Homeಸಾಹಿತ್ಯ-ಸಂಸ್ಕೃತಿಕಥೆಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ 'ನಗ್ನ 99'

ಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ ‘ನಗ್ನ 99’

ಈ ರಂಗಕೃತಿಯು ನಾಟಕಕಾರರ "ಸಕಲರೊಳು ಲಿಂಗಾತ್ಮ ಕಾಣಾ" ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹನಮಂತ ಹಾಲಿಗೇರಿ

ಕನ್ನಡದ ಯುವ ಬರಹಗಾರ ಹನಮಂತ ಹಾಲಿಗೇರಿಯವರ ಇದುವರೆಗಿನ ಸಾಹಿತ್ಯ ಅದು ಸಮಾಜಮುಖಿಯಾಗಿರುವಂತದ್ದು. ಬದುಕು ಮತ್ತು ಬರಹ ಸಮಾಜಕ್ಕೆ ಒಳಿತನ್ನು ಮಾಡಬೇಕೆಂಬ ಆಶಯ ಅವರದು. ಅವರ ಕೆಂಗುಲಾಬಿ ಕಾದಂಬರಿ ಬಹಳ ಪ್ರಸಿದ್ದಿ ಪಡೆದು ಸಿನಿಮಾ ಆಗುವತ್ತ ಹೆಜ್ಜೆ ಇಟ್ಟರೆ, ಊರು ಸುಟ್ಟರೂ ಹನಮಪ್ಪ ಹೊರಗ ಎಂಬ ನಾಟಕ ಇದವರೆಗು 320 ಪ್ರದರ್ಶನಗಳನ್ನು ಕಂಡಿದ್ದು ಜೈ ಕೇಸರಿನಂದನ ಎಂಬ ಸಿನೆಮಾ ಆಗಿಯೂ ತೆರೆಕಂಡಿದೆ. ಇಂತಹ ಯುವಪ್ರತಿಭೆಯ ಹೊಸ ಕಥೆ ನಗ್ನ 99 ಎಂಬುದು ನಾಟಕರೂಪಕ್ಕೆ ಬಂದು ಪ್ರದರ್ಶನಕ್ಕೆ ಸಿದ್ದವಾಗಿದೆ.

ಏನಿದು ನಗ್ನ 99?

ಅರೆಹುಚ್ಚನೊಬ್ಬನ ಮಾನಸಿಕ ತೊಳಲಾಟಗಳ ಸುತ್ತ ಇರುವ ಈ ನಾಟಕ, ಸಮಾಜದ ತುಂಬಿಕೊಂಡಿರುವ ಹುಚ್ಚತನಗಳನ್ನು ಬಯಲಿಗೆಳೆಯುವ ಆಶಯ ಹೊಂದಿರುವಂಥದ್ದು. ಬುದ್ಧಿಮಾಂದ್ಯರಿಗೆ ಮತ್ತು ಅಂಗವಿಕಲರಿಗೂ ನಿಸರ್ಗದತ್ತ ಲೈಂಗಿಕ ಬದುಕು ದಕ್ಕಬೇಕು ಎಂಬ ಮನೋವೈಜ್ಞಾನಿಕ ನೆಲೆಯ ಆಶಯವನ್ನು ನಾಟಕ ಹೊಂದಿದೆ.

