Homeಕರ್ನಾಟಕ'ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಬೇಕು..'; ಒಳ ಮೀಸಲಾತಿ ಹೋರಾಟಗಾರರ ಆಗ್ರಹ

‘ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಬೇಕು..’; ಒಳ ಮೀಸಲಾತಿ ಹೋರಾಟಗಾರರ ಆಗ್ರಹ

- Advertisement -
- Advertisement -

ಸುಪ್ರೀಂ ಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಆದ್ದರಿಂದ, ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ತುರ್ತಾಗಿ ನೀಡಬೇಕು ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿ’ ಒತ್ತಾಯಿಸಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, “ಸುಮಾರು ನಾಲ್ಕು ದಶಕಗಳ ಒಳಮೀಸಲಾತಿ ಹೋರಾಟವು ಕಳೆದ ಆಗಸ್ಟ್ 1, 2024 ರ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಒಂದು ತಾರ್ಕಿಕ ಅಂತ್ಯ ಕಂಡಿದೆ. ಒಳಮೀಸಲಾತಿಯ ಪರ ವಿರೋಧದ ಚರ್ಚೆಗಳು ತಕ್ಕಮಟ್ಟಿಗೆ ಶಮನಗೊಂಡು ಒಳಮೀಸಲಾತಿ ಯಾರಿಗೆ ಎಷ್ಟೆಷ್ಟು ಸಿಗಬೇಕೆಂಬ ಚರ್ಚೆಗಳು ಹೆಚ್ಚಾದವು. ಈ ದಿಸೆಯಲ್ಲಿ ತುಸು ತಡವಾದರೂ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಮಾಣವನ್ನು ನಿಗದಿಪಡಿಸಲು ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಿರುವುದು ಅಭಿನಂದನೀಯ” ಎಂದು ಹೇಳಿದ್ದಾರೆ.

“ಒಳ ಮೀಸಲಾತಿಗಾಗಿ ಇಷ್ಟು ವರ್ಷ ಕಾದಿರುವ ನಮಗೆ ಇನ್ನೆರಡು ತಿಂಗಳು ಕಾಯುವುದು ತ್ರಾಸದಾಯಕವಲ್ಲ. ಒಳಮೀಸಲಾತಿ ಜಾರಿಯಾಗುವವರೆಗೆ ಎಲ್ಲ ಸರ್ಕಾರಿ ನೇಮಕಾತಿಗಳನ್ನು ತಡೆ ಹಿಡಿದಿರುವುದು ಸ್ವಾಗತಾರ್ಹವೇ. ಆದರೂ, ಹೆಚ್ಚು ಕಾಲ ಹೀಗೆ ನೇಮಕಾತಿ ತಡೆಹಿಡಿಯುವುದರ ಮೂಲಕ ಇತರರಿಗೂ ತೊಂದರೆ ಕೊಡುವುದು ಅನ್ಯಾಯವಾಗುತ್ತದೆ. ಜೊತೆಗೆ, ಅತ್ಯಂತ ತಳಸಮುದಾಯದ ಬೇಡಿಕೆಗಳನ್ನು ಸತತವಾಗಿ ಮುಂದೂಡುವುದು ಸಹ ಅನ್ಯಾಯವೇ ಆಗುತ್ತದೆ. ಆದ್ದರಿಂದ, ತುರ್ತಾಗಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ನೀಡಬೇಕೆಂದು ಈ ಮೂಲಕ ಒತ್ತಾಯಿಸುತ್ತಿದ್ದೇವೆ” ಎಂದು ಮನವಿ ಮಾಡಿದ್ದಾರೆ.

ಒಳ ಮೀಸಲಾತಿ ಹೋರಾಟಗಾರರ ಆಗ್ರಹಗಳೇನು?

“ಯಾವುದೇ ಕಾರಣಕ್ಕೂ, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದ ಹಾಗೆ ಒಳಮೀಸಲಾತಿ ವರ್ಗೀಕರಣ ಮಾಡುವ ಜೊತೆಗೆ, ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ʼಪ್ರಾಯೋಗಿಕ ದತ್ತಾಂಶʼವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ʼಸ್ಯಾಂಪಲ್ ಸಮೀಕ್ಷೆʼ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣವನ್ನು ನಿಗದಿಗೊಳಿಸಬೇಕು. ಬಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಪರಿಗಣಿಸಿ, ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು” ಎಂದು ಹೇಳಿದ್ದಾರೆ.

“ಗುತ್ತಿಗೆ ನೌಕರಿಗಳಲ್ಲಿಯೂ ಒಳಮೀಸಲಾತಿ ಪರಿಗಣಿಸಲು ಸರ್ಕಾರ ಶಿಫಾರಸು ಮಾಡಬೇಕು. ಒಳಮೀಸಲಾತಿ ಅನುಷ್ಠಾನದಲ್ಲಿನ ಕುಂದುಕೊರತೆಗಳು ಹಾಗೂ ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಿ, ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50 ಮೀಸಲಾತಿ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು” ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

“ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.
ಈ ಮೇಲಿನ ಮನವಿಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ಆಗ್ರಹಿಸುತ್ತದೆ. ಸಾಮಾಜಿಕ ನ್ಯಾಯವನ್ನು ಒಳಮೀಸಲಾತಿಯಲ್ಲಿಯೂ ಎತ್ತಿಹಿಡಿಯಬೇಕೆಂದು ಒತ್ತಾಯಿಸುತ್ತದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪರವಾಗಿ ಬಸವರಾಜ್ ಕೌತಾಳ್, ಡಿ.ಟಿ ವೆಂಕಟೇಶ್, ಶಿವಣ್ಣ ಕನಕಪುರ, ವಿನಯ್ ಶ್ರೀನಿವಾಸ್, ಚಂದ್ರು ತರಹುಣಿಸೆ ಇದ್ದರು.

ಇದನ್ನೂ ಓದಿ; ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...