Homeಕರ್ನಾಟಕಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ...

ಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ಕುತೂಹಲ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ರಚಿಸಲಾದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗ್ಗೆ 11 ಗಂಟೆಗೆ ಸಲ್ಲಿಕೆಯಾಗಲಿದೆ. ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿ ಕುರಿತು ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿತ್ತು.

ಆಯೋಗದ ಮೂಲಗಳ ಪ್ರಕಾರ, ಅಂತಿಮ ವರದಿ ಸಿದ್ಧವಾಗಿದೆ. ಇಂದು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಒಳ ಮೀಸಲಾತಿ ವಿಷಯದಿಂದಾಗಿ ಸಾರ್ವಜನಿಕ ಸೇವೆಗಳ ನೇಮಕಾತಿಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ವರದಿ ಸಲ್ಲಿಕೆಯಾದ ನಂತರ ಮತ್ತು ಶಿಫಾರಸುಗಳು ಅಂಗೀಕಾರಗೊಂಡ ನಂತರ ನೇಮಕಾತಿ ಪ್ರಕ್ರಿಯೆ ಪುನರಾರಂಭವಾಗಲಿದೆ.

ಆಯೋಗವು ಮೇ 5 ರಿಂದ 3 ತಿಂಗಳ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿನ 1.16 ಕೋಟಿ ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 93 ರಷ್ಟು ಜನರನ್ನು ಗುರುತಿಸಿದೆ. ಆದರೆ, ಬೆಂಗಳೂರು ನಗರದಲ್ಲಿ ಮಾತ್ರ ಸಮೀಕ್ಷೆ ನಿಧಾನವಾಗಿದ್ದು, ಇಲ್ಲಿನ 13.62 ಲಕ್ಷ ಅಂದಾಜು ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 53 ರಷ್ಟು ಜನರನ್ನು ಮಾತ್ರ ಗುರುತಿಸಲಾಗಿದೆ.

ಸುಪ್ರೀಂ ಕೋರ್ಟ್ ಆಗಸ್ಟ್ 2024 ರಲ್ಲಿ ನೀಡಿದ ತೀರ್ಪಿನ ನಂತರ ರಾಜ್ಯ ಸರ್ಕಾರ ಈ ಆಯೋಗವನ್ನು ರಚಿಸಿತ್ತು. ಈ ತೀರ್ಪು ರಾಜ್ಯದಲ್ಲಿನ 101 ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ಅವಕಾಶ ಮಾಡಿಕೊಟ್ಟಿತ್ತು. ದಲಿತ ಎಡ (ಮಾದಿಗ) ಸಮುದಾಯಗಳು ಒಳ ಮೀಸಲಾತಿಗೆ ಪ್ರಮುಖ ಬೇಡಿಕೆ ಇಟ್ಟಿದ್ದು, ಮೀಸಲಾತಿ ಸೌಲಭ್ಯಗಳು ಇದುವರೆಗೆ ದಲಿತ ಬಲ (ಹೊಲೆಯ), ಭೋವಿ ಮತ್ತು ಲಂಬಾಣಿ ಸಮುದಾಯಗಳಿಗೆ ಮಾತ್ರ ದೊರೆತಿವೆ ಎಂದು ಆರೋಪಿಸಿವೆ.

ಒಳಮೀಸಲಾತಿ ಸಮೀಕ್ಷಾ ಅಂತಿಮ ವರದಿಯನ್ನು ಇಂದು ಸಲ್ಲಿಕೆಯಾಗಲಿದೆ. ಕೂಡಲೇ ಮುಂದಿನ ಸಚಿವ ಸಂಪುಟದಲ್ಲಿ ಮಂಡನೆಯಾಗಿ ಮುಂದಿನ ಅಧಿವೇಶನದಲ್ಲಿ ಚರ್ಚೆಯಾಗಿ ಜಾರಿಯಾಗಲೇಬೇಕು.