ವಯೋಮಾನಕ್ಕೆ ತಕ್ಕಂತೆ ಸಹಜ ಲೈಂಗಿಕತೆಗಾಗಿ ಹಪಹಪಿಸುತ್ತಿರುವ ಅರೆಹುಚ್ಚನ ವಯಕ್ತಿಕ ಬದುಕನ್ನು ಜಗಜ್ಜಾಹೀರುಗೊಳಿಸಲು ಸ್ಪರ್ಧೆಗಿಳಿಯುವ ಇಂದಿನ ದೃಶ್ಯ ಮಾದ್ಯಮಗಳ ಕ್ರೌರ್ಯದ ಹಸಿವನ್ನೂ ಸಹ ಈ ಕಥನ ಬೆತ್ತಲುಗೊಳಿಸುತ್ತದೆ. ಹುಚ್ಚನೊಬ್ಬ ಕಾಲೇಜು ಹುಡುಗಿಯರನ್ನ ದಾರಿಯಲ್ಲಿ ನಿಂತು ನೋಡುತ್ತಿದ್ದ ಎಂಬ ಏಕೈಕ ಕಾರಣಕ್ಕೆ ಅವನನ್ನು ಗಿಡಕ್ಕೆ ಕಟ್ಟಿಸುವ ಟಿವಿ ರಿಪೋರ್ಟರ್ ನಿತೀಶ್, ಕಾಲೇಜು ಹುಡುಗರಿಂದ ಆ ಹುಡುಗನ ಮುಖಮೋತಿಯೆನ್ನದೇ ರಕ್ತ ಒಸರುವಂತೆ ಹೊಡೆಸುವ ದೃಶ್ಯದಿಂದ ನಾಟಕ ಶುರುವಾಗುತ್ತದೆ.

ಮುಂದೆ ಹಲವಾರು ತಿರುವುಗಳನ್ನು ಪಡೆದುಕೊಂಡು ಸಮಾಜದ ಒರೆಕೋರೆಗಳನ್ನು ವಿಡಂಭಿಸುವ ಈ ನಾಟಕ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುತ್ತದೆ, ತನ್ನ ಮನೆಯಲ್ಲಿನ ಸಾಕುಪ್ರಾಣಿಗಳು ಬೆದೆ ಬಂದಿದ್ದರೆ ಅವುಕ್ಕೆ ಊರೆಲ್ಲ ಹುಡುಕಾಡಿ ಸಂಗಾತಿಯನ್ನು ಕರೆತಂದು ಸಂಯೋಗ ಮಾಡಿಸುವ ಮನುಷ್ಯ, ತನ್ನ ಮನೆಯಲ್ಲಿನ ಬುದ್ಧಿ ಮಾಂದ್ಯರನ್ನು ಮಾತ್ರ ಪ್ರಾಣಿಗಳಿಗಿಂತ ಕಡೆಯಾಗಿ ನೋಡುವ ಮನೋ ಸ್ಥಿತಿ ಸಮಾಜದಲ್ಲಿದೆ. ಈ ವೈಪರಿತ್ಯದ ನಿಷ್ಕರುಣೆಯನ್ನು ಎತ್ತಿ ತೋರಿಸುವ ರಂಗಕೃತಿಯು ನಾಟಕಕಾರರ “ಸಕಲರೊಳು ಲಿಂಗಾತ್ಮ ಕಾಣಾ” ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

ಹೇಮಂತ್ ಕುಮಾರ್

ಮೊದಲ ಪ್ರದರ್ಶನ ಇದೇ ಭಾನುವಾರ

ಹೆಜ್ಜೆ ಥಿಯೇಟರ್ (ರಿ) ನಿರ್ಮಾಣದಲ್ಲಿ ಮೂಡಿಬರಲಿರುವ ನಗ್ನ 99 ನಾಟಕದ ನಿರ್ದೇಶನದ ಜಬಾಬ್ದಾರಿಯನ್ನು ಸಂವಾದ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಹೇಮಂತ್ ಕುಮಾರ್ ರವರು ಹೊತ್ತಿದ್ದಾರೆ. ಈ ಮೊದಲು ಅವರು ‘ಕರ್ಣಭಾರ’ ನಾಟಕವನ್ನು ನಿರ್ದೇಶಿಸಿ ಪ್ರಸಂಶೆ ಪಡೆದಿದ್ದರು. ಜೂನ್ 02ರ ಭಾನುವಾರ ಸಂಜೆ 7:30ಕ್ಕೆ ಮಲ್ಲೇಶ್ವರಂನ ಸೇವಾಸದನದಲ್ಲಿ ನಗ್ನ 99 ನಾಟಕದ ಮೊದಲ ಪ್ರದರ್ಶನವಿದೆ. ಆಸಕ್ತರು ಟಿಕೆಟ್ ಗಾಗಿ 9535253595 ಈ ನಂಬರ್ ಗೆ ಸಂಪರ್ಕಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...