Homeಕರ್ನಾಟಕ'ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಬೇಕು..'; ಒಳ ಮೀಸಲಾತಿ ಹೋರಾಟಗಾರರ ಆಗ್ರಹ

‘ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಬೇಕು..’; ಒಳ ಮೀಸಲಾತಿ ಹೋರಾಟಗಾರರ ಆಗ್ರಹ

- Advertisement -
- Advertisement -

ಸುಪ್ರೀಂ ಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಆದ್ದರಿಂದ, ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ತುರ್ತಾಗಿ ನೀಡಬೇಕು ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿ’ ಒತ್ತಾಯಿಸಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, “ಸುಮಾರು ನಾಲ್ಕು ದಶಕಗಳ ಒಳಮೀಸಲಾತಿ ಹೋರಾಟವು ಕಳೆದ ಆಗಸ್ಟ್ 1, 2024 ರ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಒಂದು ತಾರ್ಕಿಕ ಅಂತ್ಯ ಕಂಡಿದೆ. ಒಳಮೀಸಲಾತಿಯ ಪರ ವಿರೋಧದ ಚರ್ಚೆಗಳು ತಕ್ಕಮಟ್ಟಿಗೆ ಶಮನಗೊಂಡು ಒಳಮೀಸಲಾತಿ ಯಾರಿಗೆ ಎಷ್ಟೆಷ್ಟು ಸಿಗಬೇಕೆಂಬ ಚರ್ಚೆಗಳು ಹೆಚ್ಚಾದವು. ಈ ದಿಸೆಯಲ್ಲಿ ತುಸು ತಡವಾದರೂ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಮಾಣವನ್ನು ನಿಗದಿಪಡಿಸಲು ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಿರುವುದು ಅಭಿನಂದನೀಯ” ಎಂದು ಹೇಳಿದ್ದಾರೆ.

“ಒಳ ಮೀಸಲಾತಿಗಾಗಿ ಇಷ್ಟು ವರ್ಷ ಕಾದಿರುವ ನಮಗೆ ಇನ್ನೆರಡು ತಿಂಗಳು ಕಾಯುವುದು ತ್ರಾಸದಾಯಕವಲ್ಲ. ಒಳಮೀಸಲಾತಿ ಜಾರಿಯಾಗುವವರೆಗೆ ಎಲ್ಲ ಸರ್ಕಾರಿ ನೇಮಕಾತಿಗಳನ್ನು ತಡೆ ಹಿಡಿದಿರುವುದು ಸ್ವಾಗತಾರ್ಹವೇ. ಆದರೂ, ಹೆಚ್ಚು ಕಾಲ ಹೀಗೆ ನೇಮಕಾತಿ ತಡೆಹಿಡಿಯುವುದರ ಮೂಲಕ ಇತರರಿಗೂ ತೊಂದರೆ ಕೊಡುವುದು ಅನ್ಯಾಯವಾಗುತ್ತದೆ. ಜೊತೆಗೆ, ಅತ್ಯಂತ ತಳಸಮುದಾಯದ ಬೇಡಿಕೆಗಳನ್ನು ಸತತವಾಗಿ ಮುಂದೂಡುವುದು ಸಹ ಅನ್ಯಾಯವೇ ಆಗುತ್ತದೆ. ಆದ್ದರಿಂದ, ತುರ್ತಾಗಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ನೀಡಬೇಕೆಂದು ಈ ಮೂಲಕ ಒತ್ತಾಯಿಸುತ್ತಿದ್ದೇವೆ” ಎಂದು ಮನವಿ ಮಾಡಿದ್ದಾರೆ.

ಒಳ ಮೀಸಲಾತಿ ಹೋರಾಟಗಾರರ ಆಗ್ರಹಗಳೇನು?

“ಯಾವುದೇ ಕಾರಣಕ್ಕೂ, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದ ಹಾಗೆ ಒಳಮೀಸಲಾತಿ ವರ್ಗೀಕರಣ ಮಾಡುವ ಜೊತೆಗೆ, ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ʼಪ್ರಾಯೋಗಿಕ ದತ್ತಾಂಶʼವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ʼಸ್ಯಾಂಪಲ್ ಸಮೀಕ್ಷೆʼ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣವನ್ನು ನಿಗದಿಗೊಳಿಸಬೇಕು. ಬಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಪರಿಗಣಿಸಿ, ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು” ಎಂದು ಹೇಳಿದ್ದಾರೆ.

“ಗುತ್ತಿಗೆ ನೌಕರಿಗಳಲ್ಲಿಯೂ ಒಳಮೀಸಲಾತಿ ಪರಿಗಣಿಸಲು ಸರ್ಕಾರ ಶಿಫಾರಸು ಮಾಡಬೇಕು. ಒಳಮೀಸಲಾತಿ ಅನುಷ್ಠಾನದಲ್ಲಿನ ಕುಂದುಕೊರತೆಗಳು ಹಾಗೂ ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಿ, ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50 ಮೀಸಲಾತಿ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು” ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

“ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.
ಈ ಮೇಲಿನ ಮನವಿಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ಆಗ್ರಹಿಸುತ್ತದೆ. ಸಾಮಾಜಿಕ ನ್ಯಾಯವನ್ನು ಒಳಮೀಸಲಾತಿಯಲ್ಲಿಯೂ ಎತ್ತಿಹಿಡಿಯಬೇಕೆಂದು ಒತ್ತಾಯಿಸುತ್ತದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪರವಾಗಿ ಬಸವರಾಜ್ ಕೌತಾಳ್, ಡಿ.ಟಿ ವೆಂಕಟೇಶ್, ಶಿವಣ್ಣ ಕನಕಪುರ, ವಿನಯ್ ಶ್ರೀನಿವಾಸ್, ಚಂದ್ರು ತರಹುಣಿಸೆ ಇದ್ದರು.

ಇದನ್ನೂ ಓದಿ; ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...