ಒಂದು ವೇಳೆ ಉಪ ಸಮಿತಿನೋ ಮತ್ತೊಂದೊ ಮಾಡುವ ಪ್ರಯತ್ನವನ್ನೇನಾದರೂ ಸರ್ಕಾರ ಮಾಡುವ ಪ್ರಯತ್ನ ಮಾಡಿದರೆ ನಿಜಕ್ಕೂ ಮೀಸಲಾತಿ ವಿರೋಧಿ ಬಿಜೆಪಿ ಸಂಘಪರಿವಾರದ ಖೂಳರು ಇದರ ಎಲ್ಲಾ ಲಾಭವನ್ನು ಪಡೆದೇ ಪಡೆಯುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಮತ್ತೆ ಬಿಜೆಪಿಯ ಸಂಘಪರಿವಾರದ ಖೂಳರು ಇದರ ಲಾಭ ಪಡೆಯುತ್ತಾರೆಂದ ಒಳಮೀಸಲಾತಿ ಮಾಡಬೇಕಿಲ್ಲ.  35 ವರ್ಷಗಳ ನ್ಯಾಯದ ಬೇಡಿಕೆ ಇದು. ಇದನ್ನು ಜಾರಿ ಮಾಡಬೇಕಿರುವುದು ಕಾಂಗ್ರೆಸ್ ನ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಒಳಮೀಸಲಾತಿ ಪರ ಹೋರಾಟಗಾರ ಚಂದ್ರು ತರಹುಣಸೆ ತಿಳಿಸಿದ್ದಾರೆ.

ಒಳಮಿಸಲಾತಿ ವರದಿ ಸಲ್ಲಿಸಲು ಇಂದಿಗೆ (ಜು.4) ಸಮಯ ನಿಗದಿಯಾಗಿದೆ. ಹಾಗಂತ ಇದಕ್ಕಾಗಿ ಸಂಭ್ರಮಿಸಬೇಕಿಲ್ಲ ಮತ್ತು ಮೈ ಮರೆಯಬೇಕಿಲ್ಲ. ವರದಿ ಜಾರಿ ಆಗಿ ಸರ್ಕಾರದ ಆದೇಶದ ಪ್ರತಿ ಕೈ ಸೇರುವವರೆಗೂ ಸರ್ಕಾರದ ಮೇಲೆ ಒತ್ತಡ ನಿರಂತರವಾಗಿರಲಿ ಮತ್ತು ಒಳಮೀಸಲಾತಿ ಜಾರಿ ಪ್ರಮಾಣದಲ್ಲಿ ಅಂದರೇ ಪರ್ಸಂಟೇಜ್ ಹಂಚಿಕೆ ವಿಚಾರದಲ್ಲಿ ಯಾವ ಮೋಸ, ಅನ್ಯಾಯ ಆಗದಂತೆ ಹಕ್ಕೊತ್ತಾಯ ನಿರಂತರವಾಗಿರಲಿ. ಕಳೆದ ಮುವ್ವತೈದು ವರ್ಷಗಳಲ್ಲಿ ಆದ ಅದೆಷ್ಟೋ ನಂಬಿಕೆ ದ್ರೋಹಗಳು ಇನ್ನೂ ನಮ್ಮ ಕಣ್ಣಿಗೆ ಕಟ್ಟಿದಂತಿರುವಾಗ ಮತ್ತೊಂದು ನಂಬಿಕೆ ದ್ರೋಹ ಆಗದಂತೆ ಜಾಗ್ರತೆ ವಹಿಸೋಣ. ಸಂಭ್ರಮ ಅಂತ ಮೈ ಮರೆತು ಬಿಡೋದು ಬೇಡ. ಸದಾಶಿವ ಆಯೋಗದ ವರದಿ ಸಲ್ಲಿಕೆಯಾದಾಗ ಮತ್ತು ಮಾದುಸ್ವಾಮಿ ವರದಿ ಸಲ್ಲಿಕೆಯಾದಾಗಲೂ ಹೀಗೆಯೇ ಸಂಭ್ರಮ ಪಟ್ಟಿದ್ದು. ಕೊನೆಗೆ ಏನಾಯಿತೆಂಬ ಉದಾಹರಣೆಗೆ ನಾವೆ ಜೀವಂತ ಸಾಕ್ಷಿಗಳು ಇದ್ದೇವೆಯಲ್ಲ ಎಂದು ಹೋರಾಟಗಾರ ಬಿ ಆರ್ ಭಾಸ್ಕರ್ ಪ್ರಸಾದ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅಭಿಪ್ರಾಯಿಸಿದ್ದಾರೆ.

ಸೇನಾ ಅಧಿಕಾರಿಯಿಂದ ಸ್ಪೈಸ್‌ಜೆಟ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಪಂಚ್‌ಗಳಿಂದ ಹೊಡೆತ, ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದ ನೌಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...