Homeಕರ್ನಾಟಕಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ...

ಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ಕುತೂಹಲ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ರಚಿಸಲಾದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗ್ಗೆ 11 ಗಂಟೆಗೆ ಸಲ್ಲಿಕೆಯಾಗಲಿದೆ. ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿ ಕುರಿತು ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿತ್ತು.

ಆಯೋಗದ ಮೂಲಗಳ ಪ್ರಕಾರ, ಅಂತಿಮ ವರದಿ ಸಿದ್ಧವಾಗಿದೆ. ಇಂದು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಒಳ ಮೀಸಲಾತಿ ವಿಷಯದಿಂದಾಗಿ ಸಾರ್ವಜನಿಕ ಸೇವೆಗಳ ನೇಮಕಾತಿಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ವರದಿ ಸಲ್ಲಿಕೆಯಾದ ನಂತರ ಮತ್ತು ಶಿಫಾರಸುಗಳು ಅಂಗೀಕಾರಗೊಂಡ ನಂತರ ನೇಮಕಾತಿ ಪ್ರಕ್ರಿಯೆ ಪುನರಾರಂಭವಾಗಲಿದೆ.

ಆಯೋಗವು ಮೇ 5 ರಿಂದ 3 ತಿಂಗಳ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿನ 1.16 ಕೋಟಿ ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 93 ರಷ್ಟು ಜನರನ್ನು ಗುರುತಿಸಿದೆ. ಆದರೆ, ಬೆಂಗಳೂರು ನಗರದಲ್ಲಿ ಮಾತ್ರ ಸಮೀಕ್ಷೆ ನಿಧಾನವಾಗಿದ್ದು, ಇಲ್ಲಿನ 13.62 ಲಕ್ಷ ಅಂದಾಜು ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 53 ರಷ್ಟು ಜನರನ್ನು ಮಾತ್ರ ಗುರುತಿಸಲಾಗಿದೆ.

ಸುಪ್ರೀಂ ಕೋರ್ಟ್ ಆಗಸ್ಟ್ 2024 ರಲ್ಲಿ ನೀಡಿದ ತೀರ್ಪಿನ ನಂತರ ರಾಜ್ಯ ಸರ್ಕಾರ ಈ ಆಯೋಗವನ್ನು ರಚಿಸಿತ್ತು. ಈ ತೀರ್ಪು ರಾಜ್ಯದಲ್ಲಿನ 101 ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ಅವಕಾಶ ಮಾಡಿಕೊಟ್ಟಿತ್ತು. ದಲಿತ ಎಡ (ಮಾದಿಗ) ಸಮುದಾಯಗಳು ಒಳ ಮೀಸಲಾತಿಗೆ ಪ್ರಮುಖ ಬೇಡಿಕೆ ಇಟ್ಟಿದ್ದು, ಮೀಸಲಾತಿ ಸೌಲಭ್ಯಗಳು ಇದುವರೆಗೆ ದಲಿತ ಬಲ (ಹೊಲೆಯ), ಭೋವಿ ಮತ್ತು ಲಂಬಾಣಿ ಸಮುದಾಯಗಳಿಗೆ ಮಾತ್ರ ದೊರೆತಿವೆ ಎಂದು ಆರೋಪಿಸಿವೆ.

ಒಳಮೀಸಲಾತಿ ಸಮೀಕ್ಷಾ ಅಂತಿಮ ವರದಿಯನ್ನು ಇಂದು ಸಲ್ಲಿಕೆಯಾಗಲಿದೆ. ಕೂಡಲೇ ಮುಂದಿನ ಸಚಿವ ಸಂಪುಟದಲ್ಲಿ ಮಂಡನೆಯಾಗಿ ಮುಂದಿನ ಅಧಿವೇಶನದಲ್ಲಿ ಚರ್ಚೆಯಾಗಿ ಜಾರಿಯಾಗಲೇಬೇಕು.

