Homeಕರ್ನಾಟಕಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ...

ಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ಕುತೂಹಲ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ರಚಿಸಲಾದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗ್ಗೆ 11 ಗಂಟೆಗೆ ಸಲ್ಲಿಕೆಯಾಗಲಿದೆ. ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿ ಕುರಿತು ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿತ್ತು.

ಆಯೋಗದ ಮೂಲಗಳ ಪ್ರಕಾರ, ಅಂತಿಮ ವರದಿ ಸಿದ್ಧವಾಗಿದೆ. ಇಂದು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಒಳ ಮೀಸಲಾತಿ ವಿಷಯದಿಂದಾಗಿ ಸಾರ್ವಜನಿಕ ಸೇವೆಗಳ ನೇಮಕಾತಿಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ವರದಿ ಸಲ್ಲಿಕೆಯಾದ ನಂತರ ಮತ್ತು ಶಿಫಾರಸುಗಳು ಅಂಗೀಕಾರಗೊಂಡ ನಂತರ ನೇಮಕಾತಿ ಪ್ರಕ್ರಿಯೆ ಪುನರಾರಂಭವಾಗಲಿದೆ.

ಆಯೋಗವು ಮೇ 5 ರಿಂದ 3 ತಿಂಗಳ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿನ 1.16 ಕೋಟಿ ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 93 ರಷ್ಟು ಜನರನ್ನು ಗುರುತಿಸಿದೆ. ಆದರೆ, ಬೆಂಗಳೂರು ನಗರದಲ್ಲಿ ಮಾತ್ರ ಸಮೀಕ್ಷೆ ನಿಧಾನವಾಗಿದ್ದು, ಇಲ್ಲಿನ 13.62 ಲಕ್ಷ ಅಂದಾಜು ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 53 ರಷ್ಟು ಜನರನ್ನು ಮಾತ್ರ ಗುರುತಿಸಲಾಗಿದೆ.

ಸುಪ್ರೀಂ ಕೋರ್ಟ್ ಆಗಸ್ಟ್ 2024 ರಲ್ಲಿ ನೀಡಿದ ತೀರ್ಪಿನ ನಂತರ ರಾಜ್ಯ ಸರ್ಕಾರ ಈ ಆಯೋಗವನ್ನು ರಚಿಸಿತ್ತು. ಈ ತೀರ್ಪು ರಾಜ್ಯದಲ್ಲಿನ 101 ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ಅವಕಾಶ ಮಾಡಿಕೊಟ್ಟಿತ್ತು. ದಲಿತ ಎಡ (ಮಾದಿಗ) ಸಮುದಾಯಗಳು ಒಳ ಮೀಸಲಾತಿಗೆ ಪ್ರಮುಖ ಬೇಡಿಕೆ ಇಟ್ಟಿದ್ದು, ಮೀಸಲಾತಿ ಸೌಲಭ್ಯಗಳು ಇದುವರೆಗೆ ದಲಿತ ಬಲ (ಹೊಲೆಯ), ಭೋವಿ ಮತ್ತು ಲಂಬಾಣಿ ಸಮುದಾಯಗಳಿಗೆ ಮಾತ್ರ ದೊರೆತಿವೆ ಎಂದು ಆರೋಪಿಸಿವೆ.

ಒಳಮೀಸಲಾತಿ ಸಮೀಕ್ಷಾ ಅಂತಿಮ ವರದಿಯನ್ನು ಇಂದು ಸಲ್ಲಿಕೆಯಾಗಲಿದೆ. ಕೂಡಲೇ ಮುಂದಿನ ಸಚಿವ ಸಂಪುಟದಲ್ಲಿ ಮಂಡನೆಯಾಗಿ ಮುಂದಿನ ಅಧಿವೇಶನದಲ್ಲಿ ಚರ್ಚೆಯಾಗಿ ಜಾರಿಯಾಗಲೇಬೇಕು.

