Homeಕರ್ನಾಟಕಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ...

ಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ಕುತೂಹಲ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ರಚಿಸಲಾದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗ್ಗೆ 11 ಗಂಟೆಗೆ ಸಲ್ಲಿಕೆಯಾಗಲಿದೆ. ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿ ಕುರಿತು ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿತ್ತು.

ಆಯೋಗದ ಮೂಲಗಳ ಪ್ರಕಾರ, ಅಂತಿಮ ವರದಿ ಸಿದ್ಧವಾಗಿದೆ. ಇಂದು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಒಳ ಮೀಸಲಾತಿ ವಿಷಯದಿಂದಾಗಿ ಸಾರ್ವಜನಿಕ ಸೇವೆಗಳ ನೇಮಕಾತಿಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ವರದಿ ಸಲ್ಲಿಕೆಯಾದ ನಂತರ ಮತ್ತು ಶಿಫಾರಸುಗಳು ಅಂಗೀಕಾರಗೊಂಡ ನಂತರ ನೇಮಕಾತಿ ಪ್ರಕ್ರಿಯೆ ಪುನರಾರಂಭವಾಗಲಿದೆ.

ಆಯೋಗವು ಮೇ 5 ರಿಂದ 3 ತಿಂಗಳ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿನ 1.16 ಕೋಟಿ ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 93 ರಷ್ಟು ಜನರನ್ನು ಗುರುತಿಸಿದೆ. ಆದರೆ, ಬೆಂಗಳೂರು ನಗರದಲ್ಲಿ ಮಾತ್ರ ಸಮೀಕ್ಷೆ ನಿಧಾನವಾಗಿದ್ದು, ಇಲ್ಲಿನ 13.62 ಲಕ್ಷ ಅಂದಾಜು ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 53 ರಷ್ಟು ಜನರನ್ನು ಮಾತ್ರ ಗುರುತಿಸಲಾಗಿದೆ.

ಸುಪ್ರೀಂ ಕೋರ್ಟ್ ಆಗಸ್ಟ್ 2024 ರಲ್ಲಿ ನೀಡಿದ ತೀರ್ಪಿನ ನಂತರ ರಾಜ್ಯ ಸರ್ಕಾರ ಈ ಆಯೋಗವನ್ನು ರಚಿಸಿತ್ತು. ಈ ತೀರ್ಪು ರಾಜ್ಯದಲ್ಲಿನ 101 ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ಅವಕಾಶ ಮಾಡಿಕೊಟ್ಟಿತ್ತು. ದಲಿತ ಎಡ (ಮಾದಿಗ) ಸಮುದಾಯಗಳು ಒಳ ಮೀಸಲಾತಿಗೆ ಪ್ರಮುಖ ಬೇಡಿಕೆ ಇಟ್ಟಿದ್ದು, ಮೀಸಲಾತಿ ಸೌಲಭ್ಯಗಳು ಇದುವರೆಗೆ ದಲಿತ ಬಲ (ಹೊಲೆಯ), ಭೋವಿ ಮತ್ತು ಲಂಬಾಣಿ ಸಮುದಾಯಗಳಿಗೆ ಮಾತ್ರ ದೊರೆತಿವೆ ಎಂದು ಆರೋಪಿಸಿವೆ.

ಒಳಮೀಸಲಾತಿ ಸಮೀಕ್ಷಾ ಅಂತಿಮ ವರದಿಯನ್ನು ಇಂದು ಸಲ್ಲಿಕೆಯಾಗಲಿದೆ. ಕೂಡಲೇ ಮುಂದಿನ ಸಚಿವ ಸಂಪುಟದಲ್ಲಿ ಮಂಡನೆಯಾಗಿ ಮುಂದಿನ ಅಧಿವೇಶನದಲ್ಲಿ ಚರ್ಚೆಯಾಗಿ ಜಾರಿಯಾಗಲೇಬೇಕು.

