Homeಕರ್ನಾಟಕ'ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಬೇಕು..'; ಒಳ ಮೀಸಲಾತಿ ಹೋರಾಟಗಾರರ ಆಗ್ರಹ

‘ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಬೇಕು..’; ಒಳ ಮೀಸಲಾತಿ ಹೋರಾಟಗಾರರ ಆಗ್ರಹ

- Advertisement -
- Advertisement -

ಸುಪ್ರೀಂ ಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಆದ್ದರಿಂದ, ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ತುರ್ತಾಗಿ ನೀಡಬೇಕು ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿ’ ಒತ್ತಾಯಿಸಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, “ಸುಮಾರು ನಾಲ್ಕು ದಶಕಗಳ ಒಳಮೀಸಲಾತಿ ಹೋರಾಟವು ಕಳೆದ ಆಗಸ್ಟ್ 1, 2024 ರ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಒಂದು ತಾರ್ಕಿಕ ಅಂತ್ಯ ಕಂಡಿದೆ. ಒಳಮೀಸಲಾತಿಯ ಪರ ವಿರೋಧದ ಚರ್ಚೆಗಳು ತಕ್ಕಮಟ್ಟಿಗೆ ಶಮನಗೊಂಡು ಒಳಮೀಸಲಾತಿ ಯಾರಿಗೆ ಎಷ್ಟೆಷ್ಟು ಸಿಗಬೇಕೆಂಬ ಚರ್ಚೆಗಳು ಹೆಚ್ಚಾದವು. ಈ ದಿಸೆಯಲ್ಲಿ ತುಸು ತಡವಾದರೂ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಮಾಣವನ್ನು ನಿಗದಿಪಡಿಸಲು ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಿರುವುದು ಅಭಿನಂದನೀಯ” ಎಂದು ಹೇಳಿದ್ದಾರೆ.

“ಒಳ ಮೀಸಲಾತಿಗಾಗಿ ಇಷ್ಟು ವರ್ಷ ಕಾದಿರುವ ನಮಗೆ ಇನ್ನೆರಡು ತಿಂಗಳು ಕಾಯುವುದು ತ್ರಾಸದಾಯಕವಲ್ಲ. ಒಳಮೀಸಲಾತಿ ಜಾರಿಯಾಗುವವರೆಗೆ ಎಲ್ಲ ಸರ್ಕಾರಿ ನೇಮಕಾತಿಗಳನ್ನು ತಡೆ ಹಿಡಿದಿರುವುದು ಸ್ವಾಗತಾರ್ಹವೇ. ಆದರೂ, ಹೆಚ್ಚು ಕಾಲ ಹೀಗೆ ನೇಮಕಾತಿ ತಡೆಹಿಡಿಯುವುದರ ಮೂಲಕ ಇತರರಿಗೂ ತೊಂದರೆ ಕೊಡುವುದು ಅನ್ಯಾಯವಾಗುತ್ತದೆ. ಜೊತೆಗೆ, ಅತ್ಯಂತ ತಳಸಮುದಾಯದ ಬೇಡಿಕೆಗಳನ್ನು ಸತತವಾಗಿ ಮುಂದೂಡುವುದು ಸಹ ಅನ್ಯಾಯವೇ ಆಗುತ್ತದೆ. ಆದ್ದರಿಂದ, ತುರ್ತಾಗಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ನೀಡಬೇಕೆಂದು ಈ ಮೂಲಕ ಒತ್ತಾಯಿಸುತ್ತಿದ್ದೇವೆ” ಎಂದು ಮನವಿ ಮಾಡಿದ್ದಾರೆ.

ಒಳ ಮೀಸಲಾತಿ ಹೋರಾಟಗಾರರ ಆಗ್ರಹಗಳೇನು?

“ಯಾವುದೇ ಕಾರಣಕ್ಕೂ, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದ ಹಾಗೆ ಒಳಮೀಸಲಾತಿ ವರ್ಗೀಕರಣ ಮಾಡುವ ಜೊತೆಗೆ, ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ʼಪ್ರಾಯೋಗಿಕ ದತ್ತಾಂಶʼವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ʼಸ್ಯಾಂಪಲ್ ಸಮೀಕ್ಷೆʼ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣವನ್ನು ನಿಗದಿಗೊಳಿಸಬೇಕು. ಬಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಪರಿಗಣಿಸಿ, ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು” ಎಂದು ಹೇಳಿದ್ದಾರೆ.

“ಗುತ್ತಿಗೆ ನೌಕರಿಗಳಲ್ಲಿಯೂ ಒಳಮೀಸಲಾತಿ ಪರಿಗಣಿಸಲು ಸರ್ಕಾರ ಶಿಫಾರಸು ಮಾಡಬೇಕು. ಒಳಮೀಸಲಾತಿ ಅನುಷ್ಠಾನದಲ್ಲಿನ ಕುಂದುಕೊರತೆಗಳು ಹಾಗೂ ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಿ, ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50 ಮೀಸಲಾತಿ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು” ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

“ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.
ಈ ಮೇಲಿನ ಮನವಿಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ಆಗ್ರಹಿಸುತ್ತದೆ. ಸಾಮಾಜಿಕ ನ್ಯಾಯವನ್ನು ಒಳಮೀಸಲಾತಿಯಲ್ಲಿಯೂ ಎತ್ತಿಹಿಡಿಯಬೇಕೆಂದು ಒತ್ತಾಯಿಸುತ್ತದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪರವಾಗಿ ಬಸವರಾಜ್ ಕೌತಾಳ್, ಡಿ.ಟಿ ವೆಂಕಟೇಶ್, ಶಿವಣ್ಣ ಕನಕಪುರ, ವಿನಯ್ ಶ್ರೀನಿವಾಸ್, ಚಂದ್ರು ತರಹುಣಿಸೆ ಇದ್ದರು.

ಇದನ್ನೂ ಓದಿ; ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...