ಒಂದು ವೇಳೆ ಉಪ ಸಮಿತಿನೋ ಮತ್ತೊಂದೊ ಮಾಡುವ ಪ್ರಯತ್ನವನ್ನೇನಾದರೂ ಸರ್ಕಾರ ಮಾಡುವ ಪ್ರಯತ್ನ ಮಾಡಿದರೆ ನಿಜಕ್ಕೂ ಮೀಸಲಾತಿ ವಿರೋಧಿ ಬಿಜೆಪಿ ಸಂಘಪರಿವಾರದ ಖೂಳರು ಇದರ ಎಲ್ಲಾ ಲಾಭವನ್ನು ಪಡೆದೇ ಪಡೆಯುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಮತ್ತೆ ಬಿಜೆಪಿಯ ಸಂಘಪರಿವಾರದ ಖೂಳರು ಇದರ ಲಾಭ ಪಡೆಯುತ್ತಾರೆಂದ ಒಳಮೀಸಲಾತಿ ಮಾಡಬೇಕಿಲ್ಲ.  35 ವರ್ಷಗಳ ನ್ಯಾಯದ ಬೇಡಿಕೆ ಇದು. ಇದನ್ನು ಜಾರಿ ಮಾಡಬೇಕಿರುವುದು ಕಾಂಗ್ರೆಸ್ ನ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಒಳಮೀಸಲಾತಿ ಪರ ಹೋರಾಟಗಾರ ಚಂದ್ರು ತರಹುಣಸೆ ತಿಳಿಸಿದ್ದಾರೆ.

ಒಳಮಿಸಲಾತಿ ವರದಿ ಸಲ್ಲಿಸಲು ಇಂದಿಗೆ (ಜು.4) ಸಮಯ ನಿಗದಿಯಾಗಿದೆ. ಹಾಗಂತ ಇದಕ್ಕಾಗಿ ಸಂಭ್ರಮಿಸಬೇಕಿಲ್ಲ ಮತ್ತು ಮೈ ಮರೆಯಬೇಕಿಲ್ಲ. ವರದಿ ಜಾರಿ ಆಗಿ ಸರ್ಕಾರದ ಆದೇಶದ ಪ್ರತಿ ಕೈ ಸೇರುವವರೆಗೂ ಸರ್ಕಾರದ ಮೇಲೆ ಒತ್ತಡ ನಿರಂತರವಾಗಿರಲಿ ಮತ್ತು ಒಳಮೀಸಲಾತಿ ಜಾರಿ ಪ್ರಮಾಣದಲ್ಲಿ ಅಂದರೇ ಪರ್ಸಂಟೇಜ್ ಹಂಚಿಕೆ ವಿಚಾರದಲ್ಲಿ ಯಾವ ಮೋಸ, ಅನ್ಯಾಯ ಆಗದಂತೆ ಹಕ್ಕೊತ್ತಾಯ ನಿರಂತರವಾಗಿರಲಿ. ಕಳೆದ ಮುವ್ವತೈದು ವರ್ಷಗಳಲ್ಲಿ ಆದ ಅದೆಷ್ಟೋ ನಂಬಿಕೆ ದ್ರೋಹಗಳು ಇನ್ನೂ ನಮ್ಮ ಕಣ್ಣಿಗೆ ಕಟ್ಟಿದಂತಿರುವಾಗ ಮತ್ತೊಂದು ನಂಬಿಕೆ ದ್ರೋಹ ಆಗದಂತೆ ಜಾಗ್ರತೆ ವಹಿಸೋಣ. ಸಂಭ್ರಮ ಅಂತ ಮೈ ಮರೆತು ಬಿಡೋದು ಬೇಡ. ಸದಾಶಿವ ಆಯೋಗದ ವರದಿ ಸಲ್ಲಿಕೆಯಾದಾಗ ಮತ್ತು ಮಾದುಸ್ವಾಮಿ ವರದಿ ಸಲ್ಲಿಕೆಯಾದಾಗಲೂ ಹೀಗೆಯೇ ಸಂಭ್ರಮ ಪಟ್ಟಿದ್ದು. ಕೊನೆಗೆ ಏನಾಯಿತೆಂಬ ಉದಾಹರಣೆಗೆ ನಾವೆ ಜೀವಂತ ಸಾಕ್ಷಿಗಳು ಇದ್ದೇವೆಯಲ್ಲ ಎಂದು ಹೋರಾಟಗಾರ ಬಿ ಆರ್ ಭಾಸ್ಕರ್ ಪ್ರಸಾದ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅಭಿಪ್ರಾಯಿಸಿದ್ದಾರೆ.

ಸೇನಾ ಅಧಿಕಾರಿಯಿಂದ ಸ್ಪೈಸ್‌ಜೆಟ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಪಂಚ್‌ಗಳಿಂದ ಹೊಡೆತ, ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದ ನೌಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...