ಒಂದು ವೇಳೆ ಉಪ ಸಮಿತಿನೋ ಮತ್ತೊಂದೊ ಮಾಡುವ ಪ್ರಯತ್ನವನ್ನೇನಾದರೂ ಸರ್ಕಾರ ಮಾಡುವ ಪ್ರಯತ್ನ ಮಾಡಿದರೆ ನಿಜಕ್ಕೂ ಮೀಸಲಾತಿ ವಿರೋಧಿ ಬಿಜೆಪಿ ಸಂಘಪರಿವಾರದ ಖೂಳರು ಇದರ ಎಲ್ಲಾ ಲಾಭವನ್ನು ಪಡೆದೇ ಪಡೆಯುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಮತ್ತೆ ಬಿಜೆಪಿಯ ಸಂಘಪರಿವಾರದ ಖೂಳರು ಇದರ ಲಾಭ ಪಡೆಯುತ್ತಾರೆಂದ ಒಳಮೀಸಲಾತಿ ಮಾಡಬೇಕಿಲ್ಲ.  35 ವರ್ಷಗಳ ನ್ಯಾಯದ ಬೇಡಿಕೆ ಇದು. ಇದನ್ನು ಜಾರಿ ಮಾಡಬೇಕಿರುವುದು ಕಾಂಗ್ರೆಸ್ ನ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಒಳಮೀಸಲಾತಿ ಪರ ಹೋರಾಟಗಾರ ಚಂದ್ರು ತರಹುಣಸೆ ತಿಳಿಸಿದ್ದಾರೆ.

ಒಳಮಿಸಲಾತಿ ವರದಿ ಸಲ್ಲಿಸಲು ಇಂದಿಗೆ (ಜು.4) ಸಮಯ ನಿಗದಿಯಾಗಿದೆ. ಹಾಗಂತ ಇದಕ್ಕಾಗಿ ಸಂಭ್ರಮಿಸಬೇಕಿಲ್ಲ ಮತ್ತು ಮೈ ಮರೆಯಬೇಕಿಲ್ಲ. ವರದಿ ಜಾರಿ ಆಗಿ ಸರ್ಕಾರದ ಆದೇಶದ ಪ್ರತಿ ಕೈ ಸೇರುವವರೆಗೂ ಸರ್ಕಾರದ ಮೇಲೆ ಒತ್ತಡ ನಿರಂತರವಾಗಿರಲಿ ಮತ್ತು ಒಳಮೀಸಲಾತಿ ಜಾರಿ ಪ್ರಮಾಣದಲ್ಲಿ ಅಂದರೇ ಪರ್ಸಂಟೇಜ್ ಹಂಚಿಕೆ ವಿಚಾರದಲ್ಲಿ ಯಾವ ಮೋಸ, ಅನ್ಯಾಯ ಆಗದಂತೆ ಹಕ್ಕೊತ್ತಾಯ ನಿರಂತರವಾಗಿರಲಿ. ಕಳೆದ ಮುವ್ವತೈದು ವರ್ಷಗಳಲ್ಲಿ ಆದ ಅದೆಷ್ಟೋ ನಂಬಿಕೆ ದ್ರೋಹಗಳು ಇನ್ನೂ ನಮ್ಮ ಕಣ್ಣಿಗೆ ಕಟ್ಟಿದಂತಿರುವಾಗ ಮತ್ತೊಂದು ನಂಬಿಕೆ ದ್ರೋಹ ಆಗದಂತೆ ಜಾಗ್ರತೆ ವಹಿಸೋಣ. ಸಂಭ್ರಮ ಅಂತ ಮೈ ಮರೆತು ಬಿಡೋದು ಬೇಡ. ಸದಾಶಿವ ಆಯೋಗದ ವರದಿ ಸಲ್ಲಿಕೆಯಾದಾಗ ಮತ್ತು ಮಾದುಸ್ವಾಮಿ ವರದಿ ಸಲ್ಲಿಕೆಯಾದಾಗಲೂ ಹೀಗೆಯೇ ಸಂಭ್ರಮ ಪಟ್ಟಿದ್ದು. ಕೊನೆಗೆ ಏನಾಯಿತೆಂಬ ಉದಾಹರಣೆಗೆ ನಾವೆ ಜೀವಂತ ಸಾಕ್ಷಿಗಳು ಇದ್ದೇವೆಯಲ್ಲ ಎಂದು ಹೋರಾಟಗಾರ ಬಿ ಆರ್ ಭಾಸ್ಕರ್ ಪ್ರಸಾದ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅಭಿಪ್ರಾಯಿಸಿದ್ದಾರೆ.

ಸೇನಾ ಅಧಿಕಾರಿಯಿಂದ ಸ್ಪೈಸ್‌ಜೆಟ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಪಂಚ್‌ಗಳಿಂದ ಹೊಡೆತ, ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದ ನೌಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....