶಿಕ್ಷಣ ತಜ್ಞರನ್ನು ಹಾಗೂ ಎಡಪಂಥೀಯರ ವಿರುದ್ದ ನಾಗೇಶ್ವರ್‌ ರಾವ್‌ ಟ್ವಿಟ್ಟರ್‌ನಲ್ಲಿ ಅವಹೇಳನಕಾರಿ ಭಾಷೆ ಬಳಸಿ ಟೀಕಿಸಿದ್ದರು.

- Advertisement -
- Advertisement -

ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ಕೋಮು ಸಾಮರಸ್ಯ ಕದಡುವ ಐಪಿಎಸ್ ನಾಗೇಶ್ವರರಾವ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಿಪಿಐ (ಎಂ) ಪಾಲಿಟ್ ಬ್ಯೂರೋ ಸದಸ್ಯರಾದ ಬೃಂದಾ ಕಾರಟ್‌ ಕೇಂದ್ರ ಗೃಹಸಚಿವ ಅಮಿ‌ತ್‌ ಶಾ ಮತ್ತು ದೆಹಲಿ ಪೋಲೀಸರಿಗೆ ಪತ್ರ ಬರೆದಿದ್ದಾರೆ.

ಗೃಹ ಸಚಿವಾಲಯದ ಅಡಿಯಲ್ಲಿ ಅಗ್ನಿಶಾಮಕ ಸೇವೆಗಳು, ಗೃಹರಕ್ಷಕರು ಮತ್ತು ನಾಗರಿಕ ರಕ್ಷಣಾ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಕೇಡರ್ ನಾಗೇಶ್ವರ ರಾವ್ ಟ್ವಿಟರ್‌ನಲ್ಲಿ ಅತ್ಯಂತ ಅತಿರೇಕದ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿದ್ದು ಅದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಗೃಹಸಚಿವ ಅಮಿತ್‌ ಷಾಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್ ಕಲಾಂ ಆಜಾದ್, ಶಿಕ್ಷಣಕ್ಕೆ ಗಮನಾರ್ಹ ಕೊಡುಗೆ ನೀಡಿದ್ದ ಮುಸ್ಲಿಂ ಶಿಕ್ಷಣ ತಜ್ಞರನ್ನು ಹಾಗೂ ಎಡಪಂಥೀಯರ ವಿರುದ್ದ ಅವರು ಟ್ವಿಟ್ಟರ್‌ನಲ್ಲಿ ಅವಹೇಳನಕಾರಿ ಭಾಷೆ ಬಳಸಿ ಟೀಕಿಸಿದ್ದರು.

ಅಲ್ಲದೆ ಆರೆಸ್ಸೆಸ್‌ ಮತ್ತು ಬಿಜೆಪಿ ಭಾರತದ ಪುನರ್ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಪ್ರಸ್ತುತ ಐಪಿಎಸ್‌ ಸೇವೆಯಲ್ಲಿ ಇರುವ ನಾಗೇಶ್ವರ ರಾವ್ ಹೊಗಳಿದ್ದಾರೆ.

ಇದನ್ನು ಖಂಡಿಸಿರುವ ಬೃಂದಾ ಕಾರಟ್, ಸಾಂವಿಧಾನಿಕ ಹಕ್ಕಿನ ಪ್ರಕಾರ ಒಬ್ಬ ವ್ಯಕ್ತಿಯು ತನ್ನ ಅಭಿಪ್ರಾಯ ಹೇಳುವುದು ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ. ಆದರೆ ನಾಗರಿಕ ಸೇವೆ ಸಲ್ಲಿಸುತ್ತಿರುವ ಅಧಿಕಾರಿಯಾಗಿ, ನಾಗೇಶ್ವರ ರಾವ್ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಐಪಿಸಿಯ ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಈ ಅಪರಾಧಗಳಿಗೆ ಅವರು ತಪ್ಪಿತಸ್ಥನಾಗಿದ್ದಾರೆ ಎಂದು ಹೇಳಿದ್ದಾರೆ.

ನಾಗೇಶ್ವರ್‌ ರಾಮ್‌ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಅಥವಾ ಕೋಮು ಭಾವನೆಗಳನ್ನು ಪ್ರಚೋದಿಸುವುದು ಇದೇ ಮೊದಲಲ್ಲ ಎಂದು ಅವರು ಹಲವಾರು ಘಟನೆಗಳ ಉದಾಹಣೆ ನೀಡಿದ್ದಾರೆ.

ನಾಗೇಶ್ವರ್‌ ಹೇಳಿಕೆಗಳು ನೋಡಿದರೆ ಜುಲೈ 31 ರಂದು ನಿವೃತ್ತಿಯ ನಂತರ ಬಿಜೆಪಿ ಅಥವಾ ಆರೆಸ್ಸೆಸ್‌‌ಗೆ ಸೇರ್ಪಡೆಗೊಳ್ಳಲು ಅರ್ಹರಾಗಬಹುದು ಎಂದು ಅವರು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಬಂದಿರುವ ವರದಿಗಳನ್ನು ಉಲ್ಲೇಖಿಸಿರುವ ಬೃಂದಾ ಕಾರಟ್‌, ಸೇವೆ ಸಲ್ಲಿಸುವ ಅಧಿಕಾರಿಯಾಗಿ ನಾಗೇಶ್ವರ್‌ ರಾವ್‌ ಪಕ್ಷಾಪಾತಿ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಸೇವಾ ನಿಯಮಗಳ ಉಲ್ಲಂಘನೆಗಾಗಿ ಅವರ ಮೇಲೆ ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಿ ಚಾರ್ಜ್‌ಶೀಟ್ ಹಾಕಬೇಕು ಎಂದು ಬರೆದಿದ್ದಾರೆ.

ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಎಫ್‌ಐಆರ್ ನೋಂದಣಿ ಮಾಡುವಂತೆ ಕೋರಿ ನಾಗೇಶ್ವರ್‌ ರಾವ್‌ ವಿರುದ್ಧ ದೂರು ದಾಖಲಿಸಿರುವ ಬೃಂದಾ ಕಾರಟ್‌, ಅವರ ವಿಚಾರಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಗೃಹಸಚಿವರಿಗೆ ವಿನಂತಿಸಿದ್ದಾರೆ.


ಇದನ್ನೂ ಓದಿ: ಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...