ಒಂದು ವೇಳೆ ಉಪ ಸಮಿತಿನೋ ಮತ್ತೊಂದೊ ಮಾಡುವ ಪ್ರಯತ್ನವನ್ನೇನಾದರೂ ಸರ್ಕಾರ ಮಾಡುವ ಪ್ರಯತ್ನ ಮಾಡಿದರೆ ನಿಜಕ್ಕೂ ಮೀಸಲಾತಿ ವಿರೋಧಿ ಬಿಜೆಪಿ ಸಂಘಪರಿವಾರದ ಖೂಳರು ಇದರ ಎಲ್ಲಾ ಲಾಭವನ್ನು ಪಡೆದೇ ಪಡೆಯುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಮತ್ತೆ ಬಿಜೆಪಿಯ ಸಂಘಪರಿವಾರದ ಖೂಳರು ಇದರ ಲಾಭ ಪಡೆಯುತ್ತಾರೆಂದ ಒಳಮೀಸಲಾತಿ ಮಾಡಬೇಕಿಲ್ಲ.  35 ವರ್ಷಗಳ ನ್ಯಾಯದ ಬೇಡಿಕೆ ಇದು. ಇದನ್ನು ಜಾರಿ ಮಾಡಬೇಕಿರುವುದು ಕಾಂಗ್ರೆಸ್ ನ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಒಳಮೀಸಲಾತಿ ಪರ ಹೋರಾಟಗಾರ ಚಂದ್ರು ತರಹುಣಸೆ ತಿಳಿಸಿದ್ದಾರೆ.

ಒಳಮಿಸಲಾತಿ ವರದಿ ಸಲ್ಲಿಸಲು ಇಂದಿಗೆ (ಜು.4) ಸಮಯ ನಿಗದಿಯಾಗಿದೆ. ಹಾಗಂತ ಇದಕ್ಕಾಗಿ ಸಂಭ್ರಮಿಸಬೇಕಿಲ್ಲ ಮತ್ತು ಮೈ ಮರೆಯಬೇಕಿಲ್ಲ. ವರದಿ ಜಾರಿ ಆಗಿ ಸರ್ಕಾರದ ಆದೇಶದ ಪ್ರತಿ ಕೈ ಸೇರುವವರೆಗೂ ಸರ್ಕಾರದ ಮೇಲೆ ಒತ್ತಡ ನಿರಂತರವಾಗಿರಲಿ ಮತ್ತು ಒಳಮೀಸಲಾತಿ ಜಾರಿ ಪ್ರಮಾಣದಲ್ಲಿ ಅಂದರೇ ಪರ್ಸಂಟೇಜ್ ಹಂಚಿಕೆ ವಿಚಾರದಲ್ಲಿ ಯಾವ ಮೋಸ, ಅನ್ಯಾಯ ಆಗದಂತೆ ಹಕ್ಕೊತ್ತಾಯ ನಿರಂತರವಾಗಿರಲಿ. ಕಳೆದ ಮುವ್ವತೈದು ವರ್ಷಗಳಲ್ಲಿ ಆದ ಅದೆಷ್ಟೋ ನಂಬಿಕೆ ದ್ರೋಹಗಳು ಇನ್ನೂ ನಮ್ಮ ಕಣ್ಣಿಗೆ ಕಟ್ಟಿದಂತಿರುವಾಗ ಮತ್ತೊಂದು ನಂಬಿಕೆ ದ್ರೋಹ ಆಗದಂತೆ ಜಾಗ್ರತೆ ವಹಿಸೋಣ. ಸಂಭ್ರಮ ಅಂತ ಮೈ ಮರೆತು ಬಿಡೋದು ಬೇಡ. ಸದಾಶಿವ ಆಯೋಗದ ವರದಿ ಸಲ್ಲಿಕೆಯಾದಾಗ ಮತ್ತು ಮಾದುಸ್ವಾಮಿ ವರದಿ ಸಲ್ಲಿಕೆಯಾದಾಗಲೂ ಹೀಗೆಯೇ ಸಂಭ್ರಮ ಪಟ್ಟಿದ್ದು. ಕೊನೆಗೆ ಏನಾಯಿತೆಂಬ ಉದಾಹರಣೆಗೆ ನಾವೆ ಜೀವಂತ ಸಾಕ್ಷಿಗಳು ಇದ್ದೇವೆಯಲ್ಲ ಎಂದು ಹೋರಾಟಗಾರ ಬಿ ಆರ್ ಭಾಸ್ಕರ್ ಪ್ರಸಾದ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅಭಿಪ್ರಾಯಿಸಿದ್ದಾರೆ.

ಸೇನಾ ಅಧಿಕಾರಿಯಿಂದ ಸ್ಪೈಸ್‌ಜೆಟ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಪಂಚ್‌ಗಳಿಂದ ಹೊಡೆತ, ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದ ನೌಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...