Homeಕರ್ನಾಟಕ'ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಬೇಕು..'; ಒಳ ಮೀಸಲಾತಿ ಹೋರಾಟಗಾರರ ಆಗ್ರಹ

‘ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಬೇಕು..’; ಒಳ ಮೀಸಲಾತಿ ಹೋರಾಟಗಾರರ ಆಗ್ರಹ

- Advertisement -
- Advertisement -

ಸುಪ್ರೀಂ ಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಆದ್ದರಿಂದ, ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ತುರ್ತಾಗಿ ನೀಡಬೇಕು ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿ’ ಒತ್ತಾಯಿಸಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, “ಸುಮಾರು ನಾಲ್ಕು ದಶಕಗಳ ಒಳಮೀಸಲಾತಿ ಹೋರಾಟವು ಕಳೆದ ಆಗಸ್ಟ್ 1, 2024 ರ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಒಂದು ತಾರ್ಕಿಕ ಅಂತ್ಯ ಕಂಡಿದೆ. ಒಳಮೀಸಲಾತಿಯ ಪರ ವಿರೋಧದ ಚರ್ಚೆಗಳು ತಕ್ಕಮಟ್ಟಿಗೆ ಶಮನಗೊಂಡು ಒಳಮೀಸಲಾತಿ ಯಾರಿಗೆ ಎಷ್ಟೆಷ್ಟು ಸಿಗಬೇಕೆಂಬ ಚರ್ಚೆಗಳು ಹೆಚ್ಚಾದವು. ಈ ದಿಸೆಯಲ್ಲಿ ತುಸು ತಡವಾದರೂ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಮಾಣವನ್ನು ನಿಗದಿಪಡಿಸಲು ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಿರುವುದು ಅಭಿನಂದನೀಯ” ಎಂದು ಹೇಳಿದ್ದಾರೆ.

“ಒಳ ಮೀಸಲಾತಿಗಾಗಿ ಇಷ್ಟು ವರ್ಷ ಕಾದಿರುವ ನಮಗೆ ಇನ್ನೆರಡು ತಿಂಗಳು ಕಾಯುವುದು ತ್ರಾಸದಾಯಕವಲ್ಲ. ಒಳಮೀಸಲಾತಿ ಜಾರಿಯಾಗುವವರೆಗೆ ಎಲ್ಲ ಸರ್ಕಾರಿ ನೇಮಕಾತಿಗಳನ್ನು ತಡೆ ಹಿಡಿದಿರುವುದು ಸ್ವಾಗತಾರ್ಹವೇ. ಆದರೂ, ಹೆಚ್ಚು ಕಾಲ ಹೀಗೆ ನೇಮಕಾತಿ ತಡೆಹಿಡಿಯುವುದರ ಮೂಲಕ ಇತರರಿಗೂ ತೊಂದರೆ ಕೊಡುವುದು ಅನ್ಯಾಯವಾಗುತ್ತದೆ. ಜೊತೆಗೆ, ಅತ್ಯಂತ ತಳಸಮುದಾಯದ ಬೇಡಿಕೆಗಳನ್ನು ಸತತವಾಗಿ ಮುಂದೂಡುವುದು ಸಹ ಅನ್ಯಾಯವೇ ಆಗುತ್ತದೆ. ಆದ್ದರಿಂದ, ತುರ್ತಾಗಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ನೀಡಬೇಕೆಂದು ಈ ಮೂಲಕ ಒತ್ತಾಯಿಸುತ್ತಿದ್ದೇವೆ” ಎಂದು ಮನವಿ ಮಾಡಿದ್ದಾರೆ.

ಒಳ ಮೀಸಲಾತಿ ಹೋರಾಟಗಾರರ ಆಗ್ರಹಗಳೇನು?

“ಯಾವುದೇ ಕಾರಣಕ್ಕೂ, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದ ಹಾಗೆ ಒಳಮೀಸಲಾತಿ ವರ್ಗೀಕರಣ ಮಾಡುವ ಜೊತೆಗೆ, ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ʼಪ್ರಾಯೋಗಿಕ ದತ್ತಾಂಶʼವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ʼಸ್ಯಾಂಪಲ್ ಸಮೀಕ್ಷೆʼ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣವನ್ನು ನಿಗದಿಗೊಳಿಸಬೇಕು. ಬಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಪರಿಗಣಿಸಿ, ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು” ಎಂದು ಹೇಳಿದ್ದಾರೆ.

“ಗುತ್ತಿಗೆ ನೌಕರಿಗಳಲ್ಲಿಯೂ ಒಳಮೀಸಲಾತಿ ಪರಿಗಣಿಸಲು ಸರ್ಕಾರ ಶಿಫಾರಸು ಮಾಡಬೇಕು. ಒಳಮೀಸಲಾತಿ ಅನುಷ್ಠಾನದಲ್ಲಿನ ಕುಂದುಕೊರತೆಗಳು ಹಾಗೂ ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಿ, ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50 ಮೀಸಲಾತಿ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು” ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

“ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.
ಈ ಮೇಲಿನ ಮನವಿಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ಆಗ್ರಹಿಸುತ್ತದೆ. ಸಾಮಾಜಿಕ ನ್ಯಾಯವನ್ನು ಒಳಮೀಸಲಾತಿಯಲ್ಲಿಯೂ ಎತ್ತಿಹಿಡಿಯಬೇಕೆಂದು ಒತ್ತಾಯಿಸುತ್ತದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪರವಾಗಿ ಬಸವರಾಜ್ ಕೌತಾಳ್, ಡಿ.ಟಿ ವೆಂಕಟೇಶ್, ಶಿವಣ್ಣ ಕನಕಪುರ, ವಿನಯ್ ಶ್ರೀನಿವಾಸ್, ಚಂದ್ರು ತರಹುಣಿಸೆ ಇದ್ದರು.

ಇದನ್ನೂ ಓದಿ; ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....